Homeಮುಖಪುಟಭಯೋತ್ಪಾದನೆ ಆರೋಪ ಹೊತ್ತು 11 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

ಭಯೋತ್ಪಾದನೆ ಆರೋಪ ಹೊತ್ತು 11 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

- Advertisement -
- Advertisement -

ಭಯೋತ್ಪಾದನೆಯ ಆರೋಪ ಹೊತ್ತು 11 ವರ್ಷ ಜೈಲಿನಲ್ಲಿದ್ದ ಕಾಶ್ಮೀರ ಮೂಲದ ಬಶೀರ್ ಅಹ್ಮದ್ ಬಾಬಾ (44) ಅವರನ್ನು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಸಂತ್ರಸ್ತ ಬಶೀರ್‌ ಅಹ್ಮದ್‌ ಬಾಬಾ ಅವರು ಗುಜರಾತ್ ಜೈಲಿನಿಂದ ಇದೀಗ ಬಿಡುಗಡೆಯಾಗಿದ್ದಾರೆ. ಅವರ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಎಲ್ಲಾ ಆರೋಪಗಳಲ್ಲಿ ಅವರು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ ಬಳಿಕ ಅವರು ತಮ್ಮ ಮನೆಗೆ ಮರಳಿದ್ದಾರೆ.

ಅವರು ಜೈಲಿನಲ್ಲಿದ್ದ ಈ ಸಮಯದಲ್ಲಿ ಅವರ ಚಿಕ್ಕಪ್ಪ ಮತ್ತು ಅವರ ತಂದೆ ಗುಲಾಮ್ ನಬಿ ಬಾಬಾ ಸೇರಿದಂತೆ ಅವರ ಕುಟುಂಬದ ಅನೇಕ ಸದಸ್ಯರು ಸಾವನ್ನಪ್ಪಿದರು. ಗುತ್ತಿಗೆದಾರರಾಗಿದ್ದ ಅವರ ತಂದೆ 2017 ರಲ್ಲಿ ನಿಧನರಾಗಿದ್ದರು, ಅವರು ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ತಮ್ಮ ತಂದೆ ಮೃತಪಟ್ಟಿರುವುದರ ಬಗ್ಗೆ ಹಲವಾರು ದಿನಗಳು ಕಳೆದರೂ ಬಶೀರ್‌ ಅವರಿಗೆ ಮಾಹಿತಿ ಇರಲಿಲ್ಲ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ ಅವರ ತಂದೆ ಸಾವನ್ನಪ್ಪಿದ್ದರ ಮಾಹಿತಿ ತಿಳಿಯಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಬಶೀರ್ ಅವರು ಶ್ರೀನಗರದ ರೈನವರಿ ಪ್ರದೇಶದ ತಮ್ಮ ನಿವಾಸದ ಹತ್ತಿರ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ನಡೆಸುತ್ತಿದ್ದರು. ಅವರು ಎನ್‌ಜಿಓ ಒಂದರಲ್ಲಿ ಸಹಾಯಕ ಪ್ರಾಜೆಕ್ಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು, ಅವರ ಭಾಗವಾಗಿ ಹಲವಾರು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿದ್ದರು.

ಫೆಬ್ರವರಿ 2010 ರಲ್ಲಿ ಅವರು ಗುಜರಾತ್‌ನಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಲು ಕಾಶ್ಮೀರದಿಂದ ಬಂದಿದ್ದರು. ಆದರೆ, ಅವರು ಹಿಂದಿರುಗುವ ಒಂದು ದಿನ ಮೊದಲು ಅವರನ್ನು ಗುಜರಾತ್‌ನ ಆನಂದ್ ಜಿಲ್ಲೆಯ ಸಮರ್ಖಾ ಗ್ರಾಮದ ಬಳಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿತು. ಅಲ್ಲದೆ, “ಬಶೀರ್‌ ಅವರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಭಾಗವಾಗಿದ್ದಾರೆ. ಭಯೋತ್ಪಾದಕ ತರಬೇತಿಗಾಗಿ ಯುವಕರ ಜಾಲವನ್ನು ಸ್ಥಾಪಿಸಲು ಯೋಜಿಸುತ್ತಿದ್ದಾರೆ” ಎಂದು ಆರೋಪಿಸಿ, ಪ್ರಕರಣ ದಾಖಲಿಸಿತ್ತು.

ಬಂಧನಕ್ಕೆ ಮುಂಚಿತವಾಗಿ, ಬಶೀರ್ ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಡಿಪ್ಲೊಮಾ ಪಡೆದಿದ್ದರು. ಜೊತೆಗೆ ಅವರು ರಾಜಕೀಯ ವಿಜ್ಞಾನ, ಸಾರ್ವಜನಿಕ ಆಡಳಿತ ಮತ್ತು ಬೌದ್ಧಿಕ ಆಸ್ತಿ ಕಾಯ್ದೆಯಲ್ಲಿ ಮೂರು ಸ್ನಾತಕೋತ್ತರ ಪದವಿಗಳನ್ನೂ ಪಡೆದಕೊಂಡಿದ್ದರು.

ಇದನ್ನೂ ಓದಿ: ವಿಭಜನೆಯ ನಂತರ ಮೊಟ್ಟಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಸರ್ವಪಕ್ಷ ಸಭೆ!

“ನಾನು ನನ್ನ ಹೆಚ್ಚಿನ ಸಮಯವನ್ನು ಜೈಲಿನ ಅಧ್ಯಯನದಲ್ಲಿ ಕಳೆದಿದ್ದೇನೆ. ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ ಎಂಬ ಭರವಸೆ ನನಗೆ ಇತ್ತು. ನಾನು ಮನೆಗೆ ಹಿಂದಿರುಗಿದ ನಂತರ, ರಾಜ್ಯದಲ್ಲಿ ನಿರುದ್ಯೋಗ, ಆತ್ಮಹತ್ಯೆ ಮತ್ತು ಹಿಂಸಾಚಾರ ಹೆಚ್ಚುತ್ತಿರುವ ವರದಿಗಳನ್ನು ಕೇಳಿದ್ದೇನೆ” ಎಂದು ಬಶೀರ್ ತಿಳಿಸಿರುವುದಾಗಿ ನ್ಯೂಸ್‌ಕ್ಲಿಕ್‌ ವರದಿ ಮಾಡಿದೆ.

ಕಾಶ್ಮೀರ ಸೇರಿದಂತೆ ದೇಶಾದ್ಯಂತ ಕಳೆದ ಮೂರು ದಶಕಗಳಲ್ಲಿ ಜೈಲಿನಲ್ಲಿದ್ದ ನೂರಾರು ಕಾಶ್ಮೀರಿಗಳಲ್ಲಿ ಬಶೀರ್ ಕೂಡ ಒಬ್ಬರು. ಹಲವರ ವಿರುದ್ದ “ಭಯೋತ್ಪಾದನೆ” ಸಂಬಂಧಿತ ಚಟುವಟಿಕೆಗಳಲ್ಲಿ ಯೋಜನೆ ಮತ್ತು ಭಾಗವಹಿಸಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆದಾಗ್ಯೂ, ವರ್ಷಗಳಲ್ಲಿ, ಡಜನ್ಗಟ್ಟಲೆ ಜನರು ನಿರಪರಾಧಿಗಳು ಎಂದು ಸಾಬೀತಾಗಿದೆ ಮತ್ತು ಅವರನ್ನು ಭಾರತೀಯ ನ್ಯಾಯಾಲಯಗಳು ಆರೋಪ ಮುಕ್ತಗೊಳಿಸಿವೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

ತನ್ನ ಮಗನ ಹಿಂದಿರುಗುವಿಕೆಗಾಗಿ ಪ್ರತಿದಿನ ಪ್ರಾರ್ಥಿಸುತ್ತಿದ್ದೆ ಎಂದು ಬಶೀರ್‌‌ ತಾಯಿ ಮೊಕ್ತಾ ತಿಳಿಸಿದ್ದಾರೆ. “ಆತನ ಬಂಧನದ ನಂತರ ನಮ್ಮ ಕುಟುಂಬವು ಸಾಕಷ್ಟು ತೊಂದರೆ ಅನುಭವಿಸಿತು. ನನ್ನ ಪತಿಗೆ ನಿಧನರಾದರು ಮತ್ತು ಮನೆಯಲ್ಲಿ ಅವಿವಾಹಿತ ಇಬ್ಬರು ಹೆಣ್ಣು ಮಕ್ಕಳಿದ್ದರು. ನಮ್ಮ ಕಷ್ಟ ಅಲ್ಲಾಹನಿಗೆ ಮಾತ್ರ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

ಬಶೀರ್ ಅವರ ಸಹೋದರಿಯರಿಬ್ಬರೂ ಈಗ ಮದುವೆಯಾಗಿದ್ದಾರೆ. ಅವರ ಸಹೋದರ ನಜೀರ್ ಅಹ್ಮದ್ ಅವರ ಕುಟುಂಬದ ಹೊಣೆ ಹೊತ್ತು, ಕುಟುಂಬ ನಿರ್ವಹಣೆಗಾಗಿ ಸೇಲ್ಸ್‌ಮ್ಯಾನ್‌ ಆಗಿ ಕೆಲಸ ಮಾಡಿದ್ದಾರೆ. ಅವರಿಗೆ ಇನ್ನೂ ಮದುವೆಯಾಗಿಲ್ಲ.

“ನನ್ನ ತಂದೆಯ ಸಾವು ಎಲ್ಲವನ್ನೂ ಬದಲಾಯಿಸಿತು… ನಾನು ನನ್ನ ಅಣ್ಣನಿಗಾಗಿ ಕಾಯುತ್ತಿದ್ದೆ. ಅವರು ನಿರಪರಾಧಿ ಎಂದು ನನಗೆ ತಿಳಿದಿತ್ತು” ಎಂದು ನಜೀರ್ ಹೇಳಿದ್ದಾರೆ. ಅವರ ಹಿರಿಯ ಸಹೋದರ ಮರಳಿದ್ದರಿಂದ, ಈಗ  ಅವರು ಒಟ್ಟಿಗೆ ಮದುವೆಯಾಗಲು ಯೋಜಿಸುತ್ತಿದ್ದಾರೆ.

ಇದನ್ನೂ ಓದಿ: ಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....