Homeಮುಖಪುಟಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

ಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ಒಂದು ದಿನದ ನಂತರ, ಶೋಪಿಯಾನ್ ಜಿಲ್ಲೆಯ ಸಿಆರ್‌ಪಿಎಫ್ ಕ್ಯಾಂಪ್ ಬಳಿ ಭಾನುವಾರ ಬೆಳಿಗ್ಗೆ 20 ವರ್ಷದ ನಾಗರಿಕನನ್ನು ಅನುಮಾನಾಸ್ಪದ ವ್ಯಕ್ತಿಯೆಂದು ಗುಂಡಿಕ್ಕಿ ಕೊಲ್ಲಲಾಗಿದೆ.

ಮೃತರನ್ನು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದ ನಿವಾಸಿ ಶಾಹಿದ್ ಅಹ್ಮದ್ ರಾಥರ್ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುತಿಸಿದ್ದಾರೆ. ದಿನಗೂಲಿ ಕಾರ್ಮಿಕನಾಗಿದ್ದ ಶಾಹಿದ್‌ರನ್ನು ಸೇಬು ಬೆಳೆ ಕೊಯ್ಲು ಮಾಡಲು ಸಹಾಯಕ್ಕಾಗಿ ರೈತರೊಬ್ಬರು ಕರೆತಂದಿದ್ದರು ಎಂದು ವರದಿಯಾಗಿದೆ.

‘ದಿ ವೈರ್’ ಜಾಲತಾಣದೊಂದಿಗೆ ಮಾತನಾಡಿರುವ ಶಾಹಿದ್ ಅಹಮದ್‌ ರಾಥರ್‌ ಅವರ ಸಹೋದರ ಜುಬೈರ್‌‌ ಅಹಮದ್ ರಾಥರ್‌, “ಈ ಘಟನೆ ನಡೆದ ದಿನ (ಭಾನುವಾರ ಬೆಳಿಗ್ಗೆ) ಶಾಹಿದ್‌ ತನ್ನ ಮನೆಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಬಂದಿದ್ದರು. ಜೈನಾಪುರದಲ್ಲಿ ಅವರಿಗಿಂತ ಸ್ವಲ್ಪ ಮೀಟರ್‌ಗಳ ದೂರದಲ್ಲಿ ನಡೆಯುತ್ತಿದ್ದಾಗ ಸಿಆರ್‌ಪಿಎಫ್‌ ಗುಂಪು ಶಾಹಿದ್‌ ಮೇಲೆ ಗುಂಡು ಹಾರಿಸಿದೆ” ಎಂದು ಆರೋಪಿಸಿದ್ದಾರೆ.

ಶಾಹಿದ್ ಅಹಮದ್‌ ರಾಥರ್‌ ಅವರ ಸಹೋದರ ಜುಬೈರ್‌‌ ಅಹಮದ್ ರಾಥರ್‌ ದುಃಖಿಸುತ್ತಿರುವುದು. (PC: The Wire)

“ಇದು ಉದ್ದೇಶಿತ ಹತ್ಯೆ” ಎನ್ನುತ್ತಾ ಗದ್ಗದಿತನಾಗಿ ಮಾತು ಮುಂದುವರಿದ ಜಬೈರ್‌‌, “ಅತ್ಯಂತ ಅಮಾನುಷವಾಗಿ ಅವರು ಕೊಂದಿದ್ದಾರೆ. ಈ ಪ್ರಾಂತ್ಯದಲ್ಲಿ ಬಂದೂಕು ಜಳುಪಿಸಿರಲಿಲ್ಲ. ಆದರೆ ನಮ್ಮೊಂದಿಗೆ ಆಗಿದೆ. ಇದು ಎಲ್ಲಿ ಬೇಕಾದರೂ ಆಗಬಹುದು. ಅಮಾಯಕರನ್ನು ಕೊಲ್ಲುತ್ತಿರುವ ಅವರು (ಸಿಆರ್‌ಪಿಎಫ್‌), ಅಮಾಯಕರನ್ನು ಉಗ್ರಗಾಮಿಗಳಂತೆ ಬಿಂಬಿಸುತ್ತಿದ್ದಾರೆ. ನಮಗೆ ನ್ಯಾಯ ಬೇಕಿದೆ” ಎಂದು ಆಗ್ರಹಿಸಿದ್ದಾರೆ.

“ಶೋಪಿಯಾನ್ ಜಿಲ್ಲೆಯ ಬಾಬಾಪೋರಾ ಪ್ರದೇಶದಲ್ಲಿ ಸಿಆರ್‌ಪಿಎಫ್‌ನ 178 ಬೆಟಾಲಿಯನ್‌ನ ತಂಡದ ಮೇಲೆ ‘ಅಪರಿಚಿತ ಭಯೋತ್ಪಾದಕರು’ ದಾಳಿ ನಡೆಸಿದ್ದಾರೆ” ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ವಕ್ತಾರರು ಪ್ರತಿಕ್ರಿಯಿಸಿದ್ದಾರೆ.  “ಸಿಆರ್‌ಪಿಎಫ್ ಬಂದೂಕು ಬಳಸಿ ಪ್ರತೀಕಾರ ನಡೆಸಿತು. ತಪ್ಪಾದ ದಾಳಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೆಚ್ಚಿನ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ದಾಳಿಯಾಗಿದೆ ಎಂದು ಪೊಲೀಸರು ಹೇಳುತ್ತಿದ್ದು, “ಸಿಆರ್‌ಪಿಎಫ್‌ನ ಯಾವುದೇ ಅಧಿಕಾರಿಗಳು ಘಟನೆಯಲ್ಲಿ ಗಾಯಗೊಂಡಿಲ್ಲ” ಎಂದು ದಿ ವೈರ್‌ ವರದಿ ಮಾಡಿದೆ.

ಸಾವಿಗೀಡಾದ ವ್ಯಕ್ತಿಯು ಹತ್ತನೇ ತರಗತಿ ಡ್ರಾಪ್‌ಔಟ್‌ ಆಗಿದ್ದು, ನಾಲ್ಕು ಮಂದಿ ಒಡಹುಟ್ಟಿದವರಲ್ಲಿ ಹಿರಿಯವರಾಗಿದ್ದಾರೆ. ಕುಟುಂಬದ ಆಧಾರಸ್ತಂಭವಾಗಿದ್ದರು. ಅಜ್ಜಿ, ಪೋಷಕರು ಮತ್ತು ಕಿರಿಯ ಸಹೋದರನ್ನು ಶಾಹಿದ್ ಅಗಲಿದ್ದಾರೆ.

“ನಮ್ಮದು ಬಡ ಕುಟುಂಬ.  ಶಾಹಿದ್‌ ಶಾಲೆಯನ್ನು ಬಿಟ್ಟು, ತಂದೆಗೆ ಸಹಕರಿಸುತ್ತಿದ್ದನು. ಅದು ಅವನ ತಪ್ಪೇ? ಆತ ಉಗ್ರಗಾಮಿಯಾಗಿರಲಿಲ್ಲ. ಏಕೆ ಆತನನ್ನು ಇಷ್ಟು ಕ್ರೂರವಾಗಿ ಕೊಂದರು?” ಎಂದು ಅಳುತ್ತಲೇ ಶಾಹಿದ್‌ನ ಅಜ್ಜಿ ಆಜಿ ಬೇಗಂ ಮಾತನಾಡುತ್ತಿದ್ದರು. ನೆರೆಹೊರೆಯವರು ಆಜಿ ಬೇಗಂ ಅವರನ್ನು ಸಂತೈಸುತ್ತಿದ್ದರು.

ಶಾಹಿದ್‌ನ ಅಜ್ಜಿ ಆಜಿ ಬೇಗಂ

ಶೂಟ್‌ ಮಾಡಿದ ದೃಶ್ಯದ ಗ್ರಾಫಿಕ್ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಮಿನಿ ಟ್ರಕ್‌ ಅಡಿ ಶಾಹಿದ್ ಅವರ ತಲೆ ಸಿಲುಕಿರುವುದನ್ನು ಚಿತ್ರದಲ್ಲಿ ಕಾಣಬಹುದು. ಶಾಹಿದ್ ಕಾಲುಗಳು ಚಾಚಲ್ಪಟ್ಟಿವೆ.

“ಸ್ವಲ್ಪ ಹಣವನ್ನು ಸಂಪಾದಿಸಲು ಮತ್ತು ತನ್ನ ಕುಟುಂಬಕ್ಕೆ ಸಹಾಯ ಮಾಡಲು ಶಾಹಿದ್‌ ಶಾಲೆ ಬಿಟ್ಟಿದ್ದರು. ಶಾಹಿದ್‌ ಕುಟುಂಬ ಬಡತನ ರೇಖೆಗಿಂತ ಕೆಳಗಿದೆ. ಶಾಹಿದ್ ಹತ್ಯೆ ಇಡೀ ಗ್ರಾಮವನ್ನು ಬೆಚ್ಚಿಬೀಳಿಸಿದೆ” ಎಂದು ಹೆಸರು ಹೇಳಲಿಚ್ಛಿಸದ ಗ್ರಾಮಸ್ಥರೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಅಕ್ಟೋಬರ್ 7ರಂದು ಏಳು ಜನರಿದ್ದ ಬಡ ಅಲೆಮಾರಿ ಕುಟುಂಬ ಸದಸ್ಯ ಪರ್ವೇಜ್ ಅಹ್ಮದ್ ಖಾನ್ ಅವರನ್ನು  ಅನಂತನಾಗ್‌‌ನಲ್ಲಿ ಸಿಆರ್‌ಪಿಎಫ್‌ ಅಧಿಕಾರಿಗಳು ಹತ್ಯೆ ಮಾಡಿದ್ದರು.


ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...