Homeಮುಖಪುಟಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

ಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ಒಂದು ದಿನದ ನಂತರ, ಶೋಪಿಯಾನ್ ಜಿಲ್ಲೆಯ ಸಿಆರ್‌ಪಿಎಫ್ ಕ್ಯಾಂಪ್ ಬಳಿ ಭಾನುವಾರ ಬೆಳಿಗ್ಗೆ 20 ವರ್ಷದ ನಾಗರಿಕನನ್ನು ಅನುಮಾನಾಸ್ಪದ ವ್ಯಕ್ತಿಯೆಂದು ಗುಂಡಿಕ್ಕಿ ಕೊಲ್ಲಲಾಗಿದೆ.

ಮೃತರನ್ನು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದ ನಿವಾಸಿ ಶಾಹಿದ್ ಅಹ್ಮದ್ ರಾಥರ್ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುತಿಸಿದ್ದಾರೆ. ದಿನಗೂಲಿ ಕಾರ್ಮಿಕನಾಗಿದ್ದ ಶಾಹಿದ್‌ರನ್ನು ಸೇಬು ಬೆಳೆ ಕೊಯ್ಲು ಮಾಡಲು ಸಹಾಯಕ್ಕಾಗಿ ರೈತರೊಬ್ಬರು ಕರೆತಂದಿದ್ದರು ಎಂದು ವರದಿಯಾಗಿದೆ.

‘ದಿ ವೈರ್’ ಜಾಲತಾಣದೊಂದಿಗೆ ಮಾತನಾಡಿರುವ ಶಾಹಿದ್ ಅಹಮದ್‌ ರಾಥರ್‌ ಅವರ ಸಹೋದರ ಜುಬೈರ್‌‌ ಅಹಮದ್ ರಾಥರ್‌, “ಈ ಘಟನೆ ನಡೆದ ದಿನ (ಭಾನುವಾರ ಬೆಳಿಗ್ಗೆ) ಶಾಹಿದ್‌ ತನ್ನ ಮನೆಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಬಂದಿದ್ದರು. ಜೈನಾಪುರದಲ್ಲಿ ಅವರಿಗಿಂತ ಸ್ವಲ್ಪ ಮೀಟರ್‌ಗಳ ದೂರದಲ್ಲಿ ನಡೆಯುತ್ತಿದ್ದಾಗ ಸಿಆರ್‌ಪಿಎಫ್‌ ಗುಂಪು ಶಾಹಿದ್‌ ಮೇಲೆ ಗುಂಡು ಹಾರಿಸಿದೆ” ಎಂದು ಆರೋಪಿಸಿದ್ದಾರೆ.

ಶಾಹಿದ್ ಅಹಮದ್‌ ರಾಥರ್‌ ಅವರ ಸಹೋದರ ಜುಬೈರ್‌‌ ಅಹಮದ್ ರಾಥರ್‌ ದುಃಖಿಸುತ್ತಿರುವುದು. (PC: The Wire)

“ಇದು ಉದ್ದೇಶಿತ ಹತ್ಯೆ” ಎನ್ನುತ್ತಾ ಗದ್ಗದಿತನಾಗಿ ಮಾತು ಮುಂದುವರಿದ ಜಬೈರ್‌‌, “ಅತ್ಯಂತ ಅಮಾನುಷವಾಗಿ ಅವರು ಕೊಂದಿದ್ದಾರೆ. ಈ ಪ್ರಾಂತ್ಯದಲ್ಲಿ ಬಂದೂಕು ಜಳುಪಿಸಿರಲಿಲ್ಲ. ಆದರೆ ನಮ್ಮೊಂದಿಗೆ ಆಗಿದೆ. ಇದು ಎಲ್ಲಿ ಬೇಕಾದರೂ ಆಗಬಹುದು. ಅಮಾಯಕರನ್ನು ಕೊಲ್ಲುತ್ತಿರುವ ಅವರು (ಸಿಆರ್‌ಪಿಎಫ್‌), ಅಮಾಯಕರನ್ನು ಉಗ್ರಗಾಮಿಗಳಂತೆ ಬಿಂಬಿಸುತ್ತಿದ್ದಾರೆ. ನಮಗೆ ನ್ಯಾಯ ಬೇಕಿದೆ” ಎಂದು ಆಗ್ರಹಿಸಿದ್ದಾರೆ.

“ಶೋಪಿಯಾನ್ ಜಿಲ್ಲೆಯ ಬಾಬಾಪೋರಾ ಪ್ರದೇಶದಲ್ಲಿ ಸಿಆರ್‌ಪಿಎಫ್‌ನ 178 ಬೆಟಾಲಿಯನ್‌ನ ತಂಡದ ಮೇಲೆ ‘ಅಪರಿಚಿತ ಭಯೋತ್ಪಾದಕರು’ ದಾಳಿ ನಡೆಸಿದ್ದಾರೆ” ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ವಕ್ತಾರರು ಪ್ರತಿಕ್ರಿಯಿಸಿದ್ದಾರೆ.  “ಸಿಆರ್‌ಪಿಎಫ್ ಬಂದೂಕು ಬಳಸಿ ಪ್ರತೀಕಾರ ನಡೆಸಿತು. ತಪ್ಪಾದ ದಾಳಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೆಚ್ಚಿನ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ದಾಳಿಯಾಗಿದೆ ಎಂದು ಪೊಲೀಸರು ಹೇಳುತ್ತಿದ್ದು, “ಸಿಆರ್‌ಪಿಎಫ್‌ನ ಯಾವುದೇ ಅಧಿಕಾರಿಗಳು ಘಟನೆಯಲ್ಲಿ ಗಾಯಗೊಂಡಿಲ್ಲ” ಎಂದು ದಿ ವೈರ್‌ ವರದಿ ಮಾಡಿದೆ.

ಸಾವಿಗೀಡಾದ ವ್ಯಕ್ತಿಯು ಹತ್ತನೇ ತರಗತಿ ಡ್ರಾಪ್‌ಔಟ್‌ ಆಗಿದ್ದು, ನಾಲ್ಕು ಮಂದಿ ಒಡಹುಟ್ಟಿದವರಲ್ಲಿ ಹಿರಿಯವರಾಗಿದ್ದಾರೆ. ಕುಟುಂಬದ ಆಧಾರಸ್ತಂಭವಾಗಿದ್ದರು. ಅಜ್ಜಿ, ಪೋಷಕರು ಮತ್ತು ಕಿರಿಯ ಸಹೋದರನ್ನು ಶಾಹಿದ್ ಅಗಲಿದ್ದಾರೆ.

“ನಮ್ಮದು ಬಡ ಕುಟುಂಬ.  ಶಾಹಿದ್‌ ಶಾಲೆಯನ್ನು ಬಿಟ್ಟು, ತಂದೆಗೆ ಸಹಕರಿಸುತ್ತಿದ್ದನು. ಅದು ಅವನ ತಪ್ಪೇ? ಆತ ಉಗ್ರಗಾಮಿಯಾಗಿರಲಿಲ್ಲ. ಏಕೆ ಆತನನ್ನು ಇಷ್ಟು ಕ್ರೂರವಾಗಿ ಕೊಂದರು?” ಎಂದು ಅಳುತ್ತಲೇ ಶಾಹಿದ್‌ನ ಅಜ್ಜಿ ಆಜಿ ಬೇಗಂ ಮಾತನಾಡುತ್ತಿದ್ದರು. ನೆರೆಹೊರೆಯವರು ಆಜಿ ಬೇಗಂ ಅವರನ್ನು ಸಂತೈಸುತ್ತಿದ್ದರು.

ಶಾಹಿದ್‌ನ ಅಜ್ಜಿ ಆಜಿ ಬೇಗಂ

ಶೂಟ್‌ ಮಾಡಿದ ದೃಶ್ಯದ ಗ್ರಾಫಿಕ್ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಮಿನಿ ಟ್ರಕ್‌ ಅಡಿ ಶಾಹಿದ್ ಅವರ ತಲೆ ಸಿಲುಕಿರುವುದನ್ನು ಚಿತ್ರದಲ್ಲಿ ಕಾಣಬಹುದು. ಶಾಹಿದ್ ಕಾಲುಗಳು ಚಾಚಲ್ಪಟ್ಟಿವೆ.

“ಸ್ವಲ್ಪ ಹಣವನ್ನು ಸಂಪಾದಿಸಲು ಮತ್ತು ತನ್ನ ಕುಟುಂಬಕ್ಕೆ ಸಹಾಯ ಮಾಡಲು ಶಾಹಿದ್‌ ಶಾಲೆ ಬಿಟ್ಟಿದ್ದರು. ಶಾಹಿದ್‌ ಕುಟುಂಬ ಬಡತನ ರೇಖೆಗಿಂತ ಕೆಳಗಿದೆ. ಶಾಹಿದ್ ಹತ್ಯೆ ಇಡೀ ಗ್ರಾಮವನ್ನು ಬೆಚ್ಚಿಬೀಳಿಸಿದೆ” ಎಂದು ಹೆಸರು ಹೇಳಲಿಚ್ಛಿಸದ ಗ್ರಾಮಸ್ಥರೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಅಕ್ಟೋಬರ್ 7ರಂದು ಏಳು ಜನರಿದ್ದ ಬಡ ಅಲೆಮಾರಿ ಕುಟುಂಬ ಸದಸ್ಯ ಪರ್ವೇಜ್ ಅಹ್ಮದ್ ಖಾನ್ ಅವರನ್ನು  ಅನಂತನಾಗ್‌‌ನಲ್ಲಿ ಸಿಆರ್‌ಪಿಎಫ್‌ ಅಧಿಕಾರಿಗಳು ಹತ್ಯೆ ಮಾಡಿದ್ದರು.


ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...