Homeಮುಖಪುಟಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

ಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಜನರು ಅಕ್ಷರಶಃ ಕಾರ್ಗತ್ತಲಲ್ಲಿದ್ದರು. ಉಸಿರಾಟ ನಿಂತು ಹೋಗಿತ್ತು. ಬಾಹ್ಯ ಜಗತ್ತಿನ ಸಂಪರ್ಕ ಕಡಿದುಕೊಂಡಿದ್ದರು. ಇದಕ್ಕೆ ಕಾರಣ ಕೇಂದ್ರ ಸರ್ಕಾರ. ರಾತ್ರೋರಾತ್ರಿ ಸೇನೆ ನಿಯೋಜಿಸಿ, 370ನೇ ವಿಧಿಯು ರದ್ದುಗೊಳಿಸಿದ್ದು, ಇದರಿಂದ ಎಲ್ಲ ಹಕ್ಕುಗಳು ಮೊಟುಕಾಗಿದ್ದವು. ಹೊರ ಪ್ರಪಂಚದೊಂದಿಗೆ ಸಂಪರ್ಕವೇ ಇರಲಿಲ್ಲ. ಅವರೆಲ್ಲ ಮಾನಸಿಕವಾಗಿ ಜರ್ಝರಿತರಾಗಿದ್ದರು. ಅದೂ 69 ದಿನಗಳ ಕಾಲ. ಎಲ್ಲಿಗೂ ಹೋಗದೆ ಮನೆಯೊಳಗೆ ಇರುವುದೆಂದರೆ ಹಿಂಸೆ. ಸರ್ಕಾರಕ್ಕು ಇದೇ ಬೇಕಾಗಿತ್ತು. ಅದನ್ನು ವ್ಯವಸ್ಥಿತವಾಗಿ ಮಾಡಿತ್ತು.

ಎರಡು ತಿಂಗಳು 10 ದಿನಗಳ ನಂತರ ಕಣಿವೆ ರಾಜ್ಯದಲ್ಲಿ ಮೊಬೈಲ್ ರಿಂಗಣಿಸಿವೆ. ಹೋದ ಜೀವ ಬಂದಂತಾಗಿದೆ. ಮಡುಗಟ್ಟಿದ್ದ ಭಾವನೆಗಳ ಕಟ್ಟೆ ಒಡೆದಿದೆ. ಪಂಜರದಲ್ಲಿದ್ದ ಹಕ್ಕಿಗಳು ಹಾರತೊಡಗಿವೆ. ಬಂಧುಗಳು, ಮಕ್ಕಳು, ಸ್ನೇಹಿತರು ಪ್ರೀತಿಪಾತ್ರರ ಜತೆ ಮಾತು ನಡೆದಿದೆ. ಜೀವ ನಿರಾಳವಾದ ಅನುಭವ. ಇದರ ಬೆನ್ನಲ್ಲೇ ಹೋರಾಟವೂ ಆರಂಭವಾಗಿದೆ. ಪ್ರತಿಭಟನೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ.

ಶಾಲಾ-ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದಿವೆ. ಆದರೆ ವಿದ್ಯಾರ್ಥಿಗಳ ಸುಳಿವಿಲ್ಲ. ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ಕಾರಣ ಭಯ. ಪೋಷಕರೂ ಕೂಡ ಮಕ್ಕಳನ್ನು ಶಾಲಾ-ಕಾಲೇಜಿಗೆ ಕಳಿಸಲು ಭಯಪಡುತ್ತಿದ್ದಾರೆ. ಶಾಲೆ-ಕಾಲೇಜುಗಳ ಸುತ್ತಲೂ ಪೊಲೀಸರು, ಸಿಆರ್‍ಪಿಎಫ್ ಯೋಧರ ಸರ್ಪಗಾವಲು. ಪೊಲೀಸರು ಶಾಲೆ, ಕಾಲೇಜು, ವಿವಿ ಆವರಣದೊಳಗೆ ಪ್ರವೇಶಿಸುವಂತಿಲ್ಲ. ಕ್ಯಾಂಪಸ್ ಹೊರಗೆ ಇರಬೇಕು. ಮುನ್ನೆಚ್ಚರಿಕ ಕ್ರಮವಾಗಿ ಶಾಲೆ-ಕಾಲೇಜುಗಳಲ್ಲಿ ಅತ್ಯಾಧುನಿಕ ಹೈರೆಸಲ್ಯೂಷನ್ ಸಿಸಿ ಟಿವಿ ಆಳವಡಿಸಲಾಗಿದೆ. ಪ್ರತಿಯೊಂದು ಶಾಲೆ-ಕಾಲೇಜು ವಿಶ್ವ ವಿದ್ಯಾಲಯಗಳಿಗೆ ನ್ಯಾಯಾಧೀಶರ ನೇಮಕ ಮಾಡಿದೆ ಸರ್ಕಾರ. ಆದರೂ ವಿದ್ಯಾರ್ಥಿಗಳು ಶಾಲೆಗಳತ್ತ ಮುಖ ಮಾಡಿಲ್ಲ.

ಸ್ಥಳೀಯ ಪತ್ರಕರ್ತ ಅಹಮದ್ ಬರೆಯುತ್ತಾರೆ. 2017ರಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದ ಹಿನ್ನೆಲೆಯಲ್ಲಿ ಸರ್ಕಾರ ಹಲವು ದಿನಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಭದ್ರತಾ ಪಡೆಗಳು ಪುಲ್ವಾಮಾ ಜಿಲ್ಲೆಯ ಪದವಿ ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದವು. ಇದೇ ಕಾರಣಕ್ಕೆ ಮೊದಲ ಬಾರಿಗೆ ಶಾಲೆಗಳು-ಕಾಲೇಜುಗಳ ಉಸ್ತುವಾರಿಗೆ ನ್ಯಾಯಾಧೀಶರ ನೇಮಕ ಮಾಡಿದೆ. ನ್ಯಾಯಾಧೀಶರು ಮಕ್ಕಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

ನಿರ್ಬಂಧ ಸಡಿಲಿಕೆಯಾಗಿದ್ದರೂ ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ವಿದ್ಯಾರ್ಥಿಗಳನ್ನು ಶಾಲೆಗಳತ್ತ ಕರೆತರುವ ಪ್ರಯತ್ನಗಳು ಸಂಪೂರ್ಣ ವಿಫಲವಾಗಿವೆ. ಸರ್ಕಾರ ಶಾಲೆಗಳನ್ನು ಪುನರ್ ಆರಂಭಿಸಿರುವುದು ರಾಜಕೀಯ ಪ್ರೇರಿತ ಎಂಬ ಭಾವನೆ ಜನರಲ್ಲಿದೆ. ಭಯವೂ ಮೂಡಿದೆ. ಮಕ್ಕಳನ್ನು ಶಾಲೆಗಳಿಗೆ ಕಳಿಸಿದರೆ ಅವರು ಮತ್ತೆ ವಾಪಸ್ ಮನೆಗೆ ಬರುತ್ತಾರೆಂಬ ಭರವಸೆ ಹೊರಟು ಹೋಗಿದೆ. ಜನ ಸರ್ಕಾರದ ಮೇಲಿನ ಭರವಸೆ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ವಿದ್ಯಾರ್ಥಿಗಳನ್ನು ತರಗತಿಗೆ ಹಿಡಿದು ತರಲು ಆಗುತ್ತಿಲ್ಲ ಎನ್ನುತ್ತಾರೆ ಪತ್ರಕರ್ತ ಅಹಮದ್.

ಈ ನಡುವೆ ಸರ್ಕಾರ ಅಕ್ಟೋಬರ್ 23 ರಿಂದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಘೋಷಣೆ ಮಾಡಿದೆ. ಪದವಿ ಪೂರ್ವ ಕೋರ್ಸ್‍ಗಳಿಗೆ ನವೆಂಬರ್‍ನಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಿದೆ. ಆದರೆ ತರಗತಿಗಳೇ ನಡೆದಿಲ್ಲ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಿಲ್ಲ. ಬೋಧಿಸಬೇಕಾದ ಸಿಲಬಸ್ ಅಪೂರ್ಣಗೊಂಡಿದೆ. ಈ ಕಾರಣದಿಂದ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಬೇಕಾದ ಅನಿವಾರ್ಯತೆ ಬಂದೊದಗಿದೆ. ವಿದ್ಯಾರ್ಥಿಗಳು ಪಾಠ ಪ್ರವಚನದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪೋಷಕರು ಕೂಡ ಮಕ್ಕಳ ಸುರಕ್ಷತೆ ಬಗ್ಗೆ ಗಮನಹರಿಸಿರುವುದು ಅವರ ನಡವಳಿಕೆಗಳಿಂದ ತಿಳಿದು ಬರುತ್ತದೆ.

ವಿದ್ಯಾರ್ಥಿಗಳ ಹಾಜರಾತಿ ಇಲ್ಲ. ಪಠ್ಯ ಪೂರ್ಣಗೊಂಡಿಲ್ಲ. ಆದರೂ ಸರ್ಕಾರ ಹಾಜರಾತಿ ಇದೆ ಎನ್ನುತ್ತಿದೆ. ಕಣಿವೆಯಲ್ಲಿ ಸಾಮಾನ್ಯ ಸ್ಥಿತಿಯಿದೆ ಎಂದು ನಂಬಿಸುವ ಪ್ರಯತ್ನ ಮಾಡುತ್ತಿದೆ ಅಷ್ಟೆ. ಸರ್ಕಾರದ ಇಂತಹ ಅವೈಜ್ಞಾನಿಕ ದಿಢೀರ್ ಕ್ರಮಗಳಿಂದ ವಿದ್ಯಾರ್ಥಿಗಳ ಒಂದು ವರ್ಷದ ಶಿಕ್ಷಣ ಅರ್ಧಕ್ಕೆ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಯದ ವಾತಾವರಣ ಮುಂದುವರಿದರೆ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಸಾಧ್ಯತೆಯೇ ಹೆಚ್ಚಾಗಿದೆ. ಮಕ್ಕಳ ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕನ್ನು ಸರ್ಕಾರವೇ ಕಿತ್ತುಕೊಂಡಂತಾಗುತ್ತದೆ. ಮುಂದಾದರೂ ಸರ್ಕಾರ ಅಲ್ಲಿನ ಜನರ ಭಾವನೆಗಳಿಗೆ ಸ್ಪಂದಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...