Homeಮುಖಪುಟಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

ಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಜನರು ಅಕ್ಷರಶಃ ಕಾರ್ಗತ್ತಲಲ್ಲಿದ್ದರು. ಉಸಿರಾಟ ನಿಂತು ಹೋಗಿತ್ತು. ಬಾಹ್ಯ ಜಗತ್ತಿನ ಸಂಪರ್ಕ ಕಡಿದುಕೊಂಡಿದ್ದರು. ಇದಕ್ಕೆ ಕಾರಣ ಕೇಂದ್ರ ಸರ್ಕಾರ. ರಾತ್ರೋರಾತ್ರಿ ಸೇನೆ ನಿಯೋಜಿಸಿ, 370ನೇ ವಿಧಿಯು ರದ್ದುಗೊಳಿಸಿದ್ದು, ಇದರಿಂದ ಎಲ್ಲ ಹಕ್ಕುಗಳು ಮೊಟುಕಾಗಿದ್ದವು. ಹೊರ ಪ್ರಪಂಚದೊಂದಿಗೆ ಸಂಪರ್ಕವೇ ಇರಲಿಲ್ಲ. ಅವರೆಲ್ಲ ಮಾನಸಿಕವಾಗಿ ಜರ್ಝರಿತರಾಗಿದ್ದರು. ಅದೂ 69 ದಿನಗಳ ಕಾಲ. ಎಲ್ಲಿಗೂ ಹೋಗದೆ ಮನೆಯೊಳಗೆ ಇರುವುದೆಂದರೆ ಹಿಂಸೆ. ಸರ್ಕಾರಕ್ಕು ಇದೇ ಬೇಕಾಗಿತ್ತು. ಅದನ್ನು ವ್ಯವಸ್ಥಿತವಾಗಿ ಮಾಡಿತ್ತು.

ಎರಡು ತಿಂಗಳು 10 ದಿನಗಳ ನಂತರ ಕಣಿವೆ ರಾಜ್ಯದಲ್ಲಿ ಮೊಬೈಲ್ ರಿಂಗಣಿಸಿವೆ. ಹೋದ ಜೀವ ಬಂದಂತಾಗಿದೆ. ಮಡುಗಟ್ಟಿದ್ದ ಭಾವನೆಗಳ ಕಟ್ಟೆ ಒಡೆದಿದೆ. ಪಂಜರದಲ್ಲಿದ್ದ ಹಕ್ಕಿಗಳು ಹಾರತೊಡಗಿವೆ. ಬಂಧುಗಳು, ಮಕ್ಕಳು, ಸ್ನೇಹಿತರು ಪ್ರೀತಿಪಾತ್ರರ ಜತೆ ಮಾತು ನಡೆದಿದೆ. ಜೀವ ನಿರಾಳವಾದ ಅನುಭವ. ಇದರ ಬೆನ್ನಲ್ಲೇ ಹೋರಾಟವೂ ಆರಂಭವಾಗಿದೆ. ಪ್ರತಿಭಟನೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ.

ಶಾಲಾ-ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದಿವೆ. ಆದರೆ ವಿದ್ಯಾರ್ಥಿಗಳ ಸುಳಿವಿಲ್ಲ. ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ಕಾರಣ ಭಯ. ಪೋಷಕರೂ ಕೂಡ ಮಕ್ಕಳನ್ನು ಶಾಲಾ-ಕಾಲೇಜಿಗೆ ಕಳಿಸಲು ಭಯಪಡುತ್ತಿದ್ದಾರೆ. ಶಾಲೆ-ಕಾಲೇಜುಗಳ ಸುತ್ತಲೂ ಪೊಲೀಸರು, ಸಿಆರ್‍ಪಿಎಫ್ ಯೋಧರ ಸರ್ಪಗಾವಲು. ಪೊಲೀಸರು ಶಾಲೆ, ಕಾಲೇಜು, ವಿವಿ ಆವರಣದೊಳಗೆ ಪ್ರವೇಶಿಸುವಂತಿಲ್ಲ. ಕ್ಯಾಂಪಸ್ ಹೊರಗೆ ಇರಬೇಕು. ಮುನ್ನೆಚ್ಚರಿಕ ಕ್ರಮವಾಗಿ ಶಾಲೆ-ಕಾಲೇಜುಗಳಲ್ಲಿ ಅತ್ಯಾಧುನಿಕ ಹೈರೆಸಲ್ಯೂಷನ್ ಸಿಸಿ ಟಿವಿ ಆಳವಡಿಸಲಾಗಿದೆ. ಪ್ರತಿಯೊಂದು ಶಾಲೆ-ಕಾಲೇಜು ವಿಶ್ವ ವಿದ್ಯಾಲಯಗಳಿಗೆ ನ್ಯಾಯಾಧೀಶರ ನೇಮಕ ಮಾಡಿದೆ ಸರ್ಕಾರ. ಆದರೂ ವಿದ್ಯಾರ್ಥಿಗಳು ಶಾಲೆಗಳತ್ತ ಮುಖ ಮಾಡಿಲ್ಲ.

ಸ್ಥಳೀಯ ಪತ್ರಕರ್ತ ಅಹಮದ್ ಬರೆಯುತ್ತಾರೆ. 2017ರಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದ ಹಿನ್ನೆಲೆಯಲ್ಲಿ ಸರ್ಕಾರ ಹಲವು ದಿನಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಭದ್ರತಾ ಪಡೆಗಳು ಪುಲ್ವಾಮಾ ಜಿಲ್ಲೆಯ ಪದವಿ ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದವು. ಇದೇ ಕಾರಣಕ್ಕೆ ಮೊದಲ ಬಾರಿಗೆ ಶಾಲೆಗಳು-ಕಾಲೇಜುಗಳ ಉಸ್ತುವಾರಿಗೆ ನ್ಯಾಯಾಧೀಶರ ನೇಮಕ ಮಾಡಿದೆ. ನ್ಯಾಯಾಧೀಶರು ಮಕ್ಕಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

ನಿರ್ಬಂಧ ಸಡಿಲಿಕೆಯಾಗಿದ್ದರೂ ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ವಿದ್ಯಾರ್ಥಿಗಳನ್ನು ಶಾಲೆಗಳತ್ತ ಕರೆತರುವ ಪ್ರಯತ್ನಗಳು ಸಂಪೂರ್ಣ ವಿಫಲವಾಗಿವೆ. ಸರ್ಕಾರ ಶಾಲೆಗಳನ್ನು ಪುನರ್ ಆರಂಭಿಸಿರುವುದು ರಾಜಕೀಯ ಪ್ರೇರಿತ ಎಂಬ ಭಾವನೆ ಜನರಲ್ಲಿದೆ. ಭಯವೂ ಮೂಡಿದೆ. ಮಕ್ಕಳನ್ನು ಶಾಲೆಗಳಿಗೆ ಕಳಿಸಿದರೆ ಅವರು ಮತ್ತೆ ವಾಪಸ್ ಮನೆಗೆ ಬರುತ್ತಾರೆಂಬ ಭರವಸೆ ಹೊರಟು ಹೋಗಿದೆ. ಜನ ಸರ್ಕಾರದ ಮೇಲಿನ ಭರವಸೆ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ವಿದ್ಯಾರ್ಥಿಗಳನ್ನು ತರಗತಿಗೆ ಹಿಡಿದು ತರಲು ಆಗುತ್ತಿಲ್ಲ ಎನ್ನುತ್ತಾರೆ ಪತ್ರಕರ್ತ ಅಹಮದ್.

ಈ ನಡುವೆ ಸರ್ಕಾರ ಅಕ್ಟೋಬರ್ 23 ರಿಂದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಘೋಷಣೆ ಮಾಡಿದೆ. ಪದವಿ ಪೂರ್ವ ಕೋರ್ಸ್‍ಗಳಿಗೆ ನವೆಂಬರ್‍ನಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಿದೆ. ಆದರೆ ತರಗತಿಗಳೇ ನಡೆದಿಲ್ಲ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಿಲ್ಲ. ಬೋಧಿಸಬೇಕಾದ ಸಿಲಬಸ್ ಅಪೂರ್ಣಗೊಂಡಿದೆ. ಈ ಕಾರಣದಿಂದ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಬೇಕಾದ ಅನಿವಾರ್ಯತೆ ಬಂದೊದಗಿದೆ. ವಿದ್ಯಾರ್ಥಿಗಳು ಪಾಠ ಪ್ರವಚನದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪೋಷಕರು ಕೂಡ ಮಕ್ಕಳ ಸುರಕ್ಷತೆ ಬಗ್ಗೆ ಗಮನಹರಿಸಿರುವುದು ಅವರ ನಡವಳಿಕೆಗಳಿಂದ ತಿಳಿದು ಬರುತ್ತದೆ.

ವಿದ್ಯಾರ್ಥಿಗಳ ಹಾಜರಾತಿ ಇಲ್ಲ. ಪಠ್ಯ ಪೂರ್ಣಗೊಂಡಿಲ್ಲ. ಆದರೂ ಸರ್ಕಾರ ಹಾಜರಾತಿ ಇದೆ ಎನ್ನುತ್ತಿದೆ. ಕಣಿವೆಯಲ್ಲಿ ಸಾಮಾನ್ಯ ಸ್ಥಿತಿಯಿದೆ ಎಂದು ನಂಬಿಸುವ ಪ್ರಯತ್ನ ಮಾಡುತ್ತಿದೆ ಅಷ್ಟೆ. ಸರ್ಕಾರದ ಇಂತಹ ಅವೈಜ್ಞಾನಿಕ ದಿಢೀರ್ ಕ್ರಮಗಳಿಂದ ವಿದ್ಯಾರ್ಥಿಗಳ ಒಂದು ವರ್ಷದ ಶಿಕ್ಷಣ ಅರ್ಧಕ್ಕೆ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಯದ ವಾತಾವರಣ ಮುಂದುವರಿದರೆ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಸಾಧ್ಯತೆಯೇ ಹೆಚ್ಚಾಗಿದೆ. ಮಕ್ಕಳ ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕನ್ನು ಸರ್ಕಾರವೇ ಕಿತ್ತುಕೊಂಡಂತಾಗುತ್ತದೆ. ಮುಂದಾದರೂ ಸರ್ಕಾರ ಅಲ್ಲಿನ ಜನರ ಭಾವನೆಗಳಿಗೆ ಸ್ಪಂದಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...