Homeಮುಖಪುಟಭಯೋತ್ಪಾದನೆ ಆರೋಪ ಹೊತ್ತು 11 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

ಭಯೋತ್ಪಾದನೆ ಆರೋಪ ಹೊತ್ತು 11 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

- Advertisement -
- Advertisement -

ಭಯೋತ್ಪಾದನೆಯ ಆರೋಪ ಹೊತ್ತು 11 ವರ್ಷ ಜೈಲಿನಲ್ಲಿದ್ದ ಕಾಶ್ಮೀರ ಮೂಲದ ಬಶೀರ್ ಅಹ್ಮದ್ ಬಾಬಾ (44) ಅವರನ್ನು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಸಂತ್ರಸ್ತ ಬಶೀರ್‌ ಅಹ್ಮದ್‌ ಬಾಬಾ ಅವರು ಗುಜರಾತ್ ಜೈಲಿನಿಂದ ಇದೀಗ ಬಿಡುಗಡೆಯಾಗಿದ್ದಾರೆ. ಅವರ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಎಲ್ಲಾ ಆರೋಪಗಳಲ್ಲಿ ಅವರು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ ಬಳಿಕ ಅವರು ತಮ್ಮ ಮನೆಗೆ ಮರಳಿದ್ದಾರೆ.

ಅವರು ಜೈಲಿನಲ್ಲಿದ್ದ ಈ ಸಮಯದಲ್ಲಿ ಅವರ ಚಿಕ್ಕಪ್ಪ ಮತ್ತು ಅವರ ತಂದೆ ಗುಲಾಮ್ ನಬಿ ಬಾಬಾ ಸೇರಿದಂತೆ ಅವರ ಕುಟುಂಬದ ಅನೇಕ ಸದಸ್ಯರು ಸಾವನ್ನಪ್ಪಿದರು. ಗುತ್ತಿಗೆದಾರರಾಗಿದ್ದ ಅವರ ತಂದೆ 2017 ರಲ್ಲಿ ನಿಧನರಾಗಿದ್ದರು, ಅವರು ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ತಮ್ಮ ತಂದೆ ಮೃತಪಟ್ಟಿರುವುದರ ಬಗ್ಗೆ ಹಲವಾರು ದಿನಗಳು ಕಳೆದರೂ ಬಶೀರ್‌ ಅವರಿಗೆ ಮಾಹಿತಿ ಇರಲಿಲ್ಲ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ ಅವರ ತಂದೆ ಸಾವನ್ನಪ್ಪಿದ್ದರ ಮಾಹಿತಿ ತಿಳಿಯಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಬಶೀರ್ ಅವರು ಶ್ರೀನಗರದ ರೈನವರಿ ಪ್ರದೇಶದ ತಮ್ಮ ನಿವಾಸದ ಹತ್ತಿರ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ನಡೆಸುತ್ತಿದ್ದರು. ಅವರು ಎನ್‌ಜಿಓ ಒಂದರಲ್ಲಿ ಸಹಾಯಕ ಪ್ರಾಜೆಕ್ಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು, ಅವರ ಭಾಗವಾಗಿ ಹಲವಾರು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿದ್ದರು.

ಫೆಬ್ರವರಿ 2010 ರಲ್ಲಿ ಅವರು ಗುಜರಾತ್‌ನಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಲು ಕಾಶ್ಮೀರದಿಂದ ಬಂದಿದ್ದರು. ಆದರೆ, ಅವರು ಹಿಂದಿರುಗುವ ಒಂದು ದಿನ ಮೊದಲು ಅವರನ್ನು ಗುಜರಾತ್‌ನ ಆನಂದ್ ಜಿಲ್ಲೆಯ ಸಮರ್ಖಾ ಗ್ರಾಮದ ಬಳಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿತು. ಅಲ್ಲದೆ, “ಬಶೀರ್‌ ಅವರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಭಾಗವಾಗಿದ್ದಾರೆ. ಭಯೋತ್ಪಾದಕ ತರಬೇತಿಗಾಗಿ ಯುವಕರ ಜಾಲವನ್ನು ಸ್ಥಾಪಿಸಲು ಯೋಜಿಸುತ್ತಿದ್ದಾರೆ” ಎಂದು ಆರೋಪಿಸಿ, ಪ್ರಕರಣ ದಾಖಲಿಸಿತ್ತು.

ಬಂಧನಕ್ಕೆ ಮುಂಚಿತವಾಗಿ, ಬಶೀರ್ ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಡಿಪ್ಲೊಮಾ ಪಡೆದಿದ್ದರು. ಜೊತೆಗೆ ಅವರು ರಾಜಕೀಯ ವಿಜ್ಞಾನ, ಸಾರ್ವಜನಿಕ ಆಡಳಿತ ಮತ್ತು ಬೌದ್ಧಿಕ ಆಸ್ತಿ ಕಾಯ್ದೆಯಲ್ಲಿ ಮೂರು ಸ್ನಾತಕೋತ್ತರ ಪದವಿಗಳನ್ನೂ ಪಡೆದಕೊಂಡಿದ್ದರು.

ಇದನ್ನೂ ಓದಿ: ವಿಭಜನೆಯ ನಂತರ ಮೊಟ್ಟಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಸರ್ವಪಕ್ಷ ಸಭೆ!

“ನಾನು ನನ್ನ ಹೆಚ್ಚಿನ ಸಮಯವನ್ನು ಜೈಲಿನ ಅಧ್ಯಯನದಲ್ಲಿ ಕಳೆದಿದ್ದೇನೆ. ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ ಎಂಬ ಭರವಸೆ ನನಗೆ ಇತ್ತು. ನಾನು ಮನೆಗೆ ಹಿಂದಿರುಗಿದ ನಂತರ, ರಾಜ್ಯದಲ್ಲಿ ನಿರುದ್ಯೋಗ, ಆತ್ಮಹತ್ಯೆ ಮತ್ತು ಹಿಂಸಾಚಾರ ಹೆಚ್ಚುತ್ತಿರುವ ವರದಿಗಳನ್ನು ಕೇಳಿದ್ದೇನೆ” ಎಂದು ಬಶೀರ್ ತಿಳಿಸಿರುವುದಾಗಿ ನ್ಯೂಸ್‌ಕ್ಲಿಕ್‌ ವರದಿ ಮಾಡಿದೆ.

ಕಾಶ್ಮೀರ ಸೇರಿದಂತೆ ದೇಶಾದ್ಯಂತ ಕಳೆದ ಮೂರು ದಶಕಗಳಲ್ಲಿ ಜೈಲಿನಲ್ಲಿದ್ದ ನೂರಾರು ಕಾಶ್ಮೀರಿಗಳಲ್ಲಿ ಬಶೀರ್ ಕೂಡ ಒಬ್ಬರು. ಹಲವರ ವಿರುದ್ದ “ಭಯೋತ್ಪಾದನೆ” ಸಂಬಂಧಿತ ಚಟುವಟಿಕೆಗಳಲ್ಲಿ ಯೋಜನೆ ಮತ್ತು ಭಾಗವಹಿಸಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆದಾಗ್ಯೂ, ವರ್ಷಗಳಲ್ಲಿ, ಡಜನ್ಗಟ್ಟಲೆ ಜನರು ನಿರಪರಾಧಿಗಳು ಎಂದು ಸಾಬೀತಾಗಿದೆ ಮತ್ತು ಅವರನ್ನು ಭಾರತೀಯ ನ್ಯಾಯಾಲಯಗಳು ಆರೋಪ ಮುಕ್ತಗೊಳಿಸಿವೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

ತನ್ನ ಮಗನ ಹಿಂದಿರುಗುವಿಕೆಗಾಗಿ ಪ್ರತಿದಿನ ಪ್ರಾರ್ಥಿಸುತ್ತಿದ್ದೆ ಎಂದು ಬಶೀರ್‌‌ ತಾಯಿ ಮೊಕ್ತಾ ತಿಳಿಸಿದ್ದಾರೆ. “ಆತನ ಬಂಧನದ ನಂತರ ನಮ್ಮ ಕುಟುಂಬವು ಸಾಕಷ್ಟು ತೊಂದರೆ ಅನುಭವಿಸಿತು. ನನ್ನ ಪತಿಗೆ ನಿಧನರಾದರು ಮತ್ತು ಮನೆಯಲ್ಲಿ ಅವಿವಾಹಿತ ಇಬ್ಬರು ಹೆಣ್ಣು ಮಕ್ಕಳಿದ್ದರು. ನಮ್ಮ ಕಷ್ಟ ಅಲ್ಲಾಹನಿಗೆ ಮಾತ್ರ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

ಬಶೀರ್ ಅವರ ಸಹೋದರಿಯರಿಬ್ಬರೂ ಈಗ ಮದುವೆಯಾಗಿದ್ದಾರೆ. ಅವರ ಸಹೋದರ ನಜೀರ್ ಅಹ್ಮದ್ ಅವರ ಕುಟುಂಬದ ಹೊಣೆ ಹೊತ್ತು, ಕುಟುಂಬ ನಿರ್ವಹಣೆಗಾಗಿ ಸೇಲ್ಸ್‌ಮ್ಯಾನ್‌ ಆಗಿ ಕೆಲಸ ಮಾಡಿದ್ದಾರೆ. ಅವರಿಗೆ ಇನ್ನೂ ಮದುವೆಯಾಗಿಲ್ಲ.

“ನನ್ನ ತಂದೆಯ ಸಾವು ಎಲ್ಲವನ್ನೂ ಬದಲಾಯಿಸಿತು… ನಾನು ನನ್ನ ಅಣ್ಣನಿಗಾಗಿ ಕಾಯುತ್ತಿದ್ದೆ. ಅವರು ನಿರಪರಾಧಿ ಎಂದು ನನಗೆ ತಿಳಿದಿತ್ತು” ಎಂದು ನಜೀರ್ ಹೇಳಿದ್ದಾರೆ. ಅವರ ಹಿರಿಯ ಸಹೋದರ ಮರಳಿದ್ದರಿಂದ, ಈಗ  ಅವರು ಒಟ್ಟಿಗೆ ಮದುವೆಯಾಗಲು ಯೋಜಿಸುತ್ತಿದ್ದಾರೆ.

ಇದನ್ನೂ ಓದಿ: ಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...