Homeಮುಖಪುಟ370ನೇ ವಿಧಿ ರದ್ದು: ಕರಾಳ ದಿನವೆಂದ ಮೆಹಬೂಬ ಮುಫ್ತಿ, ಸ್ವಾಗತಿಸಿದ ಧೃವ್ ರಾಠೀ...

370ನೇ ವಿಧಿ ರದ್ದು: ಕರಾಳ ದಿನವೆಂದ ಮೆಹಬೂಬ ಮುಫ್ತಿ, ಸ್ವಾಗತಿಸಿದ ಧೃವ್ ರಾಠೀ…

- Advertisement -
- Advertisement -

370ನೇ ವಿಧಿ ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಬಿ.ಎಸ್.ಪಿ, ವೈ.ಎಸ್.ಆರ್.ಪಿ, ಬಿ.ಜೆ.ಡಿ, ಟಿ.ಆರ್.ಎಸ್, ಆಮ್ ಆದ್ಮಿ ಪಕ್ಷ, ಶಿವಸೇನಾ ಪಕ್ಷಗಳು ಸ್ವಾಗತಿಸಿವೆ. ಜೆಡಿಯೂ ಸದನದಿಂದ ಹೊರನಡಿದಿದೆ.

‘ಭಾರತದ ಪ್ರಜಾತಂತ್ರದ ಕರಾಳ ದಿನ ಮತ್ತು ದೊಡ್ಡ ದುರಂತ’ ಎಂದು 370 ನೇ ವಿಧಿ ರದ್ದುಗೊಳಿಸುವ ಪ್ರಸ್ತಾಪದ ಕುರಿತು ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮ ಮತ್ತು ನಾಗರಿಕ ಸಮಾಜದ ಕೆಲವು ವಿಭಾಗಗಳು ಈ ಬೆಳವಣಿಗೆಗಳನ್ನು ಸಂತೋಷದಿಂದ ಆಚರಿಸುತ್ತಿರುವ ರೀತಿ ಅಸಹ್ಯಕರ ಮತ್ತು ಅನಾನುಕೂಲವಾಗಿದೆ. ಕೇಂದ್ರ ಸರ್ಕಾರದ ಉದ್ದೇಶ ಸ್ಪಷ್ಟ ಮತ್ತು ಕೆಟ್ಟದಾಗಿದೆ. ಅವರು ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯದ ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸಲು ಬಯಸುತ್ತಾರೆ, ಮುಸ್ಲಿಮರನ್ನು ತಮ್ಮ ರಾಜ್ಯದಲ್ಲಿ ಎರಡನೇ ದರ್ಜೆಯ ಪ್ರಜೆಗಳಾಗುವ ಮಟ್ಟಿಗೆ ನಿರಾಕರಿಸುತ್ತಾರೆ ಎಂದಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ ಪ್ರಖ್ಯಾತ ಯೂಟ್ಯೂಬರ್ ಧೃವ್ ರಾಠೀ ಕೇಂದ್ರದ ಕ್ರಮವನ್ನು ಸ್ವಾಗತಿಸಿದ್ದಾರೆ. ಅವರು

“ಇಂದು ಐತಿಹಾಸಿಕ ದಿನ!
ಆರ್ಟಿಕಲ್ 370 ಮತ್ತು 35 ಎ ಅನ್ನು ತೆಗೆದುಹಾಕಲಾಗುತ್ತದೆ
ಜಮ್ಮು ಕಾಶ್ಮೀರ ಈಗ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಲಡಾಕ್ ಶಾಸಕಾಂಗವಿಲ್ಲದೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದೆ
ಜಮ್ಮು ಕಾಶ್ಮೀರ ಭಾರತೀಯ ಸಂವಿಧಾನದ ಅಡಿಯಲ್ಲಿ ಬರುತ್ತದೆ.
ಬಿಜೆಪಿಯ ದೀರ್ಘಕಾಲದ ಭರವಸೆ ಅಂತಿಮವಾಗಿ ಈಡೇರಿದೆ. ತಾತ್ತ್ವಿಕವಾಗಿ, ಇದು ಹೆಚ್ಚಿನ ವ್ಯಾಪಾರ ಮತ್ತು ಉದ್ಯೋಗವನ್ನು ಪಡೆಯುವ ಮೂಲಕ ಕಾಶ್ಮೀರವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಇದು ಅಂತಿಮವಾಗಿ ಕಾಶ್ಮೀರ ಕಣಿವೆಯಲ್ಲಿ ಶಾಂತಿ ಮತ್ತು ಪ್ರಗತಿಯನ್ನು ತರುತ್ತದೆ ಎಂದು ನಾನು ಭಾವಿಸುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು ಇದರಿಂದ ಅಲ್ಲಿ ಅಭಿವೃದ್ದಿ ಮತ್ತು ಶಾಂತಿ ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿಯೂ ಪರ ವಿರೋಧದ ಚರ್ಚೆಗಳು ತಾರಕಕ್ಕೇರಿವೆ.

ಜನಮತಗಣನೆ ಇಲ್ಲದೆ ಒಂದು‌ ಪ್ರಾಂತ್ಯದ ಸ್ವಾಯತ್ತ ಅಧಿಕಾರವನ್ನು ಅನೂರ್ಜಿತಗೊಳಿಸುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಎಂತಹುದೇ ಕಾರಣವಿದ್ದರೂ ‘ಜನರಿಂದ ಸರ್ಕಾರ‌, ಜನರಿಂದಲೇ ದೇಶ’ ಎಂಬುದನ್ನು ಮರೆಯಬಾರದು. #370 ರದ್ದು ಮಾಡುವ ಮೊದಲು ಅಲ್ಲಿನ ಜನಮತಗಣನೆಯಾಗಬೇಕು. ಅದನ್ನು ಪ್ರಜಾಸತ್ತಾತ್ಮಕ ಮಾದರಿಯಲ್ಲಿಯೇ ರದ್ದುಗೊಳಿಸಬೇಕೇ ವಿನಃ ದೇಶವು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದಾಗ ಏಕಾಏಕಿ ಪ್ರಾಂತ್ಯದಲ್ಲಿ ಸೇನೆಯನ್ನು ಜಮಾವಣೆ ಮಾಡಿ #144 ನಿಷೇಧಾಜ್ಞೆ ಜಾರಿಗೆ ತಂದು, ನಾಗರೀಕರನ್ನು – ಜನನಾಯಕರನ್ನು ಗೃಹಬಂಧನದಲ್ಲಿಟ್ಟು , ದೆಹಲಿಯ ಒಕ್ಕೂಟ ಸರ್ಕಾರವು ತನ್ನಷ್ಟಕ್ಕೆ ತಾನೇ ನಿರ್ಧಾರ ತೆಗೆದುಕೊಳ್ಳುವುದು ಸರಕಾರಿ ದೌರ್ಜನ್ಯವಲ್ಲದೇ ಮತ್ತೇನೂ ಅಲ್ಲ. ಈ ದೇಶವನ್ನು ಅರಾಜಕತೆಗೆ ಒಡ್ಡುವಲ್ಲಿ ನಿರ್ಣಾಯಕವಾದ ನಡಾವಳಿ ಇದಾಗಲಿದೆ. ಇನ್ನು ಮುಂದೆ ಈಶಾನ್ಯ ರಾಜ್ಯಗಳು ಮತ್ತು ದಕ್ಷಿಣ ದ್ರಾವಿಡ ರಾಜ್ಯಗಳು ಅತ್ಯಂತ ಬಲವಾದ ‘ಫೆಡರಲಿಜಂ’ ಅನ್ನು ಜಾರಿಗೊಳಿಸಲು ಕಾರ್ಯಪ್ರವೃತ್ತರಾಗಬೇಕು. ಅದಾಗದೇ ಇದ್ದಲ್ಲಿ ನಮ್ಮ ಊರುಗಳಿಗೂ ಸೇನಾಪಡೆ ತಂದು ನಮ್ಮ ಎದೆಗೂ ಗುಂಡಿಕ್ಕುವ ಧೈರ್ಯವನ್ನು ದೆಹಲಿಯ ಒಕ್ಕೂಟ ಸರ್ಕಾರ ಮಾಡುವುದರಲ್ಲಿ ಅನುಮಾನವಿಲ್ಲ.

ಈ ದೇಶದಲ್ಲಿ ಇರುವುದು ಒಕ್ಕೂಟ ಸರ್ಕಾರವೇ ಹೊರತು ಸರ್ವಾಧಿಕಾರದ ಸರ್ಕಾರವಲ್ಲ! ಇದನ್ನು ದೆಹಲಿಯ ಭಂಡ ನಾಯಕರಿಗೆ ದಕ್ಷಿಣ ಮತ್ತು ಈಶಾನ್ಯರಾಜ್ಯ ಜನರು ಸರಿಯಾಗಿ ಮನಗಾಣಿಸದೇ ಹೋದಲ್ಲಿ ಅತ್ಯಂತ ಹೇಯವಾದ ಸ್ಥಿತಿಯನ್ನು ಈ ನೆಲವು ಅನುಭವಿಸುದರಲ್ಲಿ ಅನುಮಾನವಿಲ್ಲ. ಎಂದು ಯುವಸಾಹಿತಿ ರಾಜೇಂದ್ರ ಪ್ರಸಾದ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

“ಯಾವಾಗೆಲ್ಲ ದೇಶದ ಆರ್ಥಿಕತೆ ಹಳ್ಳ ಹಿಡಿಯುತ್ತೆ ಆಗ ದೇಶ ಆಳುವವರು ಜನರನ್ನು ಯುದ್ಧದ ನಶೆಗೆ ತಳ್ಳುತ್ತಾರೆ. ಜನ ಕೂಡ ಯುದ್ಧದ ಹುಚ್ಚಿನಿಂದ ನಿಜವಾದ ಸಮಸ್ಯೆಯನ್ನೆ ಮರೆತು ದೇಶ ಆಳುವವರ ಬೆಂಬಲಕ್ಕೆ ನಿಲ್ಲುತ್ತಾರೆ.

ನಾವುಗಳು ಇನ್ನು ನೂರು ಶತಮಾನ ಕಳೆದರೂ ಇತಿಹಾಸದಿಂದ ಪಾಠ ಕಲಿಯಲ್ಲ ಕಣ್ರಪ್ಪ.” ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯ ಪ್ರತಿಕ್ರಿಯಿಸಿದ್ದಾರೆ. “ಇನ್ನು ದೇಶದ ಆರ್ಥಿಕ ಹಿಂಜರಿತ ಚರ್ಚೆಗೆ ಶ್ರದ್ಧಾಂಜಲಿಗಳು ?” ಎಂದು ಸರೋವರ್ ಬೆಂಕೀಕೆರೆ ತಿಳಿಸಿದ್ದಾರೆ.

“ನಾವು ಲಡಾಕ್ ನ ಝಂಸ್ಕಾರ್ ನಲ್ಲಿದ್ದಾಗ ರಿಲಯನ್ಸ್ ಪವರ್ ನ ಕೆಲವು ಸಿಬ್ಬಂದಿ ಸೋಲಾರ್ ಪವರ್ ಪ್ಲಾಂಟ್ ಗಾಗಿ ಸರ್ವೇ ಮಾಡಲು ಬಂದಿದ್ದರು. ಇಷ್ಟು ಬೇಗ ಪ್ರಾಜೆಕ್ಟ್ ಪ್ರೊಪೊಸಲ್ ಮುಗಿದು ಸರಕಾರದ ವತಿಯಿಂದ ಕೆಲಸ ಶುರುವಾಗುತ್ತದೆ ಅಂತ ಗೊತ್ತಿರಲಿಲ್ಲ.” ಎಂದು ಶ್ರೀಹರ್ಷ ಶಾಲಿಮಠ ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...