Homeಮುಖಪುಟಭಯೋತ್ಪಾದನೆ ಆರೋಪ ಹೊತ್ತು 11 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

ಭಯೋತ್ಪಾದನೆ ಆರೋಪ ಹೊತ್ತು 11 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

- Advertisement -
- Advertisement -

ಭಯೋತ್ಪಾದನೆಯ ಆರೋಪ ಹೊತ್ತು 11 ವರ್ಷ ಜೈಲಿನಲ್ಲಿದ್ದ ಕಾಶ್ಮೀರ ಮೂಲದ ಬಶೀರ್ ಅಹ್ಮದ್ ಬಾಬಾ (44) ಅವರನ್ನು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಸಂತ್ರಸ್ತ ಬಶೀರ್‌ ಅಹ್ಮದ್‌ ಬಾಬಾ ಅವರು ಗುಜರಾತ್ ಜೈಲಿನಿಂದ ಇದೀಗ ಬಿಡುಗಡೆಯಾಗಿದ್ದಾರೆ. ಅವರ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಎಲ್ಲಾ ಆರೋಪಗಳಲ್ಲಿ ಅವರು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ ಬಳಿಕ ಅವರು ತಮ್ಮ ಮನೆಗೆ ಮರಳಿದ್ದಾರೆ.

ಅವರು ಜೈಲಿನಲ್ಲಿದ್ದ ಈ ಸಮಯದಲ್ಲಿ ಅವರ ಚಿಕ್ಕಪ್ಪ ಮತ್ತು ಅವರ ತಂದೆ ಗುಲಾಮ್ ನಬಿ ಬಾಬಾ ಸೇರಿದಂತೆ ಅವರ ಕುಟುಂಬದ ಅನೇಕ ಸದಸ್ಯರು ಸಾವನ್ನಪ್ಪಿದರು. ಗುತ್ತಿಗೆದಾರರಾಗಿದ್ದ ಅವರ ತಂದೆ 2017 ರಲ್ಲಿ ನಿಧನರಾಗಿದ್ದರು, ಅವರು ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ತಮ್ಮ ತಂದೆ ಮೃತಪಟ್ಟಿರುವುದರ ಬಗ್ಗೆ ಹಲವಾರು ದಿನಗಳು ಕಳೆದರೂ ಬಶೀರ್‌ ಅವರಿಗೆ ಮಾಹಿತಿ ಇರಲಿಲ್ಲ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ ಅವರ ತಂದೆ ಸಾವನ್ನಪ್ಪಿದ್ದರ ಮಾಹಿತಿ ತಿಳಿಯಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಬಶೀರ್ ಅವರು ಶ್ರೀನಗರದ ರೈನವರಿ ಪ್ರದೇಶದ ತಮ್ಮ ನಿವಾಸದ ಹತ್ತಿರ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ನಡೆಸುತ್ತಿದ್ದರು. ಅವರು ಎನ್‌ಜಿಓ ಒಂದರಲ್ಲಿ ಸಹಾಯಕ ಪ್ರಾಜೆಕ್ಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು, ಅವರ ಭಾಗವಾಗಿ ಹಲವಾರು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿದ್ದರು.

ಫೆಬ್ರವರಿ 2010 ರಲ್ಲಿ ಅವರು ಗುಜರಾತ್‌ನಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಲು ಕಾಶ್ಮೀರದಿಂದ ಬಂದಿದ್ದರು. ಆದರೆ, ಅವರು ಹಿಂದಿರುಗುವ ಒಂದು ದಿನ ಮೊದಲು ಅವರನ್ನು ಗುಜರಾತ್‌ನ ಆನಂದ್ ಜಿಲ್ಲೆಯ ಸಮರ್ಖಾ ಗ್ರಾಮದ ಬಳಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿತು. ಅಲ್ಲದೆ, “ಬಶೀರ್‌ ಅವರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಭಾಗವಾಗಿದ್ದಾರೆ. ಭಯೋತ್ಪಾದಕ ತರಬೇತಿಗಾಗಿ ಯುವಕರ ಜಾಲವನ್ನು ಸ್ಥಾಪಿಸಲು ಯೋಜಿಸುತ್ತಿದ್ದಾರೆ” ಎಂದು ಆರೋಪಿಸಿ, ಪ್ರಕರಣ ದಾಖಲಿಸಿತ್ತು.

ಬಂಧನಕ್ಕೆ ಮುಂಚಿತವಾಗಿ, ಬಶೀರ್ ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಡಿಪ್ಲೊಮಾ ಪಡೆದಿದ್ದರು. ಜೊತೆಗೆ ಅವರು ರಾಜಕೀಯ ವಿಜ್ಞಾನ, ಸಾರ್ವಜನಿಕ ಆಡಳಿತ ಮತ್ತು ಬೌದ್ಧಿಕ ಆಸ್ತಿ ಕಾಯ್ದೆಯಲ್ಲಿ ಮೂರು ಸ್ನಾತಕೋತ್ತರ ಪದವಿಗಳನ್ನೂ ಪಡೆದಕೊಂಡಿದ್ದರು.

ಇದನ್ನೂ ಓದಿ: ವಿಭಜನೆಯ ನಂತರ ಮೊಟ್ಟಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಸರ್ವಪಕ್ಷ ಸಭೆ!

“ನಾನು ನನ್ನ ಹೆಚ್ಚಿನ ಸಮಯವನ್ನು ಜೈಲಿನ ಅಧ್ಯಯನದಲ್ಲಿ ಕಳೆದಿದ್ದೇನೆ. ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ ಎಂಬ ಭರವಸೆ ನನಗೆ ಇತ್ತು. ನಾನು ಮನೆಗೆ ಹಿಂದಿರುಗಿದ ನಂತರ, ರಾಜ್ಯದಲ್ಲಿ ನಿರುದ್ಯೋಗ, ಆತ್ಮಹತ್ಯೆ ಮತ್ತು ಹಿಂಸಾಚಾರ ಹೆಚ್ಚುತ್ತಿರುವ ವರದಿಗಳನ್ನು ಕೇಳಿದ್ದೇನೆ” ಎಂದು ಬಶೀರ್ ತಿಳಿಸಿರುವುದಾಗಿ ನ್ಯೂಸ್‌ಕ್ಲಿಕ್‌ ವರದಿ ಮಾಡಿದೆ.

ಕಾಶ್ಮೀರ ಸೇರಿದಂತೆ ದೇಶಾದ್ಯಂತ ಕಳೆದ ಮೂರು ದಶಕಗಳಲ್ಲಿ ಜೈಲಿನಲ್ಲಿದ್ದ ನೂರಾರು ಕಾಶ್ಮೀರಿಗಳಲ್ಲಿ ಬಶೀರ್ ಕೂಡ ಒಬ್ಬರು. ಹಲವರ ವಿರುದ್ದ “ಭಯೋತ್ಪಾದನೆ” ಸಂಬಂಧಿತ ಚಟುವಟಿಕೆಗಳಲ್ಲಿ ಯೋಜನೆ ಮತ್ತು ಭಾಗವಹಿಸಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆದಾಗ್ಯೂ, ವರ್ಷಗಳಲ್ಲಿ, ಡಜನ್ಗಟ್ಟಲೆ ಜನರು ನಿರಪರಾಧಿಗಳು ಎಂದು ಸಾಬೀತಾಗಿದೆ ಮತ್ತು ಅವರನ್ನು ಭಾರತೀಯ ನ್ಯಾಯಾಲಯಗಳು ಆರೋಪ ಮುಕ್ತಗೊಳಿಸಿವೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

ತನ್ನ ಮಗನ ಹಿಂದಿರುಗುವಿಕೆಗಾಗಿ ಪ್ರತಿದಿನ ಪ್ರಾರ್ಥಿಸುತ್ತಿದ್ದೆ ಎಂದು ಬಶೀರ್‌‌ ತಾಯಿ ಮೊಕ್ತಾ ತಿಳಿಸಿದ್ದಾರೆ. “ಆತನ ಬಂಧನದ ನಂತರ ನಮ್ಮ ಕುಟುಂಬವು ಸಾಕಷ್ಟು ತೊಂದರೆ ಅನುಭವಿಸಿತು. ನನ್ನ ಪತಿಗೆ ನಿಧನರಾದರು ಮತ್ತು ಮನೆಯಲ್ಲಿ ಅವಿವಾಹಿತ ಇಬ್ಬರು ಹೆಣ್ಣು ಮಕ್ಕಳಿದ್ದರು. ನಮ್ಮ ಕಷ್ಟ ಅಲ್ಲಾಹನಿಗೆ ಮಾತ್ರ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

ಬಶೀರ್ ಅವರ ಸಹೋದರಿಯರಿಬ್ಬರೂ ಈಗ ಮದುವೆಯಾಗಿದ್ದಾರೆ. ಅವರ ಸಹೋದರ ನಜೀರ್ ಅಹ್ಮದ್ ಅವರ ಕುಟುಂಬದ ಹೊಣೆ ಹೊತ್ತು, ಕುಟುಂಬ ನಿರ್ವಹಣೆಗಾಗಿ ಸೇಲ್ಸ್‌ಮ್ಯಾನ್‌ ಆಗಿ ಕೆಲಸ ಮಾಡಿದ್ದಾರೆ. ಅವರಿಗೆ ಇನ್ನೂ ಮದುವೆಯಾಗಿಲ್ಲ.

“ನನ್ನ ತಂದೆಯ ಸಾವು ಎಲ್ಲವನ್ನೂ ಬದಲಾಯಿಸಿತು… ನಾನು ನನ್ನ ಅಣ್ಣನಿಗಾಗಿ ಕಾಯುತ್ತಿದ್ದೆ. ಅವರು ನಿರಪರಾಧಿ ಎಂದು ನನಗೆ ತಿಳಿದಿತ್ತು” ಎಂದು ನಜೀರ್ ಹೇಳಿದ್ದಾರೆ. ಅವರ ಹಿರಿಯ ಸಹೋದರ ಮರಳಿದ್ದರಿಂದ, ಈಗ  ಅವರು ಒಟ್ಟಿಗೆ ಮದುವೆಯಾಗಲು ಯೋಜಿಸುತ್ತಿದ್ದಾರೆ.

ಇದನ್ನೂ ಓದಿ: ಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...