HomeUncategorizedನಮ್ಮ ಸಿನೆಮಾಗಳು ತೋರಿಸಿದ್ದಷ್ಟೇ ಕಾಶ್ಮೀರವ?

ನಮ್ಮ ಸಿನೆಮಾಗಳು ತೋರಿಸಿದ್ದಷ್ಟೇ ಕಾಶ್ಮೀರವ?

- Advertisement -
- Advertisement -

ಬಾಬ್ರಿ ಮಸೀದಿಯ ಧ್ವಂಸ ಒಂದು ರೀತಿಯ ‘ಹಿಂದೂತ್ವ’ದ ಉನ್ಮಾದತೆಯನ್ನು ಯುವಕರಲ್ಲಿ ತುಂಬಿದ್ದ ಸಂದರ್ಭ. ಅಂತಹ ಉನ್ಮಾದಿತರು ಆಗಸ್ಟ್ 15ರಂದು ಬಿಡುಗಡೆಗೊಂಡ ‘ರೋಜಾ’ ಸಿನಿಮಾವನ್ನು ಕಣ್ತುಂಬಿಕೊಂಡು ಬಂದು, ದೇಶಪ್ರೇಮದ ಮಾದರಿಯೊಂದನ್ನು ಹೃದಯಕ್ಕಿಳಿಸಿಕೊಂಡರು. ಅದರ ಪರಿಣಾಮವನ್ನು ಥಿಯೇಟರ್‍ಗಳಲ್ಲೇ ನೋಡಬಹುದಿತ್ತು! ದೇಶದ ಬಗ್ಗೆ ಪ್ರೇಮವಷ್ಟೇ ಆಗಿದ್ದರೆ, ಅದಕ್ಕಿಂತ ಒಳ್ಳೆಯ ಸಂಗತಿ ಇನ್ನೇನಿರಲು ಸಾಧ್ಯ? ಆದರೆ, ಅವರು ಕಾಶ್ಮೀರವನ್ನು ಕಣ್ತುಂಬಿಕೊಂಡ ರೀತಿಯಲ್ಲಿ ದೊಡ್ಡ ಸಮಸ್ಯೆಯಿತ್ತು. ಅದರ ಪ್ರಕಾರ ಕಾಶ್ಮೀರವೆಂದರೆ ಭಾರತವನ್ನು ದ್ವೇಷಿಸುವ ಭಯೋತ್ಪಾದಕರ ತಾಣ ಅಷ್ಟೇ.

ಸುಡುತ್ತಿರುವ ರಾಷ್ಟ್ರಧ್ವಜದ ಮೇಲೆ ಸಿನಿಮಾದ ಹೀರೊ ಅರವಿಂದ ಸ್ವಾಮಿ ಬಿದ್ದು, ತನ್ನ ಬಟ್ಟೆಗಳು ಸುಟ್ಟು ಜೀವಕ್ಕೆ ಅಪಾಯವಿದ್ದರೂ ಧ್ವಜವನ್ನು ರಕ್ಷಿಸುವ ಹೋರಾಟ. ಥಿಯೇಟರಿನಲ್ಲಿ ಭಾರತ್ ಮಾತಾ ಕಿ ಜೈ, ಜೈ ಹಿಂದ್, ಜೈ ಶ್ರೀರಾಮ್ ಘೋಷಣೆಗಳು ಮೊಳಗಿದ್ದವು. ಆಗ 14-20 ವಯಸ್ಸಿನವರಾಗಿದ್ದವರು ಈಗ 40-47 ವಯಸ್ಸಿನ ಅಜುಬಾಜಿನಲ್ಲಿದ್ದಾರೆ. ಥಿಯೇಟರಿನಲ್ಲಿ ‘ದೇಶಪ್ರೇಮ’ದ ದ್ಯೋತಕವಾಗಿ ಮೊಳಗಿದ್ದ ಘೋಷಣೆಗಳು ಈಗ ದೇಶವೆಂಬ ಥಿಯೇಟರಿನಲ್ಲಿ ಮೊಳಗುತ್ತಿವೆ. ಅದರ ಅರ್ಥವೂ ಸಾರೇ ಜಹಾಂಸೆ ಅಚ್ಛಾ, ಜನಗಣಮನ, ಹಿಂದ್ ದೇಶ್ ಕೇ ನಿವಾಸಿ ಥರದ ಗೀತೆಗಳಲ್ಲಿ ವ್ಯಕ್ತವಾದ ಭಾವಕ್ಕಿಂತ ಭಿನ್ನವಾಗಿದೆ.

***

370ನೇ ವಿಧಿ ರದ್ದಿನ ಕುರಿತು ತುಂಬ ಭಾವುಕರಾಗಿ, ರೋಮಾಂಚಿತರಾಗಿ ‘ಐತಿಹಾಸಿಕ ಕ್ರಮ’ ಎನ್ನುವ ಪೀಳಿಗೆಯ ಬಹುತೇಕರ ಪಾಲಿಗೆ ಕಾಶ್ಮೀರ ಸಮಸ್ಯೆ ಎಂದರೆ ಅಂದು ಮಣಿರತ್ನಂ ತೀರಾ ಜಾಳು ಜಾಳಾಗಿ, ಬಾಲಿಶವಾಗಿ ತೋರಿಸಿದ್ದ, ‘ನಮ್ಮ ಕಾಶ್ಮೀರವನ್ನು ಕಿತ್ತುಕೊಳ್ಳಲು’ ಅವರು ಯತ್ನಿಸುತ್ತಿದ್ದಾರೆ ಎಂಬುದಷ್ಟೇ. 1989ರಲ್ಲಿ ಕಣಿವೆಯಲ್ಲಿ ಹಿಂಸೆ ಭುಗಿಲೆದ್ದಾಗ ಶಾಲೆ-ಕಾಲೇಜಿಗೆ ಹೋಗುತ್ತಿದ್ದವರು ಮುಂದೆ ಅಲ್ಲಿ ಉಗ್ರವಾದ ಮತ್ತು ಸೇನಾ ಕಾರ್ಯಾಚರಣೆಗಳ ಕಾರಣಕ್ಕೆ ಸರಿಯಾದ ವಿದ್ಯೆಯನ್ನೇ ಪಡೆಯಲಿಲ್ಲ. ದಿನವೂ ಅಘೋಷಿತ ಬಂದ್ ನೋಡಿಯೇ ಬೆಳೆದ ಅಂಥವರ ಬದುಕು ಈಗ ಸಂದಿಗ್ಧದಲ್ಲಿದೆ. ಆದರೆ ಕಾಶ್ಮೀರದಾಚೆಯ ಭಾರತದಲ್ಲಿರುವ ಯುವ ಸಮೂಹಕ್ಕೆ ಕಾಶ್ಮೀರ ಸಮಸ್ಯೆಗೆ ಪರಿಹಾರ ಸಿಕ್ಕ ಹೆಮ್ಮೆಯಿದೆ!

‘ರೋಜಾ’ ಅಥವಾ ‘ಮಿಷನ್ ಕಾಶ್ಮೀರ್’- ಇಂತಹ ಜನಪ್ರಿಯ ಸಿನಿಮಾಗಳ ಅಪಾಯವಿರುವುದೇ ಇಲ್ಲಿ ಅನಿಸುತ್ತದೆ. ಪ್ರೇಮಕತೆಯ ಎಳೆ ಇಟ್ಟುಕೊಂಡು ಹೊರಡುವ ಮಣಿರತ್ನಂ, ‘ಕಾಶ್ಮೀರ ಪ್ರಕ್ಷುಬ್ದತೆ’ಯ ಹಿನ್ನೆಲೆಯಲ್ಲಿ ಪ್ರೇಮಕತೆ ಎಂದು ಪ್ರಚಾರ ಪಡೆದರು. ಆದರೆ, ಯಾವ ಗಂಭೀರ ಅಧ್ಯಯನವೂ ಇಲ್ಲದೇ ಅವರು ಹಸಿ ಹಸಿಯಾಗಿ ತೋರಿಸಿದ ಬ್ಯಾಕ್‍ಡ್ರಾಪ್ ಕತೆ ಮತ್ತು ಧ್ವಜ ಕಾಪಾಡುವ ಹೀರೊಯಿಸಂ- ಹಿಂದೂತ್ವದ ರಾಷ್ಟ್ರೀಯತೆಯ ರೂಪಕಗಳೇ ಆಗಿದ್ದವು. ಕಾಶ್ಮೀರವನ್ನು ಭಾರತದೊಡನೆ ಬೆಸೆಯಲು ಬೇಕಾದ ಪ್ರೇಮಕಥೆ ಅದಾಗಿರಲಿಲ್ಲ.

ಮಣಿರತ್ನಂ ತಮ್ಮ ‘ಬಾಂಬೆ’ಯಲ್ಲಿ ನ್ಯೂಟ್ರಲ್ ನೋಟ ಕೊಡಲು ಯತ್ನಿಸಿದ್ದರು. ನಂತರದ ‘ದಿಲ್ ಸೆ’ ಈಶಾನ್ಯ ಭಾರತದ ಸಂಕೀರ್ಣ ಸಮಸ್ಯೆಯನ್ನು ಒಂದು ಸರಳ ರೇಖಾತ್ಮಕ ನೆಲೆಯಲ್ಲಿ ತೋರಿಸಿತ್ತು.

ಕಾಶ್ಮೀರ ಮತ್ತು ಈಶಾನ್ಯ ಭಾರತದ ಕುರಿತು ಬೇರೆ ರೀತಿಯ ಮಾಹಿತಿ ಇಲ್ಲದವರಿಗೆ 370 ವಿಧಿ ರದ್ದು ಐತಿಹಾಸಿಕ ಅನಿಸಿರಲೇಬೇಕು… ಈ ನಡುವೆ 2002ರ ಭೀಕರ ಹತ್ಯಾಕಾಂಡ ಕೂಡ ‘ಅವರಿಗೆ’ ಕಲಿಸಿದ ಪಾಠ ಎಂದು ನಂಬಿಕೊಂಡು ಬಂದವರಿಗೆ ಕಾಶ್ಮೀರದ ವಿಭಜನೆ ಕೂಡ ಐತಿಹಾಸಿಕವೇ. ಕಾಶ್ಮೀರ ಭಾರತದ ಅವಿಭಾಜ್ಯ ಭಾಗವಾಗಿಯೇ ಇರಬೇಕು. ಅದರ ಇತಿಹಾಸ ಭಾರತದ ಉಳಿದ ಭಾಗಗಳ ಇತಿಹಾಸದ ಜೊತೆಗೆ ಹೊಂದಿಕೊಂಡಿದೆ. ಅದನ್ನು ಆಳಿದವರು ‘ಹಿಂದೂ ರಾಜ’ರು ಎಂಬ ಕಾರಣಕ್ಕೆ ಮಾತ್ರವಲ್ಲದೇ, ಅದರ ಜನಪ್ರಿಯ ನಾಯಕ ಷೇಕ್ ಅಬ್ದುಲ್ಲಾ ಸಹಾ ಸೆಕ್ಯುಲರ್ ಕಾಶ್ಮೀರವನ್ನೇ ಬಯಸಿದ್ದರು ಎಂಬುದನ್ನೂ ಮರೆಯಲಾಗದು. ಅಂತಹ ಕಾಶ್ಮೀರದ ಪ್ರತಿ ಪ್ರಜೆಯನ್ನೂ ಪ್ರೀತಿಯಿಂದ ಗೆಲ್ಲಬೇಕೆಂದರೆ, ಅವರ ಕುರಿತ ಪೂರ್ವಗ್ರಹಗಳನ್ನು ತೊರೆಯಬೇಕಿದೆ. ಇದ್ದುದರಲ್ಲಿ ರಾಜೀó ಗಡಿಯಾಚೆ ಮತ್ತು ಈಚೆಗಿನ ಜನರನ್ನು ಮನುಷ್ಯರನ್ನಾಗಿ ಚಿತ್ರಿಸುವ ಕೆಲಸ ಮಾಡಿದೆ.

****

ಹಿಂದೊಮ್ಮೆ ಇನ್ಪೋಸಿಸ್‍ನ ಎನ್.ಆರ್.ನಾರಾಯಣ ಮೂರ್ತಿ ಬೆಂಗಳೂರನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಬೇಕು ಎಂದು ಬಲವಾಗಿ ಆಗ್ರಹಿಸಿದ್ದರು. ಈಗ ಸೇನೆಯನ್ನು ಬಳಸಿಕೊಂಡು ಬೆಂಗಳೂರನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿಬಿಟ್ಟರೆ? ಬಹುಪಾಲು ಬೆಂಗಳೂರಿಗರು ಇದೊಂದು ಐತಿಹಾಸಿಕ ಕ್ರಮವೆಂದೇ ಕರೆಯುತ್ತಾರೆ. ಅನ್ಯ ರಾಜ್ಯಗಳ ಪಾಲಿಗೆ ಕೂಡ ಇದು ಐತಿಹಾಸಿಕವೇ ಆಗಿರುತ್ತದೆ.

ಆದರೆ, ಬೆಂಗಳೂರಲ್ಲಿರುವ ಮೂಲ ಕನ್ನಡಿಗರು ಮತ್ತು ಬೆಂಗಳೂರಾಚೆಗಿನ ಪ್ರದೇಶದಲ್ಲಿರುವ ಕನ್ನಡಿಗರ ಪಾಲಿಗೆ ಇದೊಂದು ಐತಿಹಾಸಿಕ ದ್ರೋಹ ಅನ್ನಿಸಿಯೇ ಅನ್ನಿಸುತ್ತದೆ, ಅನ್ನಿಸಲೇ ಬೇಕು….

ಈ ನೆಲೆಯಲ್ಲಿ ನಿಂತು ನೋಡಿದಾಗಲಷ್ಟೇ ಕನ್ನಡಿಗರಿಗೆ ಕಾಶ್ಮೀರದ ಜನರ ಸಂಕಟ ಅರ್ಥವಾದಿತೇನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...