Homeಮುಖಪುಟಕಾಶ್ಮೀರವು 47ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು: ಫಾರೂಕ್ ಅಬ್ದುಲ್ಲಾ

ಕಾಶ್ಮೀರವು 47ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು: ಫಾರೂಕ್ ಅಬ್ದುಲ್ಲಾ

- Advertisement -
- Advertisement -

ಕಾಶ್ಮೀರವು 1947ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್‌ ನಾಯಕ ಫಾರೂಕ್ ಅಬ್ದುಲ್ಲಾ ಶುಕ್ರವಾರ ಹೇಳಿದ್ದಾರೆ. “ಅವರೊಂದಿಗೆ ಅಂದು ಸೇರಿಕೊಳ್ಳದ ಕಾರಣಕ್ಕಾಗಿ ಅವರು ನಮ್ಮ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಪಾಕಿಸ್ತಾನವು ಇದನ್ನು ಇನ್ನೂ ಮುಂದುವರಿಸಿದರೆ, ಯುದ್ಧ ನಡೆಯುವ ದಿನ ಬರುತ್ತದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

“ನಾನು ಈ ಉಗ್ರಗಾಮಿತ್ವವನ್ನು 30 ವರ್ಷಗಳಿಂದ ನೋಡುತ್ತಿದ್ದೇನೆ. ಅದು ಮುಗಿಯಲಿಲ್ಲ, ಇನ್ನೂ ಮುಂದುವರಿಯುತ್ತಿದೆ. ಅದು ಜಮ್ಮು ಕಾಶ್ಮೀರವನ್ನು ನಾಶಪಡಿಸಿದೆ. ನಮ್ಮ ಸಮಾಜವು ಸಂಕಷ್ಟಕ್ಕೆ ಸಿಲುಕಿದೆ ಮತ್ತು ಬಡತನ ಹೆಚ್ಚಾಗಿದೆ. ಇದು ಪಾಕಿಸ್ತಾನಕ್ಕೆ ಕಾಣುತ್ತಿಲ್ಲವೇ? ಅವರ ಜೊತೆ ಸೇರದೆ ನಮ್ಮ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ?” ಎಂದು ಅವರು ಹೇಳಿದ್ದಾರೆ.

ಗುಲ್ಮಾರ್ಗ್‌ನಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಅನಂತನಾಗ್‌ನ ರೈಫಲ್‌ಮ್ಯಾನ್ ಕೈಸರ್ ಅಹ್ಮದ್ ಶಾ ಮತ್ತು ಸಿರ್ಸಾದ ರೈಫಲ್‌ಮ್ಯಾನ್ ಜೀವನ್ ಸಿಂಗ್ ಎಂಬ ಇಬ್ಬರು ಸೇನಾ ಯೋಧರು ಮತ್ತು ಇಬ್ಬರು ಪೋರ್ಟರ್‌ಗಳಾದ ಜಹೂರ್ ಅಹ್ಮದ್ ಮಿರ್ ಮತ್ತು ಮುಷ್ತಾಕ್ ಅಹ್ಮದ್ ಚೌಧರಿ ಸಾವನ್ನಪ್ಪಿದ್ದಾರೆ. ಜೊತೆಗೆ ಇಬ್ಬರು ಸೈನಿಕರು ಮತ್ತು ಒಬ್ಬ ಪೋರ್ಟರ್ ಸಹ ಗಾಯಗೊಂಡಿದ್ದಾರೆ. ಕಾಶ್ಮೀರವು 47ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು: ಫಾರೂಕ್ ಅಬ್ದುಲ್ಲಾ

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಆಗ್ರಹಿಸಿದ ಫಾರೂಕ್ ಅಬ್ದುಲ್ಲಾ, “ಅವರು ನಾಶವಾಗುತ್ತಾರೆ ಮತ್ತು ನಮ್ಮನ್ನೂ ಹಾಳುಮಾಡುತ್ತಾರೆ. ಇವೆಲ್ಲಾ ಸಾಕಾಗಿದೆ, ಅವರು ಇದನ್ನು ಇನ್ನಾದರೂ ನಿಲ್ಲಿಸಬೇಕು. ಜಮ್ಮು ಕಾಶ್ಮೀರದಲ್ಲಿ ಸಾಕಷ್ಟು ಅಮಾಯಕರ ಹತ್ಯೆಗಳು ನಡೆದಿವೆ. ಈ ಹಿಂಸಾಚಾರ ಮತ್ತು ಹತ್ಯೆಗಳು ನಿಲ್ಲಬೇಕು” ಎಂದು ಹೇಳಿದರು.

ಪಾಕಿಸ್ತಾನದ ಬಗ್ಗೆ ವ್ಯಂಗ್ಯವಾಡಿದ ಫಾರೂಕ್ ಅಬ್ದುಲ್ಲಾ, “ಅವರು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ಮಾಡುವ ಮೂಲಕ ಕಾಶ್ಮೀರವನ್ನು ಪಾಕಿಸ್ತಾನದೊಂದಿಗೆ ವಿಲೀನಗೊಳಿಸಲು ಸಾಧ್ಯವಾಗುತ್ತದೆ ಎಂದು ಭಾವಿಸುತ್ತಾರೆ. ಆದರೆ, ಕಾಶ್ಮೀರವು 1947 ರಲ್ಲಿ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು” ಎಂದು ಹೇಳಿದ್ದಾರೆ.

ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಅವರು, ಅವರು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ಉತ್ತೇಜಿಸುವುದನ್ನು ಮುಂದುವರೆಸಿದರೆ, ಯುದ್ಧ ನಡೆಯುವ ದಿನ ಬರುತ್ತದೆ. ಆಗ ಏನನ್ನೂ ಉಳಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

“ಅವರು ಯುದ್ಧವನ್ನು ಬಯಸಿದರೆ, ಅದಕ್ಕೆ ಸಿದ್ಧರಾಗಿರಬೇಕು. ಈ ದಿನಗಳಲ್ಲಿ ಉಕ್ರೇನ್, ಸಿರಿಯಾ, ಇರಾನ್, ಪ್ಯಾಲೆಸ್ಟೈನ್ ಮತ್ತು ಲೆಬನಾನ್‌ನಲ್ಲಿ ಏನಾಗುತ್ತಿದೆ ಮತ್ತು ಅಲ್ಲಿ ವಿನಾಶ ಹೇಗೆ ನಡೆಯುತ್ತಿದೆ ಎಂಬುದನ್ನು ಪಾಕಿಸ್ತಾನ ನೋಡಬೇಕು. ಇಲ್ಲೂ ಅದೇ ನಾಶವನ್ನು ಪಾಕಿಸ್ತಾನ ಬಯಸುತ್ತದೆಯೇ. ಅವರು ಅದನ್ನು ದೇವರ ಸಲುವಾಗಿ ನಿಲ್ಲಿಸಬೇಕು” ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಜನರು ಎದುರಿಸುತ್ತಿರುವ ಕುಂದುಕೊರತೆಗಳನ್ನು ಪರಿಹರಿಸೋಣ ಎಂದ ಅವರು, ರಾಜ್ಯದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ ಮತ್ತು ಬಡತನ ಹೆಚ್ಚಾಗಿದೆ, ಈ ಸಮಸ್ಯೆಗಳನ್ನು ಪರಿಹರಿಸಲು ನಾವು ಕೆಲಸ ಮಾಡೋಣ ಎಂದು ಅವರು ಹೇಳಿದ್ದಾರೆ.

ಕಾಶ್ಮೀರವು 47ರಲ್ಲೇ ಪಾಕಿಸ್ತಾನಕ್ಕೆ ಸೇರದಿರಲು ನಿರ್ಧರಿಸಿತ್ತು: ಫಾರೂಕ್ ಅಬ್ದುಲ್ಲಾ

ಇದನ್ನೂ ಓದಿ: ಉತ್ತರ ಪ್ರದೇಶ: ಮುಸುಕುಧಾರಿಗಳಿಂದ ಖಾಸಗಿ ಶಾಲಾ ವ್ಯಾನ್ ಮೇಲೆ ಗುಂಡಿನ ದಾಳಿ, ಅಪಾಯದಿಂದ ಪಾರಾದ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...