Homeಮುಖಪುಟ'ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ; ಅಲ್ಲಾಹು ಅವರನ್ನು ಅನುಗ್ರಹಿಸಲಿ': ದಾಳಿಯ ವೇಳೆ ಸಹಾಯ ಮಾಡಿದ ಸ್ಥಳೀಯ...

‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ; ಅಲ್ಲಾಹು ಅವರನ್ನು ಅನುಗ್ರಹಿಸಲಿ’: ದಾಳಿಯ ವೇಳೆ ಸಹಾಯ ಮಾಡಿದ ಸ್ಥಳೀಯ ಮುಸ್ಲಿಮರಿಗೆ ಪ್ರಾರ್ಥಿಸಿದ ಸಂತ್ರಸ್ತೆ

- Advertisement -
- Advertisement -

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ತನ್ನ ತಂದೆಯನ್ನು ಕಳೆದುಕೊಂಡ ಕೊಚ್ಚಿ ಮೂಲದ ಆರತಿ ಆರ್ ಮೆನನ್‌ಗೆ ಅವರು ಘಟನೆಯ ಬಗ್ಗೆ ಮಾತನಾಡುತ್ತಾ, ಇಬ್ಬರು ಕಾಶ್ಮೀರಿ ಮುಸ್ಲಿಮರು ನನ್ನನ್ನು ಸಹೋದರಿಯಂತೆ ನೋಡಿಕೊಂಡು ನನಗೆ ಎಲ್ಲಾ ಸಹಾಯ ಮಾಡಿದರು, ಈಗ ನನಗೆ ಕಾಶ್ಮೀರದಲ್ಲಿ ಇಬ್ಬರು ಸಹೋದರರು ಇದ್ದಾರೆ, ಅಲ್ಲಾಹನು ಅವರಿಬ್ಬರನ್ನೂ ರಕ್ಷಿಸಲಿ ಎಂದು ಭಾವುಕರಾಗಿ ಹೇಳಿದ್ದಾರೆ. ನನಗೀಗ ಕಾಶ್ಮೀರದಲ್ಲಿ

ತನ್ನ ಕುಟುಂಬದೊಂದಿಗೆ ಕಾಶ್ಮೀರಕ್ಕೆ ತೆರಳಿದ್ದ ಆರತಿ ಅವರ ಪ್ರವಾಸವೂ ದುರಂತ ಅಂತ್ಯ ಕಂಡಿದೆ. ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಉಗ್ರರು ಗುಂಡಿಕ್ಕಿ ಕೊಂದ 26 ಜನರಲ್ಲಿ ಆರತಿ ಅವರ ತಂದೆ, 65 ವರ್ಷದ ಎನ್. ರಾಮಚಂದ್ರನ್ ಕೂಡ ಒಬ್ಬರು.

ಘಟನೆ ಬಗ್ಗೆ ಮಾತನಾಡಿದ ಆರತಿ ಅವರು,”ಮೊದಲಿಗೆ ಅದು ಪಟಾಕಿ ಎಂದು ನಾವು ಭಾವಿಸಿದ್ದೆವು… ಆದರೆ ಮುಂದಿನ ಗುಂಡೇಟಿನೊಂದಿಗೆ, ಅದು ಭಯೋತ್ಪಾದಕ ದಾಳಿ ಎಂದು ನನಗೆ ತಿಳಿದು ಬಂತು…” ಎಂದು ಆರತಿ ಗುರುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರತಿ ಅವರ ತಂದೆ ಮತ್ತು ಅವರ ಆರು ವರ್ಷದ ಅವಳಿ ಪುತ್ರರು ಬೈಸರನ್‌ನ ಹುಲ್ಲುಗಾವಲಿನ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಉಗ್ರರು ಅವರ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಆರತಿ ಅವರ ತಾಯಿ ಶೀಲಾ ಕಾರಿನಲ್ಲೇ ಇದ್ದರು ಎಂದು ವರದಿಯಾಗಿದೆ.

“ನಾವು ತಪ್ಪಿಸಿಕೊಳ್ಳಲು ಬೇಲಿಯ ಕೆಳಗೆ ತೆವಳಿದೆವು. ಜನರು ಎಲ್ಲಾ ದಿಕ್ಕುಗಳಲ್ಲಿಯೂ ಚದುರಿಹೋದರು. ನಾವು ಚಲಿಸುತ್ತಿರುವಾಗ, ಕಾಡಿನಿಂದ ಒಬ್ಬ ವ್ಯಕ್ತಿ ಹೊರಬಂದನು. ಅವನು ನಮ್ಮತ್ತ ನೇರವಾಗಿ ನೋಡಿದನು” ಎಂದು ಅವರು ಹೇಳಿದ್ದಾರೆ.

“ಈ ಅಪರಿಚಿತ ವ್ಯಕ್ತಿ ನಮಗೆ ಅರ್ಥವಾಗದ ಮಾತುಗಳನ್ನು ಹೇಳಿದರು. ನಮಗೆ ಗೊತ್ತಿಲ್ಲ ಎಂದು ನಾವು ಉತ್ತರಿಸಿದೆವು. ಮರುಕ್ಷಣವೇ ಅವನು ಗುಂಡು ಹಾರಿಸಿದ, ಈ ವೇಳೆ ನನ್ನ ತಂದೆ ನಮ್ಮ ಪಕ್ಕದಲ್ಲಿ ಕುಸಿದುಬಿದ್ದರು,” ಎಂದು ಆರತಿ ಹೇಳಿದ್ದಾರೆ.

“ನಾನು ಇಬ್ಬರು ವ್ಯಕ್ತಿಗಳನ್ನು ನೋಡಿದೆ, ಆದರೆ ಅವರು ಯಾವುದೇ ಸೈನಿಕನ ಸಮವಸ್ತ್ರವನ್ನು ಧರಿಸಿರಲಿಲ್ಲ,” ಅವರು ನೆನಪಿಸಿಕೊಂಡಿದ್ದಾರೆ.

“ನನ್ನ ಮಕ್ಕಳು ಕಿರುಚಲು ಪ್ರಾರಂಭಿಸಿದರು, ಮತ್ತು ಆ ವ್ಯಕ್ತಿ ಹೊರಟುಹೋದನು. ನನ್ನ ತಂದೆ ಹೋಗಿದ್ದಾರೆಂದು ನನಗೆ ತಿಳಿದಿತ್ತು. ನಾನು ಎಲ್ಲಿಗೆ ಹೋಗುತ್ತಿದ್ದೇನೆಂದು ತಿಳಿಯದೆ, ನನ್ನ ಅವಳಿ ಮಕ್ಕಳನ್ನು ಹಿಡಿದುಕೊಂಡು ಕಾಡಿಗೆ ಓಡಿಹೋದೆ” ಎಂದು ಆರತಿ ಹೇಳಿದ್ದಾರೆ. ಈ ವೇಳೆ ತಾನು ಸುಮಾರು ಒಂದು ಗಂಟೆಗಳ ಕಾಲ ಅರಣ್ಯದ ಮೂಲಕ ಅಲೆದಾಡಿದ್ದಾಗಿ ಅವರು ವಿವರಿಸಿದ್ದಾರೆ.

ಕೊನೆಗೆ ಫೋನ್‌ಗೆ ಸಿಗ್ನಲ್ ಅನ್ನು ಸಿಕ್ಕಾಗ ತಾನು ಚಾಲಕ ಮುಸಾಫಿರ್‌ಗೆ ಕರೆ ಮಾಡಿದ್ದಾಗಿ ಅವರು ಹೇಳಿದ್ದಾರೆ. “ಕುದುರೆಗಳು ಸಹ ಓಡಲು ಪ್ರಾರಂಭಿಸಿದ್ದವು ಮತ್ತು ನಾನು ಅವುಗಳ ಹೆಜ್ಜೆಗುರುತುಗಳನ್ನು ಅನುಸರಿಸಿದೆ.” ಎಂದು ಆರತಿ ಹೇಳಿದ್ದಾರೆ. ಅದಾಗ್ಯೂ, ಇಂತಹ ಭಯಾನಕತೆಯ ನಡುವೆ ಸಹ ತಾನು ಸಹಾನುಭೂತಿಯನ್ನು ಕಂಡುಕೊಂಡಿದ್ದಾಗಿ ಅವರು ಹೇಳಿದ್ದು, ಅಪರಿಚಿತರು ತನ್ನನ್ನು ಕುಟುಂಬದವರಂತೆ ನಡೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

“ನನ್ನ ಚಾಲಕ ಮುಸಾಫಿರ್ ಮತ್ತು ಇನ್ನೊಬ್ಬ ವ್ಯಕ್ತಿ, ಸಮೀರ್ – ಅವರು ನನ್ನ ಸಹೋದರರಾದರು. ಅವರು ಎಲ್ಲದರಲ್ಲೂ ನನ್ನೊಂದಿಗೆ ನಿಂತರು. ನನ್ನನ್ನು ಶವಾಗಾರಕ್ಕೆ ಕರೆದೊಯ್ದರು, ಔಪಚಾರಿಕತೆಗಳಿಗೆ ಸಹಾಯ ಮಾಡಿದರು… ನಾನು ಬೆಳಿಗ್ಗೆ 3 ಗಂಟೆಯವರೆಗೆ ಅಲ್ಲಿ ಕಾಯುತ್ತಿದ್ದೆ. ಅವರು ನನ್ನನ್ನು ಸಹೋದರಿಯಂತೆ ನೋಡಿಕೊಂಡರು” ಎಂದು ಅವರು ನೆನಪಿಸಿಕೊಂಡಿದ್ದಾರೆ.

“ಶ್ರೀನಗರದಿಂದ ಹೊರಡುವಾಗ, ನನಗೆ ಈಗ ಕಾಶ್ಮೀರದಲ್ಲಿ ಇಬ್ಬರು ಸಹೋದರರಿದ್ದಾರೆ. ಅಲ್ಲಾಹನು ನಿಮ್ಮಿಬ್ಬರನ್ನೂ ರಕ್ಷಿಸಲಿ.” ಎಂದು ಅವರಿಗೆ ಹೇಳಿದ್ದಾಗಿ ಹೇಳಿದ್ದಾರೆ.

ತನ್ನ ತಂದೆ ರಾಮಚಂದ್ರನ್ ಅವರ ಜೀವವನ್ನು ಬಲಿತೆಗೆದುಕೊಂಡ ಭಯೋತ್ಪಾದಕ ದಾಳಿಯ ನಂತರ ತನ್ನ ತಂದೆಯ ದೇಹವನ್ನು ಕೊಚ್ಚಿಗೆ ಮರಳಿ ತರುವ ಜವಾಬ್ದಾರಿಯನ್ನು ಅರತಿ ವಹಿಸಿಕೊಂಡರು. ಆದರೆ ಅವರ ತಾಯಿಗೆ ಈ ದುರಂತದ ಬಗ್ಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. “ನಾನು ಬಲಶಾಲಿಯಂತೆ ನಟಿಸಬೇಕಾಗಿತ್ತು” ಎಂದು ಅವರು ಹೇಳಿದ್ದಾರೆ.

“ನನ್ನ ತಾಯಿ ಮತ್ತು ಮಕ್ಕಳನ್ನು ನಾನು ನಿರ್ವಹಿಸಬೇಕಾಗಿರುವುದರಿಂದ ನಾನು ಕುಸಿದು ಹೋಗಲು ಸಾಧ್ಯವಾಗಲಿಲ್ಲ.” ಎಂದು ಅವರು ಹೇಳಿದ್ದಾರೆ. ರಾಮಚಂದ್ರನ್ ಗಾಯಗೊಂಡಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಮ್ಮ ತಾಯಿಗೆ ಹೇಳಿದ್ದಾಗಿ ಅವರು ಹೇಳಿದ್ದಾರೆ. “ಬುಧವಾರ ಸಂಜೆ ನಾವು ಕೊಚ್ಚಿಯಲ್ಲಿ ಇಳಿದ ನಂತರವೇ ನಾನು ಅವರಿಗೆ ಸತ್ಯವನ್ನು ಹೇಳಿದೆ” ಎಂದು ಅವರು ಹೇಳಿದ್ದಾರೆ.

ದುಬೈನಲ್ಲಿ ಕೆಲಸ ಮಾಡುತ್ತಿರುವ ಮತ್ತು ಪ್ರಸ್ತುತ ಭಾರತದಲ್ಲಿ ಅಲ್ಪಾವಧಿಗೆ ನೆಲೆಸಿರುವ ಆರತಿ ಅವರು ತಮ್ಮ ಕುಟುಂಬದ ಜೊತೆಗೆ ಕಾಶ್ಮೀರಕ್ಕೆ ರಜೆಯನ್ನು ಕಳೆಯಲು ಯೋಜಿಸಿದ್ದರು. ಅವರು ಏಪ್ರಿಲ್ 21 ರ ಸಂಜೆ ಕಣಿವೆಗೆ ಬಂದಿದ್ದರು. “ನಾನು ಆಗಾಗ್ಗೆ ಪ್ರವಾಸಗಳಿಗೆ ಹೋಗುತ್ತೇನೆ. ಆದರೆ ಕಾಶ್ಮೀರಕ್ಕೆ ಭೇಟಿ ನೀಡಿದ್ದು ಇದೇ ಮೊದಲು” ಎಂದು ಅವರು ಹೇಳಿದ್ದಾರೆ.

ಕೊಚ್ಚಿಯ ಎಡಪ್ಪಳ್ಳಿಯ ರಾಮಚಂದ್ರನ್ ಅವರ ಪಾರ್ಥೀವ ಶರೀರವನ್ನು ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ತರಲಾಯಿತು. ರಾಮಚಂದ್ರನ್ ಅವರ ಅಂತಿಮ ವಿಧಿವಿಧಾನಗಳನ್ನು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಎಡಪ್ಪಳ್ಳಿಯ ಸಾರ್ವಜನಿಕ ಸ್ಮಶಾನದಲ್ಲಿ ನಡೆಸಲಾಗುವುದು, ನಂತರ ಬೆಳಿಗ್ಗೆ 7.30 ರಿಂದ ಬೆಳಿಗ್ಗೆ 9.30 ರವರೆಗೆ ಎಡಪ್ಪಳ್ಳಿಯ ಚಂಗಂಪುಳ ಪಾರ್ಕ್‌ನಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗುತ್ತದೆ. ನನಗೀಗ ಕಾಶ್ಮೀರದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...