Homeಮುಖಪುಟ370ನೇ ವಿಧಿ ರದ್ದು: ಕರಾಳ ದಿನವೆಂದ ಮೆಹಬೂಬ ಮುಫ್ತಿ, ಸ್ವಾಗತಿಸಿದ ಧೃವ್ ರಾಠೀ...

370ನೇ ವಿಧಿ ರದ್ದು: ಕರಾಳ ದಿನವೆಂದ ಮೆಹಬೂಬ ಮುಫ್ತಿ, ಸ್ವಾಗತಿಸಿದ ಧೃವ್ ರಾಠೀ…

- Advertisement -
- Advertisement -

370ನೇ ವಿಧಿ ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಬಿ.ಎಸ್.ಪಿ, ವೈ.ಎಸ್.ಆರ್.ಪಿ, ಬಿ.ಜೆ.ಡಿ, ಟಿ.ಆರ್.ಎಸ್, ಆಮ್ ಆದ್ಮಿ ಪಕ್ಷ, ಶಿವಸೇನಾ ಪಕ್ಷಗಳು ಸ್ವಾಗತಿಸಿವೆ. ಜೆಡಿಯೂ ಸದನದಿಂದ ಹೊರನಡಿದಿದೆ.

‘ಭಾರತದ ಪ್ರಜಾತಂತ್ರದ ಕರಾಳ ದಿನ ಮತ್ತು ದೊಡ್ಡ ದುರಂತ’ ಎಂದು 370 ನೇ ವಿಧಿ ರದ್ದುಗೊಳಿಸುವ ಪ್ರಸ್ತಾಪದ ಕುರಿತು ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮ ಮತ್ತು ನಾಗರಿಕ ಸಮಾಜದ ಕೆಲವು ವಿಭಾಗಗಳು ಈ ಬೆಳವಣಿಗೆಗಳನ್ನು ಸಂತೋಷದಿಂದ ಆಚರಿಸುತ್ತಿರುವ ರೀತಿ ಅಸಹ್ಯಕರ ಮತ್ತು ಅನಾನುಕೂಲವಾಗಿದೆ. ಕೇಂದ್ರ ಸರ್ಕಾರದ ಉದ್ದೇಶ ಸ್ಪಷ್ಟ ಮತ್ತು ಕೆಟ್ಟದಾಗಿದೆ. ಅವರು ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯದ ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸಲು ಬಯಸುತ್ತಾರೆ, ಮುಸ್ಲಿಮರನ್ನು ತಮ್ಮ ರಾಜ್ಯದಲ್ಲಿ ಎರಡನೇ ದರ್ಜೆಯ ಪ್ರಜೆಗಳಾಗುವ ಮಟ್ಟಿಗೆ ನಿರಾಕರಿಸುತ್ತಾರೆ ಎಂದಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ ಪ್ರಖ್ಯಾತ ಯೂಟ್ಯೂಬರ್ ಧೃವ್ ರಾಠೀ ಕೇಂದ್ರದ ಕ್ರಮವನ್ನು ಸ್ವಾಗತಿಸಿದ್ದಾರೆ. ಅವರು

“ಇಂದು ಐತಿಹಾಸಿಕ ದಿನ!
ಆರ್ಟಿಕಲ್ 370 ಮತ್ತು 35 ಎ ಅನ್ನು ತೆಗೆದುಹಾಕಲಾಗುತ್ತದೆ
ಜಮ್ಮು ಕಾಶ್ಮೀರ ಈಗ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಲಡಾಕ್ ಶಾಸಕಾಂಗವಿಲ್ಲದೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದೆ
ಜಮ್ಮು ಕಾಶ್ಮೀರ ಭಾರತೀಯ ಸಂವಿಧಾನದ ಅಡಿಯಲ್ಲಿ ಬರುತ್ತದೆ.
ಬಿಜೆಪಿಯ ದೀರ್ಘಕಾಲದ ಭರವಸೆ ಅಂತಿಮವಾಗಿ ಈಡೇರಿದೆ. ತಾತ್ತ್ವಿಕವಾಗಿ, ಇದು ಹೆಚ್ಚಿನ ವ್ಯಾಪಾರ ಮತ್ತು ಉದ್ಯೋಗವನ್ನು ಪಡೆಯುವ ಮೂಲಕ ಕಾಶ್ಮೀರವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಇದು ಅಂತಿಮವಾಗಿ ಕಾಶ್ಮೀರ ಕಣಿವೆಯಲ್ಲಿ ಶಾಂತಿ ಮತ್ತು ಪ್ರಗತಿಯನ್ನು ತರುತ್ತದೆ ಎಂದು ನಾನು ಭಾವಿಸುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು ಇದರಿಂದ ಅಲ್ಲಿ ಅಭಿವೃದ್ದಿ ಮತ್ತು ಶಾಂತಿ ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿಯೂ ಪರ ವಿರೋಧದ ಚರ್ಚೆಗಳು ತಾರಕಕ್ಕೇರಿವೆ.

ಜನಮತಗಣನೆ ಇಲ್ಲದೆ ಒಂದು‌ ಪ್ರಾಂತ್ಯದ ಸ್ವಾಯತ್ತ ಅಧಿಕಾರವನ್ನು ಅನೂರ್ಜಿತಗೊಳಿಸುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಎಂತಹುದೇ ಕಾರಣವಿದ್ದರೂ ‘ಜನರಿಂದ ಸರ್ಕಾರ‌, ಜನರಿಂದಲೇ ದೇಶ’ ಎಂಬುದನ್ನು ಮರೆಯಬಾರದು. #370 ರದ್ದು ಮಾಡುವ ಮೊದಲು ಅಲ್ಲಿನ ಜನಮತಗಣನೆಯಾಗಬೇಕು. ಅದನ್ನು ಪ್ರಜಾಸತ್ತಾತ್ಮಕ ಮಾದರಿಯಲ್ಲಿಯೇ ರದ್ದುಗೊಳಿಸಬೇಕೇ ವಿನಃ ದೇಶವು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದಾಗ ಏಕಾಏಕಿ ಪ್ರಾಂತ್ಯದಲ್ಲಿ ಸೇನೆಯನ್ನು ಜಮಾವಣೆ ಮಾಡಿ #144 ನಿಷೇಧಾಜ್ಞೆ ಜಾರಿಗೆ ತಂದು, ನಾಗರೀಕರನ್ನು – ಜನನಾಯಕರನ್ನು ಗೃಹಬಂಧನದಲ್ಲಿಟ್ಟು , ದೆಹಲಿಯ ಒಕ್ಕೂಟ ಸರ್ಕಾರವು ತನ್ನಷ್ಟಕ್ಕೆ ತಾನೇ ನಿರ್ಧಾರ ತೆಗೆದುಕೊಳ್ಳುವುದು ಸರಕಾರಿ ದೌರ್ಜನ್ಯವಲ್ಲದೇ ಮತ್ತೇನೂ ಅಲ್ಲ. ಈ ದೇಶವನ್ನು ಅರಾಜಕತೆಗೆ ಒಡ್ಡುವಲ್ಲಿ ನಿರ್ಣಾಯಕವಾದ ನಡಾವಳಿ ಇದಾಗಲಿದೆ. ಇನ್ನು ಮುಂದೆ ಈಶಾನ್ಯ ರಾಜ್ಯಗಳು ಮತ್ತು ದಕ್ಷಿಣ ದ್ರಾವಿಡ ರಾಜ್ಯಗಳು ಅತ್ಯಂತ ಬಲವಾದ ‘ಫೆಡರಲಿಜಂ’ ಅನ್ನು ಜಾರಿಗೊಳಿಸಲು ಕಾರ್ಯಪ್ರವೃತ್ತರಾಗಬೇಕು. ಅದಾಗದೇ ಇದ್ದಲ್ಲಿ ನಮ್ಮ ಊರುಗಳಿಗೂ ಸೇನಾಪಡೆ ತಂದು ನಮ್ಮ ಎದೆಗೂ ಗುಂಡಿಕ್ಕುವ ಧೈರ್ಯವನ್ನು ದೆಹಲಿಯ ಒಕ್ಕೂಟ ಸರ್ಕಾರ ಮಾಡುವುದರಲ್ಲಿ ಅನುಮಾನವಿಲ್ಲ.

ಈ ದೇಶದಲ್ಲಿ ಇರುವುದು ಒಕ್ಕೂಟ ಸರ್ಕಾರವೇ ಹೊರತು ಸರ್ವಾಧಿಕಾರದ ಸರ್ಕಾರವಲ್ಲ! ಇದನ್ನು ದೆಹಲಿಯ ಭಂಡ ನಾಯಕರಿಗೆ ದಕ್ಷಿಣ ಮತ್ತು ಈಶಾನ್ಯರಾಜ್ಯ ಜನರು ಸರಿಯಾಗಿ ಮನಗಾಣಿಸದೇ ಹೋದಲ್ಲಿ ಅತ್ಯಂತ ಹೇಯವಾದ ಸ್ಥಿತಿಯನ್ನು ಈ ನೆಲವು ಅನುಭವಿಸುದರಲ್ಲಿ ಅನುಮಾನವಿಲ್ಲ. ಎಂದು ಯುವಸಾಹಿತಿ ರಾಜೇಂದ್ರ ಪ್ರಸಾದ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

“ಯಾವಾಗೆಲ್ಲ ದೇಶದ ಆರ್ಥಿಕತೆ ಹಳ್ಳ ಹಿಡಿಯುತ್ತೆ ಆಗ ದೇಶ ಆಳುವವರು ಜನರನ್ನು ಯುದ್ಧದ ನಶೆಗೆ ತಳ್ಳುತ್ತಾರೆ. ಜನ ಕೂಡ ಯುದ್ಧದ ಹುಚ್ಚಿನಿಂದ ನಿಜವಾದ ಸಮಸ್ಯೆಯನ್ನೆ ಮರೆತು ದೇಶ ಆಳುವವರ ಬೆಂಬಲಕ್ಕೆ ನಿಲ್ಲುತ್ತಾರೆ.

ನಾವುಗಳು ಇನ್ನು ನೂರು ಶತಮಾನ ಕಳೆದರೂ ಇತಿಹಾಸದಿಂದ ಪಾಠ ಕಲಿಯಲ್ಲ ಕಣ್ರಪ್ಪ.” ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯ ಪ್ರತಿಕ್ರಿಯಿಸಿದ್ದಾರೆ. “ಇನ್ನು ದೇಶದ ಆರ್ಥಿಕ ಹಿಂಜರಿತ ಚರ್ಚೆಗೆ ಶ್ರದ್ಧಾಂಜಲಿಗಳು ?” ಎಂದು ಸರೋವರ್ ಬೆಂಕೀಕೆರೆ ತಿಳಿಸಿದ್ದಾರೆ.

“ನಾವು ಲಡಾಕ್ ನ ಝಂಸ್ಕಾರ್ ನಲ್ಲಿದ್ದಾಗ ರಿಲಯನ್ಸ್ ಪವರ್ ನ ಕೆಲವು ಸಿಬ್ಬಂದಿ ಸೋಲಾರ್ ಪವರ್ ಪ್ಲಾಂಟ್ ಗಾಗಿ ಸರ್ವೇ ಮಾಡಲು ಬಂದಿದ್ದರು. ಇಷ್ಟು ಬೇಗ ಪ್ರಾಜೆಕ್ಟ್ ಪ್ರೊಪೊಸಲ್ ಮುಗಿದು ಸರಕಾರದ ವತಿಯಿಂದ ಕೆಲಸ ಶುರುವಾಗುತ್ತದೆ ಅಂತ ಗೊತ್ತಿರಲಿಲ್ಲ.” ಎಂದು ಶ್ರೀಹರ್ಷ ಶಾಲಿಮಠ ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...