Homeಮುಖಪುಟಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

ಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ಒಂದು ದಿನದ ನಂತರ, ಶೋಪಿಯಾನ್ ಜಿಲ್ಲೆಯ ಸಿಆರ್‌ಪಿಎಫ್ ಕ್ಯಾಂಪ್ ಬಳಿ ಭಾನುವಾರ ಬೆಳಿಗ್ಗೆ 20 ವರ್ಷದ ನಾಗರಿಕನನ್ನು ಅನುಮಾನಾಸ್ಪದ ವ್ಯಕ್ತಿಯೆಂದು ಗುಂಡಿಕ್ಕಿ ಕೊಲ್ಲಲಾಗಿದೆ.

ಮೃತರನ್ನು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದ ನಿವಾಸಿ ಶಾಹಿದ್ ಅಹ್ಮದ್ ರಾಥರ್ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುತಿಸಿದ್ದಾರೆ. ದಿನಗೂಲಿ ಕಾರ್ಮಿಕನಾಗಿದ್ದ ಶಾಹಿದ್‌ರನ್ನು ಸೇಬು ಬೆಳೆ ಕೊಯ್ಲು ಮಾಡಲು ಸಹಾಯಕ್ಕಾಗಿ ರೈತರೊಬ್ಬರು ಕರೆತಂದಿದ್ದರು ಎಂದು ವರದಿಯಾಗಿದೆ.

‘ದಿ ವೈರ್’ ಜಾಲತಾಣದೊಂದಿಗೆ ಮಾತನಾಡಿರುವ ಶಾಹಿದ್ ಅಹಮದ್‌ ರಾಥರ್‌ ಅವರ ಸಹೋದರ ಜುಬೈರ್‌‌ ಅಹಮದ್ ರಾಥರ್‌, “ಈ ಘಟನೆ ನಡೆದ ದಿನ (ಭಾನುವಾರ ಬೆಳಿಗ್ಗೆ) ಶಾಹಿದ್‌ ತನ್ನ ಮನೆಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಬಂದಿದ್ದರು. ಜೈನಾಪುರದಲ್ಲಿ ಅವರಿಗಿಂತ ಸ್ವಲ್ಪ ಮೀಟರ್‌ಗಳ ದೂರದಲ್ಲಿ ನಡೆಯುತ್ತಿದ್ದಾಗ ಸಿಆರ್‌ಪಿಎಫ್‌ ಗುಂಪು ಶಾಹಿದ್‌ ಮೇಲೆ ಗುಂಡು ಹಾರಿಸಿದೆ” ಎಂದು ಆರೋಪಿಸಿದ್ದಾರೆ.

ಶಾಹಿದ್ ಅಹಮದ್‌ ರಾಥರ್‌ ಅವರ ಸಹೋದರ ಜುಬೈರ್‌‌ ಅಹಮದ್ ರಾಥರ್‌ ದುಃಖಿಸುತ್ತಿರುವುದು. (PC: The Wire)

“ಇದು ಉದ್ದೇಶಿತ ಹತ್ಯೆ” ಎನ್ನುತ್ತಾ ಗದ್ಗದಿತನಾಗಿ ಮಾತು ಮುಂದುವರಿದ ಜಬೈರ್‌‌, “ಅತ್ಯಂತ ಅಮಾನುಷವಾಗಿ ಅವರು ಕೊಂದಿದ್ದಾರೆ. ಈ ಪ್ರಾಂತ್ಯದಲ್ಲಿ ಬಂದೂಕು ಜಳುಪಿಸಿರಲಿಲ್ಲ. ಆದರೆ ನಮ್ಮೊಂದಿಗೆ ಆಗಿದೆ. ಇದು ಎಲ್ಲಿ ಬೇಕಾದರೂ ಆಗಬಹುದು. ಅಮಾಯಕರನ್ನು ಕೊಲ್ಲುತ್ತಿರುವ ಅವರು (ಸಿಆರ್‌ಪಿಎಫ್‌), ಅಮಾಯಕರನ್ನು ಉಗ್ರಗಾಮಿಗಳಂತೆ ಬಿಂಬಿಸುತ್ತಿದ್ದಾರೆ. ನಮಗೆ ನ್ಯಾಯ ಬೇಕಿದೆ” ಎಂದು ಆಗ್ರಹಿಸಿದ್ದಾರೆ.

“ಶೋಪಿಯಾನ್ ಜಿಲ್ಲೆಯ ಬಾಬಾಪೋರಾ ಪ್ರದೇಶದಲ್ಲಿ ಸಿಆರ್‌ಪಿಎಫ್‌ನ 178 ಬೆಟಾಲಿಯನ್‌ನ ತಂಡದ ಮೇಲೆ ‘ಅಪರಿಚಿತ ಭಯೋತ್ಪಾದಕರು’ ದಾಳಿ ನಡೆಸಿದ್ದಾರೆ” ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ವಕ್ತಾರರು ಪ್ರತಿಕ್ರಿಯಿಸಿದ್ದಾರೆ.  “ಸಿಆರ್‌ಪಿಎಫ್ ಬಂದೂಕು ಬಳಸಿ ಪ್ರತೀಕಾರ ನಡೆಸಿತು. ತಪ್ಪಾದ ದಾಳಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೆಚ್ಚಿನ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ದಾಳಿಯಾಗಿದೆ ಎಂದು ಪೊಲೀಸರು ಹೇಳುತ್ತಿದ್ದು, “ಸಿಆರ್‌ಪಿಎಫ್‌ನ ಯಾವುದೇ ಅಧಿಕಾರಿಗಳು ಘಟನೆಯಲ್ಲಿ ಗಾಯಗೊಂಡಿಲ್ಲ” ಎಂದು ದಿ ವೈರ್‌ ವರದಿ ಮಾಡಿದೆ.

ಸಾವಿಗೀಡಾದ ವ್ಯಕ್ತಿಯು ಹತ್ತನೇ ತರಗತಿ ಡ್ರಾಪ್‌ಔಟ್‌ ಆಗಿದ್ದು, ನಾಲ್ಕು ಮಂದಿ ಒಡಹುಟ್ಟಿದವರಲ್ಲಿ ಹಿರಿಯವರಾಗಿದ್ದಾರೆ. ಕುಟುಂಬದ ಆಧಾರಸ್ತಂಭವಾಗಿದ್ದರು. ಅಜ್ಜಿ, ಪೋಷಕರು ಮತ್ತು ಕಿರಿಯ ಸಹೋದರನ್ನು ಶಾಹಿದ್ ಅಗಲಿದ್ದಾರೆ.

“ನಮ್ಮದು ಬಡ ಕುಟುಂಬ.  ಶಾಹಿದ್‌ ಶಾಲೆಯನ್ನು ಬಿಟ್ಟು, ತಂದೆಗೆ ಸಹಕರಿಸುತ್ತಿದ್ದನು. ಅದು ಅವನ ತಪ್ಪೇ? ಆತ ಉಗ್ರಗಾಮಿಯಾಗಿರಲಿಲ್ಲ. ಏಕೆ ಆತನನ್ನು ಇಷ್ಟು ಕ್ರೂರವಾಗಿ ಕೊಂದರು?” ಎಂದು ಅಳುತ್ತಲೇ ಶಾಹಿದ್‌ನ ಅಜ್ಜಿ ಆಜಿ ಬೇಗಂ ಮಾತನಾಡುತ್ತಿದ್ದರು. ನೆರೆಹೊರೆಯವರು ಆಜಿ ಬೇಗಂ ಅವರನ್ನು ಸಂತೈಸುತ್ತಿದ್ದರು.

ಶಾಹಿದ್‌ನ ಅಜ್ಜಿ ಆಜಿ ಬೇಗಂ

ಶೂಟ್‌ ಮಾಡಿದ ದೃಶ್ಯದ ಗ್ರಾಫಿಕ್ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಮಿನಿ ಟ್ರಕ್‌ ಅಡಿ ಶಾಹಿದ್ ಅವರ ತಲೆ ಸಿಲುಕಿರುವುದನ್ನು ಚಿತ್ರದಲ್ಲಿ ಕಾಣಬಹುದು. ಶಾಹಿದ್ ಕಾಲುಗಳು ಚಾಚಲ್ಪಟ್ಟಿವೆ.

“ಸ್ವಲ್ಪ ಹಣವನ್ನು ಸಂಪಾದಿಸಲು ಮತ್ತು ತನ್ನ ಕುಟುಂಬಕ್ಕೆ ಸಹಾಯ ಮಾಡಲು ಶಾಹಿದ್‌ ಶಾಲೆ ಬಿಟ್ಟಿದ್ದರು. ಶಾಹಿದ್‌ ಕುಟುಂಬ ಬಡತನ ರೇಖೆಗಿಂತ ಕೆಳಗಿದೆ. ಶಾಹಿದ್ ಹತ್ಯೆ ಇಡೀ ಗ್ರಾಮವನ್ನು ಬೆಚ್ಚಿಬೀಳಿಸಿದೆ” ಎಂದು ಹೆಸರು ಹೇಳಲಿಚ್ಛಿಸದ ಗ್ರಾಮಸ್ಥರೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಅಕ್ಟೋಬರ್ 7ರಂದು ಏಳು ಜನರಿದ್ದ ಬಡ ಅಲೆಮಾರಿ ಕುಟುಂಬ ಸದಸ್ಯ ಪರ್ವೇಜ್ ಅಹ್ಮದ್ ಖಾನ್ ಅವರನ್ನು  ಅನಂತನಾಗ್‌‌ನಲ್ಲಿ ಸಿಆರ್‌ಪಿಎಫ್‌ ಅಧಿಕಾರಿಗಳು ಹತ್ಯೆ ಮಾಡಿದ್ದರು.


ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...