Homeಮುಖಪುಟ'ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ; ಅಲ್ಲಾಹು ಅವರನ್ನು ಅನುಗ್ರಹಿಸಲಿ': ದಾಳಿಯ ವೇಳೆ ಸಹಾಯ ಮಾಡಿದ ಸ್ಥಳೀಯ...

‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ; ಅಲ್ಲಾಹು ಅವರನ್ನು ಅನುಗ್ರಹಿಸಲಿ’: ದಾಳಿಯ ವೇಳೆ ಸಹಾಯ ಮಾಡಿದ ಸ್ಥಳೀಯ ಮುಸ್ಲಿಮರಿಗೆ ಪ್ರಾರ್ಥಿಸಿದ ಸಂತ್ರಸ್ತೆ

- Advertisement -
- Advertisement -

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ತನ್ನ ತಂದೆಯನ್ನು ಕಳೆದುಕೊಂಡ ಕೊಚ್ಚಿ ಮೂಲದ ಆರತಿ ಆರ್ ಮೆನನ್‌ಗೆ ಅವರು ಘಟನೆಯ ಬಗ್ಗೆ ಮಾತನಾಡುತ್ತಾ, ಇಬ್ಬರು ಕಾಶ್ಮೀರಿ ಮುಸ್ಲಿಮರು ನನ್ನನ್ನು ಸಹೋದರಿಯಂತೆ ನೋಡಿಕೊಂಡು ನನಗೆ ಎಲ್ಲಾ ಸಹಾಯ ಮಾಡಿದರು, ಈಗ ನನಗೆ ಕಾಶ್ಮೀರದಲ್ಲಿ ಇಬ್ಬರು ಸಹೋದರರು ಇದ್ದಾರೆ, ಅಲ್ಲಾಹನು ಅವರಿಬ್ಬರನ್ನೂ ರಕ್ಷಿಸಲಿ ಎಂದು ಭಾವುಕರಾಗಿ ಹೇಳಿದ್ದಾರೆ. ನನಗೀಗ ಕಾಶ್ಮೀರದಲ್ಲಿ

ತನ್ನ ಕುಟುಂಬದೊಂದಿಗೆ ಕಾಶ್ಮೀರಕ್ಕೆ ತೆರಳಿದ್ದ ಆರತಿ ಅವರ ಪ್ರವಾಸವೂ ದುರಂತ ಅಂತ್ಯ ಕಂಡಿದೆ. ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಉಗ್ರರು ಗುಂಡಿಕ್ಕಿ ಕೊಂದ 26 ಜನರಲ್ಲಿ ಆರತಿ ಅವರ ತಂದೆ, 65 ವರ್ಷದ ಎನ್. ರಾಮಚಂದ್ರನ್ ಕೂಡ ಒಬ್ಬರು.

ಘಟನೆ ಬಗ್ಗೆ ಮಾತನಾಡಿದ ಆರತಿ ಅವರು,”ಮೊದಲಿಗೆ ಅದು ಪಟಾಕಿ ಎಂದು ನಾವು ಭಾವಿಸಿದ್ದೆವು… ಆದರೆ ಮುಂದಿನ ಗುಂಡೇಟಿನೊಂದಿಗೆ, ಅದು ಭಯೋತ್ಪಾದಕ ದಾಳಿ ಎಂದು ನನಗೆ ತಿಳಿದು ಬಂತು…” ಎಂದು ಆರತಿ ಗುರುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರತಿ ಅವರ ತಂದೆ ಮತ್ತು ಅವರ ಆರು ವರ್ಷದ ಅವಳಿ ಪುತ್ರರು ಬೈಸರನ್‌ನ ಹುಲ್ಲುಗಾವಲಿನ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಉಗ್ರರು ಅವರ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಆರತಿ ಅವರ ತಾಯಿ ಶೀಲಾ ಕಾರಿನಲ್ಲೇ ಇದ್ದರು ಎಂದು ವರದಿಯಾಗಿದೆ.

“ನಾವು ತಪ್ಪಿಸಿಕೊಳ್ಳಲು ಬೇಲಿಯ ಕೆಳಗೆ ತೆವಳಿದೆವು. ಜನರು ಎಲ್ಲಾ ದಿಕ್ಕುಗಳಲ್ಲಿಯೂ ಚದುರಿಹೋದರು. ನಾವು ಚಲಿಸುತ್ತಿರುವಾಗ, ಕಾಡಿನಿಂದ ಒಬ್ಬ ವ್ಯಕ್ತಿ ಹೊರಬಂದನು. ಅವನು ನಮ್ಮತ್ತ ನೇರವಾಗಿ ನೋಡಿದನು” ಎಂದು ಅವರು ಹೇಳಿದ್ದಾರೆ.

“ಈ ಅಪರಿಚಿತ ವ್ಯಕ್ತಿ ನಮಗೆ ಅರ್ಥವಾಗದ ಮಾತುಗಳನ್ನು ಹೇಳಿದರು. ನಮಗೆ ಗೊತ್ತಿಲ್ಲ ಎಂದು ನಾವು ಉತ್ತರಿಸಿದೆವು. ಮರುಕ್ಷಣವೇ ಅವನು ಗುಂಡು ಹಾರಿಸಿದ, ಈ ವೇಳೆ ನನ್ನ ತಂದೆ ನಮ್ಮ ಪಕ್ಕದಲ್ಲಿ ಕುಸಿದುಬಿದ್ದರು,” ಎಂದು ಆರತಿ ಹೇಳಿದ್ದಾರೆ.

“ನಾನು ಇಬ್ಬರು ವ್ಯಕ್ತಿಗಳನ್ನು ನೋಡಿದೆ, ಆದರೆ ಅವರು ಯಾವುದೇ ಸೈನಿಕನ ಸಮವಸ್ತ್ರವನ್ನು ಧರಿಸಿರಲಿಲ್ಲ,” ಅವರು ನೆನಪಿಸಿಕೊಂಡಿದ್ದಾರೆ.

“ನನ್ನ ಮಕ್ಕಳು ಕಿರುಚಲು ಪ್ರಾರಂಭಿಸಿದರು, ಮತ್ತು ಆ ವ್ಯಕ್ತಿ ಹೊರಟುಹೋದನು. ನನ್ನ ತಂದೆ ಹೋಗಿದ್ದಾರೆಂದು ನನಗೆ ತಿಳಿದಿತ್ತು. ನಾನು ಎಲ್ಲಿಗೆ ಹೋಗುತ್ತಿದ್ದೇನೆಂದು ತಿಳಿಯದೆ, ನನ್ನ ಅವಳಿ ಮಕ್ಕಳನ್ನು ಹಿಡಿದುಕೊಂಡು ಕಾಡಿಗೆ ಓಡಿಹೋದೆ” ಎಂದು ಆರತಿ ಹೇಳಿದ್ದಾರೆ. ಈ ವೇಳೆ ತಾನು ಸುಮಾರು ಒಂದು ಗಂಟೆಗಳ ಕಾಲ ಅರಣ್ಯದ ಮೂಲಕ ಅಲೆದಾಡಿದ್ದಾಗಿ ಅವರು ವಿವರಿಸಿದ್ದಾರೆ.

ಕೊನೆಗೆ ಫೋನ್‌ಗೆ ಸಿಗ್ನಲ್ ಅನ್ನು ಸಿಕ್ಕಾಗ ತಾನು ಚಾಲಕ ಮುಸಾಫಿರ್‌ಗೆ ಕರೆ ಮಾಡಿದ್ದಾಗಿ ಅವರು ಹೇಳಿದ್ದಾರೆ. “ಕುದುರೆಗಳು ಸಹ ಓಡಲು ಪ್ರಾರಂಭಿಸಿದ್ದವು ಮತ್ತು ನಾನು ಅವುಗಳ ಹೆಜ್ಜೆಗುರುತುಗಳನ್ನು ಅನುಸರಿಸಿದೆ.” ಎಂದು ಆರತಿ ಹೇಳಿದ್ದಾರೆ. ಅದಾಗ್ಯೂ, ಇಂತಹ ಭಯಾನಕತೆಯ ನಡುವೆ ಸಹ ತಾನು ಸಹಾನುಭೂತಿಯನ್ನು ಕಂಡುಕೊಂಡಿದ್ದಾಗಿ ಅವರು ಹೇಳಿದ್ದು, ಅಪರಿಚಿತರು ತನ್ನನ್ನು ಕುಟುಂಬದವರಂತೆ ನಡೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

“ನನ್ನ ಚಾಲಕ ಮುಸಾಫಿರ್ ಮತ್ತು ಇನ್ನೊಬ್ಬ ವ್ಯಕ್ತಿ, ಸಮೀರ್ – ಅವರು ನನ್ನ ಸಹೋದರರಾದರು. ಅವರು ಎಲ್ಲದರಲ್ಲೂ ನನ್ನೊಂದಿಗೆ ನಿಂತರು. ನನ್ನನ್ನು ಶವಾಗಾರಕ್ಕೆ ಕರೆದೊಯ್ದರು, ಔಪಚಾರಿಕತೆಗಳಿಗೆ ಸಹಾಯ ಮಾಡಿದರು… ನಾನು ಬೆಳಿಗ್ಗೆ 3 ಗಂಟೆಯವರೆಗೆ ಅಲ್ಲಿ ಕಾಯುತ್ತಿದ್ದೆ. ಅವರು ನನ್ನನ್ನು ಸಹೋದರಿಯಂತೆ ನೋಡಿಕೊಂಡರು” ಎಂದು ಅವರು ನೆನಪಿಸಿಕೊಂಡಿದ್ದಾರೆ.

“ಶ್ರೀನಗರದಿಂದ ಹೊರಡುವಾಗ, ನನಗೆ ಈಗ ಕಾಶ್ಮೀರದಲ್ಲಿ ಇಬ್ಬರು ಸಹೋದರರಿದ್ದಾರೆ. ಅಲ್ಲಾಹನು ನಿಮ್ಮಿಬ್ಬರನ್ನೂ ರಕ್ಷಿಸಲಿ.” ಎಂದು ಅವರಿಗೆ ಹೇಳಿದ್ದಾಗಿ ಹೇಳಿದ್ದಾರೆ.

ತನ್ನ ತಂದೆ ರಾಮಚಂದ್ರನ್ ಅವರ ಜೀವವನ್ನು ಬಲಿತೆಗೆದುಕೊಂಡ ಭಯೋತ್ಪಾದಕ ದಾಳಿಯ ನಂತರ ತನ್ನ ತಂದೆಯ ದೇಹವನ್ನು ಕೊಚ್ಚಿಗೆ ಮರಳಿ ತರುವ ಜವಾಬ್ದಾರಿಯನ್ನು ಅರತಿ ವಹಿಸಿಕೊಂಡರು. ಆದರೆ ಅವರ ತಾಯಿಗೆ ಈ ದುರಂತದ ಬಗ್ಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. “ನಾನು ಬಲಶಾಲಿಯಂತೆ ನಟಿಸಬೇಕಾಗಿತ್ತು” ಎಂದು ಅವರು ಹೇಳಿದ್ದಾರೆ.

“ನನ್ನ ತಾಯಿ ಮತ್ತು ಮಕ್ಕಳನ್ನು ನಾನು ನಿರ್ವಹಿಸಬೇಕಾಗಿರುವುದರಿಂದ ನಾನು ಕುಸಿದು ಹೋಗಲು ಸಾಧ್ಯವಾಗಲಿಲ್ಲ.” ಎಂದು ಅವರು ಹೇಳಿದ್ದಾರೆ. ರಾಮಚಂದ್ರನ್ ಗಾಯಗೊಂಡಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಮ್ಮ ತಾಯಿಗೆ ಹೇಳಿದ್ದಾಗಿ ಅವರು ಹೇಳಿದ್ದಾರೆ. “ಬುಧವಾರ ಸಂಜೆ ನಾವು ಕೊಚ್ಚಿಯಲ್ಲಿ ಇಳಿದ ನಂತರವೇ ನಾನು ಅವರಿಗೆ ಸತ್ಯವನ್ನು ಹೇಳಿದೆ” ಎಂದು ಅವರು ಹೇಳಿದ್ದಾರೆ.

ದುಬೈನಲ್ಲಿ ಕೆಲಸ ಮಾಡುತ್ತಿರುವ ಮತ್ತು ಪ್ರಸ್ತುತ ಭಾರತದಲ್ಲಿ ಅಲ್ಪಾವಧಿಗೆ ನೆಲೆಸಿರುವ ಆರತಿ ಅವರು ತಮ್ಮ ಕುಟುಂಬದ ಜೊತೆಗೆ ಕಾಶ್ಮೀರಕ್ಕೆ ರಜೆಯನ್ನು ಕಳೆಯಲು ಯೋಜಿಸಿದ್ದರು. ಅವರು ಏಪ್ರಿಲ್ 21 ರ ಸಂಜೆ ಕಣಿವೆಗೆ ಬಂದಿದ್ದರು. “ನಾನು ಆಗಾಗ್ಗೆ ಪ್ರವಾಸಗಳಿಗೆ ಹೋಗುತ್ತೇನೆ. ಆದರೆ ಕಾಶ್ಮೀರಕ್ಕೆ ಭೇಟಿ ನೀಡಿದ್ದು ಇದೇ ಮೊದಲು” ಎಂದು ಅವರು ಹೇಳಿದ್ದಾರೆ.

ಕೊಚ್ಚಿಯ ಎಡಪ್ಪಳ್ಳಿಯ ರಾಮಚಂದ್ರನ್ ಅವರ ಪಾರ್ಥೀವ ಶರೀರವನ್ನು ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ತರಲಾಯಿತು. ರಾಮಚಂದ್ರನ್ ಅವರ ಅಂತಿಮ ವಿಧಿವಿಧಾನಗಳನ್ನು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಎಡಪ್ಪಳ್ಳಿಯ ಸಾರ್ವಜನಿಕ ಸ್ಮಶಾನದಲ್ಲಿ ನಡೆಸಲಾಗುವುದು, ನಂತರ ಬೆಳಿಗ್ಗೆ 7.30 ರಿಂದ ಬೆಳಿಗ್ಗೆ 9.30 ರವರೆಗೆ ಎಡಪ್ಪಳ್ಳಿಯ ಚಂಗಂಪುಳ ಪಾರ್ಕ್‌ನಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗುತ್ತದೆ. ನನಗೀಗ ಕಾಶ್ಮೀರದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...