Homeಮುಖಪುಟಭಯೋತ್ಪಾದನೆ ಆರೋಪ ಹೊತ್ತು 11 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

ಭಯೋತ್ಪಾದನೆ ಆರೋಪ ಹೊತ್ತು 11 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

- Advertisement -
- Advertisement -

ಭಯೋತ್ಪಾದನೆಯ ಆರೋಪ ಹೊತ್ತು 11 ವರ್ಷ ಜೈಲಿನಲ್ಲಿದ್ದ ಕಾಶ್ಮೀರ ಮೂಲದ ಬಶೀರ್ ಅಹ್ಮದ್ ಬಾಬಾ (44) ಅವರನ್ನು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಸಂತ್ರಸ್ತ ಬಶೀರ್‌ ಅಹ್ಮದ್‌ ಬಾಬಾ ಅವರು ಗುಜರಾತ್ ಜೈಲಿನಿಂದ ಇದೀಗ ಬಿಡುಗಡೆಯಾಗಿದ್ದಾರೆ. ಅವರ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಎಲ್ಲಾ ಆರೋಪಗಳಲ್ಲಿ ಅವರು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ ಬಳಿಕ ಅವರು ತಮ್ಮ ಮನೆಗೆ ಮರಳಿದ್ದಾರೆ.

ಅವರು ಜೈಲಿನಲ್ಲಿದ್ದ ಈ ಸಮಯದಲ್ಲಿ ಅವರ ಚಿಕ್ಕಪ್ಪ ಮತ್ತು ಅವರ ತಂದೆ ಗುಲಾಮ್ ನಬಿ ಬಾಬಾ ಸೇರಿದಂತೆ ಅವರ ಕುಟುಂಬದ ಅನೇಕ ಸದಸ್ಯರು ಸಾವನ್ನಪ್ಪಿದರು. ಗುತ್ತಿಗೆದಾರರಾಗಿದ್ದ ಅವರ ತಂದೆ 2017 ರಲ್ಲಿ ನಿಧನರಾಗಿದ್ದರು, ಅವರು ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ತಮ್ಮ ತಂದೆ ಮೃತಪಟ್ಟಿರುವುದರ ಬಗ್ಗೆ ಹಲವಾರು ದಿನಗಳು ಕಳೆದರೂ ಬಶೀರ್‌ ಅವರಿಗೆ ಮಾಹಿತಿ ಇರಲಿಲ್ಲ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ ಅವರ ತಂದೆ ಸಾವನ್ನಪ್ಪಿದ್ದರ ಮಾಹಿತಿ ತಿಳಿಯಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಬಶೀರ್ ಅವರು ಶ್ರೀನಗರದ ರೈನವರಿ ಪ್ರದೇಶದ ತಮ್ಮ ನಿವಾಸದ ಹತ್ತಿರ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ನಡೆಸುತ್ತಿದ್ದರು. ಅವರು ಎನ್‌ಜಿಓ ಒಂದರಲ್ಲಿ ಸಹಾಯಕ ಪ್ರಾಜೆಕ್ಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು, ಅವರ ಭಾಗವಾಗಿ ಹಲವಾರು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿದ್ದರು.

ಫೆಬ್ರವರಿ 2010 ರಲ್ಲಿ ಅವರು ಗುಜರಾತ್‌ನಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಲು ಕಾಶ್ಮೀರದಿಂದ ಬಂದಿದ್ದರು. ಆದರೆ, ಅವರು ಹಿಂದಿರುಗುವ ಒಂದು ದಿನ ಮೊದಲು ಅವರನ್ನು ಗುಜರಾತ್‌ನ ಆನಂದ್ ಜಿಲ್ಲೆಯ ಸಮರ್ಖಾ ಗ್ರಾಮದ ಬಳಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿತು. ಅಲ್ಲದೆ, “ಬಶೀರ್‌ ಅವರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಭಾಗವಾಗಿದ್ದಾರೆ. ಭಯೋತ್ಪಾದಕ ತರಬೇತಿಗಾಗಿ ಯುವಕರ ಜಾಲವನ್ನು ಸ್ಥಾಪಿಸಲು ಯೋಜಿಸುತ್ತಿದ್ದಾರೆ” ಎಂದು ಆರೋಪಿಸಿ, ಪ್ರಕರಣ ದಾಖಲಿಸಿತ್ತು.

ಬಂಧನಕ್ಕೆ ಮುಂಚಿತವಾಗಿ, ಬಶೀರ್ ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಡಿಪ್ಲೊಮಾ ಪಡೆದಿದ್ದರು. ಜೊತೆಗೆ ಅವರು ರಾಜಕೀಯ ವಿಜ್ಞಾನ, ಸಾರ್ವಜನಿಕ ಆಡಳಿತ ಮತ್ತು ಬೌದ್ಧಿಕ ಆಸ್ತಿ ಕಾಯ್ದೆಯಲ್ಲಿ ಮೂರು ಸ್ನಾತಕೋತ್ತರ ಪದವಿಗಳನ್ನೂ ಪಡೆದಕೊಂಡಿದ್ದರು.

ಇದನ್ನೂ ಓದಿ: ವಿಭಜನೆಯ ನಂತರ ಮೊಟ್ಟಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಸರ್ವಪಕ್ಷ ಸಭೆ!

“ನಾನು ನನ್ನ ಹೆಚ್ಚಿನ ಸಮಯವನ್ನು ಜೈಲಿನ ಅಧ್ಯಯನದಲ್ಲಿ ಕಳೆದಿದ್ದೇನೆ. ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ ಎಂಬ ಭರವಸೆ ನನಗೆ ಇತ್ತು. ನಾನು ಮನೆಗೆ ಹಿಂದಿರುಗಿದ ನಂತರ, ರಾಜ್ಯದಲ್ಲಿ ನಿರುದ್ಯೋಗ, ಆತ್ಮಹತ್ಯೆ ಮತ್ತು ಹಿಂಸಾಚಾರ ಹೆಚ್ಚುತ್ತಿರುವ ವರದಿಗಳನ್ನು ಕೇಳಿದ್ದೇನೆ” ಎಂದು ಬಶೀರ್ ತಿಳಿಸಿರುವುದಾಗಿ ನ್ಯೂಸ್‌ಕ್ಲಿಕ್‌ ವರದಿ ಮಾಡಿದೆ.

ಕಾಶ್ಮೀರ ಸೇರಿದಂತೆ ದೇಶಾದ್ಯಂತ ಕಳೆದ ಮೂರು ದಶಕಗಳಲ್ಲಿ ಜೈಲಿನಲ್ಲಿದ್ದ ನೂರಾರು ಕಾಶ್ಮೀರಿಗಳಲ್ಲಿ ಬಶೀರ್ ಕೂಡ ಒಬ್ಬರು. ಹಲವರ ವಿರುದ್ದ “ಭಯೋತ್ಪಾದನೆ” ಸಂಬಂಧಿತ ಚಟುವಟಿಕೆಗಳಲ್ಲಿ ಯೋಜನೆ ಮತ್ತು ಭಾಗವಹಿಸಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆದಾಗ್ಯೂ, ವರ್ಷಗಳಲ್ಲಿ, ಡಜನ್ಗಟ್ಟಲೆ ಜನರು ನಿರಪರಾಧಿಗಳು ಎಂದು ಸಾಬೀತಾಗಿದೆ ಮತ್ತು ಅವರನ್ನು ಭಾರತೀಯ ನ್ಯಾಯಾಲಯಗಳು ಆರೋಪ ಮುಕ್ತಗೊಳಿಸಿವೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

ತನ್ನ ಮಗನ ಹಿಂದಿರುಗುವಿಕೆಗಾಗಿ ಪ್ರತಿದಿನ ಪ್ರಾರ್ಥಿಸುತ್ತಿದ್ದೆ ಎಂದು ಬಶೀರ್‌‌ ತಾಯಿ ಮೊಕ್ತಾ ತಿಳಿಸಿದ್ದಾರೆ. “ಆತನ ಬಂಧನದ ನಂತರ ನಮ್ಮ ಕುಟುಂಬವು ಸಾಕಷ್ಟು ತೊಂದರೆ ಅನುಭವಿಸಿತು. ನನ್ನ ಪತಿಗೆ ನಿಧನರಾದರು ಮತ್ತು ಮನೆಯಲ್ಲಿ ಅವಿವಾಹಿತ ಇಬ್ಬರು ಹೆಣ್ಣು ಮಕ್ಕಳಿದ್ದರು. ನಮ್ಮ ಕಷ್ಟ ಅಲ್ಲಾಹನಿಗೆ ಮಾತ್ರ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

ಬಶೀರ್ ಅವರ ಸಹೋದರಿಯರಿಬ್ಬರೂ ಈಗ ಮದುವೆಯಾಗಿದ್ದಾರೆ. ಅವರ ಸಹೋದರ ನಜೀರ್ ಅಹ್ಮದ್ ಅವರ ಕುಟುಂಬದ ಹೊಣೆ ಹೊತ್ತು, ಕುಟುಂಬ ನಿರ್ವಹಣೆಗಾಗಿ ಸೇಲ್ಸ್‌ಮ್ಯಾನ್‌ ಆಗಿ ಕೆಲಸ ಮಾಡಿದ್ದಾರೆ. ಅವರಿಗೆ ಇನ್ನೂ ಮದುವೆಯಾಗಿಲ್ಲ.

“ನನ್ನ ತಂದೆಯ ಸಾವು ಎಲ್ಲವನ್ನೂ ಬದಲಾಯಿಸಿತು… ನಾನು ನನ್ನ ಅಣ್ಣನಿಗಾಗಿ ಕಾಯುತ್ತಿದ್ದೆ. ಅವರು ನಿರಪರಾಧಿ ಎಂದು ನನಗೆ ತಿಳಿದಿತ್ತು” ಎಂದು ನಜೀರ್ ಹೇಳಿದ್ದಾರೆ. ಅವರ ಹಿರಿಯ ಸಹೋದರ ಮರಳಿದ್ದರಿಂದ, ಈಗ  ಅವರು ಒಟ್ಟಿಗೆ ಮದುವೆಯಾಗಲು ಯೋಜಿಸುತ್ತಿದ್ದಾರೆ.

ಇದನ್ನೂ ಓದಿ: ಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...