Homeಮುಖಪುಟಜಮ್ಮು: ಪ್ರಮುಖ ಕಾಶ್ಮೀರಿ ಪಂಡಿತರ ಸಂಘಟನೆ ಕಾಂಗ್ರೆಸ್‌ನೊಂದಿಗೆ ವಿಲೀನ

ಜಮ್ಮು: ಪ್ರಮುಖ ಕಾಶ್ಮೀರಿ ಪಂಡಿತರ ಸಂಘಟನೆ ಕಾಂಗ್ರೆಸ್‌ನೊಂದಿಗೆ ವಿಲೀನ

- Advertisement -
- Advertisement -

ಕಾಶ್ಮೀರಿ ಪಂಡಿತರ ಸಂಘಟನೆ, ಆಲ್ ಇಂಡಿಯಾ ಕಾಶ್ಮೀರಿ ಹಿಂದೂ ಫೋರಂ (ಎಐಕೆಹೆಚ್‌ಎಫ್) ಶನಿವಾರ ಜಮ್ಮುವಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್‌ನೊಂದಿಗೆ ವಿಲೀನಗೊಂಡಿದೆ.

ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಕಾರ್ ರಸೂಲ್ ವಾನಿ ಅವರು ಎಐಕೆಹೆಚ್‌ಎಫ್ ಅಧ್ಯಕ್ಷ ರತನ್ ಲಾಲ್ ಭಾನ್ ಮತ್ತು ಇತರ ಪದಾಧಿಕಾರಿಗಳನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ಎಐಕೆಹೆಚ್‌ಎಫ್ ಅನ್ನು 1998 ರಲ್ಲಿ ಸ್ಥಾಪಿಸಲಾಯಿತು. ಅದರ ನೂರಾರು ಸದಸ್ಯರು ಕಾಂಗ್ರೆಸ್‌ಗೆ ಸೇರಿರುವುದು ಪಕ್ಷಕ್ಕೆ ದೊಡ್ಡ ಬಲ ಬಂದಂತಾಗಿದೆ ಎಂದು ವಾನಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಎಲ್ಲಾ ಕಾಶ್ಮೀರಿ ಪಂಡಿತ ಸಂಘಟನೆಗಳನ್ನು ಕಾಂಗ್ರೆಸ್‌ ಪಕ್ಷ ಸೇರಲು ಆಹ್ವಾನಿಸಿರುವ ರಸೂಲ್ ವಾನಿ, “ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ಪಂಡಿತ ಸಮುದಾಯವನ್ನು ‘ಮೂರ್ಖರನ್ನಾಗಿ’ ಮಾಡಿದೆ ಎಂದಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿತ್ತು. ಈ ಮೂಲಕ ಪಂಡಿತರನ್ನು ಮತ ಸೆಳೆಯುವ ವಿಷಯವನ್ನಾಗಿ ಬಳಸಿಕೊಂಡಿತ್ತು. ಆದರೆ, ಕಳೆದ 10 ವರ್ಷದ ಅಧಿಕಾರಾವಧಿಯಲ್ಲಿ ಬಿಜೆಪಿ ಪಂಡಿತ ಸಮುದಾಯಕ್ಕೆ 10 ಪೈಸೆಯ ಕೆಲಸ “ಎಂದು ವಾನಿ ಹೇಳಿದ್ದಾರೆ.

“ಕಳೆದ 10 ವರ್ಷಗಳಿಂದ ಬಿಜೆಪಿಯು ಪಂಡಿತ ಸಮುದಾಯವನ್ನು ಮೂರ್ಖರನ್ನಾಗಿಸುತ್ತಿರುವುದರಿಂದ ಇತರ ಕಾಶ್ಮೀರಿ ಪಂಡಿತ ಗುಂಪುಗಳನ್ನೂ ಕಾಂಗ್ರೆಸ್‌ಗೆ ಬರುವಂತೆ ನಾನು ಮನವಿ ಮಾಡುತ್ತೇನೆ. ನೆಹರು ಕುಟುಂಬವು ಮೂಲತಃ ಕಾಶ್ಮೀರಕ್ಕೆ ಸೇರಿದೆ. ಸ್ಥಳಾಂತರಗೊಂಡ ಪಂಡಿತರ ಬಗ್ಗೆ ಕಾಂಗ್ರೆಸ್ ಹೆಚ್ಚಿನ ಸಹಾನುಭೂತಿ ಹೊಂದಿದೆ” ಎಂದು ವಾನಿ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವು ಕಾಶ್ಮೀರಿ ಪಂಡಿತರಿಗಾಗಿ ಸಾಕಷ್ಟು ಕೆಲಸ ಮಾಡಿರುವುದರಿಂದ ಕಾಂಗ್ರೆಸ್‌ನೊಂದಿಗೆ ತಮ್ಮ ಸಂಘಟನೆಯನ್ನು ವಿಲೀನಗೊಳಿಸಲು ನಿರ್ಧರಿಸಿದ್ದೇವೆ ಎಂದು ಎಐಕೆಹೆಚ್‌ಎಫ್ ಅಧ್ಯಕ್ಷ ರತನ್ ಲಾಲ್ ಭಾನ್ ಹೇಳಿದ್ದಾರೆ.

“ನಾವು ನಮ್ಮ ಕುಟುಂಬಕ್ಕೆ ಮರಳಿದಂತಹ ಭಾವನೆ ಮೂಡುತ್ತಿದೆ. ಬಿಜೆಪಿ ಪಂಡಿತರನ್ನು ಶೋಷಿಸಿತ್ತಲ್ಲದೆ, ನಮಗಾಗಿ ಏನನ್ನೂ ಮಾಡಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : ನಿರಂಕುಶಾಧಿಕಾರ ದೇಶಕ್ಕೆ ಹಾನಿಕರ, ಸಮ್ಮಿಶ್ರ ಸರಕಾರವನ್ನು ಅಧಿಕಾರಕ್ಕೆ ತರಬೇಕು-ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...