Homeಮುಖಪುಟಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

ಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಜನರು ಅಕ್ಷರಶಃ ಕಾರ್ಗತ್ತಲಲ್ಲಿದ್ದರು. ಉಸಿರಾಟ ನಿಂತು ಹೋಗಿತ್ತು. ಬಾಹ್ಯ ಜಗತ್ತಿನ ಸಂಪರ್ಕ ಕಡಿದುಕೊಂಡಿದ್ದರು. ಇದಕ್ಕೆ ಕಾರಣ ಕೇಂದ್ರ ಸರ್ಕಾರ. ರಾತ್ರೋರಾತ್ರಿ ಸೇನೆ ನಿಯೋಜಿಸಿ, 370ನೇ ವಿಧಿಯು ರದ್ದುಗೊಳಿಸಿದ್ದು, ಇದರಿಂದ ಎಲ್ಲ ಹಕ್ಕುಗಳು ಮೊಟುಕಾಗಿದ್ದವು. ಹೊರ ಪ್ರಪಂಚದೊಂದಿಗೆ ಸಂಪರ್ಕವೇ ಇರಲಿಲ್ಲ. ಅವರೆಲ್ಲ ಮಾನಸಿಕವಾಗಿ ಜರ್ಝರಿತರಾಗಿದ್ದರು. ಅದೂ 69 ದಿನಗಳ ಕಾಲ. ಎಲ್ಲಿಗೂ ಹೋಗದೆ ಮನೆಯೊಳಗೆ ಇರುವುದೆಂದರೆ ಹಿಂಸೆ. ಸರ್ಕಾರಕ್ಕು ಇದೇ ಬೇಕಾಗಿತ್ತು. ಅದನ್ನು ವ್ಯವಸ್ಥಿತವಾಗಿ ಮಾಡಿತ್ತು.

ಎರಡು ತಿಂಗಳು 10 ದಿನಗಳ ನಂತರ ಕಣಿವೆ ರಾಜ್ಯದಲ್ಲಿ ಮೊಬೈಲ್ ರಿಂಗಣಿಸಿವೆ. ಹೋದ ಜೀವ ಬಂದಂತಾಗಿದೆ. ಮಡುಗಟ್ಟಿದ್ದ ಭಾವನೆಗಳ ಕಟ್ಟೆ ಒಡೆದಿದೆ. ಪಂಜರದಲ್ಲಿದ್ದ ಹಕ್ಕಿಗಳು ಹಾರತೊಡಗಿವೆ. ಬಂಧುಗಳು, ಮಕ್ಕಳು, ಸ್ನೇಹಿತರು ಪ್ರೀತಿಪಾತ್ರರ ಜತೆ ಮಾತು ನಡೆದಿದೆ. ಜೀವ ನಿರಾಳವಾದ ಅನುಭವ. ಇದರ ಬೆನ್ನಲ್ಲೇ ಹೋರಾಟವೂ ಆರಂಭವಾಗಿದೆ. ಪ್ರತಿಭಟನೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ.

ಶಾಲಾ-ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದಿವೆ. ಆದರೆ ವಿದ್ಯಾರ್ಥಿಗಳ ಸುಳಿವಿಲ್ಲ. ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ಕಾರಣ ಭಯ. ಪೋಷಕರೂ ಕೂಡ ಮಕ್ಕಳನ್ನು ಶಾಲಾ-ಕಾಲೇಜಿಗೆ ಕಳಿಸಲು ಭಯಪಡುತ್ತಿದ್ದಾರೆ. ಶಾಲೆ-ಕಾಲೇಜುಗಳ ಸುತ್ತಲೂ ಪೊಲೀಸರು, ಸಿಆರ್‍ಪಿಎಫ್ ಯೋಧರ ಸರ್ಪಗಾವಲು. ಪೊಲೀಸರು ಶಾಲೆ, ಕಾಲೇಜು, ವಿವಿ ಆವರಣದೊಳಗೆ ಪ್ರವೇಶಿಸುವಂತಿಲ್ಲ. ಕ್ಯಾಂಪಸ್ ಹೊರಗೆ ಇರಬೇಕು. ಮುನ್ನೆಚ್ಚರಿಕ ಕ್ರಮವಾಗಿ ಶಾಲೆ-ಕಾಲೇಜುಗಳಲ್ಲಿ ಅತ್ಯಾಧುನಿಕ ಹೈರೆಸಲ್ಯೂಷನ್ ಸಿಸಿ ಟಿವಿ ಆಳವಡಿಸಲಾಗಿದೆ. ಪ್ರತಿಯೊಂದು ಶಾಲೆ-ಕಾಲೇಜು ವಿಶ್ವ ವಿದ್ಯಾಲಯಗಳಿಗೆ ನ್ಯಾಯಾಧೀಶರ ನೇಮಕ ಮಾಡಿದೆ ಸರ್ಕಾರ. ಆದರೂ ವಿದ್ಯಾರ್ಥಿಗಳು ಶಾಲೆಗಳತ್ತ ಮುಖ ಮಾಡಿಲ್ಲ.

ಸ್ಥಳೀಯ ಪತ್ರಕರ್ತ ಅಹಮದ್ ಬರೆಯುತ್ತಾರೆ. 2017ರಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದ ಹಿನ್ನೆಲೆಯಲ್ಲಿ ಸರ್ಕಾರ ಹಲವು ದಿನಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಭದ್ರತಾ ಪಡೆಗಳು ಪುಲ್ವಾಮಾ ಜಿಲ್ಲೆಯ ಪದವಿ ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದವು. ಇದೇ ಕಾರಣಕ್ಕೆ ಮೊದಲ ಬಾರಿಗೆ ಶಾಲೆಗಳು-ಕಾಲೇಜುಗಳ ಉಸ್ತುವಾರಿಗೆ ನ್ಯಾಯಾಧೀಶರ ನೇಮಕ ಮಾಡಿದೆ. ನ್ಯಾಯಾಧೀಶರು ಮಕ್ಕಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

ನಿರ್ಬಂಧ ಸಡಿಲಿಕೆಯಾಗಿದ್ದರೂ ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ವಿದ್ಯಾರ್ಥಿಗಳನ್ನು ಶಾಲೆಗಳತ್ತ ಕರೆತರುವ ಪ್ರಯತ್ನಗಳು ಸಂಪೂರ್ಣ ವಿಫಲವಾಗಿವೆ. ಸರ್ಕಾರ ಶಾಲೆಗಳನ್ನು ಪುನರ್ ಆರಂಭಿಸಿರುವುದು ರಾಜಕೀಯ ಪ್ರೇರಿತ ಎಂಬ ಭಾವನೆ ಜನರಲ್ಲಿದೆ. ಭಯವೂ ಮೂಡಿದೆ. ಮಕ್ಕಳನ್ನು ಶಾಲೆಗಳಿಗೆ ಕಳಿಸಿದರೆ ಅವರು ಮತ್ತೆ ವಾಪಸ್ ಮನೆಗೆ ಬರುತ್ತಾರೆಂಬ ಭರವಸೆ ಹೊರಟು ಹೋಗಿದೆ. ಜನ ಸರ್ಕಾರದ ಮೇಲಿನ ಭರವಸೆ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ವಿದ್ಯಾರ್ಥಿಗಳನ್ನು ತರಗತಿಗೆ ಹಿಡಿದು ತರಲು ಆಗುತ್ತಿಲ್ಲ ಎನ್ನುತ್ತಾರೆ ಪತ್ರಕರ್ತ ಅಹಮದ್.

ಈ ನಡುವೆ ಸರ್ಕಾರ ಅಕ್ಟೋಬರ್ 23 ರಿಂದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಘೋಷಣೆ ಮಾಡಿದೆ. ಪದವಿ ಪೂರ್ವ ಕೋರ್ಸ್‍ಗಳಿಗೆ ನವೆಂಬರ್‍ನಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಿದೆ. ಆದರೆ ತರಗತಿಗಳೇ ನಡೆದಿಲ್ಲ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಿಲ್ಲ. ಬೋಧಿಸಬೇಕಾದ ಸಿಲಬಸ್ ಅಪೂರ್ಣಗೊಂಡಿದೆ. ಈ ಕಾರಣದಿಂದ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಬೇಕಾದ ಅನಿವಾರ್ಯತೆ ಬಂದೊದಗಿದೆ. ವಿದ್ಯಾರ್ಥಿಗಳು ಪಾಠ ಪ್ರವಚನದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪೋಷಕರು ಕೂಡ ಮಕ್ಕಳ ಸುರಕ್ಷತೆ ಬಗ್ಗೆ ಗಮನಹರಿಸಿರುವುದು ಅವರ ನಡವಳಿಕೆಗಳಿಂದ ತಿಳಿದು ಬರುತ್ತದೆ.

ವಿದ್ಯಾರ್ಥಿಗಳ ಹಾಜರಾತಿ ಇಲ್ಲ. ಪಠ್ಯ ಪೂರ್ಣಗೊಂಡಿಲ್ಲ. ಆದರೂ ಸರ್ಕಾರ ಹಾಜರಾತಿ ಇದೆ ಎನ್ನುತ್ತಿದೆ. ಕಣಿವೆಯಲ್ಲಿ ಸಾಮಾನ್ಯ ಸ್ಥಿತಿಯಿದೆ ಎಂದು ನಂಬಿಸುವ ಪ್ರಯತ್ನ ಮಾಡುತ್ತಿದೆ ಅಷ್ಟೆ. ಸರ್ಕಾರದ ಇಂತಹ ಅವೈಜ್ಞಾನಿಕ ದಿಢೀರ್ ಕ್ರಮಗಳಿಂದ ವಿದ್ಯಾರ್ಥಿಗಳ ಒಂದು ವರ್ಷದ ಶಿಕ್ಷಣ ಅರ್ಧಕ್ಕೆ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಯದ ವಾತಾವರಣ ಮುಂದುವರಿದರೆ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಸಾಧ್ಯತೆಯೇ ಹೆಚ್ಚಾಗಿದೆ. ಮಕ್ಕಳ ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕನ್ನು ಸರ್ಕಾರವೇ ಕಿತ್ತುಕೊಂಡಂತಾಗುತ್ತದೆ. ಮುಂದಾದರೂ ಸರ್ಕಾರ ಅಲ್ಲಿನ ಜನರ ಭಾವನೆಗಳಿಗೆ ಸ್ಪಂದಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...