Homeಮುಖಪುಟಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

ಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ಒಂದು ದಿನದ ನಂತರ, ಶೋಪಿಯಾನ್ ಜಿಲ್ಲೆಯ ಸಿಆರ್‌ಪಿಎಫ್ ಕ್ಯಾಂಪ್ ಬಳಿ ಭಾನುವಾರ ಬೆಳಿಗ್ಗೆ 20 ವರ್ಷದ ನಾಗರಿಕನನ್ನು ಅನುಮಾನಾಸ್ಪದ ವ್ಯಕ್ತಿಯೆಂದು ಗುಂಡಿಕ್ಕಿ ಕೊಲ್ಲಲಾಗಿದೆ.

ಮೃತರನ್ನು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದ ನಿವಾಸಿ ಶಾಹಿದ್ ಅಹ್ಮದ್ ರಾಥರ್ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುತಿಸಿದ್ದಾರೆ. ದಿನಗೂಲಿ ಕಾರ್ಮಿಕನಾಗಿದ್ದ ಶಾಹಿದ್‌ರನ್ನು ಸೇಬು ಬೆಳೆ ಕೊಯ್ಲು ಮಾಡಲು ಸಹಾಯಕ್ಕಾಗಿ ರೈತರೊಬ್ಬರು ಕರೆತಂದಿದ್ದರು ಎಂದು ವರದಿಯಾಗಿದೆ.

‘ದಿ ವೈರ್’ ಜಾಲತಾಣದೊಂದಿಗೆ ಮಾತನಾಡಿರುವ ಶಾಹಿದ್ ಅಹಮದ್‌ ರಾಥರ್‌ ಅವರ ಸಹೋದರ ಜುಬೈರ್‌‌ ಅಹಮದ್ ರಾಥರ್‌, “ಈ ಘಟನೆ ನಡೆದ ದಿನ (ಭಾನುವಾರ ಬೆಳಿಗ್ಗೆ) ಶಾಹಿದ್‌ ತನ್ನ ಮನೆಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಬಂದಿದ್ದರು. ಜೈನಾಪುರದಲ್ಲಿ ಅವರಿಗಿಂತ ಸ್ವಲ್ಪ ಮೀಟರ್‌ಗಳ ದೂರದಲ್ಲಿ ನಡೆಯುತ್ತಿದ್ದಾಗ ಸಿಆರ್‌ಪಿಎಫ್‌ ಗುಂಪು ಶಾಹಿದ್‌ ಮೇಲೆ ಗುಂಡು ಹಾರಿಸಿದೆ” ಎಂದು ಆರೋಪಿಸಿದ್ದಾರೆ.

ಶಾಹಿದ್ ಅಹಮದ್‌ ರಾಥರ್‌ ಅವರ ಸಹೋದರ ಜುಬೈರ್‌‌ ಅಹಮದ್ ರಾಥರ್‌ ದುಃಖಿಸುತ್ತಿರುವುದು. (PC: The Wire)

“ಇದು ಉದ್ದೇಶಿತ ಹತ್ಯೆ” ಎನ್ನುತ್ತಾ ಗದ್ಗದಿತನಾಗಿ ಮಾತು ಮುಂದುವರಿದ ಜಬೈರ್‌‌, “ಅತ್ಯಂತ ಅಮಾನುಷವಾಗಿ ಅವರು ಕೊಂದಿದ್ದಾರೆ. ಈ ಪ್ರಾಂತ್ಯದಲ್ಲಿ ಬಂದೂಕು ಜಳುಪಿಸಿರಲಿಲ್ಲ. ಆದರೆ ನಮ್ಮೊಂದಿಗೆ ಆಗಿದೆ. ಇದು ಎಲ್ಲಿ ಬೇಕಾದರೂ ಆಗಬಹುದು. ಅಮಾಯಕರನ್ನು ಕೊಲ್ಲುತ್ತಿರುವ ಅವರು (ಸಿಆರ್‌ಪಿಎಫ್‌), ಅಮಾಯಕರನ್ನು ಉಗ್ರಗಾಮಿಗಳಂತೆ ಬಿಂಬಿಸುತ್ತಿದ್ದಾರೆ. ನಮಗೆ ನ್ಯಾಯ ಬೇಕಿದೆ” ಎಂದು ಆಗ್ರಹಿಸಿದ್ದಾರೆ.

“ಶೋಪಿಯಾನ್ ಜಿಲ್ಲೆಯ ಬಾಬಾಪೋರಾ ಪ್ರದೇಶದಲ್ಲಿ ಸಿಆರ್‌ಪಿಎಫ್‌ನ 178 ಬೆಟಾಲಿಯನ್‌ನ ತಂಡದ ಮೇಲೆ ‘ಅಪರಿಚಿತ ಭಯೋತ್ಪಾದಕರು’ ದಾಳಿ ನಡೆಸಿದ್ದಾರೆ” ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ವಕ್ತಾರರು ಪ್ರತಿಕ್ರಿಯಿಸಿದ್ದಾರೆ.  “ಸಿಆರ್‌ಪಿಎಫ್ ಬಂದೂಕು ಬಳಸಿ ಪ್ರತೀಕಾರ ನಡೆಸಿತು. ತಪ್ಪಾದ ದಾಳಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೆಚ್ಚಿನ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ದಾಳಿಯಾಗಿದೆ ಎಂದು ಪೊಲೀಸರು ಹೇಳುತ್ತಿದ್ದು, “ಸಿಆರ್‌ಪಿಎಫ್‌ನ ಯಾವುದೇ ಅಧಿಕಾರಿಗಳು ಘಟನೆಯಲ್ಲಿ ಗಾಯಗೊಂಡಿಲ್ಲ” ಎಂದು ದಿ ವೈರ್‌ ವರದಿ ಮಾಡಿದೆ.

ಸಾವಿಗೀಡಾದ ವ್ಯಕ್ತಿಯು ಹತ್ತನೇ ತರಗತಿ ಡ್ರಾಪ್‌ಔಟ್‌ ಆಗಿದ್ದು, ನಾಲ್ಕು ಮಂದಿ ಒಡಹುಟ್ಟಿದವರಲ್ಲಿ ಹಿರಿಯವರಾಗಿದ್ದಾರೆ. ಕುಟುಂಬದ ಆಧಾರಸ್ತಂಭವಾಗಿದ್ದರು. ಅಜ್ಜಿ, ಪೋಷಕರು ಮತ್ತು ಕಿರಿಯ ಸಹೋದರನ್ನು ಶಾಹಿದ್ ಅಗಲಿದ್ದಾರೆ.

“ನಮ್ಮದು ಬಡ ಕುಟುಂಬ.  ಶಾಹಿದ್‌ ಶಾಲೆಯನ್ನು ಬಿಟ್ಟು, ತಂದೆಗೆ ಸಹಕರಿಸುತ್ತಿದ್ದನು. ಅದು ಅವನ ತಪ್ಪೇ? ಆತ ಉಗ್ರಗಾಮಿಯಾಗಿರಲಿಲ್ಲ. ಏಕೆ ಆತನನ್ನು ಇಷ್ಟು ಕ್ರೂರವಾಗಿ ಕೊಂದರು?” ಎಂದು ಅಳುತ್ತಲೇ ಶಾಹಿದ್‌ನ ಅಜ್ಜಿ ಆಜಿ ಬೇಗಂ ಮಾತನಾಡುತ್ತಿದ್ದರು. ನೆರೆಹೊರೆಯವರು ಆಜಿ ಬೇಗಂ ಅವರನ್ನು ಸಂತೈಸುತ್ತಿದ್ದರು.

ಶಾಹಿದ್‌ನ ಅಜ್ಜಿ ಆಜಿ ಬೇಗಂ

ಶೂಟ್‌ ಮಾಡಿದ ದೃಶ್ಯದ ಗ್ರಾಫಿಕ್ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಮಿನಿ ಟ್ರಕ್‌ ಅಡಿ ಶಾಹಿದ್ ಅವರ ತಲೆ ಸಿಲುಕಿರುವುದನ್ನು ಚಿತ್ರದಲ್ಲಿ ಕಾಣಬಹುದು. ಶಾಹಿದ್ ಕಾಲುಗಳು ಚಾಚಲ್ಪಟ್ಟಿವೆ.

“ಸ್ವಲ್ಪ ಹಣವನ್ನು ಸಂಪಾದಿಸಲು ಮತ್ತು ತನ್ನ ಕುಟುಂಬಕ್ಕೆ ಸಹಾಯ ಮಾಡಲು ಶಾಹಿದ್‌ ಶಾಲೆ ಬಿಟ್ಟಿದ್ದರು. ಶಾಹಿದ್‌ ಕುಟುಂಬ ಬಡತನ ರೇಖೆಗಿಂತ ಕೆಳಗಿದೆ. ಶಾಹಿದ್ ಹತ್ಯೆ ಇಡೀ ಗ್ರಾಮವನ್ನು ಬೆಚ್ಚಿಬೀಳಿಸಿದೆ” ಎಂದು ಹೆಸರು ಹೇಳಲಿಚ್ಛಿಸದ ಗ್ರಾಮಸ್ಥರೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಅಕ್ಟೋಬರ್ 7ರಂದು ಏಳು ಜನರಿದ್ದ ಬಡ ಅಲೆಮಾರಿ ಕುಟುಂಬ ಸದಸ್ಯ ಪರ್ವೇಜ್ ಅಹ್ಮದ್ ಖಾನ್ ಅವರನ್ನು  ಅನಂತನಾಗ್‌‌ನಲ್ಲಿ ಸಿಆರ್‌ಪಿಎಫ್‌ ಅಧಿಕಾರಿಗಳು ಹತ್ಯೆ ಮಾಡಿದ್ದರು.


ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...