Homeಮುಖಪುಟ'ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ; ಅಲ್ಲಾಹು ಅವರನ್ನು ಅನುಗ್ರಹಿಸಲಿ': ದಾಳಿಯ ವೇಳೆ ಸಹಾಯ ಮಾಡಿದ ಸ್ಥಳೀಯ...

‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ; ಅಲ್ಲಾಹು ಅವರನ್ನು ಅನುಗ್ರಹಿಸಲಿ’: ದಾಳಿಯ ವೇಳೆ ಸಹಾಯ ಮಾಡಿದ ಸ್ಥಳೀಯ ಮುಸ್ಲಿಮರಿಗೆ ಪ್ರಾರ್ಥಿಸಿದ ಸಂತ್ರಸ್ತೆ

- Advertisement -
- Advertisement -

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ತನ್ನ ತಂದೆಯನ್ನು ಕಳೆದುಕೊಂಡ ಕೊಚ್ಚಿ ಮೂಲದ ಆರತಿ ಆರ್ ಮೆನನ್‌ಗೆ ಅವರು ಘಟನೆಯ ಬಗ್ಗೆ ಮಾತನಾಡುತ್ತಾ, ಇಬ್ಬರು ಕಾಶ್ಮೀರಿ ಮುಸ್ಲಿಮರು ನನ್ನನ್ನು ಸಹೋದರಿಯಂತೆ ನೋಡಿಕೊಂಡು ನನಗೆ ಎಲ್ಲಾ ಸಹಾಯ ಮಾಡಿದರು, ಈಗ ನನಗೆ ಕಾಶ್ಮೀರದಲ್ಲಿ ಇಬ್ಬರು ಸಹೋದರರು ಇದ್ದಾರೆ, ಅಲ್ಲಾಹನು ಅವರಿಬ್ಬರನ್ನೂ ರಕ್ಷಿಸಲಿ ಎಂದು ಭಾವುಕರಾಗಿ ಹೇಳಿದ್ದಾರೆ. ನನಗೀಗ ಕಾಶ್ಮೀರದಲ್ಲಿ

ತನ್ನ ಕುಟುಂಬದೊಂದಿಗೆ ಕಾಶ್ಮೀರಕ್ಕೆ ತೆರಳಿದ್ದ ಆರತಿ ಅವರ ಪ್ರವಾಸವೂ ದುರಂತ ಅಂತ್ಯ ಕಂಡಿದೆ. ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಉಗ್ರರು ಗುಂಡಿಕ್ಕಿ ಕೊಂದ 26 ಜನರಲ್ಲಿ ಆರತಿ ಅವರ ತಂದೆ, 65 ವರ್ಷದ ಎನ್. ರಾಮಚಂದ್ರನ್ ಕೂಡ ಒಬ್ಬರು.

ಘಟನೆ ಬಗ್ಗೆ ಮಾತನಾಡಿದ ಆರತಿ ಅವರು,”ಮೊದಲಿಗೆ ಅದು ಪಟಾಕಿ ಎಂದು ನಾವು ಭಾವಿಸಿದ್ದೆವು… ಆದರೆ ಮುಂದಿನ ಗುಂಡೇಟಿನೊಂದಿಗೆ, ಅದು ಭಯೋತ್ಪಾದಕ ದಾಳಿ ಎಂದು ನನಗೆ ತಿಳಿದು ಬಂತು…” ಎಂದು ಆರತಿ ಗುರುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರತಿ ಅವರ ತಂದೆ ಮತ್ತು ಅವರ ಆರು ವರ್ಷದ ಅವಳಿ ಪುತ್ರರು ಬೈಸರನ್‌ನ ಹುಲ್ಲುಗಾವಲಿನ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಉಗ್ರರು ಅವರ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಆರತಿ ಅವರ ತಾಯಿ ಶೀಲಾ ಕಾರಿನಲ್ಲೇ ಇದ್ದರು ಎಂದು ವರದಿಯಾಗಿದೆ.

“ನಾವು ತಪ್ಪಿಸಿಕೊಳ್ಳಲು ಬೇಲಿಯ ಕೆಳಗೆ ತೆವಳಿದೆವು. ಜನರು ಎಲ್ಲಾ ದಿಕ್ಕುಗಳಲ್ಲಿಯೂ ಚದುರಿಹೋದರು. ನಾವು ಚಲಿಸುತ್ತಿರುವಾಗ, ಕಾಡಿನಿಂದ ಒಬ್ಬ ವ್ಯಕ್ತಿ ಹೊರಬಂದನು. ಅವನು ನಮ್ಮತ್ತ ನೇರವಾಗಿ ನೋಡಿದನು” ಎಂದು ಅವರು ಹೇಳಿದ್ದಾರೆ.

“ಈ ಅಪರಿಚಿತ ವ್ಯಕ್ತಿ ನಮಗೆ ಅರ್ಥವಾಗದ ಮಾತುಗಳನ್ನು ಹೇಳಿದರು. ನಮಗೆ ಗೊತ್ತಿಲ್ಲ ಎಂದು ನಾವು ಉತ್ತರಿಸಿದೆವು. ಮರುಕ್ಷಣವೇ ಅವನು ಗುಂಡು ಹಾರಿಸಿದ, ಈ ವೇಳೆ ನನ್ನ ತಂದೆ ನಮ್ಮ ಪಕ್ಕದಲ್ಲಿ ಕುಸಿದುಬಿದ್ದರು,” ಎಂದು ಆರತಿ ಹೇಳಿದ್ದಾರೆ.

“ನಾನು ಇಬ್ಬರು ವ್ಯಕ್ತಿಗಳನ್ನು ನೋಡಿದೆ, ಆದರೆ ಅವರು ಯಾವುದೇ ಸೈನಿಕನ ಸಮವಸ್ತ್ರವನ್ನು ಧರಿಸಿರಲಿಲ್ಲ,” ಅವರು ನೆನಪಿಸಿಕೊಂಡಿದ್ದಾರೆ.

“ನನ್ನ ಮಕ್ಕಳು ಕಿರುಚಲು ಪ್ರಾರಂಭಿಸಿದರು, ಮತ್ತು ಆ ವ್ಯಕ್ತಿ ಹೊರಟುಹೋದನು. ನನ್ನ ತಂದೆ ಹೋಗಿದ್ದಾರೆಂದು ನನಗೆ ತಿಳಿದಿತ್ತು. ನಾನು ಎಲ್ಲಿಗೆ ಹೋಗುತ್ತಿದ್ದೇನೆಂದು ತಿಳಿಯದೆ, ನನ್ನ ಅವಳಿ ಮಕ್ಕಳನ್ನು ಹಿಡಿದುಕೊಂಡು ಕಾಡಿಗೆ ಓಡಿಹೋದೆ” ಎಂದು ಆರತಿ ಹೇಳಿದ್ದಾರೆ. ಈ ವೇಳೆ ತಾನು ಸುಮಾರು ಒಂದು ಗಂಟೆಗಳ ಕಾಲ ಅರಣ್ಯದ ಮೂಲಕ ಅಲೆದಾಡಿದ್ದಾಗಿ ಅವರು ವಿವರಿಸಿದ್ದಾರೆ.

ಕೊನೆಗೆ ಫೋನ್‌ಗೆ ಸಿಗ್ನಲ್ ಅನ್ನು ಸಿಕ್ಕಾಗ ತಾನು ಚಾಲಕ ಮುಸಾಫಿರ್‌ಗೆ ಕರೆ ಮಾಡಿದ್ದಾಗಿ ಅವರು ಹೇಳಿದ್ದಾರೆ. “ಕುದುರೆಗಳು ಸಹ ಓಡಲು ಪ್ರಾರಂಭಿಸಿದ್ದವು ಮತ್ತು ನಾನು ಅವುಗಳ ಹೆಜ್ಜೆಗುರುತುಗಳನ್ನು ಅನುಸರಿಸಿದೆ.” ಎಂದು ಆರತಿ ಹೇಳಿದ್ದಾರೆ. ಅದಾಗ್ಯೂ, ಇಂತಹ ಭಯಾನಕತೆಯ ನಡುವೆ ಸಹ ತಾನು ಸಹಾನುಭೂತಿಯನ್ನು ಕಂಡುಕೊಂಡಿದ್ದಾಗಿ ಅವರು ಹೇಳಿದ್ದು, ಅಪರಿಚಿತರು ತನ್ನನ್ನು ಕುಟುಂಬದವರಂತೆ ನಡೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

“ನನ್ನ ಚಾಲಕ ಮುಸಾಫಿರ್ ಮತ್ತು ಇನ್ನೊಬ್ಬ ವ್ಯಕ್ತಿ, ಸಮೀರ್ – ಅವರು ನನ್ನ ಸಹೋದರರಾದರು. ಅವರು ಎಲ್ಲದರಲ್ಲೂ ನನ್ನೊಂದಿಗೆ ನಿಂತರು. ನನ್ನನ್ನು ಶವಾಗಾರಕ್ಕೆ ಕರೆದೊಯ್ದರು, ಔಪಚಾರಿಕತೆಗಳಿಗೆ ಸಹಾಯ ಮಾಡಿದರು… ನಾನು ಬೆಳಿಗ್ಗೆ 3 ಗಂಟೆಯವರೆಗೆ ಅಲ್ಲಿ ಕಾಯುತ್ತಿದ್ದೆ. ಅವರು ನನ್ನನ್ನು ಸಹೋದರಿಯಂತೆ ನೋಡಿಕೊಂಡರು” ಎಂದು ಅವರು ನೆನಪಿಸಿಕೊಂಡಿದ್ದಾರೆ.

“ಶ್ರೀನಗರದಿಂದ ಹೊರಡುವಾಗ, ನನಗೆ ಈಗ ಕಾಶ್ಮೀರದಲ್ಲಿ ಇಬ್ಬರು ಸಹೋದರರಿದ್ದಾರೆ. ಅಲ್ಲಾಹನು ನಿಮ್ಮಿಬ್ಬರನ್ನೂ ರಕ್ಷಿಸಲಿ.” ಎಂದು ಅವರಿಗೆ ಹೇಳಿದ್ದಾಗಿ ಹೇಳಿದ್ದಾರೆ.

ತನ್ನ ತಂದೆ ರಾಮಚಂದ್ರನ್ ಅವರ ಜೀವವನ್ನು ಬಲಿತೆಗೆದುಕೊಂಡ ಭಯೋತ್ಪಾದಕ ದಾಳಿಯ ನಂತರ ತನ್ನ ತಂದೆಯ ದೇಹವನ್ನು ಕೊಚ್ಚಿಗೆ ಮರಳಿ ತರುವ ಜವಾಬ್ದಾರಿಯನ್ನು ಅರತಿ ವಹಿಸಿಕೊಂಡರು. ಆದರೆ ಅವರ ತಾಯಿಗೆ ಈ ದುರಂತದ ಬಗ್ಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. “ನಾನು ಬಲಶಾಲಿಯಂತೆ ನಟಿಸಬೇಕಾಗಿತ್ತು” ಎಂದು ಅವರು ಹೇಳಿದ್ದಾರೆ.

“ನನ್ನ ತಾಯಿ ಮತ್ತು ಮಕ್ಕಳನ್ನು ನಾನು ನಿರ್ವಹಿಸಬೇಕಾಗಿರುವುದರಿಂದ ನಾನು ಕುಸಿದು ಹೋಗಲು ಸಾಧ್ಯವಾಗಲಿಲ್ಲ.” ಎಂದು ಅವರು ಹೇಳಿದ್ದಾರೆ. ರಾಮಚಂದ್ರನ್ ಗಾಯಗೊಂಡಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಮ್ಮ ತಾಯಿಗೆ ಹೇಳಿದ್ದಾಗಿ ಅವರು ಹೇಳಿದ್ದಾರೆ. “ಬುಧವಾರ ಸಂಜೆ ನಾವು ಕೊಚ್ಚಿಯಲ್ಲಿ ಇಳಿದ ನಂತರವೇ ನಾನು ಅವರಿಗೆ ಸತ್ಯವನ್ನು ಹೇಳಿದೆ” ಎಂದು ಅವರು ಹೇಳಿದ್ದಾರೆ.

ದುಬೈನಲ್ಲಿ ಕೆಲಸ ಮಾಡುತ್ತಿರುವ ಮತ್ತು ಪ್ರಸ್ತುತ ಭಾರತದಲ್ಲಿ ಅಲ್ಪಾವಧಿಗೆ ನೆಲೆಸಿರುವ ಆರತಿ ಅವರು ತಮ್ಮ ಕುಟುಂಬದ ಜೊತೆಗೆ ಕಾಶ್ಮೀರಕ್ಕೆ ರಜೆಯನ್ನು ಕಳೆಯಲು ಯೋಜಿಸಿದ್ದರು. ಅವರು ಏಪ್ರಿಲ್ 21 ರ ಸಂಜೆ ಕಣಿವೆಗೆ ಬಂದಿದ್ದರು. “ನಾನು ಆಗಾಗ್ಗೆ ಪ್ರವಾಸಗಳಿಗೆ ಹೋಗುತ್ತೇನೆ. ಆದರೆ ಕಾಶ್ಮೀರಕ್ಕೆ ಭೇಟಿ ನೀಡಿದ್ದು ಇದೇ ಮೊದಲು” ಎಂದು ಅವರು ಹೇಳಿದ್ದಾರೆ.

ಕೊಚ್ಚಿಯ ಎಡಪ್ಪಳ್ಳಿಯ ರಾಮಚಂದ್ರನ್ ಅವರ ಪಾರ್ಥೀವ ಶರೀರವನ್ನು ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ತರಲಾಯಿತು. ರಾಮಚಂದ್ರನ್ ಅವರ ಅಂತಿಮ ವಿಧಿವಿಧಾನಗಳನ್ನು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಎಡಪ್ಪಳ್ಳಿಯ ಸಾರ್ವಜನಿಕ ಸ್ಮಶಾನದಲ್ಲಿ ನಡೆಸಲಾಗುವುದು, ನಂತರ ಬೆಳಿಗ್ಗೆ 7.30 ರಿಂದ ಬೆಳಿಗ್ಗೆ 9.30 ರವರೆಗೆ ಎಡಪ್ಪಳ್ಳಿಯ ಚಂಗಂಪುಳ ಪಾರ್ಕ್‌ನಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗುತ್ತದೆ. ನನಗೀಗ ಕಾಶ್ಮೀರದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...