Homeಮುಖಪುಟ370ನೇ ವಿಧಿ ರದ್ದು: ಕರಾಳ ದಿನವೆಂದ ಮೆಹಬೂಬ ಮುಫ್ತಿ, ಸ್ವಾಗತಿಸಿದ ಧೃವ್ ರಾಠೀ...

370ನೇ ವಿಧಿ ರದ್ದು: ಕರಾಳ ದಿನವೆಂದ ಮೆಹಬೂಬ ಮುಫ್ತಿ, ಸ್ವಾಗತಿಸಿದ ಧೃವ್ ರಾಠೀ…

- Advertisement -
- Advertisement -

370ನೇ ವಿಧಿ ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಬಿ.ಎಸ್.ಪಿ, ವೈ.ಎಸ್.ಆರ್.ಪಿ, ಬಿ.ಜೆ.ಡಿ, ಟಿ.ಆರ್.ಎಸ್, ಆಮ್ ಆದ್ಮಿ ಪಕ್ಷ, ಶಿವಸೇನಾ ಪಕ್ಷಗಳು ಸ್ವಾಗತಿಸಿವೆ. ಜೆಡಿಯೂ ಸದನದಿಂದ ಹೊರನಡಿದಿದೆ.

‘ಭಾರತದ ಪ್ರಜಾತಂತ್ರದ ಕರಾಳ ದಿನ ಮತ್ತು ದೊಡ್ಡ ದುರಂತ’ ಎಂದು 370 ನೇ ವಿಧಿ ರದ್ದುಗೊಳಿಸುವ ಪ್ರಸ್ತಾಪದ ಕುರಿತು ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮ ಮತ್ತು ನಾಗರಿಕ ಸಮಾಜದ ಕೆಲವು ವಿಭಾಗಗಳು ಈ ಬೆಳವಣಿಗೆಗಳನ್ನು ಸಂತೋಷದಿಂದ ಆಚರಿಸುತ್ತಿರುವ ರೀತಿ ಅಸಹ್ಯಕರ ಮತ್ತು ಅನಾನುಕೂಲವಾಗಿದೆ. ಕೇಂದ್ರ ಸರ್ಕಾರದ ಉದ್ದೇಶ ಸ್ಪಷ್ಟ ಮತ್ತು ಕೆಟ್ಟದಾಗಿದೆ. ಅವರು ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯದ ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸಲು ಬಯಸುತ್ತಾರೆ, ಮುಸ್ಲಿಮರನ್ನು ತಮ್ಮ ರಾಜ್ಯದಲ್ಲಿ ಎರಡನೇ ದರ್ಜೆಯ ಪ್ರಜೆಗಳಾಗುವ ಮಟ್ಟಿಗೆ ನಿರಾಕರಿಸುತ್ತಾರೆ ಎಂದಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ ಪ್ರಖ್ಯಾತ ಯೂಟ್ಯೂಬರ್ ಧೃವ್ ರಾಠೀ ಕೇಂದ್ರದ ಕ್ರಮವನ್ನು ಸ್ವಾಗತಿಸಿದ್ದಾರೆ. ಅವರು

“ಇಂದು ಐತಿಹಾಸಿಕ ದಿನ!
ಆರ್ಟಿಕಲ್ 370 ಮತ್ತು 35 ಎ ಅನ್ನು ತೆಗೆದುಹಾಕಲಾಗುತ್ತದೆ
ಜಮ್ಮು ಕಾಶ್ಮೀರ ಈಗ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಲಡಾಕ್ ಶಾಸಕಾಂಗವಿಲ್ಲದೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದೆ
ಜಮ್ಮು ಕಾಶ್ಮೀರ ಭಾರತೀಯ ಸಂವಿಧಾನದ ಅಡಿಯಲ್ಲಿ ಬರುತ್ತದೆ.
ಬಿಜೆಪಿಯ ದೀರ್ಘಕಾಲದ ಭರವಸೆ ಅಂತಿಮವಾಗಿ ಈಡೇರಿದೆ. ತಾತ್ತ್ವಿಕವಾಗಿ, ಇದು ಹೆಚ್ಚಿನ ವ್ಯಾಪಾರ ಮತ್ತು ಉದ್ಯೋಗವನ್ನು ಪಡೆಯುವ ಮೂಲಕ ಕಾಶ್ಮೀರವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಇದು ಅಂತಿಮವಾಗಿ ಕಾಶ್ಮೀರ ಕಣಿವೆಯಲ್ಲಿ ಶಾಂತಿ ಮತ್ತು ಪ್ರಗತಿಯನ್ನು ತರುತ್ತದೆ ಎಂದು ನಾನು ಭಾವಿಸುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು ಇದರಿಂದ ಅಲ್ಲಿ ಅಭಿವೃದ್ದಿ ಮತ್ತು ಶಾಂತಿ ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿಯೂ ಪರ ವಿರೋಧದ ಚರ್ಚೆಗಳು ತಾರಕಕ್ಕೇರಿವೆ.

ಜನಮತಗಣನೆ ಇಲ್ಲದೆ ಒಂದು‌ ಪ್ರಾಂತ್ಯದ ಸ್ವಾಯತ್ತ ಅಧಿಕಾರವನ್ನು ಅನೂರ್ಜಿತಗೊಳಿಸುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಎಂತಹುದೇ ಕಾರಣವಿದ್ದರೂ ‘ಜನರಿಂದ ಸರ್ಕಾರ‌, ಜನರಿಂದಲೇ ದೇಶ’ ಎಂಬುದನ್ನು ಮರೆಯಬಾರದು. #370 ರದ್ದು ಮಾಡುವ ಮೊದಲು ಅಲ್ಲಿನ ಜನಮತಗಣನೆಯಾಗಬೇಕು. ಅದನ್ನು ಪ್ರಜಾಸತ್ತಾತ್ಮಕ ಮಾದರಿಯಲ್ಲಿಯೇ ರದ್ದುಗೊಳಿಸಬೇಕೇ ವಿನಃ ದೇಶವು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದಾಗ ಏಕಾಏಕಿ ಪ್ರಾಂತ್ಯದಲ್ಲಿ ಸೇನೆಯನ್ನು ಜಮಾವಣೆ ಮಾಡಿ #144 ನಿಷೇಧಾಜ್ಞೆ ಜಾರಿಗೆ ತಂದು, ನಾಗರೀಕರನ್ನು – ಜನನಾಯಕರನ್ನು ಗೃಹಬಂಧನದಲ್ಲಿಟ್ಟು , ದೆಹಲಿಯ ಒಕ್ಕೂಟ ಸರ್ಕಾರವು ತನ್ನಷ್ಟಕ್ಕೆ ತಾನೇ ನಿರ್ಧಾರ ತೆಗೆದುಕೊಳ್ಳುವುದು ಸರಕಾರಿ ದೌರ್ಜನ್ಯವಲ್ಲದೇ ಮತ್ತೇನೂ ಅಲ್ಲ. ಈ ದೇಶವನ್ನು ಅರಾಜಕತೆಗೆ ಒಡ್ಡುವಲ್ಲಿ ನಿರ್ಣಾಯಕವಾದ ನಡಾವಳಿ ಇದಾಗಲಿದೆ. ಇನ್ನು ಮುಂದೆ ಈಶಾನ್ಯ ರಾಜ್ಯಗಳು ಮತ್ತು ದಕ್ಷಿಣ ದ್ರಾವಿಡ ರಾಜ್ಯಗಳು ಅತ್ಯಂತ ಬಲವಾದ ‘ಫೆಡರಲಿಜಂ’ ಅನ್ನು ಜಾರಿಗೊಳಿಸಲು ಕಾರ್ಯಪ್ರವೃತ್ತರಾಗಬೇಕು. ಅದಾಗದೇ ಇದ್ದಲ್ಲಿ ನಮ್ಮ ಊರುಗಳಿಗೂ ಸೇನಾಪಡೆ ತಂದು ನಮ್ಮ ಎದೆಗೂ ಗುಂಡಿಕ್ಕುವ ಧೈರ್ಯವನ್ನು ದೆಹಲಿಯ ಒಕ್ಕೂಟ ಸರ್ಕಾರ ಮಾಡುವುದರಲ್ಲಿ ಅನುಮಾನವಿಲ್ಲ.

ಈ ದೇಶದಲ್ಲಿ ಇರುವುದು ಒಕ್ಕೂಟ ಸರ್ಕಾರವೇ ಹೊರತು ಸರ್ವಾಧಿಕಾರದ ಸರ್ಕಾರವಲ್ಲ! ಇದನ್ನು ದೆಹಲಿಯ ಭಂಡ ನಾಯಕರಿಗೆ ದಕ್ಷಿಣ ಮತ್ತು ಈಶಾನ್ಯರಾಜ್ಯ ಜನರು ಸರಿಯಾಗಿ ಮನಗಾಣಿಸದೇ ಹೋದಲ್ಲಿ ಅತ್ಯಂತ ಹೇಯವಾದ ಸ್ಥಿತಿಯನ್ನು ಈ ನೆಲವು ಅನುಭವಿಸುದರಲ್ಲಿ ಅನುಮಾನವಿಲ್ಲ. ಎಂದು ಯುವಸಾಹಿತಿ ರಾಜೇಂದ್ರ ಪ್ರಸಾದ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

“ಯಾವಾಗೆಲ್ಲ ದೇಶದ ಆರ್ಥಿಕತೆ ಹಳ್ಳ ಹಿಡಿಯುತ್ತೆ ಆಗ ದೇಶ ಆಳುವವರು ಜನರನ್ನು ಯುದ್ಧದ ನಶೆಗೆ ತಳ್ಳುತ್ತಾರೆ. ಜನ ಕೂಡ ಯುದ್ಧದ ಹುಚ್ಚಿನಿಂದ ನಿಜವಾದ ಸಮಸ್ಯೆಯನ್ನೆ ಮರೆತು ದೇಶ ಆಳುವವರ ಬೆಂಬಲಕ್ಕೆ ನಿಲ್ಲುತ್ತಾರೆ.

ನಾವುಗಳು ಇನ್ನು ನೂರು ಶತಮಾನ ಕಳೆದರೂ ಇತಿಹಾಸದಿಂದ ಪಾಠ ಕಲಿಯಲ್ಲ ಕಣ್ರಪ್ಪ.” ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯ ಪ್ರತಿಕ್ರಿಯಿಸಿದ್ದಾರೆ. “ಇನ್ನು ದೇಶದ ಆರ್ಥಿಕ ಹಿಂಜರಿತ ಚರ್ಚೆಗೆ ಶ್ರದ್ಧಾಂಜಲಿಗಳು ?” ಎಂದು ಸರೋವರ್ ಬೆಂಕೀಕೆರೆ ತಿಳಿಸಿದ್ದಾರೆ.

“ನಾವು ಲಡಾಕ್ ನ ಝಂಸ್ಕಾರ್ ನಲ್ಲಿದ್ದಾಗ ರಿಲಯನ್ಸ್ ಪವರ್ ನ ಕೆಲವು ಸಿಬ್ಬಂದಿ ಸೋಲಾರ್ ಪವರ್ ಪ್ಲಾಂಟ್ ಗಾಗಿ ಸರ್ವೇ ಮಾಡಲು ಬಂದಿದ್ದರು. ಇಷ್ಟು ಬೇಗ ಪ್ರಾಜೆಕ್ಟ್ ಪ್ರೊಪೊಸಲ್ ಮುಗಿದು ಸರಕಾರದ ವತಿಯಿಂದ ಕೆಲಸ ಶುರುವಾಗುತ್ತದೆ ಅಂತ ಗೊತ್ತಿರಲಿಲ್ಲ.” ಎಂದು ಶ್ರೀಹರ್ಷ ಶಾಲಿಮಠ ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...