Homeಮುಖಪುಟಪಹಲ್ಗಾಮ್‌ ದಾಳಿ ಖಂಡಿಸಿ ಇಂದು 'ಕಾಶ್ಮೀರ ಬಂದ್‌': ಆಡಳಿತ, ಪ್ರತಿಪಕ್ಷಗಳ ಬೆಂಬಲ

ಪಹಲ್ಗಾಮ್‌ ದಾಳಿ ಖಂಡಿಸಿ ಇಂದು ‘ಕಾಶ್ಮೀರ ಬಂದ್‌’: ಆಡಳಿತ, ಪ್ರತಿಪಕ್ಷಗಳ ಬೆಂಬಲ

- Advertisement -
- Advertisement -

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ 28 ಜನರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆ, ಭಯೋತ್ಪಾದನೆ ವಿರುದ್ಧ ಬಲವಾದ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಜಮ್ಮು ಕಾಶ್ಮೀರದ ಹಲವಾರು ರಾಜಕೀಯ ಪಕ್ಷಗಳು ಬುಧವಾರ (ಏ.23) ‘ಕಾಶ್ಮೀರ ಬಂದ್‌’ಗೆ ಕರೆ ನೀಡಿವೆ.

ಆಡಳಿತರೂಢ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ) ಪಕ್ಷವು ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರು ಮತ್ತು ಅವರ ದುಖಃತಪ್ತ ಕುಟುಂಬಗಳಿಗೆ ಬೆಂಬಲ ಸೂಚಿಸುವ ಸಂಕೇತವಾಗಿ ಬಂದ್ ಘೋಷಣೆ ಮಾಡಲಾಗಿದೆ. ಅದನ್ನು ಸಂಪೂರ್ಣ ಯಶಸ್ವಿಗೊಳಿಸುವಂತೆ ಜನರಿಗೆ ಮನವಿ ಮಾಡಿದೆ.

“ಈ ಬಂದ್ ಕೇವಲ ಒಂದು ಪ್ರತಿಭಟನೆಯಲ್ಲ, ಬದಲಾಗಿ ಅರ್ಥಹೀನ ಹಿಂಸಾಚಾರದ ವಿರುದ್ಧ ನೋವು ಮತ್ತು ಆಕ್ರೋಶದ ಸಾಮೂಹಿಕ ಅಭಿವ್ಯಕ್ತಿಯಾಗಿದೆ” ಎಂದು ಜೆಕೆಎನ್‌ಸಿ ಒತ್ತಿ ಹೇಳಿದೆ.

“ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಪಕ್ಷವು ತೀವ್ರವಾಗಿ ಖಂಡಿಸುತ್ತದೆ. ಅಧ್ಯಕ್ಷರ ಸೂಚನೆಯ ಮೇರೆಗೆ, ಪಕ್ಷವು ಕಾಶ್ಮೀರ ಬಂದ್‌ ಅನ್ನು ಬೆಂಬಲಿಸುತ್ತದೆ. ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರು ಕರೆ ನೀಡಿರುವ ಈ ಬಂದ್ ಸಂಪೂರ್ಣ ಯಶಸ್ವಿಯಾಗುವಂತೆ ಸಹಕರಿಸಲು ನಾವು ಜಮ್ಮು ಕಾಶ್ಮೀರದ ಜನರಿಗೆ ಮನವಿ ಮಾಡುತ್ತೇವೆ” ಎಂದು ಜೆಕೆಎನ್‌ಸಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಪ್ರತಿಕ್ರಿಯೆ

ಜಮ್ಮು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರ ಕುಟುಂಬಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ ಮತ್ತು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

“ಇದು ನಮ್ಮೆಲ್ಲರ ಮೇಲಿನ ದಾಳಿ” ಎಂದು ಕರೆದಿರುವ ಮೆಹಬೂಬಾ ಮುಫ್ತಿ “ದಿ ಚೇಂಬರ್ ಅಂಡ್ ಬಾರ್ ಅಸೋಸಿಯೇಷನ್ ಪಹಲ್ಗಾಮ್‌ನಲ್ಲಿ ​​ಪ್ರವಾಸಿಗರ ಮೇಲಿನ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ನಾಳೆ ಸಂಪೂರ್ಣ ಬಂದ್‌ಗೆ ಕರೆ ನೀಡಿದೆ. ಕ್ರೂರ ದಾಳಿಯಲ್ಲಿ ಸಾವನ್ನಪ್ಪಿದ ಮುಗ್ಧ ಜೀವಗಳಿಗೆ ಗೌರವ ಸಲ್ಲಿಸುವ ಸಂಕೇತವಾಗಿ ಈ ಬಂದ್‌ಗೆ ಬೆಂಬಲ ನೀಡಲು ಎಲ್ಲಾ ಕಾಶ್ಮೀರಿಗಳಿಗೆ ನಾನು ಮನವಿ ಮಾಡುತ್ತೇನೆ. ಇದು ಕೇವಲ ಕೆಲವು ಆಯ್ದ ಜನರ ಮೇಲಿನ ದಾಳಿಯಲ್ಲ, ಇದು ನಮ್ಮೆಲ್ಲರ ಮೇಲಿನ ದಾಳಿ. ಜನರ ದುಃಖ ಮತ್ತು ಆಕ್ರೋಶದ ಜೊತೆ ನಾವೂ ಇದ್ದೇವೆ. ಅಮಾಯಕರ ಹತ್ಯಾಕಾಂಡವನ್ನು ಖಂಡಿಸಿ ಈ ಬಂದ್‌ಗೆ ಸಂಪೂರ್ಣ ಬೆಂಬಲ ನೀಡುತ್ತೇವೆ” ಎಂದು ಮುಫ್ತಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಂದ್‌ಗೆ ಜೆಕೆಎಸ್‌ಎ ಬೆಂಬಲ

ಜಮ್ಮು ಕಾಶ್ಮೀರ ವಿದ್ಯಾರ್ಥಿ ಸಂಘ (ಜೆಕೆಎಸ್ಎ) ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ‘ಜಮ್ಮು ಮತ್ತು ಕಾಶ್ಮೀರದ ಆತ್ಮದ ಮೇಲಿನ ದಾಳಿ’ ಎಂದು ಕರೆದಿದ್ದು, ಬಂದ್‌ಗೆ ತನ್ನ ಬೆಂಬಲ ವ್ಯಕ್ತಪಡಿಸಿದೆ.

“ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ, ದಿ ಚೇಂಬರ್ ಅಂಡ್ ಬಾರ್ ಅಸೋಸಿಯೇಷನ್ ಜಮ್ಮು ನಾಳೆ ಕರೆ ನೀಡಿರುವ ಬಂದ್‌ಗೆ ಜೆಕೆಎಸ್ಎ ಸಂಪೂರ್ಣ ಬೆಂಬಲ ನೀಡುತ್ತದೆ. ಈ ದುರಂತ ದಾಳಿ ಕೇವಲ ಕೆಲವು ವ್ಯಕ್ತಿಗಳ ಮೇಲಿನ ದಾಳಿಯಲ್ಲ; ಇದು ಜಮ್ಮು ಮತ್ತು ಕಾಶ್ಮೀರದ ಆತ್ಮದ ಮೇಲಿನ ದಾಳಿಯಾಗಿದೆ” ಎಂದು ಜೆಕೆಎಸ್ಎ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಬಂದ್‌ ಬೆಂಬಲಿಸಿದ ಹುರಿಯತ್ ಕಾನ್ಫರೆನ್ಸ್

ಆಲ್ ಪಾರ್ಟೀಸ್ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್, ಜಮ್ಮು ಕಾಶ್ಮೀರದ ಜನರು ಬಂದ್ ಬೆಂಬಲಿಸಬೇಕು ಮತ್ತು ಘೋರ ಕೃತ್ಯದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸಬೇಕು ಎಂದು ಮನವಿ ಮಾಡಿದ್ದಾರೆ.

“ಯಾರು ಮುಗ್ದರನ್ನು ಕೊಂದಿದ್ದಾರೋ.. ಅವರು ಇಡೀ ಮಾನವಕುಲವನ್ನುಕೊಂದಂತೆ. ಪ್ರವಾಸಿಗರನ್ನು ಅತ್ಯಂತ ಭೀಕರ ರೀತಿಯಲ್ಲಿ ನಿರ್ದಯವಾಗಿ ಕೊಂದಿರುವುದು ಕಾಶ್ಮೀರದ ರಕ್ತಸಿಕ್ತ ಇತಿಹಾಸದಲ್ಲಿ ಮತ್ತೊಂದು ಹತ್ಯಾಕಾಂಡದ ದಿನ. ಕಾಶ್ಮೀರದ ಜನರಿಗೆ ಇಂತಹ ದುರಂತಗಳ ನೋವು ಮತ್ತು ದುಃಖ ತಿಳಿದಿದೆ. ಶಾಂತಿ, ಸದ್ಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಹೊಂದಿರುವ ಇಸ್ಲಾಂ ಧರ್ಮ ಇಂತಹ ಭೀಕರತೆಯನ್ನು ಒಪ್ಪುವುದಿಲ್ಲ. ಜಮ್ಮು ಕಾಶ್ಮೀರದ ಇಸ್ಲಾಮಿಕ್ ಸಮೂಹವು ಮುತಾಹಿದಾ ಮಜ್ಲಿಸ್ ಉಲೇಮಾ (ಎಂಎಂಯು) ಮೂಲಕ ಸಾವಿಗೀಡಾದವರ ಕುಟುಂಬಗಳ ಜೊತೆಗೆ ನಿಲ್ಲಲಿದೆ. ಜಮ್ಮು ಕಾಶ್ಮೀರದ ಜನರು ನಾಳೆ ಬಂದ್ ಮೂಲಕ ಈ ಘೋರ ಅಪರಾಧವನ್ನು ಶಾಂತಿಯುತವಾಗಿ ಪ್ರತಿಭಟಿಸುವಂತೆ ಮನವಿ ಮಾಡುತ್ತೇವೆ” ಎಂದು ಮಿರ್ವೈಜ್ ಫಾರೂಕ್ ಮಂಗಳವಾರ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಭಯೋತ್ಪಾದಕ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಹಲವಾರು ಸ್ಥಳಗಳಲ್ಲಿ ಮಂಗಳವಾರ ರಾತ್ರಿ ಮೇಣದ ಬತ್ತಿ ಮೆರವಣಿಗೆ ನಡೆದಿದೆ. ಬಾರಾಮುಲ್ಲಾ, ಶ್ರೀನಗರ, ಪೂಂಚ್, ಕುಪ್ವಾರಾದ ಮತ್ತು ಅಖೂರ್ ಪ್ರದೇಶದ ಖೋಡ್ ಗ್ರಾಮದಲ್ಲಿ ಸ್ಥಳೀಯರು ಮೇಣದ ಬತ್ತಿ ಮೆರವಣಿಗೆ ನಡೆಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...