Homeಮುಖಪುಟ370ನೇ ವಿಧಿ ರದ್ದು: ಕರಾಳ ದಿನವೆಂದ ಮೆಹಬೂಬ ಮುಫ್ತಿ, ಸ್ವಾಗತಿಸಿದ ಧೃವ್ ರಾಠೀ...

370ನೇ ವಿಧಿ ರದ್ದು: ಕರಾಳ ದಿನವೆಂದ ಮೆಹಬೂಬ ಮುಫ್ತಿ, ಸ್ವಾಗತಿಸಿದ ಧೃವ್ ರಾಠೀ…

- Advertisement -
- Advertisement -

370ನೇ ವಿಧಿ ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಬಿ.ಎಸ್.ಪಿ, ವೈ.ಎಸ್.ಆರ್.ಪಿ, ಬಿ.ಜೆ.ಡಿ, ಟಿ.ಆರ್.ಎಸ್, ಆಮ್ ಆದ್ಮಿ ಪಕ್ಷ, ಶಿವಸೇನಾ ಪಕ್ಷಗಳು ಸ್ವಾಗತಿಸಿವೆ. ಜೆಡಿಯೂ ಸದನದಿಂದ ಹೊರನಡಿದಿದೆ.

‘ಭಾರತದ ಪ್ರಜಾತಂತ್ರದ ಕರಾಳ ದಿನ ಮತ್ತು ದೊಡ್ಡ ದುರಂತ’ ಎಂದು 370 ನೇ ವಿಧಿ ರದ್ದುಗೊಳಿಸುವ ಪ್ರಸ್ತಾಪದ ಕುರಿತು ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮ ಮತ್ತು ನಾಗರಿಕ ಸಮಾಜದ ಕೆಲವು ವಿಭಾಗಗಳು ಈ ಬೆಳವಣಿಗೆಗಳನ್ನು ಸಂತೋಷದಿಂದ ಆಚರಿಸುತ್ತಿರುವ ರೀತಿ ಅಸಹ್ಯಕರ ಮತ್ತು ಅನಾನುಕೂಲವಾಗಿದೆ. ಕೇಂದ್ರ ಸರ್ಕಾರದ ಉದ್ದೇಶ ಸ್ಪಷ್ಟ ಮತ್ತು ಕೆಟ್ಟದಾಗಿದೆ. ಅವರು ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯದ ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸಲು ಬಯಸುತ್ತಾರೆ, ಮುಸ್ಲಿಮರನ್ನು ತಮ್ಮ ರಾಜ್ಯದಲ್ಲಿ ಎರಡನೇ ದರ್ಜೆಯ ಪ್ರಜೆಗಳಾಗುವ ಮಟ್ಟಿಗೆ ನಿರಾಕರಿಸುತ್ತಾರೆ ಎಂದಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ ಪ್ರಖ್ಯಾತ ಯೂಟ್ಯೂಬರ್ ಧೃವ್ ರಾಠೀ ಕೇಂದ್ರದ ಕ್ರಮವನ್ನು ಸ್ವಾಗತಿಸಿದ್ದಾರೆ. ಅವರು

“ಇಂದು ಐತಿಹಾಸಿಕ ದಿನ!
ಆರ್ಟಿಕಲ್ 370 ಮತ್ತು 35 ಎ ಅನ್ನು ತೆಗೆದುಹಾಕಲಾಗುತ್ತದೆ
ಜಮ್ಮು ಕಾಶ್ಮೀರ ಈಗ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಲಡಾಕ್ ಶಾಸಕಾಂಗವಿಲ್ಲದೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದೆ
ಜಮ್ಮು ಕಾಶ್ಮೀರ ಭಾರತೀಯ ಸಂವಿಧಾನದ ಅಡಿಯಲ್ಲಿ ಬರುತ್ತದೆ.
ಬಿಜೆಪಿಯ ದೀರ್ಘಕಾಲದ ಭರವಸೆ ಅಂತಿಮವಾಗಿ ಈಡೇರಿದೆ. ತಾತ್ತ್ವಿಕವಾಗಿ, ಇದು ಹೆಚ್ಚಿನ ವ್ಯಾಪಾರ ಮತ್ತು ಉದ್ಯೋಗವನ್ನು ಪಡೆಯುವ ಮೂಲಕ ಕಾಶ್ಮೀರವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಇದು ಅಂತಿಮವಾಗಿ ಕಾಶ್ಮೀರ ಕಣಿವೆಯಲ್ಲಿ ಶಾಂತಿ ಮತ್ತು ಪ್ರಗತಿಯನ್ನು ತರುತ್ತದೆ ಎಂದು ನಾನು ಭಾವಿಸುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು ಇದರಿಂದ ಅಲ್ಲಿ ಅಭಿವೃದ್ದಿ ಮತ್ತು ಶಾಂತಿ ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿಯೂ ಪರ ವಿರೋಧದ ಚರ್ಚೆಗಳು ತಾರಕಕ್ಕೇರಿವೆ.

ಜನಮತಗಣನೆ ಇಲ್ಲದೆ ಒಂದು‌ ಪ್ರಾಂತ್ಯದ ಸ್ವಾಯತ್ತ ಅಧಿಕಾರವನ್ನು ಅನೂರ್ಜಿತಗೊಳಿಸುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಎಂತಹುದೇ ಕಾರಣವಿದ್ದರೂ ‘ಜನರಿಂದ ಸರ್ಕಾರ‌, ಜನರಿಂದಲೇ ದೇಶ’ ಎಂಬುದನ್ನು ಮರೆಯಬಾರದು. #370 ರದ್ದು ಮಾಡುವ ಮೊದಲು ಅಲ್ಲಿನ ಜನಮತಗಣನೆಯಾಗಬೇಕು. ಅದನ್ನು ಪ್ರಜಾಸತ್ತಾತ್ಮಕ ಮಾದರಿಯಲ್ಲಿಯೇ ರದ್ದುಗೊಳಿಸಬೇಕೇ ವಿನಃ ದೇಶವು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದಾಗ ಏಕಾಏಕಿ ಪ್ರಾಂತ್ಯದಲ್ಲಿ ಸೇನೆಯನ್ನು ಜಮಾವಣೆ ಮಾಡಿ #144 ನಿಷೇಧಾಜ್ಞೆ ಜಾರಿಗೆ ತಂದು, ನಾಗರೀಕರನ್ನು – ಜನನಾಯಕರನ್ನು ಗೃಹಬಂಧನದಲ್ಲಿಟ್ಟು , ದೆಹಲಿಯ ಒಕ್ಕೂಟ ಸರ್ಕಾರವು ತನ್ನಷ್ಟಕ್ಕೆ ತಾನೇ ನಿರ್ಧಾರ ತೆಗೆದುಕೊಳ್ಳುವುದು ಸರಕಾರಿ ದೌರ್ಜನ್ಯವಲ್ಲದೇ ಮತ್ತೇನೂ ಅಲ್ಲ. ಈ ದೇಶವನ್ನು ಅರಾಜಕತೆಗೆ ಒಡ್ಡುವಲ್ಲಿ ನಿರ್ಣಾಯಕವಾದ ನಡಾವಳಿ ಇದಾಗಲಿದೆ. ಇನ್ನು ಮುಂದೆ ಈಶಾನ್ಯ ರಾಜ್ಯಗಳು ಮತ್ತು ದಕ್ಷಿಣ ದ್ರಾವಿಡ ರಾಜ್ಯಗಳು ಅತ್ಯಂತ ಬಲವಾದ ‘ಫೆಡರಲಿಜಂ’ ಅನ್ನು ಜಾರಿಗೊಳಿಸಲು ಕಾರ್ಯಪ್ರವೃತ್ತರಾಗಬೇಕು. ಅದಾಗದೇ ಇದ್ದಲ್ಲಿ ನಮ್ಮ ಊರುಗಳಿಗೂ ಸೇನಾಪಡೆ ತಂದು ನಮ್ಮ ಎದೆಗೂ ಗುಂಡಿಕ್ಕುವ ಧೈರ್ಯವನ್ನು ದೆಹಲಿಯ ಒಕ್ಕೂಟ ಸರ್ಕಾರ ಮಾಡುವುದರಲ್ಲಿ ಅನುಮಾನವಿಲ್ಲ.

ಈ ದೇಶದಲ್ಲಿ ಇರುವುದು ಒಕ್ಕೂಟ ಸರ್ಕಾರವೇ ಹೊರತು ಸರ್ವಾಧಿಕಾರದ ಸರ್ಕಾರವಲ್ಲ! ಇದನ್ನು ದೆಹಲಿಯ ಭಂಡ ನಾಯಕರಿಗೆ ದಕ್ಷಿಣ ಮತ್ತು ಈಶಾನ್ಯರಾಜ್ಯ ಜನರು ಸರಿಯಾಗಿ ಮನಗಾಣಿಸದೇ ಹೋದಲ್ಲಿ ಅತ್ಯಂತ ಹೇಯವಾದ ಸ್ಥಿತಿಯನ್ನು ಈ ನೆಲವು ಅನುಭವಿಸುದರಲ್ಲಿ ಅನುಮಾನವಿಲ್ಲ. ಎಂದು ಯುವಸಾಹಿತಿ ರಾಜೇಂದ್ರ ಪ್ರಸಾದ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

“ಯಾವಾಗೆಲ್ಲ ದೇಶದ ಆರ್ಥಿಕತೆ ಹಳ್ಳ ಹಿಡಿಯುತ್ತೆ ಆಗ ದೇಶ ಆಳುವವರು ಜನರನ್ನು ಯುದ್ಧದ ನಶೆಗೆ ತಳ್ಳುತ್ತಾರೆ. ಜನ ಕೂಡ ಯುದ್ಧದ ಹುಚ್ಚಿನಿಂದ ನಿಜವಾದ ಸಮಸ್ಯೆಯನ್ನೆ ಮರೆತು ದೇಶ ಆಳುವವರ ಬೆಂಬಲಕ್ಕೆ ನಿಲ್ಲುತ್ತಾರೆ.

ನಾವುಗಳು ಇನ್ನು ನೂರು ಶತಮಾನ ಕಳೆದರೂ ಇತಿಹಾಸದಿಂದ ಪಾಠ ಕಲಿಯಲ್ಲ ಕಣ್ರಪ್ಪ.” ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯ ಪ್ರತಿಕ್ರಿಯಿಸಿದ್ದಾರೆ. “ಇನ್ನು ದೇಶದ ಆರ್ಥಿಕ ಹಿಂಜರಿತ ಚರ್ಚೆಗೆ ಶ್ರದ್ಧಾಂಜಲಿಗಳು ?” ಎಂದು ಸರೋವರ್ ಬೆಂಕೀಕೆರೆ ತಿಳಿಸಿದ್ದಾರೆ.

“ನಾವು ಲಡಾಕ್ ನ ಝಂಸ್ಕಾರ್ ನಲ್ಲಿದ್ದಾಗ ರಿಲಯನ್ಸ್ ಪವರ್ ನ ಕೆಲವು ಸಿಬ್ಬಂದಿ ಸೋಲಾರ್ ಪವರ್ ಪ್ಲಾಂಟ್ ಗಾಗಿ ಸರ್ವೇ ಮಾಡಲು ಬಂದಿದ್ದರು. ಇಷ್ಟು ಬೇಗ ಪ್ರಾಜೆಕ್ಟ್ ಪ್ರೊಪೊಸಲ್ ಮುಗಿದು ಸರಕಾರದ ವತಿಯಿಂದ ಕೆಲಸ ಶುರುವಾಗುತ್ತದೆ ಅಂತ ಗೊತ್ತಿರಲಿಲ್ಲ.” ಎಂದು ಶ್ರೀಹರ್ಷ ಶಾಲಿಮಠ ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...