Homeಮುಖಪುಟಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

ಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಜನರು ಅಕ್ಷರಶಃ ಕಾರ್ಗತ್ತಲಲ್ಲಿದ್ದರು. ಉಸಿರಾಟ ನಿಂತು ಹೋಗಿತ್ತು. ಬಾಹ್ಯ ಜಗತ್ತಿನ ಸಂಪರ್ಕ ಕಡಿದುಕೊಂಡಿದ್ದರು. ಇದಕ್ಕೆ ಕಾರಣ ಕೇಂದ್ರ ಸರ್ಕಾರ. ರಾತ್ರೋರಾತ್ರಿ ಸೇನೆ ನಿಯೋಜಿಸಿ, 370ನೇ ವಿಧಿಯು ರದ್ದುಗೊಳಿಸಿದ್ದು, ಇದರಿಂದ ಎಲ್ಲ ಹಕ್ಕುಗಳು ಮೊಟುಕಾಗಿದ್ದವು. ಹೊರ ಪ್ರಪಂಚದೊಂದಿಗೆ ಸಂಪರ್ಕವೇ ಇರಲಿಲ್ಲ. ಅವರೆಲ್ಲ ಮಾನಸಿಕವಾಗಿ ಜರ್ಝರಿತರಾಗಿದ್ದರು. ಅದೂ 69 ದಿನಗಳ ಕಾಲ. ಎಲ್ಲಿಗೂ ಹೋಗದೆ ಮನೆಯೊಳಗೆ ಇರುವುದೆಂದರೆ ಹಿಂಸೆ. ಸರ್ಕಾರಕ್ಕು ಇದೇ ಬೇಕಾಗಿತ್ತು. ಅದನ್ನು ವ್ಯವಸ್ಥಿತವಾಗಿ ಮಾಡಿತ್ತು.

ಎರಡು ತಿಂಗಳು 10 ದಿನಗಳ ನಂತರ ಕಣಿವೆ ರಾಜ್ಯದಲ್ಲಿ ಮೊಬೈಲ್ ರಿಂಗಣಿಸಿವೆ. ಹೋದ ಜೀವ ಬಂದಂತಾಗಿದೆ. ಮಡುಗಟ್ಟಿದ್ದ ಭಾವನೆಗಳ ಕಟ್ಟೆ ಒಡೆದಿದೆ. ಪಂಜರದಲ್ಲಿದ್ದ ಹಕ್ಕಿಗಳು ಹಾರತೊಡಗಿವೆ. ಬಂಧುಗಳು, ಮಕ್ಕಳು, ಸ್ನೇಹಿತರು ಪ್ರೀತಿಪಾತ್ರರ ಜತೆ ಮಾತು ನಡೆದಿದೆ. ಜೀವ ನಿರಾಳವಾದ ಅನುಭವ. ಇದರ ಬೆನ್ನಲ್ಲೇ ಹೋರಾಟವೂ ಆರಂಭವಾಗಿದೆ. ಪ್ರತಿಭಟನೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ.

ಶಾಲಾ-ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದಿವೆ. ಆದರೆ ವಿದ್ಯಾರ್ಥಿಗಳ ಸುಳಿವಿಲ್ಲ. ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ಕಾರಣ ಭಯ. ಪೋಷಕರೂ ಕೂಡ ಮಕ್ಕಳನ್ನು ಶಾಲಾ-ಕಾಲೇಜಿಗೆ ಕಳಿಸಲು ಭಯಪಡುತ್ತಿದ್ದಾರೆ. ಶಾಲೆ-ಕಾಲೇಜುಗಳ ಸುತ್ತಲೂ ಪೊಲೀಸರು, ಸಿಆರ್‍ಪಿಎಫ್ ಯೋಧರ ಸರ್ಪಗಾವಲು. ಪೊಲೀಸರು ಶಾಲೆ, ಕಾಲೇಜು, ವಿವಿ ಆವರಣದೊಳಗೆ ಪ್ರವೇಶಿಸುವಂತಿಲ್ಲ. ಕ್ಯಾಂಪಸ್ ಹೊರಗೆ ಇರಬೇಕು. ಮುನ್ನೆಚ್ಚರಿಕ ಕ್ರಮವಾಗಿ ಶಾಲೆ-ಕಾಲೇಜುಗಳಲ್ಲಿ ಅತ್ಯಾಧುನಿಕ ಹೈರೆಸಲ್ಯೂಷನ್ ಸಿಸಿ ಟಿವಿ ಆಳವಡಿಸಲಾಗಿದೆ. ಪ್ರತಿಯೊಂದು ಶಾಲೆ-ಕಾಲೇಜು ವಿಶ್ವ ವಿದ್ಯಾಲಯಗಳಿಗೆ ನ್ಯಾಯಾಧೀಶರ ನೇಮಕ ಮಾಡಿದೆ ಸರ್ಕಾರ. ಆದರೂ ವಿದ್ಯಾರ್ಥಿಗಳು ಶಾಲೆಗಳತ್ತ ಮುಖ ಮಾಡಿಲ್ಲ.

ಸ್ಥಳೀಯ ಪತ್ರಕರ್ತ ಅಹಮದ್ ಬರೆಯುತ್ತಾರೆ. 2017ರಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದ ಹಿನ್ನೆಲೆಯಲ್ಲಿ ಸರ್ಕಾರ ಹಲವು ದಿನಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಭದ್ರತಾ ಪಡೆಗಳು ಪುಲ್ವಾಮಾ ಜಿಲ್ಲೆಯ ಪದವಿ ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದವು. ಇದೇ ಕಾರಣಕ್ಕೆ ಮೊದಲ ಬಾರಿಗೆ ಶಾಲೆಗಳು-ಕಾಲೇಜುಗಳ ಉಸ್ತುವಾರಿಗೆ ನ್ಯಾಯಾಧೀಶರ ನೇಮಕ ಮಾಡಿದೆ. ನ್ಯಾಯಾಧೀಶರು ಮಕ್ಕಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

ನಿರ್ಬಂಧ ಸಡಿಲಿಕೆಯಾಗಿದ್ದರೂ ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ವಿದ್ಯಾರ್ಥಿಗಳನ್ನು ಶಾಲೆಗಳತ್ತ ಕರೆತರುವ ಪ್ರಯತ್ನಗಳು ಸಂಪೂರ್ಣ ವಿಫಲವಾಗಿವೆ. ಸರ್ಕಾರ ಶಾಲೆಗಳನ್ನು ಪುನರ್ ಆರಂಭಿಸಿರುವುದು ರಾಜಕೀಯ ಪ್ರೇರಿತ ಎಂಬ ಭಾವನೆ ಜನರಲ್ಲಿದೆ. ಭಯವೂ ಮೂಡಿದೆ. ಮಕ್ಕಳನ್ನು ಶಾಲೆಗಳಿಗೆ ಕಳಿಸಿದರೆ ಅವರು ಮತ್ತೆ ವಾಪಸ್ ಮನೆಗೆ ಬರುತ್ತಾರೆಂಬ ಭರವಸೆ ಹೊರಟು ಹೋಗಿದೆ. ಜನ ಸರ್ಕಾರದ ಮೇಲಿನ ಭರವಸೆ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ವಿದ್ಯಾರ್ಥಿಗಳನ್ನು ತರಗತಿಗೆ ಹಿಡಿದು ತರಲು ಆಗುತ್ತಿಲ್ಲ ಎನ್ನುತ್ತಾರೆ ಪತ್ರಕರ್ತ ಅಹಮದ್.

ಈ ನಡುವೆ ಸರ್ಕಾರ ಅಕ್ಟೋಬರ್ 23 ರಿಂದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಘೋಷಣೆ ಮಾಡಿದೆ. ಪದವಿ ಪೂರ್ವ ಕೋರ್ಸ್‍ಗಳಿಗೆ ನವೆಂಬರ್‍ನಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಿದೆ. ಆದರೆ ತರಗತಿಗಳೇ ನಡೆದಿಲ್ಲ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಿಲ್ಲ. ಬೋಧಿಸಬೇಕಾದ ಸಿಲಬಸ್ ಅಪೂರ್ಣಗೊಂಡಿದೆ. ಈ ಕಾರಣದಿಂದ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಬೇಕಾದ ಅನಿವಾರ್ಯತೆ ಬಂದೊದಗಿದೆ. ವಿದ್ಯಾರ್ಥಿಗಳು ಪಾಠ ಪ್ರವಚನದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪೋಷಕರು ಕೂಡ ಮಕ್ಕಳ ಸುರಕ್ಷತೆ ಬಗ್ಗೆ ಗಮನಹರಿಸಿರುವುದು ಅವರ ನಡವಳಿಕೆಗಳಿಂದ ತಿಳಿದು ಬರುತ್ತದೆ.

ವಿದ್ಯಾರ್ಥಿಗಳ ಹಾಜರಾತಿ ಇಲ್ಲ. ಪಠ್ಯ ಪೂರ್ಣಗೊಂಡಿಲ್ಲ. ಆದರೂ ಸರ್ಕಾರ ಹಾಜರಾತಿ ಇದೆ ಎನ್ನುತ್ತಿದೆ. ಕಣಿವೆಯಲ್ಲಿ ಸಾಮಾನ್ಯ ಸ್ಥಿತಿಯಿದೆ ಎಂದು ನಂಬಿಸುವ ಪ್ರಯತ್ನ ಮಾಡುತ್ತಿದೆ ಅಷ್ಟೆ. ಸರ್ಕಾರದ ಇಂತಹ ಅವೈಜ್ಞಾನಿಕ ದಿಢೀರ್ ಕ್ರಮಗಳಿಂದ ವಿದ್ಯಾರ್ಥಿಗಳ ಒಂದು ವರ್ಷದ ಶಿಕ್ಷಣ ಅರ್ಧಕ್ಕೆ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಯದ ವಾತಾವರಣ ಮುಂದುವರಿದರೆ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಸಾಧ್ಯತೆಯೇ ಹೆಚ್ಚಾಗಿದೆ. ಮಕ್ಕಳ ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕನ್ನು ಸರ್ಕಾರವೇ ಕಿತ್ತುಕೊಂಡಂತಾಗುತ್ತದೆ. ಮುಂದಾದರೂ ಸರ್ಕಾರ ಅಲ್ಲಿನ ಜನರ ಭಾವನೆಗಳಿಗೆ ಸ್ಪಂದಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...