Homeಮುಖಪುಟಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

ಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಜನರು ಅಕ್ಷರಶಃ ಕಾರ್ಗತ್ತಲಲ್ಲಿದ್ದರು. ಉಸಿರಾಟ ನಿಂತು ಹೋಗಿತ್ತು. ಬಾಹ್ಯ ಜಗತ್ತಿನ ಸಂಪರ್ಕ ಕಡಿದುಕೊಂಡಿದ್ದರು. ಇದಕ್ಕೆ ಕಾರಣ ಕೇಂದ್ರ ಸರ್ಕಾರ. ರಾತ್ರೋರಾತ್ರಿ ಸೇನೆ ನಿಯೋಜಿಸಿ, 370ನೇ ವಿಧಿಯು ರದ್ದುಗೊಳಿಸಿದ್ದು, ಇದರಿಂದ ಎಲ್ಲ ಹಕ್ಕುಗಳು ಮೊಟುಕಾಗಿದ್ದವು. ಹೊರ ಪ್ರಪಂಚದೊಂದಿಗೆ ಸಂಪರ್ಕವೇ ಇರಲಿಲ್ಲ. ಅವರೆಲ್ಲ ಮಾನಸಿಕವಾಗಿ ಜರ್ಝರಿತರಾಗಿದ್ದರು. ಅದೂ 69 ದಿನಗಳ ಕಾಲ. ಎಲ್ಲಿಗೂ ಹೋಗದೆ ಮನೆಯೊಳಗೆ ಇರುವುದೆಂದರೆ ಹಿಂಸೆ. ಸರ್ಕಾರಕ್ಕು ಇದೇ ಬೇಕಾಗಿತ್ತು. ಅದನ್ನು ವ್ಯವಸ್ಥಿತವಾಗಿ ಮಾಡಿತ್ತು.

ಎರಡು ತಿಂಗಳು 10 ದಿನಗಳ ನಂತರ ಕಣಿವೆ ರಾಜ್ಯದಲ್ಲಿ ಮೊಬೈಲ್ ರಿಂಗಣಿಸಿವೆ. ಹೋದ ಜೀವ ಬಂದಂತಾಗಿದೆ. ಮಡುಗಟ್ಟಿದ್ದ ಭಾವನೆಗಳ ಕಟ್ಟೆ ಒಡೆದಿದೆ. ಪಂಜರದಲ್ಲಿದ್ದ ಹಕ್ಕಿಗಳು ಹಾರತೊಡಗಿವೆ. ಬಂಧುಗಳು, ಮಕ್ಕಳು, ಸ್ನೇಹಿತರು ಪ್ರೀತಿಪಾತ್ರರ ಜತೆ ಮಾತು ನಡೆದಿದೆ. ಜೀವ ನಿರಾಳವಾದ ಅನುಭವ. ಇದರ ಬೆನ್ನಲ್ಲೇ ಹೋರಾಟವೂ ಆರಂಭವಾಗಿದೆ. ಪ್ರತಿಭಟನೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ.

ಶಾಲಾ-ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದಿವೆ. ಆದರೆ ವಿದ್ಯಾರ್ಥಿಗಳ ಸುಳಿವಿಲ್ಲ. ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ಕಾರಣ ಭಯ. ಪೋಷಕರೂ ಕೂಡ ಮಕ್ಕಳನ್ನು ಶಾಲಾ-ಕಾಲೇಜಿಗೆ ಕಳಿಸಲು ಭಯಪಡುತ್ತಿದ್ದಾರೆ. ಶಾಲೆ-ಕಾಲೇಜುಗಳ ಸುತ್ತಲೂ ಪೊಲೀಸರು, ಸಿಆರ್‍ಪಿಎಫ್ ಯೋಧರ ಸರ್ಪಗಾವಲು. ಪೊಲೀಸರು ಶಾಲೆ, ಕಾಲೇಜು, ವಿವಿ ಆವರಣದೊಳಗೆ ಪ್ರವೇಶಿಸುವಂತಿಲ್ಲ. ಕ್ಯಾಂಪಸ್ ಹೊರಗೆ ಇರಬೇಕು. ಮುನ್ನೆಚ್ಚರಿಕ ಕ್ರಮವಾಗಿ ಶಾಲೆ-ಕಾಲೇಜುಗಳಲ್ಲಿ ಅತ್ಯಾಧುನಿಕ ಹೈರೆಸಲ್ಯೂಷನ್ ಸಿಸಿ ಟಿವಿ ಆಳವಡಿಸಲಾಗಿದೆ. ಪ್ರತಿಯೊಂದು ಶಾಲೆ-ಕಾಲೇಜು ವಿಶ್ವ ವಿದ್ಯಾಲಯಗಳಿಗೆ ನ್ಯಾಯಾಧೀಶರ ನೇಮಕ ಮಾಡಿದೆ ಸರ್ಕಾರ. ಆದರೂ ವಿದ್ಯಾರ್ಥಿಗಳು ಶಾಲೆಗಳತ್ತ ಮುಖ ಮಾಡಿಲ್ಲ.

ಸ್ಥಳೀಯ ಪತ್ರಕರ್ತ ಅಹಮದ್ ಬರೆಯುತ್ತಾರೆ. 2017ರಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದ ಹಿನ್ನೆಲೆಯಲ್ಲಿ ಸರ್ಕಾರ ಹಲವು ದಿನಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಭದ್ರತಾ ಪಡೆಗಳು ಪುಲ್ವಾಮಾ ಜಿಲ್ಲೆಯ ಪದವಿ ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದವು. ಇದೇ ಕಾರಣಕ್ಕೆ ಮೊದಲ ಬಾರಿಗೆ ಶಾಲೆಗಳು-ಕಾಲೇಜುಗಳ ಉಸ್ತುವಾರಿಗೆ ನ್ಯಾಯಾಧೀಶರ ನೇಮಕ ಮಾಡಿದೆ. ನ್ಯಾಯಾಧೀಶರು ಮಕ್ಕಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

ನಿರ್ಬಂಧ ಸಡಿಲಿಕೆಯಾಗಿದ್ದರೂ ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ವಿದ್ಯಾರ್ಥಿಗಳನ್ನು ಶಾಲೆಗಳತ್ತ ಕರೆತರುವ ಪ್ರಯತ್ನಗಳು ಸಂಪೂರ್ಣ ವಿಫಲವಾಗಿವೆ. ಸರ್ಕಾರ ಶಾಲೆಗಳನ್ನು ಪುನರ್ ಆರಂಭಿಸಿರುವುದು ರಾಜಕೀಯ ಪ್ರೇರಿತ ಎಂಬ ಭಾವನೆ ಜನರಲ್ಲಿದೆ. ಭಯವೂ ಮೂಡಿದೆ. ಮಕ್ಕಳನ್ನು ಶಾಲೆಗಳಿಗೆ ಕಳಿಸಿದರೆ ಅವರು ಮತ್ತೆ ವಾಪಸ್ ಮನೆಗೆ ಬರುತ್ತಾರೆಂಬ ಭರವಸೆ ಹೊರಟು ಹೋಗಿದೆ. ಜನ ಸರ್ಕಾರದ ಮೇಲಿನ ಭರವಸೆ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ವಿದ್ಯಾರ್ಥಿಗಳನ್ನು ತರಗತಿಗೆ ಹಿಡಿದು ತರಲು ಆಗುತ್ತಿಲ್ಲ ಎನ್ನುತ್ತಾರೆ ಪತ್ರಕರ್ತ ಅಹಮದ್.

ಈ ನಡುವೆ ಸರ್ಕಾರ ಅಕ್ಟೋಬರ್ 23 ರಿಂದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಘೋಷಣೆ ಮಾಡಿದೆ. ಪದವಿ ಪೂರ್ವ ಕೋರ್ಸ್‍ಗಳಿಗೆ ನವೆಂಬರ್‍ನಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಿದೆ. ಆದರೆ ತರಗತಿಗಳೇ ನಡೆದಿಲ್ಲ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಿಲ್ಲ. ಬೋಧಿಸಬೇಕಾದ ಸಿಲಬಸ್ ಅಪೂರ್ಣಗೊಂಡಿದೆ. ಈ ಕಾರಣದಿಂದ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಬೇಕಾದ ಅನಿವಾರ್ಯತೆ ಬಂದೊದಗಿದೆ. ವಿದ್ಯಾರ್ಥಿಗಳು ಪಾಠ ಪ್ರವಚನದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪೋಷಕರು ಕೂಡ ಮಕ್ಕಳ ಸುರಕ್ಷತೆ ಬಗ್ಗೆ ಗಮನಹರಿಸಿರುವುದು ಅವರ ನಡವಳಿಕೆಗಳಿಂದ ತಿಳಿದು ಬರುತ್ತದೆ.

ವಿದ್ಯಾರ್ಥಿಗಳ ಹಾಜರಾತಿ ಇಲ್ಲ. ಪಠ್ಯ ಪೂರ್ಣಗೊಂಡಿಲ್ಲ. ಆದರೂ ಸರ್ಕಾರ ಹಾಜರಾತಿ ಇದೆ ಎನ್ನುತ್ತಿದೆ. ಕಣಿವೆಯಲ್ಲಿ ಸಾಮಾನ್ಯ ಸ್ಥಿತಿಯಿದೆ ಎಂದು ನಂಬಿಸುವ ಪ್ರಯತ್ನ ಮಾಡುತ್ತಿದೆ ಅಷ್ಟೆ. ಸರ್ಕಾರದ ಇಂತಹ ಅವೈಜ್ಞಾನಿಕ ದಿಢೀರ್ ಕ್ರಮಗಳಿಂದ ವಿದ್ಯಾರ್ಥಿಗಳ ಒಂದು ವರ್ಷದ ಶಿಕ್ಷಣ ಅರ್ಧಕ್ಕೆ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಯದ ವಾತಾವರಣ ಮುಂದುವರಿದರೆ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಸಾಧ್ಯತೆಯೇ ಹೆಚ್ಚಾಗಿದೆ. ಮಕ್ಕಳ ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕನ್ನು ಸರ್ಕಾರವೇ ಕಿತ್ತುಕೊಂಡಂತಾಗುತ್ತದೆ. ಮುಂದಾದರೂ ಸರ್ಕಾರ ಅಲ್ಲಿನ ಜನರ ಭಾವನೆಗಳಿಗೆ ಸ್ಪಂದಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...