Homeಮುಖಪುಟಕಾಶ್ಮೀರವು 47ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು: ಫಾರೂಕ್ ಅಬ್ದುಲ್ಲಾ

ಕಾಶ್ಮೀರವು 47ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು: ಫಾರೂಕ್ ಅಬ್ದುಲ್ಲಾ

- Advertisement -
- Advertisement -

ಕಾಶ್ಮೀರವು 1947ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್‌ ನಾಯಕ ಫಾರೂಕ್ ಅಬ್ದುಲ್ಲಾ ಶುಕ್ರವಾರ ಹೇಳಿದ್ದಾರೆ. “ಅವರೊಂದಿಗೆ ಅಂದು ಸೇರಿಕೊಳ್ಳದ ಕಾರಣಕ್ಕಾಗಿ ಅವರು ನಮ್ಮ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಪಾಕಿಸ್ತಾನವು ಇದನ್ನು ಇನ್ನೂ ಮುಂದುವರಿಸಿದರೆ, ಯುದ್ಧ ನಡೆಯುವ ದಿನ ಬರುತ್ತದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

“ನಾನು ಈ ಉಗ್ರಗಾಮಿತ್ವವನ್ನು 30 ವರ್ಷಗಳಿಂದ ನೋಡುತ್ತಿದ್ದೇನೆ. ಅದು ಮುಗಿಯಲಿಲ್ಲ, ಇನ್ನೂ ಮುಂದುವರಿಯುತ್ತಿದೆ. ಅದು ಜಮ್ಮು ಕಾಶ್ಮೀರವನ್ನು ನಾಶಪಡಿಸಿದೆ. ನಮ್ಮ ಸಮಾಜವು ಸಂಕಷ್ಟಕ್ಕೆ ಸಿಲುಕಿದೆ ಮತ್ತು ಬಡತನ ಹೆಚ್ಚಾಗಿದೆ. ಇದು ಪಾಕಿಸ್ತಾನಕ್ಕೆ ಕಾಣುತ್ತಿಲ್ಲವೇ? ಅವರ ಜೊತೆ ಸೇರದೆ ನಮ್ಮ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ?” ಎಂದು ಅವರು ಹೇಳಿದ್ದಾರೆ.

ಗುಲ್ಮಾರ್ಗ್‌ನಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಅನಂತನಾಗ್‌ನ ರೈಫಲ್‌ಮ್ಯಾನ್ ಕೈಸರ್ ಅಹ್ಮದ್ ಶಾ ಮತ್ತು ಸಿರ್ಸಾದ ರೈಫಲ್‌ಮ್ಯಾನ್ ಜೀವನ್ ಸಿಂಗ್ ಎಂಬ ಇಬ್ಬರು ಸೇನಾ ಯೋಧರು ಮತ್ತು ಇಬ್ಬರು ಪೋರ್ಟರ್‌ಗಳಾದ ಜಹೂರ್ ಅಹ್ಮದ್ ಮಿರ್ ಮತ್ತು ಮುಷ್ತಾಕ್ ಅಹ್ಮದ್ ಚೌಧರಿ ಸಾವನ್ನಪ್ಪಿದ್ದಾರೆ. ಜೊತೆಗೆ ಇಬ್ಬರು ಸೈನಿಕರು ಮತ್ತು ಒಬ್ಬ ಪೋರ್ಟರ್ ಸಹ ಗಾಯಗೊಂಡಿದ್ದಾರೆ. ಕಾಶ್ಮೀರವು 47ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು: ಫಾರೂಕ್ ಅಬ್ದುಲ್ಲಾ

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಆಗ್ರಹಿಸಿದ ಫಾರೂಕ್ ಅಬ್ದುಲ್ಲಾ, “ಅವರು ನಾಶವಾಗುತ್ತಾರೆ ಮತ್ತು ನಮ್ಮನ್ನೂ ಹಾಳುಮಾಡುತ್ತಾರೆ. ಇವೆಲ್ಲಾ ಸಾಕಾಗಿದೆ, ಅವರು ಇದನ್ನು ಇನ್ನಾದರೂ ನಿಲ್ಲಿಸಬೇಕು. ಜಮ್ಮು ಕಾಶ್ಮೀರದಲ್ಲಿ ಸಾಕಷ್ಟು ಅಮಾಯಕರ ಹತ್ಯೆಗಳು ನಡೆದಿವೆ. ಈ ಹಿಂಸಾಚಾರ ಮತ್ತು ಹತ್ಯೆಗಳು ನಿಲ್ಲಬೇಕು” ಎಂದು ಹೇಳಿದರು.

ಪಾಕಿಸ್ತಾನದ ಬಗ್ಗೆ ವ್ಯಂಗ್ಯವಾಡಿದ ಫಾರೂಕ್ ಅಬ್ದುಲ್ಲಾ, “ಅವರು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ಮಾಡುವ ಮೂಲಕ ಕಾಶ್ಮೀರವನ್ನು ಪಾಕಿಸ್ತಾನದೊಂದಿಗೆ ವಿಲೀನಗೊಳಿಸಲು ಸಾಧ್ಯವಾಗುತ್ತದೆ ಎಂದು ಭಾವಿಸುತ್ತಾರೆ. ಆದರೆ, ಕಾಶ್ಮೀರವು 1947 ರಲ್ಲಿ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು” ಎಂದು ಹೇಳಿದ್ದಾರೆ.

ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಅವರು, ಅವರು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ಉತ್ತೇಜಿಸುವುದನ್ನು ಮುಂದುವರೆಸಿದರೆ, ಯುದ್ಧ ನಡೆಯುವ ದಿನ ಬರುತ್ತದೆ. ಆಗ ಏನನ್ನೂ ಉಳಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

“ಅವರು ಯುದ್ಧವನ್ನು ಬಯಸಿದರೆ, ಅದಕ್ಕೆ ಸಿದ್ಧರಾಗಿರಬೇಕು. ಈ ದಿನಗಳಲ್ಲಿ ಉಕ್ರೇನ್, ಸಿರಿಯಾ, ಇರಾನ್, ಪ್ಯಾಲೆಸ್ಟೈನ್ ಮತ್ತು ಲೆಬನಾನ್‌ನಲ್ಲಿ ಏನಾಗುತ್ತಿದೆ ಮತ್ತು ಅಲ್ಲಿ ವಿನಾಶ ಹೇಗೆ ನಡೆಯುತ್ತಿದೆ ಎಂಬುದನ್ನು ಪಾಕಿಸ್ತಾನ ನೋಡಬೇಕು. ಇಲ್ಲೂ ಅದೇ ನಾಶವನ್ನು ಪಾಕಿಸ್ತಾನ ಬಯಸುತ್ತದೆಯೇ. ಅವರು ಅದನ್ನು ದೇವರ ಸಲುವಾಗಿ ನಿಲ್ಲಿಸಬೇಕು” ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಜನರು ಎದುರಿಸುತ್ತಿರುವ ಕುಂದುಕೊರತೆಗಳನ್ನು ಪರಿಹರಿಸೋಣ ಎಂದ ಅವರು, ರಾಜ್ಯದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ ಮತ್ತು ಬಡತನ ಹೆಚ್ಚಾಗಿದೆ, ಈ ಸಮಸ್ಯೆಗಳನ್ನು ಪರಿಹರಿಸಲು ನಾವು ಕೆಲಸ ಮಾಡೋಣ ಎಂದು ಅವರು ಹೇಳಿದ್ದಾರೆ.

ಕಾಶ್ಮೀರವು 47ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು: ಫಾರೂಕ್ ಅಬ್ದುಲ್ಲಾ

ಇದನ್ನೂ ಓದಿ: ಉತ್ತರ ಪ್ರದೇಶ: ಮುಸುಕುಧಾರಿಗಳಿಂದ ಖಾಸಗಿ ಶಾಲಾ ವ್ಯಾನ್ ಮೇಲೆ ಗುಂಡಿನ ದಾಳಿ, ಅಪಾಯದಿಂದ ಪಾರಾದ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...