Homeಮುಖಪುಟ370ನೇ ವಿಧಿ ರದ್ದು: ಕರಾಳ ದಿನವೆಂದ ಮೆಹಬೂಬ ಮುಫ್ತಿ, ಸ್ವಾಗತಿಸಿದ ಧೃವ್ ರಾಠೀ...

370ನೇ ವಿಧಿ ರದ್ದು: ಕರಾಳ ದಿನವೆಂದ ಮೆಹಬೂಬ ಮುಫ್ತಿ, ಸ್ವಾಗತಿಸಿದ ಧೃವ್ ರಾಠೀ…

- Advertisement -
- Advertisement -

370ನೇ ವಿಧಿ ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಬಿ.ಎಸ್.ಪಿ, ವೈ.ಎಸ್.ಆರ್.ಪಿ, ಬಿ.ಜೆ.ಡಿ, ಟಿ.ಆರ್.ಎಸ್, ಆಮ್ ಆದ್ಮಿ ಪಕ್ಷ, ಶಿವಸೇನಾ ಪಕ್ಷಗಳು ಸ್ವಾಗತಿಸಿವೆ. ಜೆಡಿಯೂ ಸದನದಿಂದ ಹೊರನಡಿದಿದೆ.

‘ಭಾರತದ ಪ್ರಜಾತಂತ್ರದ ಕರಾಳ ದಿನ ಮತ್ತು ದೊಡ್ಡ ದುರಂತ’ ಎಂದು 370 ನೇ ವಿಧಿ ರದ್ದುಗೊಳಿಸುವ ಪ್ರಸ್ತಾಪದ ಕುರಿತು ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮ ಮತ್ತು ನಾಗರಿಕ ಸಮಾಜದ ಕೆಲವು ವಿಭಾಗಗಳು ಈ ಬೆಳವಣಿಗೆಗಳನ್ನು ಸಂತೋಷದಿಂದ ಆಚರಿಸುತ್ತಿರುವ ರೀತಿ ಅಸಹ್ಯಕರ ಮತ್ತು ಅನಾನುಕೂಲವಾಗಿದೆ. ಕೇಂದ್ರ ಸರ್ಕಾರದ ಉದ್ದೇಶ ಸ್ಪಷ್ಟ ಮತ್ತು ಕೆಟ್ಟದಾಗಿದೆ. ಅವರು ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯದ ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸಲು ಬಯಸುತ್ತಾರೆ, ಮುಸ್ಲಿಮರನ್ನು ತಮ್ಮ ರಾಜ್ಯದಲ್ಲಿ ಎರಡನೇ ದರ್ಜೆಯ ಪ್ರಜೆಗಳಾಗುವ ಮಟ್ಟಿಗೆ ನಿರಾಕರಿಸುತ್ತಾರೆ ಎಂದಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ ಪ್ರಖ್ಯಾತ ಯೂಟ್ಯೂಬರ್ ಧೃವ್ ರಾಠೀ ಕೇಂದ್ರದ ಕ್ರಮವನ್ನು ಸ್ವಾಗತಿಸಿದ್ದಾರೆ. ಅವರು

“ಇಂದು ಐತಿಹಾಸಿಕ ದಿನ!
ಆರ್ಟಿಕಲ್ 370 ಮತ್ತು 35 ಎ ಅನ್ನು ತೆಗೆದುಹಾಕಲಾಗುತ್ತದೆ
ಜಮ್ಮು ಕಾಶ್ಮೀರ ಈಗ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಲಡಾಕ್ ಶಾಸಕಾಂಗವಿಲ್ಲದೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದೆ
ಜಮ್ಮು ಕಾಶ್ಮೀರ ಭಾರತೀಯ ಸಂವಿಧಾನದ ಅಡಿಯಲ್ಲಿ ಬರುತ್ತದೆ.
ಬಿಜೆಪಿಯ ದೀರ್ಘಕಾಲದ ಭರವಸೆ ಅಂತಿಮವಾಗಿ ಈಡೇರಿದೆ. ತಾತ್ತ್ವಿಕವಾಗಿ, ಇದು ಹೆಚ್ಚಿನ ವ್ಯಾಪಾರ ಮತ್ತು ಉದ್ಯೋಗವನ್ನು ಪಡೆಯುವ ಮೂಲಕ ಕಾಶ್ಮೀರವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಇದು ಅಂತಿಮವಾಗಿ ಕಾಶ್ಮೀರ ಕಣಿವೆಯಲ್ಲಿ ಶಾಂತಿ ಮತ್ತು ಪ್ರಗತಿಯನ್ನು ತರುತ್ತದೆ ಎಂದು ನಾನು ಭಾವಿಸುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು ಇದರಿಂದ ಅಲ್ಲಿ ಅಭಿವೃದ್ದಿ ಮತ್ತು ಶಾಂತಿ ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿಯೂ ಪರ ವಿರೋಧದ ಚರ್ಚೆಗಳು ತಾರಕಕ್ಕೇರಿವೆ.

ಜನಮತಗಣನೆ ಇಲ್ಲದೆ ಒಂದು‌ ಪ್ರಾಂತ್ಯದ ಸ್ವಾಯತ್ತ ಅಧಿಕಾರವನ್ನು ಅನೂರ್ಜಿತಗೊಳಿಸುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಎಂತಹುದೇ ಕಾರಣವಿದ್ದರೂ ‘ಜನರಿಂದ ಸರ್ಕಾರ‌, ಜನರಿಂದಲೇ ದೇಶ’ ಎಂಬುದನ್ನು ಮರೆಯಬಾರದು. #370 ರದ್ದು ಮಾಡುವ ಮೊದಲು ಅಲ್ಲಿನ ಜನಮತಗಣನೆಯಾಗಬೇಕು. ಅದನ್ನು ಪ್ರಜಾಸತ್ತಾತ್ಮಕ ಮಾದರಿಯಲ್ಲಿಯೇ ರದ್ದುಗೊಳಿಸಬೇಕೇ ವಿನಃ ದೇಶವು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದಾಗ ಏಕಾಏಕಿ ಪ್ರಾಂತ್ಯದಲ್ಲಿ ಸೇನೆಯನ್ನು ಜಮಾವಣೆ ಮಾಡಿ #144 ನಿಷೇಧಾಜ್ಞೆ ಜಾರಿಗೆ ತಂದು, ನಾಗರೀಕರನ್ನು – ಜನನಾಯಕರನ್ನು ಗೃಹಬಂಧನದಲ್ಲಿಟ್ಟು , ದೆಹಲಿಯ ಒಕ್ಕೂಟ ಸರ್ಕಾರವು ತನ್ನಷ್ಟಕ್ಕೆ ತಾನೇ ನಿರ್ಧಾರ ತೆಗೆದುಕೊಳ್ಳುವುದು ಸರಕಾರಿ ದೌರ್ಜನ್ಯವಲ್ಲದೇ ಮತ್ತೇನೂ ಅಲ್ಲ. ಈ ದೇಶವನ್ನು ಅರಾಜಕತೆಗೆ ಒಡ್ಡುವಲ್ಲಿ ನಿರ್ಣಾಯಕವಾದ ನಡಾವಳಿ ಇದಾಗಲಿದೆ. ಇನ್ನು ಮುಂದೆ ಈಶಾನ್ಯ ರಾಜ್ಯಗಳು ಮತ್ತು ದಕ್ಷಿಣ ದ್ರಾವಿಡ ರಾಜ್ಯಗಳು ಅತ್ಯಂತ ಬಲವಾದ ‘ಫೆಡರಲಿಜಂ’ ಅನ್ನು ಜಾರಿಗೊಳಿಸಲು ಕಾರ್ಯಪ್ರವೃತ್ತರಾಗಬೇಕು. ಅದಾಗದೇ ಇದ್ದಲ್ಲಿ ನಮ್ಮ ಊರುಗಳಿಗೂ ಸೇನಾಪಡೆ ತಂದು ನಮ್ಮ ಎದೆಗೂ ಗುಂಡಿಕ್ಕುವ ಧೈರ್ಯವನ್ನು ದೆಹಲಿಯ ಒಕ್ಕೂಟ ಸರ್ಕಾರ ಮಾಡುವುದರಲ್ಲಿ ಅನುಮಾನವಿಲ್ಲ.

ಈ ದೇಶದಲ್ಲಿ ಇರುವುದು ಒಕ್ಕೂಟ ಸರ್ಕಾರವೇ ಹೊರತು ಸರ್ವಾಧಿಕಾರದ ಸರ್ಕಾರವಲ್ಲ! ಇದನ್ನು ದೆಹಲಿಯ ಭಂಡ ನಾಯಕರಿಗೆ ದಕ್ಷಿಣ ಮತ್ತು ಈಶಾನ್ಯರಾಜ್ಯ ಜನರು ಸರಿಯಾಗಿ ಮನಗಾಣಿಸದೇ ಹೋದಲ್ಲಿ ಅತ್ಯಂತ ಹೇಯವಾದ ಸ್ಥಿತಿಯನ್ನು ಈ ನೆಲವು ಅನುಭವಿಸುದರಲ್ಲಿ ಅನುಮಾನವಿಲ್ಲ. ಎಂದು ಯುವಸಾಹಿತಿ ರಾಜೇಂದ್ರ ಪ್ರಸಾದ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

“ಯಾವಾಗೆಲ್ಲ ದೇಶದ ಆರ್ಥಿಕತೆ ಹಳ್ಳ ಹಿಡಿಯುತ್ತೆ ಆಗ ದೇಶ ಆಳುವವರು ಜನರನ್ನು ಯುದ್ಧದ ನಶೆಗೆ ತಳ್ಳುತ್ತಾರೆ. ಜನ ಕೂಡ ಯುದ್ಧದ ಹುಚ್ಚಿನಿಂದ ನಿಜವಾದ ಸಮಸ್ಯೆಯನ್ನೆ ಮರೆತು ದೇಶ ಆಳುವವರ ಬೆಂಬಲಕ್ಕೆ ನಿಲ್ಲುತ್ತಾರೆ.

ನಾವುಗಳು ಇನ್ನು ನೂರು ಶತಮಾನ ಕಳೆದರೂ ಇತಿಹಾಸದಿಂದ ಪಾಠ ಕಲಿಯಲ್ಲ ಕಣ್ರಪ್ಪ.” ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯ ಪ್ರತಿಕ್ರಿಯಿಸಿದ್ದಾರೆ. “ಇನ್ನು ದೇಶದ ಆರ್ಥಿಕ ಹಿಂಜರಿತ ಚರ್ಚೆಗೆ ಶ್ರದ್ಧಾಂಜಲಿಗಳು ?” ಎಂದು ಸರೋವರ್ ಬೆಂಕೀಕೆರೆ ತಿಳಿಸಿದ್ದಾರೆ.

“ನಾವು ಲಡಾಕ್ ನ ಝಂಸ್ಕಾರ್ ನಲ್ಲಿದ್ದಾಗ ರಿಲಯನ್ಸ್ ಪವರ್ ನ ಕೆಲವು ಸಿಬ್ಬಂದಿ ಸೋಲಾರ್ ಪವರ್ ಪ್ಲಾಂಟ್ ಗಾಗಿ ಸರ್ವೇ ಮಾಡಲು ಬಂದಿದ್ದರು. ಇಷ್ಟು ಬೇಗ ಪ್ರಾಜೆಕ್ಟ್ ಪ್ರೊಪೊಸಲ್ ಮುಗಿದು ಸರಕಾರದ ವತಿಯಿಂದ ಕೆಲಸ ಶುರುವಾಗುತ್ತದೆ ಅಂತ ಗೊತ್ತಿರಲಿಲ್ಲ.” ಎಂದು ಶ್ರೀಹರ್ಷ ಶಾಲಿಮಠ ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...