HomeUncategorizedನಮ್ಮ ಸಿನೆಮಾಗಳು ತೋರಿಸಿದ್ದಷ್ಟೇ ಕಾಶ್ಮೀರವ?

ನಮ್ಮ ಸಿನೆಮಾಗಳು ತೋರಿಸಿದ್ದಷ್ಟೇ ಕಾಶ್ಮೀರವ?

- Advertisement -
- Advertisement -

ಬಾಬ್ರಿ ಮಸೀದಿಯ ಧ್ವಂಸ ಒಂದು ರೀತಿಯ ‘ಹಿಂದೂತ್ವ’ದ ಉನ್ಮಾದತೆಯನ್ನು ಯುವಕರಲ್ಲಿ ತುಂಬಿದ್ದ ಸಂದರ್ಭ. ಅಂತಹ ಉನ್ಮಾದಿತರು ಆಗಸ್ಟ್ 15ರಂದು ಬಿಡುಗಡೆಗೊಂಡ ‘ರೋಜಾ’ ಸಿನಿಮಾವನ್ನು ಕಣ್ತುಂಬಿಕೊಂಡು ಬಂದು, ದೇಶಪ್ರೇಮದ ಮಾದರಿಯೊಂದನ್ನು ಹೃದಯಕ್ಕಿಳಿಸಿಕೊಂಡರು. ಅದರ ಪರಿಣಾಮವನ್ನು ಥಿಯೇಟರ್‍ಗಳಲ್ಲೇ ನೋಡಬಹುದಿತ್ತು! ದೇಶದ ಬಗ್ಗೆ ಪ್ರೇಮವಷ್ಟೇ ಆಗಿದ್ದರೆ, ಅದಕ್ಕಿಂತ ಒಳ್ಳೆಯ ಸಂಗತಿ ಇನ್ನೇನಿರಲು ಸಾಧ್ಯ? ಆದರೆ, ಅವರು ಕಾಶ್ಮೀರವನ್ನು ಕಣ್ತುಂಬಿಕೊಂಡ ರೀತಿಯಲ್ಲಿ ದೊಡ್ಡ ಸಮಸ್ಯೆಯಿತ್ತು. ಅದರ ಪ್ರಕಾರ ಕಾಶ್ಮೀರವೆಂದರೆ ಭಾರತವನ್ನು ದ್ವೇಷಿಸುವ ಭಯೋತ್ಪಾದಕರ ತಾಣ ಅಷ್ಟೇ.

ಸುಡುತ್ತಿರುವ ರಾಷ್ಟ್ರಧ್ವಜದ ಮೇಲೆ ಸಿನಿಮಾದ ಹೀರೊ ಅರವಿಂದ ಸ್ವಾಮಿ ಬಿದ್ದು, ತನ್ನ ಬಟ್ಟೆಗಳು ಸುಟ್ಟು ಜೀವಕ್ಕೆ ಅಪಾಯವಿದ್ದರೂ ಧ್ವಜವನ್ನು ರಕ್ಷಿಸುವ ಹೋರಾಟ. ಥಿಯೇಟರಿನಲ್ಲಿ ಭಾರತ್ ಮಾತಾ ಕಿ ಜೈ, ಜೈ ಹಿಂದ್, ಜೈ ಶ್ರೀರಾಮ್ ಘೋಷಣೆಗಳು ಮೊಳಗಿದ್ದವು. ಆಗ 14-20 ವಯಸ್ಸಿನವರಾಗಿದ್ದವರು ಈಗ 40-47 ವಯಸ್ಸಿನ ಅಜುಬಾಜಿನಲ್ಲಿದ್ದಾರೆ. ಥಿಯೇಟರಿನಲ್ಲಿ ‘ದೇಶಪ್ರೇಮ’ದ ದ್ಯೋತಕವಾಗಿ ಮೊಳಗಿದ್ದ ಘೋಷಣೆಗಳು ಈಗ ದೇಶವೆಂಬ ಥಿಯೇಟರಿನಲ್ಲಿ ಮೊಳಗುತ್ತಿವೆ. ಅದರ ಅರ್ಥವೂ ಸಾರೇ ಜಹಾಂಸೆ ಅಚ್ಛಾ, ಜನಗಣಮನ, ಹಿಂದ್ ದೇಶ್ ಕೇ ನಿವಾಸಿ ಥರದ ಗೀತೆಗಳಲ್ಲಿ ವ್ಯಕ್ತವಾದ ಭಾವಕ್ಕಿಂತ ಭಿನ್ನವಾಗಿದೆ.

***

370ನೇ ವಿಧಿ ರದ್ದಿನ ಕುರಿತು ತುಂಬ ಭಾವುಕರಾಗಿ, ರೋಮಾಂಚಿತರಾಗಿ ‘ಐತಿಹಾಸಿಕ ಕ್ರಮ’ ಎನ್ನುವ ಪೀಳಿಗೆಯ ಬಹುತೇಕರ ಪಾಲಿಗೆ ಕಾಶ್ಮೀರ ಸಮಸ್ಯೆ ಎಂದರೆ ಅಂದು ಮಣಿರತ್ನಂ ತೀರಾ ಜಾಳು ಜಾಳಾಗಿ, ಬಾಲಿಶವಾಗಿ ತೋರಿಸಿದ್ದ, ‘ನಮ್ಮ ಕಾಶ್ಮೀರವನ್ನು ಕಿತ್ತುಕೊಳ್ಳಲು’ ಅವರು ಯತ್ನಿಸುತ್ತಿದ್ದಾರೆ ಎಂಬುದಷ್ಟೇ. 1989ರಲ್ಲಿ ಕಣಿವೆಯಲ್ಲಿ ಹಿಂಸೆ ಭುಗಿಲೆದ್ದಾಗ ಶಾಲೆ-ಕಾಲೇಜಿಗೆ ಹೋಗುತ್ತಿದ್ದವರು ಮುಂದೆ ಅಲ್ಲಿ ಉಗ್ರವಾದ ಮತ್ತು ಸೇನಾ ಕಾರ್ಯಾಚರಣೆಗಳ ಕಾರಣಕ್ಕೆ ಸರಿಯಾದ ವಿದ್ಯೆಯನ್ನೇ ಪಡೆಯಲಿಲ್ಲ. ದಿನವೂ ಅಘೋಷಿತ ಬಂದ್ ನೋಡಿಯೇ ಬೆಳೆದ ಅಂಥವರ ಬದುಕು ಈಗ ಸಂದಿಗ್ಧದಲ್ಲಿದೆ. ಆದರೆ ಕಾಶ್ಮೀರದಾಚೆಯ ಭಾರತದಲ್ಲಿರುವ ಯುವ ಸಮೂಹಕ್ಕೆ ಕಾಶ್ಮೀರ ಸಮಸ್ಯೆಗೆ ಪರಿಹಾರ ಸಿಕ್ಕ ಹೆಮ್ಮೆಯಿದೆ!

‘ರೋಜಾ’ ಅಥವಾ ‘ಮಿಷನ್ ಕಾಶ್ಮೀರ್’- ಇಂತಹ ಜನಪ್ರಿಯ ಸಿನಿಮಾಗಳ ಅಪಾಯವಿರುವುದೇ ಇಲ್ಲಿ ಅನಿಸುತ್ತದೆ. ಪ್ರೇಮಕತೆಯ ಎಳೆ ಇಟ್ಟುಕೊಂಡು ಹೊರಡುವ ಮಣಿರತ್ನಂ, ‘ಕಾಶ್ಮೀರ ಪ್ರಕ್ಷುಬ್ದತೆ’ಯ ಹಿನ್ನೆಲೆಯಲ್ಲಿ ಪ್ರೇಮಕತೆ ಎಂದು ಪ್ರಚಾರ ಪಡೆದರು. ಆದರೆ, ಯಾವ ಗಂಭೀರ ಅಧ್ಯಯನವೂ ಇಲ್ಲದೇ ಅವರು ಹಸಿ ಹಸಿಯಾಗಿ ತೋರಿಸಿದ ಬ್ಯಾಕ್‍ಡ್ರಾಪ್ ಕತೆ ಮತ್ತು ಧ್ವಜ ಕಾಪಾಡುವ ಹೀರೊಯಿಸಂ- ಹಿಂದೂತ್ವದ ರಾಷ್ಟ್ರೀಯತೆಯ ರೂಪಕಗಳೇ ಆಗಿದ್ದವು. ಕಾಶ್ಮೀರವನ್ನು ಭಾರತದೊಡನೆ ಬೆಸೆಯಲು ಬೇಕಾದ ಪ್ರೇಮಕಥೆ ಅದಾಗಿರಲಿಲ್ಲ.

ಮಣಿರತ್ನಂ ತಮ್ಮ ‘ಬಾಂಬೆ’ಯಲ್ಲಿ ನ್ಯೂಟ್ರಲ್ ನೋಟ ಕೊಡಲು ಯತ್ನಿಸಿದ್ದರು. ನಂತರದ ‘ದಿಲ್ ಸೆ’ ಈಶಾನ್ಯ ಭಾರತದ ಸಂಕೀರ್ಣ ಸಮಸ್ಯೆಯನ್ನು ಒಂದು ಸರಳ ರೇಖಾತ್ಮಕ ನೆಲೆಯಲ್ಲಿ ತೋರಿಸಿತ್ತು.

ಕಾಶ್ಮೀರ ಮತ್ತು ಈಶಾನ್ಯ ಭಾರತದ ಕುರಿತು ಬೇರೆ ರೀತಿಯ ಮಾಹಿತಿ ಇಲ್ಲದವರಿಗೆ 370 ವಿಧಿ ರದ್ದು ಐತಿಹಾಸಿಕ ಅನಿಸಿರಲೇಬೇಕು… ಈ ನಡುವೆ 2002ರ ಭೀಕರ ಹತ್ಯಾಕಾಂಡ ಕೂಡ ‘ಅವರಿಗೆ’ ಕಲಿಸಿದ ಪಾಠ ಎಂದು ನಂಬಿಕೊಂಡು ಬಂದವರಿಗೆ ಕಾಶ್ಮೀರದ ವಿಭಜನೆ ಕೂಡ ಐತಿಹಾಸಿಕವೇ. ಕಾಶ್ಮೀರ ಭಾರತದ ಅವಿಭಾಜ್ಯ ಭಾಗವಾಗಿಯೇ ಇರಬೇಕು. ಅದರ ಇತಿಹಾಸ ಭಾರತದ ಉಳಿದ ಭಾಗಗಳ ಇತಿಹಾಸದ ಜೊತೆಗೆ ಹೊಂದಿಕೊಂಡಿದೆ. ಅದನ್ನು ಆಳಿದವರು ‘ಹಿಂದೂ ರಾಜ’ರು ಎಂಬ ಕಾರಣಕ್ಕೆ ಮಾತ್ರವಲ್ಲದೇ, ಅದರ ಜನಪ್ರಿಯ ನಾಯಕ ಷೇಕ್ ಅಬ್ದುಲ್ಲಾ ಸಹಾ ಸೆಕ್ಯುಲರ್ ಕಾಶ್ಮೀರವನ್ನೇ ಬಯಸಿದ್ದರು ಎಂಬುದನ್ನೂ ಮರೆಯಲಾಗದು. ಅಂತಹ ಕಾಶ್ಮೀರದ ಪ್ರತಿ ಪ್ರಜೆಯನ್ನೂ ಪ್ರೀತಿಯಿಂದ ಗೆಲ್ಲಬೇಕೆಂದರೆ, ಅವರ ಕುರಿತ ಪೂರ್ವಗ್ರಹಗಳನ್ನು ತೊರೆಯಬೇಕಿದೆ. ಇದ್ದುದರಲ್ಲಿ ರಾಜೀó ಗಡಿಯಾಚೆ ಮತ್ತು ಈಚೆಗಿನ ಜನರನ್ನು ಮನುಷ್ಯರನ್ನಾಗಿ ಚಿತ್ರಿಸುವ ಕೆಲಸ ಮಾಡಿದೆ.

****

ಹಿಂದೊಮ್ಮೆ ಇನ್ಪೋಸಿಸ್‍ನ ಎನ್.ಆರ್.ನಾರಾಯಣ ಮೂರ್ತಿ ಬೆಂಗಳೂರನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಬೇಕು ಎಂದು ಬಲವಾಗಿ ಆಗ್ರಹಿಸಿದ್ದರು. ಈಗ ಸೇನೆಯನ್ನು ಬಳಸಿಕೊಂಡು ಬೆಂಗಳೂರನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿಬಿಟ್ಟರೆ? ಬಹುಪಾಲು ಬೆಂಗಳೂರಿಗರು ಇದೊಂದು ಐತಿಹಾಸಿಕ ಕ್ರಮವೆಂದೇ ಕರೆಯುತ್ತಾರೆ. ಅನ್ಯ ರಾಜ್ಯಗಳ ಪಾಲಿಗೆ ಕೂಡ ಇದು ಐತಿಹಾಸಿಕವೇ ಆಗಿರುತ್ತದೆ.

ಆದರೆ, ಬೆಂಗಳೂರಲ್ಲಿರುವ ಮೂಲ ಕನ್ನಡಿಗರು ಮತ್ತು ಬೆಂಗಳೂರಾಚೆಗಿನ ಪ್ರದೇಶದಲ್ಲಿರುವ ಕನ್ನಡಿಗರ ಪಾಲಿಗೆ ಇದೊಂದು ಐತಿಹಾಸಿಕ ದ್ರೋಹ ಅನ್ನಿಸಿಯೇ ಅನ್ನಿಸುತ್ತದೆ, ಅನ್ನಿಸಲೇ ಬೇಕು….

ಈ ನೆಲೆಯಲ್ಲಿ ನಿಂತು ನೋಡಿದಾಗಲಷ್ಟೇ ಕನ್ನಡಿಗರಿಗೆ ಕಾಶ್ಮೀರದ ಜನರ ಸಂಕಟ ಅರ್ಥವಾದಿತೇನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...