HomeUncategorizedನಮ್ಮ ಸಿನೆಮಾಗಳು ತೋರಿಸಿದ್ದಷ್ಟೇ ಕಾಶ್ಮೀರವ?

ನಮ್ಮ ಸಿನೆಮಾಗಳು ತೋರಿಸಿದ್ದಷ್ಟೇ ಕಾಶ್ಮೀರವ?

- Advertisement -
- Advertisement -

ಬಾಬ್ರಿ ಮಸೀದಿಯ ಧ್ವಂಸ ಒಂದು ರೀತಿಯ ‘ಹಿಂದೂತ್ವ’ದ ಉನ್ಮಾದತೆಯನ್ನು ಯುವಕರಲ್ಲಿ ತುಂಬಿದ್ದ ಸಂದರ್ಭ. ಅಂತಹ ಉನ್ಮಾದಿತರು ಆಗಸ್ಟ್ 15ರಂದು ಬಿಡುಗಡೆಗೊಂಡ ‘ರೋಜಾ’ ಸಿನಿಮಾವನ್ನು ಕಣ್ತುಂಬಿಕೊಂಡು ಬಂದು, ದೇಶಪ್ರೇಮದ ಮಾದರಿಯೊಂದನ್ನು ಹೃದಯಕ್ಕಿಳಿಸಿಕೊಂಡರು. ಅದರ ಪರಿಣಾಮವನ್ನು ಥಿಯೇಟರ್‍ಗಳಲ್ಲೇ ನೋಡಬಹುದಿತ್ತು! ದೇಶದ ಬಗ್ಗೆ ಪ್ರೇಮವಷ್ಟೇ ಆಗಿದ್ದರೆ, ಅದಕ್ಕಿಂತ ಒಳ್ಳೆಯ ಸಂಗತಿ ಇನ್ನೇನಿರಲು ಸಾಧ್ಯ? ಆದರೆ, ಅವರು ಕಾಶ್ಮೀರವನ್ನು ಕಣ್ತುಂಬಿಕೊಂಡ ರೀತಿಯಲ್ಲಿ ದೊಡ್ಡ ಸಮಸ್ಯೆಯಿತ್ತು. ಅದರ ಪ್ರಕಾರ ಕಾಶ್ಮೀರವೆಂದರೆ ಭಾರತವನ್ನು ದ್ವೇಷಿಸುವ ಭಯೋತ್ಪಾದಕರ ತಾಣ ಅಷ್ಟೇ.

ಸುಡುತ್ತಿರುವ ರಾಷ್ಟ್ರಧ್ವಜದ ಮೇಲೆ ಸಿನಿಮಾದ ಹೀರೊ ಅರವಿಂದ ಸ್ವಾಮಿ ಬಿದ್ದು, ತನ್ನ ಬಟ್ಟೆಗಳು ಸುಟ್ಟು ಜೀವಕ್ಕೆ ಅಪಾಯವಿದ್ದರೂ ಧ್ವಜವನ್ನು ರಕ್ಷಿಸುವ ಹೋರಾಟ. ಥಿಯೇಟರಿನಲ್ಲಿ ಭಾರತ್ ಮಾತಾ ಕಿ ಜೈ, ಜೈ ಹಿಂದ್, ಜೈ ಶ್ರೀರಾಮ್ ಘೋಷಣೆಗಳು ಮೊಳಗಿದ್ದವು. ಆಗ 14-20 ವಯಸ್ಸಿನವರಾಗಿದ್ದವರು ಈಗ 40-47 ವಯಸ್ಸಿನ ಅಜುಬಾಜಿನಲ್ಲಿದ್ದಾರೆ. ಥಿಯೇಟರಿನಲ್ಲಿ ‘ದೇಶಪ್ರೇಮ’ದ ದ್ಯೋತಕವಾಗಿ ಮೊಳಗಿದ್ದ ಘೋಷಣೆಗಳು ಈಗ ದೇಶವೆಂಬ ಥಿಯೇಟರಿನಲ್ಲಿ ಮೊಳಗುತ್ತಿವೆ. ಅದರ ಅರ್ಥವೂ ಸಾರೇ ಜಹಾಂಸೆ ಅಚ್ಛಾ, ಜನಗಣಮನ, ಹಿಂದ್ ದೇಶ್ ಕೇ ನಿವಾಸಿ ಥರದ ಗೀತೆಗಳಲ್ಲಿ ವ್ಯಕ್ತವಾದ ಭಾವಕ್ಕಿಂತ ಭಿನ್ನವಾಗಿದೆ.

***

370ನೇ ವಿಧಿ ರದ್ದಿನ ಕುರಿತು ತುಂಬ ಭಾವುಕರಾಗಿ, ರೋಮಾಂಚಿತರಾಗಿ ‘ಐತಿಹಾಸಿಕ ಕ್ರಮ’ ಎನ್ನುವ ಪೀಳಿಗೆಯ ಬಹುತೇಕರ ಪಾಲಿಗೆ ಕಾಶ್ಮೀರ ಸಮಸ್ಯೆ ಎಂದರೆ ಅಂದು ಮಣಿರತ್ನಂ ತೀರಾ ಜಾಳು ಜಾಳಾಗಿ, ಬಾಲಿಶವಾಗಿ ತೋರಿಸಿದ್ದ, ‘ನಮ್ಮ ಕಾಶ್ಮೀರವನ್ನು ಕಿತ್ತುಕೊಳ್ಳಲು’ ಅವರು ಯತ್ನಿಸುತ್ತಿದ್ದಾರೆ ಎಂಬುದಷ್ಟೇ. 1989ರಲ್ಲಿ ಕಣಿವೆಯಲ್ಲಿ ಹಿಂಸೆ ಭುಗಿಲೆದ್ದಾಗ ಶಾಲೆ-ಕಾಲೇಜಿಗೆ ಹೋಗುತ್ತಿದ್ದವರು ಮುಂದೆ ಅಲ್ಲಿ ಉಗ್ರವಾದ ಮತ್ತು ಸೇನಾ ಕಾರ್ಯಾಚರಣೆಗಳ ಕಾರಣಕ್ಕೆ ಸರಿಯಾದ ವಿದ್ಯೆಯನ್ನೇ ಪಡೆಯಲಿಲ್ಲ. ದಿನವೂ ಅಘೋಷಿತ ಬಂದ್ ನೋಡಿಯೇ ಬೆಳೆದ ಅಂಥವರ ಬದುಕು ಈಗ ಸಂದಿಗ್ಧದಲ್ಲಿದೆ. ಆದರೆ ಕಾಶ್ಮೀರದಾಚೆಯ ಭಾರತದಲ್ಲಿರುವ ಯುವ ಸಮೂಹಕ್ಕೆ ಕಾಶ್ಮೀರ ಸಮಸ್ಯೆಗೆ ಪರಿಹಾರ ಸಿಕ್ಕ ಹೆಮ್ಮೆಯಿದೆ!

‘ರೋಜಾ’ ಅಥವಾ ‘ಮಿಷನ್ ಕಾಶ್ಮೀರ್’- ಇಂತಹ ಜನಪ್ರಿಯ ಸಿನಿಮಾಗಳ ಅಪಾಯವಿರುವುದೇ ಇಲ್ಲಿ ಅನಿಸುತ್ತದೆ. ಪ್ರೇಮಕತೆಯ ಎಳೆ ಇಟ್ಟುಕೊಂಡು ಹೊರಡುವ ಮಣಿರತ್ನಂ, ‘ಕಾಶ್ಮೀರ ಪ್ರಕ್ಷುಬ್ದತೆ’ಯ ಹಿನ್ನೆಲೆಯಲ್ಲಿ ಪ್ರೇಮಕತೆ ಎಂದು ಪ್ರಚಾರ ಪಡೆದರು. ಆದರೆ, ಯಾವ ಗಂಭೀರ ಅಧ್ಯಯನವೂ ಇಲ್ಲದೇ ಅವರು ಹಸಿ ಹಸಿಯಾಗಿ ತೋರಿಸಿದ ಬ್ಯಾಕ್‍ಡ್ರಾಪ್ ಕತೆ ಮತ್ತು ಧ್ವಜ ಕಾಪಾಡುವ ಹೀರೊಯಿಸಂ- ಹಿಂದೂತ್ವದ ರಾಷ್ಟ್ರೀಯತೆಯ ರೂಪಕಗಳೇ ಆಗಿದ್ದವು. ಕಾಶ್ಮೀರವನ್ನು ಭಾರತದೊಡನೆ ಬೆಸೆಯಲು ಬೇಕಾದ ಪ್ರೇಮಕಥೆ ಅದಾಗಿರಲಿಲ್ಲ.

ಮಣಿರತ್ನಂ ತಮ್ಮ ‘ಬಾಂಬೆ’ಯಲ್ಲಿ ನ್ಯೂಟ್ರಲ್ ನೋಟ ಕೊಡಲು ಯತ್ನಿಸಿದ್ದರು. ನಂತರದ ‘ದಿಲ್ ಸೆ’ ಈಶಾನ್ಯ ಭಾರತದ ಸಂಕೀರ್ಣ ಸಮಸ್ಯೆಯನ್ನು ಒಂದು ಸರಳ ರೇಖಾತ್ಮಕ ನೆಲೆಯಲ್ಲಿ ತೋರಿಸಿತ್ತು.

ಕಾಶ್ಮೀರ ಮತ್ತು ಈಶಾನ್ಯ ಭಾರತದ ಕುರಿತು ಬೇರೆ ರೀತಿಯ ಮಾಹಿತಿ ಇಲ್ಲದವರಿಗೆ 370 ವಿಧಿ ರದ್ದು ಐತಿಹಾಸಿಕ ಅನಿಸಿರಲೇಬೇಕು… ಈ ನಡುವೆ 2002ರ ಭೀಕರ ಹತ್ಯಾಕಾಂಡ ಕೂಡ ‘ಅವರಿಗೆ’ ಕಲಿಸಿದ ಪಾಠ ಎಂದು ನಂಬಿಕೊಂಡು ಬಂದವರಿಗೆ ಕಾಶ್ಮೀರದ ವಿಭಜನೆ ಕೂಡ ಐತಿಹಾಸಿಕವೇ. ಕಾಶ್ಮೀರ ಭಾರತದ ಅವಿಭಾಜ್ಯ ಭಾಗವಾಗಿಯೇ ಇರಬೇಕು. ಅದರ ಇತಿಹಾಸ ಭಾರತದ ಉಳಿದ ಭಾಗಗಳ ಇತಿಹಾಸದ ಜೊತೆಗೆ ಹೊಂದಿಕೊಂಡಿದೆ. ಅದನ್ನು ಆಳಿದವರು ‘ಹಿಂದೂ ರಾಜ’ರು ಎಂಬ ಕಾರಣಕ್ಕೆ ಮಾತ್ರವಲ್ಲದೇ, ಅದರ ಜನಪ್ರಿಯ ನಾಯಕ ಷೇಕ್ ಅಬ್ದುಲ್ಲಾ ಸಹಾ ಸೆಕ್ಯುಲರ್ ಕಾಶ್ಮೀರವನ್ನೇ ಬಯಸಿದ್ದರು ಎಂಬುದನ್ನೂ ಮರೆಯಲಾಗದು. ಅಂತಹ ಕಾಶ್ಮೀರದ ಪ್ರತಿ ಪ್ರಜೆಯನ್ನೂ ಪ್ರೀತಿಯಿಂದ ಗೆಲ್ಲಬೇಕೆಂದರೆ, ಅವರ ಕುರಿತ ಪೂರ್ವಗ್ರಹಗಳನ್ನು ತೊರೆಯಬೇಕಿದೆ. ಇದ್ದುದರಲ್ಲಿ ರಾಜೀó ಗಡಿಯಾಚೆ ಮತ್ತು ಈಚೆಗಿನ ಜನರನ್ನು ಮನುಷ್ಯರನ್ನಾಗಿ ಚಿತ್ರಿಸುವ ಕೆಲಸ ಮಾಡಿದೆ.

****

ಹಿಂದೊಮ್ಮೆ ಇನ್ಪೋಸಿಸ್‍ನ ಎನ್.ಆರ್.ನಾರಾಯಣ ಮೂರ್ತಿ ಬೆಂಗಳೂರನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಬೇಕು ಎಂದು ಬಲವಾಗಿ ಆಗ್ರಹಿಸಿದ್ದರು. ಈಗ ಸೇನೆಯನ್ನು ಬಳಸಿಕೊಂಡು ಬೆಂಗಳೂರನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿಬಿಟ್ಟರೆ? ಬಹುಪಾಲು ಬೆಂಗಳೂರಿಗರು ಇದೊಂದು ಐತಿಹಾಸಿಕ ಕ್ರಮವೆಂದೇ ಕರೆಯುತ್ತಾರೆ. ಅನ್ಯ ರಾಜ್ಯಗಳ ಪಾಲಿಗೆ ಕೂಡ ಇದು ಐತಿಹಾಸಿಕವೇ ಆಗಿರುತ್ತದೆ.

ಆದರೆ, ಬೆಂಗಳೂರಲ್ಲಿರುವ ಮೂಲ ಕನ್ನಡಿಗರು ಮತ್ತು ಬೆಂಗಳೂರಾಚೆಗಿನ ಪ್ರದೇಶದಲ್ಲಿರುವ ಕನ್ನಡಿಗರ ಪಾಲಿಗೆ ಇದೊಂದು ಐತಿಹಾಸಿಕ ದ್ರೋಹ ಅನ್ನಿಸಿಯೇ ಅನ್ನಿಸುತ್ತದೆ, ಅನ್ನಿಸಲೇ ಬೇಕು….

ಈ ನೆಲೆಯಲ್ಲಿ ನಿಂತು ನೋಡಿದಾಗಲಷ್ಟೇ ಕನ್ನಡಿಗರಿಗೆ ಕಾಶ್ಮೀರದ ಜನರ ಸಂಕಟ ಅರ್ಥವಾದಿತೇನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...