Homeಮುಖಪುಟಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

ಕಾಶ್ಮೀರ: ಸಿಆರ್‌ಪಿಎಫ್‌ ಯೋಧರಿಂದ ಕಾರ್ಮಿಕನ ಹತ್ಯೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ಒಂದು ದಿನದ ನಂತರ, ಶೋಪಿಯಾನ್ ಜಿಲ್ಲೆಯ ಸಿಆರ್‌ಪಿಎಫ್ ಕ್ಯಾಂಪ್ ಬಳಿ ಭಾನುವಾರ ಬೆಳಿಗ್ಗೆ 20 ವರ್ಷದ ನಾಗರಿಕನನ್ನು ಅನುಮಾನಾಸ್ಪದ ವ್ಯಕ್ತಿಯೆಂದು ಗುಂಡಿಕ್ಕಿ ಕೊಲ್ಲಲಾಗಿದೆ.

ಮೃತರನ್ನು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದ ನಿವಾಸಿ ಶಾಹಿದ್ ಅಹ್ಮದ್ ರಾಥರ್ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುತಿಸಿದ್ದಾರೆ. ದಿನಗೂಲಿ ಕಾರ್ಮಿಕನಾಗಿದ್ದ ಶಾಹಿದ್‌ರನ್ನು ಸೇಬು ಬೆಳೆ ಕೊಯ್ಲು ಮಾಡಲು ಸಹಾಯಕ್ಕಾಗಿ ರೈತರೊಬ್ಬರು ಕರೆತಂದಿದ್ದರು ಎಂದು ವರದಿಯಾಗಿದೆ.

‘ದಿ ವೈರ್’ ಜಾಲತಾಣದೊಂದಿಗೆ ಮಾತನಾಡಿರುವ ಶಾಹಿದ್ ಅಹಮದ್‌ ರಾಥರ್‌ ಅವರ ಸಹೋದರ ಜುಬೈರ್‌‌ ಅಹಮದ್ ರಾಥರ್‌, “ಈ ಘಟನೆ ನಡೆದ ದಿನ (ಭಾನುವಾರ ಬೆಳಿಗ್ಗೆ) ಶಾಹಿದ್‌ ತನ್ನ ಮನೆಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಬಂದಿದ್ದರು. ಜೈನಾಪುರದಲ್ಲಿ ಅವರಿಗಿಂತ ಸ್ವಲ್ಪ ಮೀಟರ್‌ಗಳ ದೂರದಲ್ಲಿ ನಡೆಯುತ್ತಿದ್ದಾಗ ಸಿಆರ್‌ಪಿಎಫ್‌ ಗುಂಪು ಶಾಹಿದ್‌ ಮೇಲೆ ಗುಂಡು ಹಾರಿಸಿದೆ” ಎಂದು ಆರೋಪಿಸಿದ್ದಾರೆ.

ಶಾಹಿದ್ ಅಹಮದ್‌ ರಾಥರ್‌ ಅವರ ಸಹೋದರ ಜುಬೈರ್‌‌ ಅಹಮದ್ ರಾಥರ್‌ ದುಃಖಿಸುತ್ತಿರುವುದು. (PC: The Wire)

“ಇದು ಉದ್ದೇಶಿತ ಹತ್ಯೆ” ಎನ್ನುತ್ತಾ ಗದ್ಗದಿತನಾಗಿ ಮಾತು ಮುಂದುವರಿದ ಜಬೈರ್‌‌, “ಅತ್ಯಂತ ಅಮಾನುಷವಾಗಿ ಅವರು ಕೊಂದಿದ್ದಾರೆ. ಈ ಪ್ರಾಂತ್ಯದಲ್ಲಿ ಬಂದೂಕು ಜಳುಪಿಸಿರಲಿಲ್ಲ. ಆದರೆ ನಮ್ಮೊಂದಿಗೆ ಆಗಿದೆ. ಇದು ಎಲ್ಲಿ ಬೇಕಾದರೂ ಆಗಬಹುದು. ಅಮಾಯಕರನ್ನು ಕೊಲ್ಲುತ್ತಿರುವ ಅವರು (ಸಿಆರ್‌ಪಿಎಫ್‌), ಅಮಾಯಕರನ್ನು ಉಗ್ರಗಾಮಿಗಳಂತೆ ಬಿಂಬಿಸುತ್ತಿದ್ದಾರೆ. ನಮಗೆ ನ್ಯಾಯ ಬೇಕಿದೆ” ಎಂದು ಆಗ್ರಹಿಸಿದ್ದಾರೆ.

“ಶೋಪಿಯಾನ್ ಜಿಲ್ಲೆಯ ಬಾಬಾಪೋರಾ ಪ್ರದೇಶದಲ್ಲಿ ಸಿಆರ್‌ಪಿಎಫ್‌ನ 178 ಬೆಟಾಲಿಯನ್‌ನ ತಂಡದ ಮೇಲೆ ‘ಅಪರಿಚಿತ ಭಯೋತ್ಪಾದಕರು’ ದಾಳಿ ನಡೆಸಿದ್ದಾರೆ” ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ವಕ್ತಾರರು ಪ್ರತಿಕ್ರಿಯಿಸಿದ್ದಾರೆ.  “ಸಿಆರ್‌ಪಿಎಫ್ ಬಂದೂಕು ಬಳಸಿ ಪ್ರತೀಕಾರ ನಡೆಸಿತು. ತಪ್ಪಾದ ದಾಳಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೆಚ್ಚಿನ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ದಾಳಿಯಾಗಿದೆ ಎಂದು ಪೊಲೀಸರು ಹೇಳುತ್ತಿದ್ದು, “ಸಿಆರ್‌ಪಿಎಫ್‌ನ ಯಾವುದೇ ಅಧಿಕಾರಿಗಳು ಘಟನೆಯಲ್ಲಿ ಗಾಯಗೊಂಡಿಲ್ಲ” ಎಂದು ದಿ ವೈರ್‌ ವರದಿ ಮಾಡಿದೆ.

ಸಾವಿಗೀಡಾದ ವ್ಯಕ್ತಿಯು ಹತ್ತನೇ ತರಗತಿ ಡ್ರಾಪ್‌ಔಟ್‌ ಆಗಿದ್ದು, ನಾಲ್ಕು ಮಂದಿ ಒಡಹುಟ್ಟಿದವರಲ್ಲಿ ಹಿರಿಯವರಾಗಿದ್ದಾರೆ. ಕುಟುಂಬದ ಆಧಾರಸ್ತಂಭವಾಗಿದ್ದರು. ಅಜ್ಜಿ, ಪೋಷಕರು ಮತ್ತು ಕಿರಿಯ ಸಹೋದರನ್ನು ಶಾಹಿದ್ ಅಗಲಿದ್ದಾರೆ.

“ನಮ್ಮದು ಬಡ ಕುಟುಂಬ.  ಶಾಹಿದ್‌ ಶಾಲೆಯನ್ನು ಬಿಟ್ಟು, ತಂದೆಗೆ ಸಹಕರಿಸುತ್ತಿದ್ದನು. ಅದು ಅವನ ತಪ್ಪೇ? ಆತ ಉಗ್ರಗಾಮಿಯಾಗಿರಲಿಲ್ಲ. ಏಕೆ ಆತನನ್ನು ಇಷ್ಟು ಕ್ರೂರವಾಗಿ ಕೊಂದರು?” ಎಂದು ಅಳುತ್ತಲೇ ಶಾಹಿದ್‌ನ ಅಜ್ಜಿ ಆಜಿ ಬೇಗಂ ಮಾತನಾಡುತ್ತಿದ್ದರು. ನೆರೆಹೊರೆಯವರು ಆಜಿ ಬೇಗಂ ಅವರನ್ನು ಸಂತೈಸುತ್ತಿದ್ದರು.

ಶಾಹಿದ್‌ನ ಅಜ್ಜಿ ಆಜಿ ಬೇಗಂ

ಶೂಟ್‌ ಮಾಡಿದ ದೃಶ್ಯದ ಗ್ರಾಫಿಕ್ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಮಿನಿ ಟ್ರಕ್‌ ಅಡಿ ಶಾಹಿದ್ ಅವರ ತಲೆ ಸಿಲುಕಿರುವುದನ್ನು ಚಿತ್ರದಲ್ಲಿ ಕಾಣಬಹುದು. ಶಾಹಿದ್ ಕಾಲುಗಳು ಚಾಚಲ್ಪಟ್ಟಿವೆ.

“ಸ್ವಲ್ಪ ಹಣವನ್ನು ಸಂಪಾದಿಸಲು ಮತ್ತು ತನ್ನ ಕುಟುಂಬಕ್ಕೆ ಸಹಾಯ ಮಾಡಲು ಶಾಹಿದ್‌ ಶಾಲೆ ಬಿಟ್ಟಿದ್ದರು. ಶಾಹಿದ್‌ ಕುಟುಂಬ ಬಡತನ ರೇಖೆಗಿಂತ ಕೆಳಗಿದೆ. ಶಾಹಿದ್ ಹತ್ಯೆ ಇಡೀ ಗ್ರಾಮವನ್ನು ಬೆಚ್ಚಿಬೀಳಿಸಿದೆ” ಎಂದು ಹೆಸರು ಹೇಳಲಿಚ್ಛಿಸದ ಗ್ರಾಮಸ್ಥರೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಅಕ್ಟೋಬರ್ 7ರಂದು ಏಳು ಜನರಿದ್ದ ಬಡ ಅಲೆಮಾರಿ ಕುಟುಂಬ ಸದಸ್ಯ ಪರ್ವೇಜ್ ಅಹ್ಮದ್ ಖಾನ್ ಅವರನ್ನು  ಅನಂತನಾಗ್‌‌ನಲ್ಲಿ ಸಿಆರ್‌ಪಿಎಫ್‌ ಅಧಿಕಾರಿಗಳು ಹತ್ಯೆ ಮಾಡಿದ್ದರು.


ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...