Homeಮುಖಪುಟಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

ಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ಒಂದು ದಿನದ ನಂತರ, ಶೋಪಿಯಾನ್ ಜಿಲ್ಲೆಯ ಸಿಆರ್‌ಪಿಎಫ್ ಕ್ಯಾಂಪ್ ಬಳಿ ಭಾನುವಾರ ಬೆಳಿಗ್ಗೆ 20 ವರ್ಷದ ನಾಗರಿಕನನ್ನು ಅನುಮಾನಾಸ್ಪದ ವ್ಯಕ್ತಿಯೆಂದು ಗುಂಡಿಕ್ಕಿ ಕೊಲ್ಲಲಾಗಿದೆ.

ಮೃತರನ್ನು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದ ನಿವಾಸಿ ಶಾಹಿದ್ ಅಹ್ಮದ್ ರಾಥರ್ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುತಿಸಿದ್ದಾರೆ. ದಿನಗೂಲಿ ಕಾರ್ಮಿಕನಾಗಿದ್ದ ಶಾಹಿದ್‌ರನ್ನು ಸೇಬು ಬೆಳೆ ಕೊಯ್ಲು ಮಾಡಲು ಸಹಾಯಕ್ಕಾಗಿ ರೈತರೊಬ್ಬರು ಕರೆತಂದಿದ್ದರು ಎಂದು ವರದಿಯಾಗಿದೆ.

‘ದಿ ವೈರ್’ ಜಾಲತಾಣದೊಂದಿಗೆ ಮಾತನಾಡಿರುವ ಶಾಹಿದ್ ಅಹಮದ್‌ ರಾಥರ್‌ ಅವರ ಸಹೋದರ ಜುಬೈರ್‌‌ ಅಹಮದ್ ರಾಥರ್‌, “ಈ ಘಟನೆ ನಡೆದ ದಿನ (ಭಾನುವಾರ ಬೆಳಿಗ್ಗೆ) ಶಾಹಿದ್‌ ತನ್ನ ಮನೆಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಬಂದಿದ್ದರು. ಜೈನಾಪುರದಲ್ಲಿ ಅವರಿಗಿಂತ ಸ್ವಲ್ಪ ಮೀಟರ್‌ಗಳ ದೂರದಲ್ಲಿ ನಡೆಯುತ್ತಿದ್ದಾಗ ಸಿಆರ್‌ಪಿಎಫ್‌ ಗುಂಪು ಶಾಹಿದ್‌ ಮೇಲೆ ಗುಂಡು ಹಾರಿಸಿದೆ” ಎಂದು ಆರೋಪಿಸಿದ್ದಾರೆ.

ಶಾಹಿದ್ ಅಹಮದ್‌ ರಾಥರ್‌ ಅವರ ಸಹೋದರ ಜುಬೈರ್‌‌ ಅಹಮದ್ ರಾಥರ್‌ ದುಃಖಿಸುತ್ತಿರುವುದು. (PC: The Wire)

“ಇದು ಉದ್ದೇಶಿತ ಹತ್ಯೆ” ಎನ್ನುತ್ತಾ ಗದ್ಗದಿತನಾಗಿ ಮಾತು ಮುಂದುವರಿದ ಜಬೈರ್‌‌, “ಅತ್ಯಂತ ಅಮಾನುಷವಾಗಿ ಅವರು ಕೊಂದಿದ್ದಾರೆ. ಈ ಪ್ರಾಂತ್ಯದಲ್ಲಿ ಬಂದೂಕು ಜಳುಪಿಸಿರಲಿಲ್ಲ. ಆದರೆ ನಮ್ಮೊಂದಿಗೆ ಆಗಿದೆ. ಇದು ಎಲ್ಲಿ ಬೇಕಾದರೂ ಆಗಬಹುದು. ಅಮಾಯಕರನ್ನು ಕೊಲ್ಲುತ್ತಿರುವ ಅವರು (ಸಿಆರ್‌ಪಿಎಫ್‌), ಅಮಾಯಕರನ್ನು ಉಗ್ರಗಾಮಿಗಳಂತೆ ಬಿಂಬಿಸುತ್ತಿದ್ದಾರೆ. ನಮಗೆ ನ್ಯಾಯ ಬೇಕಿದೆ” ಎಂದು ಆಗ್ರಹಿಸಿದ್ದಾರೆ.

“ಶೋಪಿಯಾನ್ ಜಿಲ್ಲೆಯ ಬಾಬಾಪೋರಾ ಪ್ರದೇಶದಲ್ಲಿ ಸಿಆರ್‌ಪಿಎಫ್‌ನ 178 ಬೆಟಾಲಿಯನ್‌ನ ತಂಡದ ಮೇಲೆ ‘ಅಪರಿಚಿತ ಭಯೋತ್ಪಾದಕರು’ ದಾಳಿ ನಡೆಸಿದ್ದಾರೆ” ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ವಕ್ತಾರರು ಪ್ರತಿಕ್ರಿಯಿಸಿದ್ದಾರೆ.  “ಸಿಆರ್‌ಪಿಎಫ್ ಬಂದೂಕು ಬಳಸಿ ಪ್ರತೀಕಾರ ನಡೆಸಿತು. ತಪ್ಪಾದ ದಾಳಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೆಚ್ಚಿನ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ದಾಳಿಯಾಗಿದೆ ಎಂದು ಪೊಲೀಸರು ಹೇಳುತ್ತಿದ್ದು, “ಸಿಆರ್‌ಪಿಎಫ್‌ನ ಯಾವುದೇ ಅಧಿಕಾರಿಗಳು ಘಟನೆಯಲ್ಲಿ ಗಾಯಗೊಂಡಿಲ್ಲ” ಎಂದು ದಿ ವೈರ್‌ ವರದಿ ಮಾಡಿದೆ.

ಸಾವಿಗೀಡಾದ ವ್ಯಕ್ತಿಯು ಹತ್ತನೇ ತರಗತಿ ಡ್ರಾಪ್‌ಔಟ್‌ ಆಗಿದ್ದು, ನಾಲ್ಕು ಮಂದಿ ಒಡಹುಟ್ಟಿದವರಲ್ಲಿ ಹಿರಿಯವರಾಗಿದ್ದಾರೆ. ಕುಟುಂಬದ ಆಧಾರಸ್ತಂಭವಾಗಿದ್ದರು. ಅಜ್ಜಿ, ಪೋಷಕರು ಮತ್ತು ಕಿರಿಯ ಸಹೋದರನ್ನು ಶಾಹಿದ್ ಅಗಲಿದ್ದಾರೆ.

“ನಮ್ಮದು ಬಡ ಕುಟುಂಬ.  ಶಾಹಿದ್‌ ಶಾಲೆಯನ್ನು ಬಿಟ್ಟು, ತಂದೆಗೆ ಸಹಕರಿಸುತ್ತಿದ್ದನು. ಅದು ಅವನ ತಪ್ಪೇ? ಆತ ಉಗ್ರಗಾಮಿಯಾಗಿರಲಿಲ್ಲ. ಏಕೆ ಆತನನ್ನು ಇಷ್ಟು ಕ್ರೂರವಾಗಿ ಕೊಂದರು?” ಎಂದು ಅಳುತ್ತಲೇ ಶಾಹಿದ್‌ನ ಅಜ್ಜಿ ಆಜಿ ಬೇಗಂ ಮಾತನಾಡುತ್ತಿದ್ದರು. ನೆರೆಹೊರೆಯವರು ಆಜಿ ಬೇಗಂ ಅವರನ್ನು ಸಂತೈಸುತ್ತಿದ್ದರು.

ಶಾಹಿದ್‌ನ ಅಜ್ಜಿ ಆಜಿ ಬೇಗಂ

ಶೂಟ್‌ ಮಾಡಿದ ದೃಶ್ಯದ ಗ್ರಾಫಿಕ್ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಮಿನಿ ಟ್ರಕ್‌ ಅಡಿ ಶಾಹಿದ್ ಅವರ ತಲೆ ಸಿಲುಕಿರುವುದನ್ನು ಚಿತ್ರದಲ್ಲಿ ಕಾಣಬಹುದು. ಶಾಹಿದ್ ಕಾಲುಗಳು ಚಾಚಲ್ಪಟ್ಟಿವೆ.

“ಸ್ವಲ್ಪ ಹಣವನ್ನು ಸಂಪಾದಿಸಲು ಮತ್ತು ತನ್ನ ಕುಟುಂಬಕ್ಕೆ ಸಹಾಯ ಮಾಡಲು ಶಾಹಿದ್‌ ಶಾಲೆ ಬಿಟ್ಟಿದ್ದರು. ಶಾಹಿದ್‌ ಕುಟುಂಬ ಬಡತನ ರೇಖೆಗಿಂತ ಕೆಳಗಿದೆ. ಶಾಹಿದ್ ಹತ್ಯೆ ಇಡೀ ಗ್ರಾಮವನ್ನು ಬೆಚ್ಚಿಬೀಳಿಸಿದೆ” ಎಂದು ಹೆಸರು ಹೇಳಲಿಚ್ಛಿಸದ ಗ್ರಾಮಸ್ಥರೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಅಕ್ಟೋಬರ್ 7ರಂದು ಏಳು ಜನರಿದ್ದ ಬಡ ಅಲೆಮಾರಿ ಕುಟುಂಬ ಸದಸ್ಯ ಪರ್ವೇಜ್ ಅಹ್ಮದ್ ಖಾನ್ ಅವರನ್ನು  ಅನಂತನಾಗ್‌‌ನಲ್ಲಿ ಸಿಆರ್‌ಪಿಎಫ್‌ ಅಧಿಕಾರಿಗಳು ಹತ್ಯೆ ಮಾಡಿದ್ದರು.


ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...