HomeUncategorizedನಮ್ಮ ಸಿನೆಮಾಗಳು ತೋರಿಸಿದ್ದಷ್ಟೇ ಕಾಶ್ಮೀರವ?

ನಮ್ಮ ಸಿನೆಮಾಗಳು ತೋರಿಸಿದ್ದಷ್ಟೇ ಕಾಶ್ಮೀರವ?

- Advertisement -
- Advertisement -

ಬಾಬ್ರಿ ಮಸೀದಿಯ ಧ್ವಂಸ ಒಂದು ರೀತಿಯ ‘ಹಿಂದೂತ್ವ’ದ ಉನ್ಮಾದತೆಯನ್ನು ಯುವಕರಲ್ಲಿ ತುಂಬಿದ್ದ ಸಂದರ್ಭ. ಅಂತಹ ಉನ್ಮಾದಿತರು ಆಗಸ್ಟ್ 15ರಂದು ಬಿಡುಗಡೆಗೊಂಡ ‘ರೋಜಾ’ ಸಿನಿಮಾವನ್ನು ಕಣ್ತುಂಬಿಕೊಂಡು ಬಂದು, ದೇಶಪ್ರೇಮದ ಮಾದರಿಯೊಂದನ್ನು ಹೃದಯಕ್ಕಿಳಿಸಿಕೊಂಡರು. ಅದರ ಪರಿಣಾಮವನ್ನು ಥಿಯೇಟರ್‍ಗಳಲ್ಲೇ ನೋಡಬಹುದಿತ್ತು! ದೇಶದ ಬಗ್ಗೆ ಪ್ರೇಮವಷ್ಟೇ ಆಗಿದ್ದರೆ, ಅದಕ್ಕಿಂತ ಒಳ್ಳೆಯ ಸಂಗತಿ ಇನ್ನೇನಿರಲು ಸಾಧ್ಯ? ಆದರೆ, ಅವರು ಕಾಶ್ಮೀರವನ್ನು ಕಣ್ತುಂಬಿಕೊಂಡ ರೀತಿಯಲ್ಲಿ ದೊಡ್ಡ ಸಮಸ್ಯೆಯಿತ್ತು. ಅದರ ಪ್ರಕಾರ ಕಾಶ್ಮೀರವೆಂದರೆ ಭಾರತವನ್ನು ದ್ವೇಷಿಸುವ ಭಯೋತ್ಪಾದಕರ ತಾಣ ಅಷ್ಟೇ.

ಸುಡುತ್ತಿರುವ ರಾಷ್ಟ್ರಧ್ವಜದ ಮೇಲೆ ಸಿನಿಮಾದ ಹೀರೊ ಅರವಿಂದ ಸ್ವಾಮಿ ಬಿದ್ದು, ತನ್ನ ಬಟ್ಟೆಗಳು ಸುಟ್ಟು ಜೀವಕ್ಕೆ ಅಪಾಯವಿದ್ದರೂ ಧ್ವಜವನ್ನು ರಕ್ಷಿಸುವ ಹೋರಾಟ. ಥಿಯೇಟರಿನಲ್ಲಿ ಭಾರತ್ ಮಾತಾ ಕಿ ಜೈ, ಜೈ ಹಿಂದ್, ಜೈ ಶ್ರೀರಾಮ್ ಘೋಷಣೆಗಳು ಮೊಳಗಿದ್ದವು. ಆಗ 14-20 ವಯಸ್ಸಿನವರಾಗಿದ್ದವರು ಈಗ 40-47 ವಯಸ್ಸಿನ ಅಜುಬಾಜಿನಲ್ಲಿದ್ದಾರೆ. ಥಿಯೇಟರಿನಲ್ಲಿ ‘ದೇಶಪ್ರೇಮ’ದ ದ್ಯೋತಕವಾಗಿ ಮೊಳಗಿದ್ದ ಘೋಷಣೆಗಳು ಈಗ ದೇಶವೆಂಬ ಥಿಯೇಟರಿನಲ್ಲಿ ಮೊಳಗುತ್ತಿವೆ. ಅದರ ಅರ್ಥವೂ ಸಾರೇ ಜಹಾಂಸೆ ಅಚ್ಛಾ, ಜನಗಣಮನ, ಹಿಂದ್ ದೇಶ್ ಕೇ ನಿವಾಸಿ ಥರದ ಗೀತೆಗಳಲ್ಲಿ ವ್ಯಕ್ತವಾದ ಭಾವಕ್ಕಿಂತ ಭಿನ್ನವಾಗಿದೆ.

***

370ನೇ ವಿಧಿ ರದ್ದಿನ ಕುರಿತು ತುಂಬ ಭಾವುಕರಾಗಿ, ರೋಮಾಂಚಿತರಾಗಿ ‘ಐತಿಹಾಸಿಕ ಕ್ರಮ’ ಎನ್ನುವ ಪೀಳಿಗೆಯ ಬಹುತೇಕರ ಪಾಲಿಗೆ ಕಾಶ್ಮೀರ ಸಮಸ್ಯೆ ಎಂದರೆ ಅಂದು ಮಣಿರತ್ನಂ ತೀರಾ ಜಾಳು ಜಾಳಾಗಿ, ಬಾಲಿಶವಾಗಿ ತೋರಿಸಿದ್ದ, ‘ನಮ್ಮ ಕಾಶ್ಮೀರವನ್ನು ಕಿತ್ತುಕೊಳ್ಳಲು’ ಅವರು ಯತ್ನಿಸುತ್ತಿದ್ದಾರೆ ಎಂಬುದಷ್ಟೇ. 1989ರಲ್ಲಿ ಕಣಿವೆಯಲ್ಲಿ ಹಿಂಸೆ ಭುಗಿಲೆದ್ದಾಗ ಶಾಲೆ-ಕಾಲೇಜಿಗೆ ಹೋಗುತ್ತಿದ್ದವರು ಮುಂದೆ ಅಲ್ಲಿ ಉಗ್ರವಾದ ಮತ್ತು ಸೇನಾ ಕಾರ್ಯಾಚರಣೆಗಳ ಕಾರಣಕ್ಕೆ ಸರಿಯಾದ ವಿದ್ಯೆಯನ್ನೇ ಪಡೆಯಲಿಲ್ಲ. ದಿನವೂ ಅಘೋಷಿತ ಬಂದ್ ನೋಡಿಯೇ ಬೆಳೆದ ಅಂಥವರ ಬದುಕು ಈಗ ಸಂದಿಗ್ಧದಲ್ಲಿದೆ. ಆದರೆ ಕಾಶ್ಮೀರದಾಚೆಯ ಭಾರತದಲ್ಲಿರುವ ಯುವ ಸಮೂಹಕ್ಕೆ ಕಾಶ್ಮೀರ ಸಮಸ್ಯೆಗೆ ಪರಿಹಾರ ಸಿಕ್ಕ ಹೆಮ್ಮೆಯಿದೆ!

‘ರೋಜಾ’ ಅಥವಾ ‘ಮಿಷನ್ ಕಾಶ್ಮೀರ್’- ಇಂತಹ ಜನಪ್ರಿಯ ಸಿನಿಮಾಗಳ ಅಪಾಯವಿರುವುದೇ ಇಲ್ಲಿ ಅನಿಸುತ್ತದೆ. ಪ್ರೇಮಕತೆಯ ಎಳೆ ಇಟ್ಟುಕೊಂಡು ಹೊರಡುವ ಮಣಿರತ್ನಂ, ‘ಕಾಶ್ಮೀರ ಪ್ರಕ್ಷುಬ್ದತೆ’ಯ ಹಿನ್ನೆಲೆಯಲ್ಲಿ ಪ್ರೇಮಕತೆ ಎಂದು ಪ್ರಚಾರ ಪಡೆದರು. ಆದರೆ, ಯಾವ ಗಂಭೀರ ಅಧ್ಯಯನವೂ ಇಲ್ಲದೇ ಅವರು ಹಸಿ ಹಸಿಯಾಗಿ ತೋರಿಸಿದ ಬ್ಯಾಕ್‍ಡ್ರಾಪ್ ಕತೆ ಮತ್ತು ಧ್ವಜ ಕಾಪಾಡುವ ಹೀರೊಯಿಸಂ- ಹಿಂದೂತ್ವದ ರಾಷ್ಟ್ರೀಯತೆಯ ರೂಪಕಗಳೇ ಆಗಿದ್ದವು. ಕಾಶ್ಮೀರವನ್ನು ಭಾರತದೊಡನೆ ಬೆಸೆಯಲು ಬೇಕಾದ ಪ್ರೇಮಕಥೆ ಅದಾಗಿರಲಿಲ್ಲ.

ಮಣಿರತ್ನಂ ತಮ್ಮ ‘ಬಾಂಬೆ’ಯಲ್ಲಿ ನ್ಯೂಟ್ರಲ್ ನೋಟ ಕೊಡಲು ಯತ್ನಿಸಿದ್ದರು. ನಂತರದ ‘ದಿಲ್ ಸೆ’ ಈಶಾನ್ಯ ಭಾರತದ ಸಂಕೀರ್ಣ ಸಮಸ್ಯೆಯನ್ನು ಒಂದು ಸರಳ ರೇಖಾತ್ಮಕ ನೆಲೆಯಲ್ಲಿ ತೋರಿಸಿತ್ತು.

ಕಾಶ್ಮೀರ ಮತ್ತು ಈಶಾನ್ಯ ಭಾರತದ ಕುರಿತು ಬೇರೆ ರೀತಿಯ ಮಾಹಿತಿ ಇಲ್ಲದವರಿಗೆ 370 ವಿಧಿ ರದ್ದು ಐತಿಹಾಸಿಕ ಅನಿಸಿರಲೇಬೇಕು… ಈ ನಡುವೆ 2002ರ ಭೀಕರ ಹತ್ಯಾಕಾಂಡ ಕೂಡ ‘ಅವರಿಗೆ’ ಕಲಿಸಿದ ಪಾಠ ಎಂದು ನಂಬಿಕೊಂಡು ಬಂದವರಿಗೆ ಕಾಶ್ಮೀರದ ವಿಭಜನೆ ಕೂಡ ಐತಿಹಾಸಿಕವೇ. ಕಾಶ್ಮೀರ ಭಾರತದ ಅವಿಭಾಜ್ಯ ಭಾಗವಾಗಿಯೇ ಇರಬೇಕು. ಅದರ ಇತಿಹಾಸ ಭಾರತದ ಉಳಿದ ಭಾಗಗಳ ಇತಿಹಾಸದ ಜೊತೆಗೆ ಹೊಂದಿಕೊಂಡಿದೆ. ಅದನ್ನು ಆಳಿದವರು ‘ಹಿಂದೂ ರಾಜ’ರು ಎಂಬ ಕಾರಣಕ್ಕೆ ಮಾತ್ರವಲ್ಲದೇ, ಅದರ ಜನಪ್ರಿಯ ನಾಯಕ ಷೇಕ್ ಅಬ್ದುಲ್ಲಾ ಸಹಾ ಸೆಕ್ಯುಲರ್ ಕಾಶ್ಮೀರವನ್ನೇ ಬಯಸಿದ್ದರು ಎಂಬುದನ್ನೂ ಮರೆಯಲಾಗದು. ಅಂತಹ ಕಾಶ್ಮೀರದ ಪ್ರತಿ ಪ್ರಜೆಯನ್ನೂ ಪ್ರೀತಿಯಿಂದ ಗೆಲ್ಲಬೇಕೆಂದರೆ, ಅವರ ಕುರಿತ ಪೂರ್ವಗ್ರಹಗಳನ್ನು ತೊರೆಯಬೇಕಿದೆ. ಇದ್ದುದರಲ್ಲಿ ರಾಜೀó ಗಡಿಯಾಚೆ ಮತ್ತು ಈಚೆಗಿನ ಜನರನ್ನು ಮನುಷ್ಯರನ್ನಾಗಿ ಚಿತ್ರಿಸುವ ಕೆಲಸ ಮಾಡಿದೆ.

****

ಹಿಂದೊಮ್ಮೆ ಇನ್ಪೋಸಿಸ್‍ನ ಎನ್.ಆರ್.ನಾರಾಯಣ ಮೂರ್ತಿ ಬೆಂಗಳೂರನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಬೇಕು ಎಂದು ಬಲವಾಗಿ ಆಗ್ರಹಿಸಿದ್ದರು. ಈಗ ಸೇನೆಯನ್ನು ಬಳಸಿಕೊಂಡು ಬೆಂಗಳೂರನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿಬಿಟ್ಟರೆ? ಬಹುಪಾಲು ಬೆಂಗಳೂರಿಗರು ಇದೊಂದು ಐತಿಹಾಸಿಕ ಕ್ರಮವೆಂದೇ ಕರೆಯುತ್ತಾರೆ. ಅನ್ಯ ರಾಜ್ಯಗಳ ಪಾಲಿಗೆ ಕೂಡ ಇದು ಐತಿಹಾಸಿಕವೇ ಆಗಿರುತ್ತದೆ.

ಆದರೆ, ಬೆಂಗಳೂರಲ್ಲಿರುವ ಮೂಲ ಕನ್ನಡಿಗರು ಮತ್ತು ಬೆಂಗಳೂರಾಚೆಗಿನ ಪ್ರದೇಶದಲ್ಲಿರುವ ಕನ್ನಡಿಗರ ಪಾಲಿಗೆ ಇದೊಂದು ಐತಿಹಾಸಿಕ ದ್ರೋಹ ಅನ್ನಿಸಿಯೇ ಅನ್ನಿಸುತ್ತದೆ, ಅನ್ನಿಸಲೇ ಬೇಕು….

ಈ ನೆಲೆಯಲ್ಲಿ ನಿಂತು ನೋಡಿದಾಗಲಷ್ಟೇ ಕನ್ನಡಿಗರಿಗೆ ಕಾಶ್ಮೀರದ ಜನರ ಸಂಕಟ ಅರ್ಥವಾದಿತೇನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...