Homeಮುಖಪುಟಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

ಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಜನರು ಅಕ್ಷರಶಃ ಕಾರ್ಗತ್ತಲಲ್ಲಿದ್ದರು. ಉಸಿರಾಟ ನಿಂತು ಹೋಗಿತ್ತು. ಬಾಹ್ಯ ಜಗತ್ತಿನ ಸಂಪರ್ಕ ಕಡಿದುಕೊಂಡಿದ್ದರು. ಇದಕ್ಕೆ ಕಾರಣ ಕೇಂದ್ರ ಸರ್ಕಾರ. ರಾತ್ರೋರಾತ್ರಿ ಸೇನೆ ನಿಯೋಜಿಸಿ, 370ನೇ ವಿಧಿಯು ರದ್ದುಗೊಳಿಸಿದ್ದು, ಇದರಿಂದ ಎಲ್ಲ ಹಕ್ಕುಗಳು ಮೊಟುಕಾಗಿದ್ದವು. ಹೊರ ಪ್ರಪಂಚದೊಂದಿಗೆ ಸಂಪರ್ಕವೇ ಇರಲಿಲ್ಲ. ಅವರೆಲ್ಲ ಮಾನಸಿಕವಾಗಿ ಜರ್ಝರಿತರಾಗಿದ್ದರು. ಅದೂ 69 ದಿನಗಳ ಕಾಲ. ಎಲ್ಲಿಗೂ ಹೋಗದೆ ಮನೆಯೊಳಗೆ ಇರುವುದೆಂದರೆ ಹಿಂಸೆ. ಸರ್ಕಾರಕ್ಕು ಇದೇ ಬೇಕಾಗಿತ್ತು. ಅದನ್ನು ವ್ಯವಸ್ಥಿತವಾಗಿ ಮಾಡಿತ್ತು.

ಎರಡು ತಿಂಗಳು 10 ದಿನಗಳ ನಂತರ ಕಣಿವೆ ರಾಜ್ಯದಲ್ಲಿ ಮೊಬೈಲ್ ರಿಂಗಣಿಸಿವೆ. ಹೋದ ಜೀವ ಬಂದಂತಾಗಿದೆ. ಮಡುಗಟ್ಟಿದ್ದ ಭಾವನೆಗಳ ಕಟ್ಟೆ ಒಡೆದಿದೆ. ಪಂಜರದಲ್ಲಿದ್ದ ಹಕ್ಕಿಗಳು ಹಾರತೊಡಗಿವೆ. ಬಂಧುಗಳು, ಮಕ್ಕಳು, ಸ್ನೇಹಿತರು ಪ್ರೀತಿಪಾತ್ರರ ಜತೆ ಮಾತು ನಡೆದಿದೆ. ಜೀವ ನಿರಾಳವಾದ ಅನುಭವ. ಇದರ ಬೆನ್ನಲ್ಲೇ ಹೋರಾಟವೂ ಆರಂಭವಾಗಿದೆ. ಪ್ರತಿಭಟನೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ.

ಶಾಲಾ-ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದಿವೆ. ಆದರೆ ವಿದ್ಯಾರ್ಥಿಗಳ ಸುಳಿವಿಲ್ಲ. ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ಕಾರಣ ಭಯ. ಪೋಷಕರೂ ಕೂಡ ಮಕ್ಕಳನ್ನು ಶಾಲಾ-ಕಾಲೇಜಿಗೆ ಕಳಿಸಲು ಭಯಪಡುತ್ತಿದ್ದಾರೆ. ಶಾಲೆ-ಕಾಲೇಜುಗಳ ಸುತ್ತಲೂ ಪೊಲೀಸರು, ಸಿಆರ್‍ಪಿಎಫ್ ಯೋಧರ ಸರ್ಪಗಾವಲು. ಪೊಲೀಸರು ಶಾಲೆ, ಕಾಲೇಜು, ವಿವಿ ಆವರಣದೊಳಗೆ ಪ್ರವೇಶಿಸುವಂತಿಲ್ಲ. ಕ್ಯಾಂಪಸ್ ಹೊರಗೆ ಇರಬೇಕು. ಮುನ್ನೆಚ್ಚರಿಕ ಕ್ರಮವಾಗಿ ಶಾಲೆ-ಕಾಲೇಜುಗಳಲ್ಲಿ ಅತ್ಯಾಧುನಿಕ ಹೈರೆಸಲ್ಯೂಷನ್ ಸಿಸಿ ಟಿವಿ ಆಳವಡಿಸಲಾಗಿದೆ. ಪ್ರತಿಯೊಂದು ಶಾಲೆ-ಕಾಲೇಜು ವಿಶ್ವ ವಿದ್ಯಾಲಯಗಳಿಗೆ ನ್ಯಾಯಾಧೀಶರ ನೇಮಕ ಮಾಡಿದೆ ಸರ್ಕಾರ. ಆದರೂ ವಿದ್ಯಾರ್ಥಿಗಳು ಶಾಲೆಗಳತ್ತ ಮುಖ ಮಾಡಿಲ್ಲ.

ಸ್ಥಳೀಯ ಪತ್ರಕರ್ತ ಅಹಮದ್ ಬರೆಯುತ್ತಾರೆ. 2017ರಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದ ಹಿನ್ನೆಲೆಯಲ್ಲಿ ಸರ್ಕಾರ ಹಲವು ದಿನಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಭದ್ರತಾ ಪಡೆಗಳು ಪುಲ್ವಾಮಾ ಜಿಲ್ಲೆಯ ಪದವಿ ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದವು. ಇದೇ ಕಾರಣಕ್ಕೆ ಮೊದಲ ಬಾರಿಗೆ ಶಾಲೆಗಳು-ಕಾಲೇಜುಗಳ ಉಸ್ತುವಾರಿಗೆ ನ್ಯಾಯಾಧೀಶರ ನೇಮಕ ಮಾಡಿದೆ. ನ್ಯಾಯಾಧೀಶರು ಮಕ್ಕಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

ನಿರ್ಬಂಧ ಸಡಿಲಿಕೆಯಾಗಿದ್ದರೂ ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ವಿದ್ಯಾರ್ಥಿಗಳನ್ನು ಶಾಲೆಗಳತ್ತ ಕರೆತರುವ ಪ್ರಯತ್ನಗಳು ಸಂಪೂರ್ಣ ವಿಫಲವಾಗಿವೆ. ಸರ್ಕಾರ ಶಾಲೆಗಳನ್ನು ಪುನರ್ ಆರಂಭಿಸಿರುವುದು ರಾಜಕೀಯ ಪ್ರೇರಿತ ಎಂಬ ಭಾವನೆ ಜನರಲ್ಲಿದೆ. ಭಯವೂ ಮೂಡಿದೆ. ಮಕ್ಕಳನ್ನು ಶಾಲೆಗಳಿಗೆ ಕಳಿಸಿದರೆ ಅವರು ಮತ್ತೆ ವಾಪಸ್ ಮನೆಗೆ ಬರುತ್ತಾರೆಂಬ ಭರವಸೆ ಹೊರಟು ಹೋಗಿದೆ. ಜನ ಸರ್ಕಾರದ ಮೇಲಿನ ಭರವಸೆ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ವಿದ್ಯಾರ್ಥಿಗಳನ್ನು ತರಗತಿಗೆ ಹಿಡಿದು ತರಲು ಆಗುತ್ತಿಲ್ಲ ಎನ್ನುತ್ತಾರೆ ಪತ್ರಕರ್ತ ಅಹಮದ್.

ಈ ನಡುವೆ ಸರ್ಕಾರ ಅಕ್ಟೋಬರ್ 23 ರಿಂದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಘೋಷಣೆ ಮಾಡಿದೆ. ಪದವಿ ಪೂರ್ವ ಕೋರ್ಸ್‍ಗಳಿಗೆ ನವೆಂಬರ್‍ನಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಿದೆ. ಆದರೆ ತರಗತಿಗಳೇ ನಡೆದಿಲ್ಲ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಿಲ್ಲ. ಬೋಧಿಸಬೇಕಾದ ಸಿಲಬಸ್ ಅಪೂರ್ಣಗೊಂಡಿದೆ. ಈ ಕಾರಣದಿಂದ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಬೇಕಾದ ಅನಿವಾರ್ಯತೆ ಬಂದೊದಗಿದೆ. ವಿದ್ಯಾರ್ಥಿಗಳು ಪಾಠ ಪ್ರವಚನದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪೋಷಕರು ಕೂಡ ಮಕ್ಕಳ ಸುರಕ್ಷತೆ ಬಗ್ಗೆ ಗಮನಹರಿಸಿರುವುದು ಅವರ ನಡವಳಿಕೆಗಳಿಂದ ತಿಳಿದು ಬರುತ್ತದೆ.

ವಿದ್ಯಾರ್ಥಿಗಳ ಹಾಜರಾತಿ ಇಲ್ಲ. ಪಠ್ಯ ಪೂರ್ಣಗೊಂಡಿಲ್ಲ. ಆದರೂ ಸರ್ಕಾರ ಹಾಜರಾತಿ ಇದೆ ಎನ್ನುತ್ತಿದೆ. ಕಣಿವೆಯಲ್ಲಿ ಸಾಮಾನ್ಯ ಸ್ಥಿತಿಯಿದೆ ಎಂದು ನಂಬಿಸುವ ಪ್ರಯತ್ನ ಮಾಡುತ್ತಿದೆ ಅಷ್ಟೆ. ಸರ್ಕಾರದ ಇಂತಹ ಅವೈಜ್ಞಾನಿಕ ದಿಢೀರ್ ಕ್ರಮಗಳಿಂದ ವಿದ್ಯಾರ್ಥಿಗಳ ಒಂದು ವರ್ಷದ ಶಿಕ್ಷಣ ಅರ್ಧಕ್ಕೆ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಯದ ವಾತಾವರಣ ಮುಂದುವರಿದರೆ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಸಾಧ್ಯತೆಯೇ ಹೆಚ್ಚಾಗಿದೆ. ಮಕ್ಕಳ ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕನ್ನು ಸರ್ಕಾರವೇ ಕಿತ್ತುಕೊಂಡಂತಾಗುತ್ತದೆ. ಮುಂದಾದರೂ ಸರ್ಕಾರ ಅಲ್ಲಿನ ಜನರ ಭಾವನೆಗಳಿಗೆ ಸ್ಪಂದಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...