HomeUncategorizedನಮ್ಮ ಸಿನೆಮಾಗಳು ತೋರಿಸಿದ್ದಷ್ಟೇ ಕಾಶ್ಮೀರವ?

ನಮ್ಮ ಸಿನೆಮಾಗಳು ತೋರಿಸಿದ್ದಷ್ಟೇ ಕಾಶ್ಮೀರವ?

- Advertisement -
- Advertisement -

ಬಾಬ್ರಿ ಮಸೀದಿಯ ಧ್ವಂಸ ಒಂದು ರೀತಿಯ ‘ಹಿಂದೂತ್ವ’ದ ಉನ್ಮಾದತೆಯನ್ನು ಯುವಕರಲ್ಲಿ ತುಂಬಿದ್ದ ಸಂದರ್ಭ. ಅಂತಹ ಉನ್ಮಾದಿತರು ಆಗಸ್ಟ್ 15ರಂದು ಬಿಡುಗಡೆಗೊಂಡ ‘ರೋಜಾ’ ಸಿನಿಮಾವನ್ನು ಕಣ್ತುಂಬಿಕೊಂಡು ಬಂದು, ದೇಶಪ್ರೇಮದ ಮಾದರಿಯೊಂದನ್ನು ಹೃದಯಕ್ಕಿಳಿಸಿಕೊಂಡರು. ಅದರ ಪರಿಣಾಮವನ್ನು ಥಿಯೇಟರ್‍ಗಳಲ್ಲೇ ನೋಡಬಹುದಿತ್ತು! ದೇಶದ ಬಗ್ಗೆ ಪ್ರೇಮವಷ್ಟೇ ಆಗಿದ್ದರೆ, ಅದಕ್ಕಿಂತ ಒಳ್ಳೆಯ ಸಂಗತಿ ಇನ್ನೇನಿರಲು ಸಾಧ್ಯ? ಆದರೆ, ಅವರು ಕಾಶ್ಮೀರವನ್ನು ಕಣ್ತುಂಬಿಕೊಂಡ ರೀತಿಯಲ್ಲಿ ದೊಡ್ಡ ಸಮಸ್ಯೆಯಿತ್ತು. ಅದರ ಪ್ರಕಾರ ಕಾಶ್ಮೀರವೆಂದರೆ ಭಾರತವನ್ನು ದ್ವೇಷಿಸುವ ಭಯೋತ್ಪಾದಕರ ತಾಣ ಅಷ್ಟೇ.

ಸುಡುತ್ತಿರುವ ರಾಷ್ಟ್ರಧ್ವಜದ ಮೇಲೆ ಸಿನಿಮಾದ ಹೀರೊ ಅರವಿಂದ ಸ್ವಾಮಿ ಬಿದ್ದು, ತನ್ನ ಬಟ್ಟೆಗಳು ಸುಟ್ಟು ಜೀವಕ್ಕೆ ಅಪಾಯವಿದ್ದರೂ ಧ್ವಜವನ್ನು ರಕ್ಷಿಸುವ ಹೋರಾಟ. ಥಿಯೇಟರಿನಲ್ಲಿ ಭಾರತ್ ಮಾತಾ ಕಿ ಜೈ, ಜೈ ಹಿಂದ್, ಜೈ ಶ್ರೀರಾಮ್ ಘೋಷಣೆಗಳು ಮೊಳಗಿದ್ದವು. ಆಗ 14-20 ವಯಸ್ಸಿನವರಾಗಿದ್ದವರು ಈಗ 40-47 ವಯಸ್ಸಿನ ಅಜುಬಾಜಿನಲ್ಲಿದ್ದಾರೆ. ಥಿಯೇಟರಿನಲ್ಲಿ ‘ದೇಶಪ್ರೇಮ’ದ ದ್ಯೋತಕವಾಗಿ ಮೊಳಗಿದ್ದ ಘೋಷಣೆಗಳು ಈಗ ದೇಶವೆಂಬ ಥಿಯೇಟರಿನಲ್ಲಿ ಮೊಳಗುತ್ತಿವೆ. ಅದರ ಅರ್ಥವೂ ಸಾರೇ ಜಹಾಂಸೆ ಅಚ್ಛಾ, ಜನಗಣಮನ, ಹಿಂದ್ ದೇಶ್ ಕೇ ನಿವಾಸಿ ಥರದ ಗೀತೆಗಳಲ್ಲಿ ವ್ಯಕ್ತವಾದ ಭಾವಕ್ಕಿಂತ ಭಿನ್ನವಾಗಿದೆ.

***

370ನೇ ವಿಧಿ ರದ್ದಿನ ಕುರಿತು ತುಂಬ ಭಾವುಕರಾಗಿ, ರೋಮಾಂಚಿತರಾಗಿ ‘ಐತಿಹಾಸಿಕ ಕ್ರಮ’ ಎನ್ನುವ ಪೀಳಿಗೆಯ ಬಹುತೇಕರ ಪಾಲಿಗೆ ಕಾಶ್ಮೀರ ಸಮಸ್ಯೆ ಎಂದರೆ ಅಂದು ಮಣಿರತ್ನಂ ತೀರಾ ಜಾಳು ಜಾಳಾಗಿ, ಬಾಲಿಶವಾಗಿ ತೋರಿಸಿದ್ದ, ‘ನಮ್ಮ ಕಾಶ್ಮೀರವನ್ನು ಕಿತ್ತುಕೊಳ್ಳಲು’ ಅವರು ಯತ್ನಿಸುತ್ತಿದ್ದಾರೆ ಎಂಬುದಷ್ಟೇ. 1989ರಲ್ಲಿ ಕಣಿವೆಯಲ್ಲಿ ಹಿಂಸೆ ಭುಗಿಲೆದ್ದಾಗ ಶಾಲೆ-ಕಾಲೇಜಿಗೆ ಹೋಗುತ್ತಿದ್ದವರು ಮುಂದೆ ಅಲ್ಲಿ ಉಗ್ರವಾದ ಮತ್ತು ಸೇನಾ ಕಾರ್ಯಾಚರಣೆಗಳ ಕಾರಣಕ್ಕೆ ಸರಿಯಾದ ವಿದ್ಯೆಯನ್ನೇ ಪಡೆಯಲಿಲ್ಲ. ದಿನವೂ ಅಘೋಷಿತ ಬಂದ್ ನೋಡಿಯೇ ಬೆಳೆದ ಅಂಥವರ ಬದುಕು ಈಗ ಸಂದಿಗ್ಧದಲ್ಲಿದೆ. ಆದರೆ ಕಾಶ್ಮೀರದಾಚೆಯ ಭಾರತದಲ್ಲಿರುವ ಯುವ ಸಮೂಹಕ್ಕೆ ಕಾಶ್ಮೀರ ಸಮಸ್ಯೆಗೆ ಪರಿಹಾರ ಸಿಕ್ಕ ಹೆಮ್ಮೆಯಿದೆ!

‘ರೋಜಾ’ ಅಥವಾ ‘ಮಿಷನ್ ಕಾಶ್ಮೀರ್’- ಇಂತಹ ಜನಪ್ರಿಯ ಸಿನಿಮಾಗಳ ಅಪಾಯವಿರುವುದೇ ಇಲ್ಲಿ ಅನಿಸುತ್ತದೆ. ಪ್ರೇಮಕತೆಯ ಎಳೆ ಇಟ್ಟುಕೊಂಡು ಹೊರಡುವ ಮಣಿರತ್ನಂ, ‘ಕಾಶ್ಮೀರ ಪ್ರಕ್ಷುಬ್ದತೆ’ಯ ಹಿನ್ನೆಲೆಯಲ್ಲಿ ಪ್ರೇಮಕತೆ ಎಂದು ಪ್ರಚಾರ ಪಡೆದರು. ಆದರೆ, ಯಾವ ಗಂಭೀರ ಅಧ್ಯಯನವೂ ಇಲ್ಲದೇ ಅವರು ಹಸಿ ಹಸಿಯಾಗಿ ತೋರಿಸಿದ ಬ್ಯಾಕ್‍ಡ್ರಾಪ್ ಕತೆ ಮತ್ತು ಧ್ವಜ ಕಾಪಾಡುವ ಹೀರೊಯಿಸಂ- ಹಿಂದೂತ್ವದ ರಾಷ್ಟ್ರೀಯತೆಯ ರೂಪಕಗಳೇ ಆಗಿದ್ದವು. ಕಾಶ್ಮೀರವನ್ನು ಭಾರತದೊಡನೆ ಬೆಸೆಯಲು ಬೇಕಾದ ಪ್ರೇಮಕಥೆ ಅದಾಗಿರಲಿಲ್ಲ.

ಮಣಿರತ್ನಂ ತಮ್ಮ ‘ಬಾಂಬೆ’ಯಲ್ಲಿ ನ್ಯೂಟ್ರಲ್ ನೋಟ ಕೊಡಲು ಯತ್ನಿಸಿದ್ದರು. ನಂತರದ ‘ದಿಲ್ ಸೆ’ ಈಶಾನ್ಯ ಭಾರತದ ಸಂಕೀರ್ಣ ಸಮಸ್ಯೆಯನ್ನು ಒಂದು ಸರಳ ರೇಖಾತ್ಮಕ ನೆಲೆಯಲ್ಲಿ ತೋರಿಸಿತ್ತು.

ಕಾಶ್ಮೀರ ಮತ್ತು ಈಶಾನ್ಯ ಭಾರತದ ಕುರಿತು ಬೇರೆ ರೀತಿಯ ಮಾಹಿತಿ ಇಲ್ಲದವರಿಗೆ 370 ವಿಧಿ ರದ್ದು ಐತಿಹಾಸಿಕ ಅನಿಸಿರಲೇಬೇಕು… ಈ ನಡುವೆ 2002ರ ಭೀಕರ ಹತ್ಯಾಕಾಂಡ ಕೂಡ ‘ಅವರಿಗೆ’ ಕಲಿಸಿದ ಪಾಠ ಎಂದು ನಂಬಿಕೊಂಡು ಬಂದವರಿಗೆ ಕಾಶ್ಮೀರದ ವಿಭಜನೆ ಕೂಡ ಐತಿಹಾಸಿಕವೇ. ಕಾಶ್ಮೀರ ಭಾರತದ ಅವಿಭಾಜ್ಯ ಭಾಗವಾಗಿಯೇ ಇರಬೇಕು. ಅದರ ಇತಿಹಾಸ ಭಾರತದ ಉಳಿದ ಭಾಗಗಳ ಇತಿಹಾಸದ ಜೊತೆಗೆ ಹೊಂದಿಕೊಂಡಿದೆ. ಅದನ್ನು ಆಳಿದವರು ‘ಹಿಂದೂ ರಾಜ’ರು ಎಂಬ ಕಾರಣಕ್ಕೆ ಮಾತ್ರವಲ್ಲದೇ, ಅದರ ಜನಪ್ರಿಯ ನಾಯಕ ಷೇಕ್ ಅಬ್ದುಲ್ಲಾ ಸಹಾ ಸೆಕ್ಯುಲರ್ ಕಾಶ್ಮೀರವನ್ನೇ ಬಯಸಿದ್ದರು ಎಂಬುದನ್ನೂ ಮರೆಯಲಾಗದು. ಅಂತಹ ಕಾಶ್ಮೀರದ ಪ್ರತಿ ಪ್ರಜೆಯನ್ನೂ ಪ್ರೀತಿಯಿಂದ ಗೆಲ್ಲಬೇಕೆಂದರೆ, ಅವರ ಕುರಿತ ಪೂರ್ವಗ್ರಹಗಳನ್ನು ತೊರೆಯಬೇಕಿದೆ. ಇದ್ದುದರಲ್ಲಿ ರಾಜೀó ಗಡಿಯಾಚೆ ಮತ್ತು ಈಚೆಗಿನ ಜನರನ್ನು ಮನುಷ್ಯರನ್ನಾಗಿ ಚಿತ್ರಿಸುವ ಕೆಲಸ ಮಾಡಿದೆ.

****

ಹಿಂದೊಮ್ಮೆ ಇನ್ಪೋಸಿಸ್‍ನ ಎನ್.ಆರ್.ನಾರಾಯಣ ಮೂರ್ತಿ ಬೆಂಗಳೂರನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಬೇಕು ಎಂದು ಬಲವಾಗಿ ಆಗ್ರಹಿಸಿದ್ದರು. ಈಗ ಸೇನೆಯನ್ನು ಬಳಸಿಕೊಂಡು ಬೆಂಗಳೂರನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿಬಿಟ್ಟರೆ? ಬಹುಪಾಲು ಬೆಂಗಳೂರಿಗರು ಇದೊಂದು ಐತಿಹಾಸಿಕ ಕ್ರಮವೆಂದೇ ಕರೆಯುತ್ತಾರೆ. ಅನ್ಯ ರಾಜ್ಯಗಳ ಪಾಲಿಗೆ ಕೂಡ ಇದು ಐತಿಹಾಸಿಕವೇ ಆಗಿರುತ್ತದೆ.

ಆದರೆ, ಬೆಂಗಳೂರಲ್ಲಿರುವ ಮೂಲ ಕನ್ನಡಿಗರು ಮತ್ತು ಬೆಂಗಳೂರಾಚೆಗಿನ ಪ್ರದೇಶದಲ್ಲಿರುವ ಕನ್ನಡಿಗರ ಪಾಲಿಗೆ ಇದೊಂದು ಐತಿಹಾಸಿಕ ದ್ರೋಹ ಅನ್ನಿಸಿಯೇ ಅನ್ನಿಸುತ್ತದೆ, ಅನ್ನಿಸಲೇ ಬೇಕು….

ಈ ನೆಲೆಯಲ್ಲಿ ನಿಂತು ನೋಡಿದಾಗಲಷ್ಟೇ ಕನ್ನಡಿಗರಿಗೆ ಕಾಶ್ಮೀರದ ಜನರ ಸಂಕಟ ಅರ್ಥವಾದಿತೇನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...