Homeಮುಖಪುಟಭಯೋತ್ಪಾದನೆ ಆರೋಪ ಹೊತ್ತು 11 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

ಭಯೋತ್ಪಾದನೆ ಆರೋಪ ಹೊತ್ತು 11 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

- Advertisement -
- Advertisement -

ಭಯೋತ್ಪಾದನೆಯ ಆರೋಪ ಹೊತ್ತು 11 ವರ್ಷ ಜೈಲಿನಲ್ಲಿದ್ದ ಕಾಶ್ಮೀರ ಮೂಲದ ಬಶೀರ್ ಅಹ್ಮದ್ ಬಾಬಾ (44) ಅವರನ್ನು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಸಂತ್ರಸ್ತ ಬಶೀರ್‌ ಅಹ್ಮದ್‌ ಬಾಬಾ ಅವರು ಗುಜರಾತ್ ಜೈಲಿನಿಂದ ಇದೀಗ ಬಿಡುಗಡೆಯಾಗಿದ್ದಾರೆ. ಅವರ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಎಲ್ಲಾ ಆರೋಪಗಳಲ್ಲಿ ಅವರು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ ಬಳಿಕ ಅವರು ತಮ್ಮ ಮನೆಗೆ ಮರಳಿದ್ದಾರೆ.

ಅವರು ಜೈಲಿನಲ್ಲಿದ್ದ ಈ ಸಮಯದಲ್ಲಿ ಅವರ ಚಿಕ್ಕಪ್ಪ ಮತ್ತು ಅವರ ತಂದೆ ಗುಲಾಮ್ ನಬಿ ಬಾಬಾ ಸೇರಿದಂತೆ ಅವರ ಕುಟುಂಬದ ಅನೇಕ ಸದಸ್ಯರು ಸಾವನ್ನಪ್ಪಿದರು. ಗುತ್ತಿಗೆದಾರರಾಗಿದ್ದ ಅವರ ತಂದೆ 2017 ರಲ್ಲಿ ನಿಧನರಾಗಿದ್ದರು, ಅವರು ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ತಮ್ಮ ತಂದೆ ಮೃತಪಟ್ಟಿರುವುದರ ಬಗ್ಗೆ ಹಲವಾರು ದಿನಗಳು ಕಳೆದರೂ ಬಶೀರ್‌ ಅವರಿಗೆ ಮಾಹಿತಿ ಇರಲಿಲ್ಲ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ ಅವರ ತಂದೆ ಸಾವನ್ನಪ್ಪಿದ್ದರ ಮಾಹಿತಿ ತಿಳಿಯಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಬಶೀರ್ ಅವರು ಶ್ರೀನಗರದ ರೈನವರಿ ಪ್ರದೇಶದ ತಮ್ಮ ನಿವಾಸದ ಹತ್ತಿರ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ನಡೆಸುತ್ತಿದ್ದರು. ಅವರು ಎನ್‌ಜಿಓ ಒಂದರಲ್ಲಿ ಸಹಾಯಕ ಪ್ರಾಜೆಕ್ಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು, ಅವರ ಭಾಗವಾಗಿ ಹಲವಾರು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿದ್ದರು.

ಫೆಬ್ರವರಿ 2010 ರಲ್ಲಿ ಅವರು ಗುಜರಾತ್‌ನಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಲು ಕಾಶ್ಮೀರದಿಂದ ಬಂದಿದ್ದರು. ಆದರೆ, ಅವರು ಹಿಂದಿರುಗುವ ಒಂದು ದಿನ ಮೊದಲು ಅವರನ್ನು ಗುಜರಾತ್‌ನ ಆನಂದ್ ಜಿಲ್ಲೆಯ ಸಮರ್ಖಾ ಗ್ರಾಮದ ಬಳಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿತು. ಅಲ್ಲದೆ, “ಬಶೀರ್‌ ಅವರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಭಾಗವಾಗಿದ್ದಾರೆ. ಭಯೋತ್ಪಾದಕ ತರಬೇತಿಗಾಗಿ ಯುವಕರ ಜಾಲವನ್ನು ಸ್ಥಾಪಿಸಲು ಯೋಜಿಸುತ್ತಿದ್ದಾರೆ” ಎಂದು ಆರೋಪಿಸಿ, ಪ್ರಕರಣ ದಾಖಲಿಸಿತ್ತು.

ಬಂಧನಕ್ಕೆ ಮುಂಚಿತವಾಗಿ, ಬಶೀರ್ ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಡಿಪ್ಲೊಮಾ ಪಡೆದಿದ್ದರು. ಜೊತೆಗೆ ಅವರು ರಾಜಕೀಯ ವಿಜ್ಞಾನ, ಸಾರ್ವಜನಿಕ ಆಡಳಿತ ಮತ್ತು ಬೌದ್ಧಿಕ ಆಸ್ತಿ ಕಾಯ್ದೆಯಲ್ಲಿ ಮೂರು ಸ್ನಾತಕೋತ್ತರ ಪದವಿಗಳನ್ನೂ ಪಡೆದಕೊಂಡಿದ್ದರು.

ಇದನ್ನೂ ಓದಿ: ವಿಭಜನೆಯ ನಂತರ ಮೊಟ್ಟಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಸರ್ವಪಕ್ಷ ಸಭೆ!

“ನಾನು ನನ್ನ ಹೆಚ್ಚಿನ ಸಮಯವನ್ನು ಜೈಲಿನ ಅಧ್ಯಯನದಲ್ಲಿ ಕಳೆದಿದ್ದೇನೆ. ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ ಎಂಬ ಭರವಸೆ ನನಗೆ ಇತ್ತು. ನಾನು ಮನೆಗೆ ಹಿಂದಿರುಗಿದ ನಂತರ, ರಾಜ್ಯದಲ್ಲಿ ನಿರುದ್ಯೋಗ, ಆತ್ಮಹತ್ಯೆ ಮತ್ತು ಹಿಂಸಾಚಾರ ಹೆಚ್ಚುತ್ತಿರುವ ವರದಿಗಳನ್ನು ಕೇಳಿದ್ದೇನೆ” ಎಂದು ಬಶೀರ್ ತಿಳಿಸಿರುವುದಾಗಿ ನ್ಯೂಸ್‌ಕ್ಲಿಕ್‌ ವರದಿ ಮಾಡಿದೆ.

ಕಾಶ್ಮೀರ ಸೇರಿದಂತೆ ದೇಶಾದ್ಯಂತ ಕಳೆದ ಮೂರು ದಶಕಗಳಲ್ಲಿ ಜೈಲಿನಲ್ಲಿದ್ದ ನೂರಾರು ಕಾಶ್ಮೀರಿಗಳಲ್ಲಿ ಬಶೀರ್ ಕೂಡ ಒಬ್ಬರು. ಹಲವರ ವಿರುದ್ದ “ಭಯೋತ್ಪಾದನೆ” ಸಂಬಂಧಿತ ಚಟುವಟಿಕೆಗಳಲ್ಲಿ ಯೋಜನೆ ಮತ್ತು ಭಾಗವಹಿಸಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆದಾಗ್ಯೂ, ವರ್ಷಗಳಲ್ಲಿ, ಡಜನ್ಗಟ್ಟಲೆ ಜನರು ನಿರಪರಾಧಿಗಳು ಎಂದು ಸಾಬೀತಾಗಿದೆ ಮತ್ತು ಅವರನ್ನು ಭಾರತೀಯ ನ್ಯಾಯಾಲಯಗಳು ಆರೋಪ ಮುಕ್ತಗೊಳಿಸಿವೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

ತನ್ನ ಮಗನ ಹಿಂದಿರುಗುವಿಕೆಗಾಗಿ ಪ್ರತಿದಿನ ಪ್ರಾರ್ಥಿಸುತ್ತಿದ್ದೆ ಎಂದು ಬಶೀರ್‌‌ ತಾಯಿ ಮೊಕ್ತಾ ತಿಳಿಸಿದ್ದಾರೆ. “ಆತನ ಬಂಧನದ ನಂತರ ನಮ್ಮ ಕುಟುಂಬವು ಸಾಕಷ್ಟು ತೊಂದರೆ ಅನುಭವಿಸಿತು. ನನ್ನ ಪತಿಗೆ ನಿಧನರಾದರು ಮತ್ತು ಮನೆಯಲ್ಲಿ ಅವಿವಾಹಿತ ಇಬ್ಬರು ಹೆಣ್ಣು ಮಕ್ಕಳಿದ್ದರು. ನಮ್ಮ ಕಷ್ಟ ಅಲ್ಲಾಹನಿಗೆ ಮಾತ್ರ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

ಬಶೀರ್ ಅವರ ಸಹೋದರಿಯರಿಬ್ಬರೂ ಈಗ ಮದುವೆಯಾಗಿದ್ದಾರೆ. ಅವರ ಸಹೋದರ ನಜೀರ್ ಅಹ್ಮದ್ ಅವರ ಕುಟುಂಬದ ಹೊಣೆ ಹೊತ್ತು, ಕುಟುಂಬ ನಿರ್ವಹಣೆಗಾಗಿ ಸೇಲ್ಸ್‌ಮ್ಯಾನ್‌ ಆಗಿ ಕೆಲಸ ಮಾಡಿದ್ದಾರೆ. ಅವರಿಗೆ ಇನ್ನೂ ಮದುವೆಯಾಗಿಲ್ಲ.

“ನನ್ನ ತಂದೆಯ ಸಾವು ಎಲ್ಲವನ್ನೂ ಬದಲಾಯಿಸಿತು… ನಾನು ನನ್ನ ಅಣ್ಣನಿಗಾಗಿ ಕಾಯುತ್ತಿದ್ದೆ. ಅವರು ನಿರಪರಾಧಿ ಎಂದು ನನಗೆ ತಿಳಿದಿತ್ತು” ಎಂದು ನಜೀರ್ ಹೇಳಿದ್ದಾರೆ. ಅವರ ಹಿರಿಯ ಸಹೋದರ ಮರಳಿದ್ದರಿಂದ, ಈಗ  ಅವರು ಒಟ್ಟಿಗೆ ಮದುವೆಯಾಗಲು ಯೋಜಿಸುತ್ತಿದ್ದಾರೆ.

ಇದನ್ನೂ ಓದಿ: ಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...