Homeಮುಖಪುಟ'ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ; ಅಲ್ಲಾಹು ಅವರನ್ನು ಅನುಗ್ರಹಿಸಲಿ': ದಾಳಿಯ ವೇಳೆ ಸಹಾಯ ಮಾಡಿದ ಸ್ಥಳೀಯ...

‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ; ಅಲ್ಲಾಹು ಅವರನ್ನು ಅನುಗ್ರಹಿಸಲಿ’: ದಾಳಿಯ ವೇಳೆ ಸಹಾಯ ಮಾಡಿದ ಸ್ಥಳೀಯ ಮುಸ್ಲಿಮರಿಗೆ ಪ್ರಾರ್ಥಿಸಿದ ಸಂತ್ರಸ್ತೆ

- Advertisement -
- Advertisement -

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ತನ್ನ ತಂದೆಯನ್ನು ಕಳೆದುಕೊಂಡ ಕೊಚ್ಚಿ ಮೂಲದ ಆರತಿ ಆರ್ ಮೆನನ್‌ಗೆ ಅವರು ಘಟನೆಯ ಬಗ್ಗೆ ಮಾತನಾಡುತ್ತಾ, ಇಬ್ಬರು ಕಾಶ್ಮೀರಿ ಮುಸ್ಲಿಮರು ನನ್ನನ್ನು ಸಹೋದರಿಯಂತೆ ನೋಡಿಕೊಂಡು ನನಗೆ ಎಲ್ಲಾ ಸಹಾಯ ಮಾಡಿದರು, ಈಗ ನನಗೆ ಕಾಶ್ಮೀರದಲ್ಲಿ ಇಬ್ಬರು ಸಹೋದರರು ಇದ್ದಾರೆ, ಅಲ್ಲಾಹನು ಅವರಿಬ್ಬರನ್ನೂ ರಕ್ಷಿಸಲಿ ಎಂದು ಭಾವುಕರಾಗಿ ಹೇಳಿದ್ದಾರೆ. ನನಗೀಗ ಕಾಶ್ಮೀರದಲ್ಲಿ

ತನ್ನ ಕುಟುಂಬದೊಂದಿಗೆ ಕಾಶ್ಮೀರಕ್ಕೆ ತೆರಳಿದ್ದ ಆರತಿ ಅವರ ಪ್ರವಾಸವೂ ದುರಂತ ಅಂತ್ಯ ಕಂಡಿದೆ. ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಉಗ್ರರು ಗುಂಡಿಕ್ಕಿ ಕೊಂದ 26 ಜನರಲ್ಲಿ ಆರತಿ ಅವರ ತಂದೆ, 65 ವರ್ಷದ ಎನ್. ರಾಮಚಂದ್ರನ್ ಕೂಡ ಒಬ್ಬರು.

ಘಟನೆ ಬಗ್ಗೆ ಮಾತನಾಡಿದ ಆರತಿ ಅವರು,”ಮೊದಲಿಗೆ ಅದು ಪಟಾಕಿ ಎಂದು ನಾವು ಭಾವಿಸಿದ್ದೆವು… ಆದರೆ ಮುಂದಿನ ಗುಂಡೇಟಿನೊಂದಿಗೆ, ಅದು ಭಯೋತ್ಪಾದಕ ದಾಳಿ ಎಂದು ನನಗೆ ತಿಳಿದು ಬಂತು…” ಎಂದು ಆರತಿ ಗುರುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರತಿ ಅವರ ತಂದೆ ಮತ್ತು ಅವರ ಆರು ವರ್ಷದ ಅವಳಿ ಪುತ್ರರು ಬೈಸರನ್‌ನ ಹುಲ್ಲುಗಾವಲಿನ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಉಗ್ರರು ಅವರ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಆರತಿ ಅವರ ತಾಯಿ ಶೀಲಾ ಕಾರಿನಲ್ಲೇ ಇದ್ದರು ಎಂದು ವರದಿಯಾಗಿದೆ.

“ನಾವು ತಪ್ಪಿಸಿಕೊಳ್ಳಲು ಬೇಲಿಯ ಕೆಳಗೆ ತೆವಳಿದೆವು. ಜನರು ಎಲ್ಲಾ ದಿಕ್ಕುಗಳಲ್ಲಿಯೂ ಚದುರಿಹೋದರು. ನಾವು ಚಲಿಸುತ್ತಿರುವಾಗ, ಕಾಡಿನಿಂದ ಒಬ್ಬ ವ್ಯಕ್ತಿ ಹೊರಬಂದನು. ಅವನು ನಮ್ಮತ್ತ ನೇರವಾಗಿ ನೋಡಿದನು” ಎಂದು ಅವರು ಹೇಳಿದ್ದಾರೆ.

“ಈ ಅಪರಿಚಿತ ವ್ಯಕ್ತಿ ನಮಗೆ ಅರ್ಥವಾಗದ ಮಾತುಗಳನ್ನು ಹೇಳಿದರು. ನಮಗೆ ಗೊತ್ತಿಲ್ಲ ಎಂದು ನಾವು ಉತ್ತರಿಸಿದೆವು. ಮರುಕ್ಷಣವೇ ಅವನು ಗುಂಡು ಹಾರಿಸಿದ, ಈ ವೇಳೆ ನನ್ನ ತಂದೆ ನಮ್ಮ ಪಕ್ಕದಲ್ಲಿ ಕುಸಿದುಬಿದ್ದರು,” ಎಂದು ಆರತಿ ಹೇಳಿದ್ದಾರೆ.

“ನಾನು ಇಬ್ಬರು ವ್ಯಕ್ತಿಗಳನ್ನು ನೋಡಿದೆ, ಆದರೆ ಅವರು ಯಾವುದೇ ಸೈನಿಕನ ಸಮವಸ್ತ್ರವನ್ನು ಧರಿಸಿರಲಿಲ್ಲ,” ಅವರು ನೆನಪಿಸಿಕೊಂಡಿದ್ದಾರೆ.

“ನನ್ನ ಮಕ್ಕಳು ಕಿರುಚಲು ಪ್ರಾರಂಭಿಸಿದರು, ಮತ್ತು ಆ ವ್ಯಕ್ತಿ ಹೊರಟುಹೋದನು. ನನ್ನ ತಂದೆ ಹೋಗಿದ್ದಾರೆಂದು ನನಗೆ ತಿಳಿದಿತ್ತು. ನಾನು ಎಲ್ಲಿಗೆ ಹೋಗುತ್ತಿದ್ದೇನೆಂದು ತಿಳಿಯದೆ, ನನ್ನ ಅವಳಿ ಮಕ್ಕಳನ್ನು ಹಿಡಿದುಕೊಂಡು ಕಾಡಿಗೆ ಓಡಿಹೋದೆ” ಎಂದು ಆರತಿ ಹೇಳಿದ್ದಾರೆ. ಈ ವೇಳೆ ತಾನು ಸುಮಾರು ಒಂದು ಗಂಟೆಗಳ ಕಾಲ ಅರಣ್ಯದ ಮೂಲಕ ಅಲೆದಾಡಿದ್ದಾಗಿ ಅವರು ವಿವರಿಸಿದ್ದಾರೆ.

ಕೊನೆಗೆ ಫೋನ್‌ಗೆ ಸಿಗ್ನಲ್ ಅನ್ನು ಸಿಕ್ಕಾಗ ತಾನು ಚಾಲಕ ಮುಸಾಫಿರ್‌ಗೆ ಕರೆ ಮಾಡಿದ್ದಾಗಿ ಅವರು ಹೇಳಿದ್ದಾರೆ. “ಕುದುರೆಗಳು ಸಹ ಓಡಲು ಪ್ರಾರಂಭಿಸಿದ್ದವು ಮತ್ತು ನಾನು ಅವುಗಳ ಹೆಜ್ಜೆಗುರುತುಗಳನ್ನು ಅನುಸರಿಸಿದೆ.” ಎಂದು ಆರತಿ ಹೇಳಿದ್ದಾರೆ. ಅದಾಗ್ಯೂ, ಇಂತಹ ಭಯಾನಕತೆಯ ನಡುವೆ ಸಹ ತಾನು ಸಹಾನುಭೂತಿಯನ್ನು ಕಂಡುಕೊಂಡಿದ್ದಾಗಿ ಅವರು ಹೇಳಿದ್ದು, ಅಪರಿಚಿತರು ತನ್ನನ್ನು ಕುಟುಂಬದವರಂತೆ ನಡೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

“ನನ್ನ ಚಾಲಕ ಮುಸಾಫಿರ್ ಮತ್ತು ಇನ್ನೊಬ್ಬ ವ್ಯಕ್ತಿ, ಸಮೀರ್ – ಅವರು ನನ್ನ ಸಹೋದರರಾದರು. ಅವರು ಎಲ್ಲದರಲ್ಲೂ ನನ್ನೊಂದಿಗೆ ನಿಂತರು. ನನ್ನನ್ನು ಶವಾಗಾರಕ್ಕೆ ಕರೆದೊಯ್ದರು, ಔಪಚಾರಿಕತೆಗಳಿಗೆ ಸಹಾಯ ಮಾಡಿದರು… ನಾನು ಬೆಳಿಗ್ಗೆ 3 ಗಂಟೆಯವರೆಗೆ ಅಲ್ಲಿ ಕಾಯುತ್ತಿದ್ದೆ. ಅವರು ನನ್ನನ್ನು ಸಹೋದರಿಯಂತೆ ನೋಡಿಕೊಂಡರು” ಎಂದು ಅವರು ನೆನಪಿಸಿಕೊಂಡಿದ್ದಾರೆ.

“ಶ್ರೀನಗರದಿಂದ ಹೊರಡುವಾಗ, ನನಗೆ ಈಗ ಕಾಶ್ಮೀರದಲ್ಲಿ ಇಬ್ಬರು ಸಹೋದರರಿದ್ದಾರೆ. ಅಲ್ಲಾಹನು ನಿಮ್ಮಿಬ್ಬರನ್ನೂ ರಕ್ಷಿಸಲಿ.” ಎಂದು ಅವರಿಗೆ ಹೇಳಿದ್ದಾಗಿ ಹೇಳಿದ್ದಾರೆ.

ತನ್ನ ತಂದೆ ರಾಮಚಂದ್ರನ್ ಅವರ ಜೀವವನ್ನು ಬಲಿತೆಗೆದುಕೊಂಡ ಭಯೋತ್ಪಾದಕ ದಾಳಿಯ ನಂತರ ತನ್ನ ತಂದೆಯ ದೇಹವನ್ನು ಕೊಚ್ಚಿಗೆ ಮರಳಿ ತರುವ ಜವಾಬ್ದಾರಿಯನ್ನು ಅರತಿ ವಹಿಸಿಕೊಂಡರು. ಆದರೆ ಅವರ ತಾಯಿಗೆ ಈ ದುರಂತದ ಬಗ್ಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. “ನಾನು ಬಲಶಾಲಿಯಂತೆ ನಟಿಸಬೇಕಾಗಿತ್ತು” ಎಂದು ಅವರು ಹೇಳಿದ್ದಾರೆ.

“ನನ್ನ ತಾಯಿ ಮತ್ತು ಮಕ್ಕಳನ್ನು ನಾನು ನಿರ್ವಹಿಸಬೇಕಾಗಿರುವುದರಿಂದ ನಾನು ಕುಸಿದು ಹೋಗಲು ಸಾಧ್ಯವಾಗಲಿಲ್ಲ.” ಎಂದು ಅವರು ಹೇಳಿದ್ದಾರೆ. ರಾಮಚಂದ್ರನ್ ಗಾಯಗೊಂಡಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಮ್ಮ ತಾಯಿಗೆ ಹೇಳಿದ್ದಾಗಿ ಅವರು ಹೇಳಿದ್ದಾರೆ. “ಬುಧವಾರ ಸಂಜೆ ನಾವು ಕೊಚ್ಚಿಯಲ್ಲಿ ಇಳಿದ ನಂತರವೇ ನಾನು ಅವರಿಗೆ ಸತ್ಯವನ್ನು ಹೇಳಿದೆ” ಎಂದು ಅವರು ಹೇಳಿದ್ದಾರೆ.

ದುಬೈನಲ್ಲಿ ಕೆಲಸ ಮಾಡುತ್ತಿರುವ ಮತ್ತು ಪ್ರಸ್ತುತ ಭಾರತದಲ್ಲಿ ಅಲ್ಪಾವಧಿಗೆ ನೆಲೆಸಿರುವ ಆರತಿ ಅವರು ತಮ್ಮ ಕುಟುಂಬದ ಜೊತೆಗೆ ಕಾಶ್ಮೀರಕ್ಕೆ ರಜೆಯನ್ನು ಕಳೆಯಲು ಯೋಜಿಸಿದ್ದರು. ಅವರು ಏಪ್ರಿಲ್ 21 ರ ಸಂಜೆ ಕಣಿವೆಗೆ ಬಂದಿದ್ದರು. “ನಾನು ಆಗಾಗ್ಗೆ ಪ್ರವಾಸಗಳಿಗೆ ಹೋಗುತ್ತೇನೆ. ಆದರೆ ಕಾಶ್ಮೀರಕ್ಕೆ ಭೇಟಿ ನೀಡಿದ್ದು ಇದೇ ಮೊದಲು” ಎಂದು ಅವರು ಹೇಳಿದ್ದಾರೆ.

ಕೊಚ್ಚಿಯ ಎಡಪ್ಪಳ್ಳಿಯ ರಾಮಚಂದ್ರನ್ ಅವರ ಪಾರ್ಥೀವ ಶರೀರವನ್ನು ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ತರಲಾಯಿತು. ರಾಮಚಂದ್ರನ್ ಅವರ ಅಂತಿಮ ವಿಧಿವಿಧಾನಗಳನ್ನು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಎಡಪ್ಪಳ್ಳಿಯ ಸಾರ್ವಜನಿಕ ಸ್ಮಶಾನದಲ್ಲಿ ನಡೆಸಲಾಗುವುದು, ನಂತರ ಬೆಳಿಗ್ಗೆ 7.30 ರಿಂದ ಬೆಳಿಗ್ಗೆ 9.30 ರವರೆಗೆ ಎಡಪ್ಪಳ್ಳಿಯ ಚಂಗಂಪುಳ ಪಾರ್ಕ್‌ನಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗುತ್ತದೆ. ನನಗೀಗ ಕಾಶ್ಮೀರದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...