Homeಮುಖಪುಟಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

ಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಜನರು ಅಕ್ಷರಶಃ ಕಾರ್ಗತ್ತಲಲ್ಲಿದ್ದರು. ಉಸಿರಾಟ ನಿಂತು ಹೋಗಿತ್ತು. ಬಾಹ್ಯ ಜಗತ್ತಿನ ಸಂಪರ್ಕ ಕಡಿದುಕೊಂಡಿದ್ದರು. ಇದಕ್ಕೆ ಕಾರಣ ಕೇಂದ್ರ ಸರ್ಕಾರ. ರಾತ್ರೋರಾತ್ರಿ ಸೇನೆ ನಿಯೋಜಿಸಿ, 370ನೇ ವಿಧಿಯು ರದ್ದುಗೊಳಿಸಿದ್ದು, ಇದರಿಂದ ಎಲ್ಲ ಹಕ್ಕುಗಳು ಮೊಟುಕಾಗಿದ್ದವು. ಹೊರ ಪ್ರಪಂಚದೊಂದಿಗೆ ಸಂಪರ್ಕವೇ ಇರಲಿಲ್ಲ. ಅವರೆಲ್ಲ ಮಾನಸಿಕವಾಗಿ ಜರ್ಝರಿತರಾಗಿದ್ದರು. ಅದೂ 69 ದಿನಗಳ ಕಾಲ. ಎಲ್ಲಿಗೂ ಹೋಗದೆ ಮನೆಯೊಳಗೆ ಇರುವುದೆಂದರೆ ಹಿಂಸೆ. ಸರ್ಕಾರಕ್ಕು ಇದೇ ಬೇಕಾಗಿತ್ತು. ಅದನ್ನು ವ್ಯವಸ್ಥಿತವಾಗಿ ಮಾಡಿತ್ತು.

ಎರಡು ತಿಂಗಳು 10 ದಿನಗಳ ನಂತರ ಕಣಿವೆ ರಾಜ್ಯದಲ್ಲಿ ಮೊಬೈಲ್ ರಿಂಗಣಿಸಿವೆ. ಹೋದ ಜೀವ ಬಂದಂತಾಗಿದೆ. ಮಡುಗಟ್ಟಿದ್ದ ಭಾವನೆಗಳ ಕಟ್ಟೆ ಒಡೆದಿದೆ. ಪಂಜರದಲ್ಲಿದ್ದ ಹಕ್ಕಿಗಳು ಹಾರತೊಡಗಿವೆ. ಬಂಧುಗಳು, ಮಕ್ಕಳು, ಸ್ನೇಹಿತರು ಪ್ರೀತಿಪಾತ್ರರ ಜತೆ ಮಾತು ನಡೆದಿದೆ. ಜೀವ ನಿರಾಳವಾದ ಅನುಭವ. ಇದರ ಬೆನ್ನಲ್ಲೇ ಹೋರಾಟವೂ ಆರಂಭವಾಗಿದೆ. ಪ್ರತಿಭಟನೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ.

ಶಾಲಾ-ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದಿವೆ. ಆದರೆ ವಿದ್ಯಾರ್ಥಿಗಳ ಸುಳಿವಿಲ್ಲ. ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ಕಾರಣ ಭಯ. ಪೋಷಕರೂ ಕೂಡ ಮಕ್ಕಳನ್ನು ಶಾಲಾ-ಕಾಲೇಜಿಗೆ ಕಳಿಸಲು ಭಯಪಡುತ್ತಿದ್ದಾರೆ. ಶಾಲೆ-ಕಾಲೇಜುಗಳ ಸುತ್ತಲೂ ಪೊಲೀಸರು, ಸಿಆರ್‍ಪಿಎಫ್ ಯೋಧರ ಸರ್ಪಗಾವಲು. ಪೊಲೀಸರು ಶಾಲೆ, ಕಾಲೇಜು, ವಿವಿ ಆವರಣದೊಳಗೆ ಪ್ರವೇಶಿಸುವಂತಿಲ್ಲ. ಕ್ಯಾಂಪಸ್ ಹೊರಗೆ ಇರಬೇಕು. ಮುನ್ನೆಚ್ಚರಿಕ ಕ್ರಮವಾಗಿ ಶಾಲೆ-ಕಾಲೇಜುಗಳಲ್ಲಿ ಅತ್ಯಾಧುನಿಕ ಹೈರೆಸಲ್ಯೂಷನ್ ಸಿಸಿ ಟಿವಿ ಆಳವಡಿಸಲಾಗಿದೆ. ಪ್ರತಿಯೊಂದು ಶಾಲೆ-ಕಾಲೇಜು ವಿಶ್ವ ವಿದ್ಯಾಲಯಗಳಿಗೆ ನ್ಯಾಯಾಧೀಶರ ನೇಮಕ ಮಾಡಿದೆ ಸರ್ಕಾರ. ಆದರೂ ವಿದ್ಯಾರ್ಥಿಗಳು ಶಾಲೆಗಳತ್ತ ಮುಖ ಮಾಡಿಲ್ಲ.

ಸ್ಥಳೀಯ ಪತ್ರಕರ್ತ ಅಹಮದ್ ಬರೆಯುತ್ತಾರೆ. 2017ರಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದ ಹಿನ್ನೆಲೆಯಲ್ಲಿ ಸರ್ಕಾರ ಹಲವು ದಿನಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಭದ್ರತಾ ಪಡೆಗಳು ಪುಲ್ವಾಮಾ ಜಿಲ್ಲೆಯ ಪದವಿ ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದವು. ಇದೇ ಕಾರಣಕ್ಕೆ ಮೊದಲ ಬಾರಿಗೆ ಶಾಲೆಗಳು-ಕಾಲೇಜುಗಳ ಉಸ್ತುವಾರಿಗೆ ನ್ಯಾಯಾಧೀಶರ ನೇಮಕ ಮಾಡಿದೆ. ನ್ಯಾಯಾಧೀಶರು ಮಕ್ಕಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

ನಿರ್ಬಂಧ ಸಡಿಲಿಕೆಯಾಗಿದ್ದರೂ ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ವಿದ್ಯಾರ್ಥಿಗಳನ್ನು ಶಾಲೆಗಳತ್ತ ಕರೆತರುವ ಪ್ರಯತ್ನಗಳು ಸಂಪೂರ್ಣ ವಿಫಲವಾಗಿವೆ. ಸರ್ಕಾರ ಶಾಲೆಗಳನ್ನು ಪುನರ್ ಆರಂಭಿಸಿರುವುದು ರಾಜಕೀಯ ಪ್ರೇರಿತ ಎಂಬ ಭಾವನೆ ಜನರಲ್ಲಿದೆ. ಭಯವೂ ಮೂಡಿದೆ. ಮಕ್ಕಳನ್ನು ಶಾಲೆಗಳಿಗೆ ಕಳಿಸಿದರೆ ಅವರು ಮತ್ತೆ ವಾಪಸ್ ಮನೆಗೆ ಬರುತ್ತಾರೆಂಬ ಭರವಸೆ ಹೊರಟು ಹೋಗಿದೆ. ಜನ ಸರ್ಕಾರದ ಮೇಲಿನ ಭರವಸೆ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ವಿದ್ಯಾರ್ಥಿಗಳನ್ನು ತರಗತಿಗೆ ಹಿಡಿದು ತರಲು ಆಗುತ್ತಿಲ್ಲ ಎನ್ನುತ್ತಾರೆ ಪತ್ರಕರ್ತ ಅಹಮದ್.

ಈ ನಡುವೆ ಸರ್ಕಾರ ಅಕ್ಟೋಬರ್ 23 ರಿಂದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಘೋಷಣೆ ಮಾಡಿದೆ. ಪದವಿ ಪೂರ್ವ ಕೋರ್ಸ್‍ಗಳಿಗೆ ನವೆಂಬರ್‍ನಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಿದೆ. ಆದರೆ ತರಗತಿಗಳೇ ನಡೆದಿಲ್ಲ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಿಲ್ಲ. ಬೋಧಿಸಬೇಕಾದ ಸಿಲಬಸ್ ಅಪೂರ್ಣಗೊಂಡಿದೆ. ಈ ಕಾರಣದಿಂದ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಬೇಕಾದ ಅನಿವಾರ್ಯತೆ ಬಂದೊದಗಿದೆ. ವಿದ್ಯಾರ್ಥಿಗಳು ಪಾಠ ಪ್ರವಚನದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪೋಷಕರು ಕೂಡ ಮಕ್ಕಳ ಸುರಕ್ಷತೆ ಬಗ್ಗೆ ಗಮನಹರಿಸಿರುವುದು ಅವರ ನಡವಳಿಕೆಗಳಿಂದ ತಿಳಿದು ಬರುತ್ತದೆ.

ವಿದ್ಯಾರ್ಥಿಗಳ ಹಾಜರಾತಿ ಇಲ್ಲ. ಪಠ್ಯ ಪೂರ್ಣಗೊಂಡಿಲ್ಲ. ಆದರೂ ಸರ್ಕಾರ ಹಾಜರಾತಿ ಇದೆ ಎನ್ನುತ್ತಿದೆ. ಕಣಿವೆಯಲ್ಲಿ ಸಾಮಾನ್ಯ ಸ್ಥಿತಿಯಿದೆ ಎಂದು ನಂಬಿಸುವ ಪ್ರಯತ್ನ ಮಾಡುತ್ತಿದೆ ಅಷ್ಟೆ. ಸರ್ಕಾರದ ಇಂತಹ ಅವೈಜ್ಞಾನಿಕ ದಿಢೀರ್ ಕ್ರಮಗಳಿಂದ ವಿದ್ಯಾರ್ಥಿಗಳ ಒಂದು ವರ್ಷದ ಶಿಕ್ಷಣ ಅರ್ಧಕ್ಕೆ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಯದ ವಾತಾವರಣ ಮುಂದುವರಿದರೆ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಸಾಧ್ಯತೆಯೇ ಹೆಚ್ಚಾಗಿದೆ. ಮಕ್ಕಳ ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕನ್ನು ಸರ್ಕಾರವೇ ಕಿತ್ತುಕೊಂಡಂತಾಗುತ್ತದೆ. ಮುಂದಾದರೂ ಸರ್ಕಾರ ಅಲ್ಲಿನ ಜನರ ಭಾವನೆಗಳಿಗೆ ಸ್ಪಂದಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...