Homeಮುಖಪುಟ370ನೇ ವಿಧಿ ರದ್ದು: ಕರಾಳ ದಿನವೆಂದ ಮೆಹಬೂಬ ಮುಫ್ತಿ, ಸ್ವಾಗತಿಸಿದ ಧೃವ್ ರಾಠೀ...

370ನೇ ವಿಧಿ ರದ್ದು: ಕರಾಳ ದಿನವೆಂದ ಮೆಹಬೂಬ ಮುಫ್ತಿ, ಸ್ವಾಗತಿಸಿದ ಧೃವ್ ರಾಠೀ…

- Advertisement -
- Advertisement -

370ನೇ ವಿಧಿ ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಬಿ.ಎಸ್.ಪಿ, ವೈ.ಎಸ್.ಆರ್.ಪಿ, ಬಿ.ಜೆ.ಡಿ, ಟಿ.ಆರ್.ಎಸ್, ಆಮ್ ಆದ್ಮಿ ಪಕ್ಷ, ಶಿವಸೇನಾ ಪಕ್ಷಗಳು ಸ್ವಾಗತಿಸಿವೆ. ಜೆಡಿಯೂ ಸದನದಿಂದ ಹೊರನಡಿದಿದೆ.

‘ಭಾರತದ ಪ್ರಜಾತಂತ್ರದ ಕರಾಳ ದಿನ ಮತ್ತು ದೊಡ್ಡ ದುರಂತ’ ಎಂದು 370 ನೇ ವಿಧಿ ರದ್ದುಗೊಳಿಸುವ ಪ್ರಸ್ತಾಪದ ಕುರಿತು ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮ ಮತ್ತು ನಾಗರಿಕ ಸಮಾಜದ ಕೆಲವು ವಿಭಾಗಗಳು ಈ ಬೆಳವಣಿಗೆಗಳನ್ನು ಸಂತೋಷದಿಂದ ಆಚರಿಸುತ್ತಿರುವ ರೀತಿ ಅಸಹ್ಯಕರ ಮತ್ತು ಅನಾನುಕೂಲವಾಗಿದೆ. ಕೇಂದ್ರ ಸರ್ಕಾರದ ಉದ್ದೇಶ ಸ್ಪಷ್ಟ ಮತ್ತು ಕೆಟ್ಟದಾಗಿದೆ. ಅವರು ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯದ ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸಲು ಬಯಸುತ್ತಾರೆ, ಮುಸ್ಲಿಮರನ್ನು ತಮ್ಮ ರಾಜ್ಯದಲ್ಲಿ ಎರಡನೇ ದರ್ಜೆಯ ಪ್ರಜೆಗಳಾಗುವ ಮಟ್ಟಿಗೆ ನಿರಾಕರಿಸುತ್ತಾರೆ ಎಂದಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ ಪ್ರಖ್ಯಾತ ಯೂಟ್ಯೂಬರ್ ಧೃವ್ ರಾಠೀ ಕೇಂದ್ರದ ಕ್ರಮವನ್ನು ಸ್ವಾಗತಿಸಿದ್ದಾರೆ. ಅವರು

“ಇಂದು ಐತಿಹಾಸಿಕ ದಿನ!
ಆರ್ಟಿಕಲ್ 370 ಮತ್ತು 35 ಎ ಅನ್ನು ತೆಗೆದುಹಾಕಲಾಗುತ್ತದೆ
ಜಮ್ಮು ಕಾಶ್ಮೀರ ಈಗ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಲಡಾಕ್ ಶಾಸಕಾಂಗವಿಲ್ಲದೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದೆ
ಜಮ್ಮು ಕಾಶ್ಮೀರ ಭಾರತೀಯ ಸಂವಿಧಾನದ ಅಡಿಯಲ್ಲಿ ಬರುತ್ತದೆ.
ಬಿಜೆಪಿಯ ದೀರ್ಘಕಾಲದ ಭರವಸೆ ಅಂತಿಮವಾಗಿ ಈಡೇರಿದೆ. ತಾತ್ತ್ವಿಕವಾಗಿ, ಇದು ಹೆಚ್ಚಿನ ವ್ಯಾಪಾರ ಮತ್ತು ಉದ್ಯೋಗವನ್ನು ಪಡೆಯುವ ಮೂಲಕ ಕಾಶ್ಮೀರವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಇದು ಅಂತಿಮವಾಗಿ ಕಾಶ್ಮೀರ ಕಣಿವೆಯಲ್ಲಿ ಶಾಂತಿ ಮತ್ತು ಪ್ರಗತಿಯನ್ನು ತರುತ್ತದೆ ಎಂದು ನಾನು ಭಾವಿಸುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು ಇದರಿಂದ ಅಲ್ಲಿ ಅಭಿವೃದ್ದಿ ಮತ್ತು ಶಾಂತಿ ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿಯೂ ಪರ ವಿರೋಧದ ಚರ್ಚೆಗಳು ತಾರಕಕ್ಕೇರಿವೆ.

ಜನಮತಗಣನೆ ಇಲ್ಲದೆ ಒಂದು‌ ಪ್ರಾಂತ್ಯದ ಸ್ವಾಯತ್ತ ಅಧಿಕಾರವನ್ನು ಅನೂರ್ಜಿತಗೊಳಿಸುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಎಂತಹುದೇ ಕಾರಣವಿದ್ದರೂ ‘ಜನರಿಂದ ಸರ್ಕಾರ‌, ಜನರಿಂದಲೇ ದೇಶ’ ಎಂಬುದನ್ನು ಮರೆಯಬಾರದು. #370 ರದ್ದು ಮಾಡುವ ಮೊದಲು ಅಲ್ಲಿನ ಜನಮತಗಣನೆಯಾಗಬೇಕು. ಅದನ್ನು ಪ್ರಜಾಸತ್ತಾತ್ಮಕ ಮಾದರಿಯಲ್ಲಿಯೇ ರದ್ದುಗೊಳಿಸಬೇಕೇ ವಿನಃ ದೇಶವು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದಾಗ ಏಕಾಏಕಿ ಪ್ರಾಂತ್ಯದಲ್ಲಿ ಸೇನೆಯನ್ನು ಜಮಾವಣೆ ಮಾಡಿ #144 ನಿಷೇಧಾಜ್ಞೆ ಜಾರಿಗೆ ತಂದು, ನಾಗರೀಕರನ್ನು – ಜನನಾಯಕರನ್ನು ಗೃಹಬಂಧನದಲ್ಲಿಟ್ಟು , ದೆಹಲಿಯ ಒಕ್ಕೂಟ ಸರ್ಕಾರವು ತನ್ನಷ್ಟಕ್ಕೆ ತಾನೇ ನಿರ್ಧಾರ ತೆಗೆದುಕೊಳ್ಳುವುದು ಸರಕಾರಿ ದೌರ್ಜನ್ಯವಲ್ಲದೇ ಮತ್ತೇನೂ ಅಲ್ಲ. ಈ ದೇಶವನ್ನು ಅರಾಜಕತೆಗೆ ಒಡ್ಡುವಲ್ಲಿ ನಿರ್ಣಾಯಕವಾದ ನಡಾವಳಿ ಇದಾಗಲಿದೆ. ಇನ್ನು ಮುಂದೆ ಈಶಾನ್ಯ ರಾಜ್ಯಗಳು ಮತ್ತು ದಕ್ಷಿಣ ದ್ರಾವಿಡ ರಾಜ್ಯಗಳು ಅತ್ಯಂತ ಬಲವಾದ ‘ಫೆಡರಲಿಜಂ’ ಅನ್ನು ಜಾರಿಗೊಳಿಸಲು ಕಾರ್ಯಪ್ರವೃತ್ತರಾಗಬೇಕು. ಅದಾಗದೇ ಇದ್ದಲ್ಲಿ ನಮ್ಮ ಊರುಗಳಿಗೂ ಸೇನಾಪಡೆ ತಂದು ನಮ್ಮ ಎದೆಗೂ ಗುಂಡಿಕ್ಕುವ ಧೈರ್ಯವನ್ನು ದೆಹಲಿಯ ಒಕ್ಕೂಟ ಸರ್ಕಾರ ಮಾಡುವುದರಲ್ಲಿ ಅನುಮಾನವಿಲ್ಲ.

ಈ ದೇಶದಲ್ಲಿ ಇರುವುದು ಒಕ್ಕೂಟ ಸರ್ಕಾರವೇ ಹೊರತು ಸರ್ವಾಧಿಕಾರದ ಸರ್ಕಾರವಲ್ಲ! ಇದನ್ನು ದೆಹಲಿಯ ಭಂಡ ನಾಯಕರಿಗೆ ದಕ್ಷಿಣ ಮತ್ತು ಈಶಾನ್ಯರಾಜ್ಯ ಜನರು ಸರಿಯಾಗಿ ಮನಗಾಣಿಸದೇ ಹೋದಲ್ಲಿ ಅತ್ಯಂತ ಹೇಯವಾದ ಸ್ಥಿತಿಯನ್ನು ಈ ನೆಲವು ಅನುಭವಿಸುದರಲ್ಲಿ ಅನುಮಾನವಿಲ್ಲ. ಎಂದು ಯುವಸಾಹಿತಿ ರಾಜೇಂದ್ರ ಪ್ರಸಾದ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

“ಯಾವಾಗೆಲ್ಲ ದೇಶದ ಆರ್ಥಿಕತೆ ಹಳ್ಳ ಹಿಡಿಯುತ್ತೆ ಆಗ ದೇಶ ಆಳುವವರು ಜನರನ್ನು ಯುದ್ಧದ ನಶೆಗೆ ತಳ್ಳುತ್ತಾರೆ. ಜನ ಕೂಡ ಯುದ್ಧದ ಹುಚ್ಚಿನಿಂದ ನಿಜವಾದ ಸಮಸ್ಯೆಯನ್ನೆ ಮರೆತು ದೇಶ ಆಳುವವರ ಬೆಂಬಲಕ್ಕೆ ನಿಲ್ಲುತ್ತಾರೆ.

ನಾವುಗಳು ಇನ್ನು ನೂರು ಶತಮಾನ ಕಳೆದರೂ ಇತಿಹಾಸದಿಂದ ಪಾಠ ಕಲಿಯಲ್ಲ ಕಣ್ರಪ್ಪ.” ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯ ಪ್ರತಿಕ್ರಿಯಿಸಿದ್ದಾರೆ. “ಇನ್ನು ದೇಶದ ಆರ್ಥಿಕ ಹಿಂಜರಿತ ಚರ್ಚೆಗೆ ಶ್ರದ್ಧಾಂಜಲಿಗಳು ?” ಎಂದು ಸರೋವರ್ ಬೆಂಕೀಕೆರೆ ತಿಳಿಸಿದ್ದಾರೆ.

“ನಾವು ಲಡಾಕ್ ನ ಝಂಸ್ಕಾರ್ ನಲ್ಲಿದ್ದಾಗ ರಿಲಯನ್ಸ್ ಪವರ್ ನ ಕೆಲವು ಸಿಬ್ಬಂದಿ ಸೋಲಾರ್ ಪವರ್ ಪ್ಲಾಂಟ್ ಗಾಗಿ ಸರ್ವೇ ಮಾಡಲು ಬಂದಿದ್ದರು. ಇಷ್ಟು ಬೇಗ ಪ್ರಾಜೆಕ್ಟ್ ಪ್ರೊಪೊಸಲ್ ಮುಗಿದು ಸರಕಾರದ ವತಿಯಿಂದ ಕೆಲಸ ಶುರುವಾಗುತ್ತದೆ ಅಂತ ಗೊತ್ತಿರಲಿಲ್ಲ.” ಎಂದು ಶ್ರೀಹರ್ಷ ಶಾಲಿಮಠ ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...