Homeಮುಖಪುಟಬಂಗಾಳದಲ್ಲಿ ಕಾಶ್ಮೀರಿಗಳು ಅನುಮಾನಾಸ್ಪದ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಸುಳ್ಳು ಹರಡಿದ ಬಿಜೆಪಿಯ ಸುವೇಂದು ಅಧಿಕಾರಿ

ಬಂಗಾಳದಲ್ಲಿ ಕಾಶ್ಮೀರಿಗಳು ಅನುಮಾನಾಸ್ಪದ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಸುಳ್ಳು ಹರಡಿದ ಬಿಜೆಪಿಯ ಸುವೇಂದು ಅಧಿಕಾರಿ

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದಲ್ಲಿ ಕಾಶ್ಮೀರಿಗಳು ವೈರ್‌ಲೆಸ್ ನೆಟ್‌ವರ್ಕ್ ಸ್ಥಾಪಿಸಿದ್ದಾರೆ ಎಂದು ರಾಜ್ಯದ ಬಿಜೆಪಿ ವಿಪಕ್ಷ ನಾಯಕ ಸುವೆಂಧು ಅಧಿಕಾರಿ ಸುಳ್ಳು ಹೇಳುವ ಮೂಲಕ ರಾಜ್ಯದಲ್ಲಿ ಹಿಂಸಾಚಾರಕ್ಕೆ ಪ್ರಯತ್ನ ಮಾಡಿರುವ ಘಟನೆ ನಡೆದಿದೆ. ಅದಾಗ್ಯೂ, ಪೊಲೀಸರು ಅವರ ಹೇಳಿಕೆಯ ಬಗ್ಗೆಗಿನ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಿದ್ದಾರೆ. ಬಂಗಾಳದಲ್ಲಿ ಕಾಶ್ಮೀರಿಗಳು

ಕೋಲ್ಕತ್ತಾದ ದಕ್ಷಿಣ ಹೊರವಲಯದಲ್ಲಿರುವ ಬರುಯಿಪುರದಲ್ಲಿ ವಾಸಿಸುವ ಇಬ್ಬರು ಕಾಶ್ಮೀರಿ ವ್ಯಕ್ತಿಗಳು ತಮ್ಮ ಮನೆಯ ಛಾವಣಿಯ ಮೇಲೆ “ನ್ಯಾನೋಬೀಮ್ 2AC ಕಾಂಪ್ಯಾಕ್ಟ್ ಮತ್ತು ಹೈ-ಪರ್ಫಾರ್ಮೆನ್ಸ್ ವೈರ್‌ಲೆಸ್ ನೆಟ್‌ವರ್ಕ್ ಬ್ರಿಡ್ಜ್” ಅನ್ನು ಸ್ಥಾಪಿಸಿದ್ದಾರೆ ಎಂದು ಬಿಜೆಪಿ ಶಾಸಕ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಗುರುವಾರ ಆರೋಪಿಸಿದ್ದಾರೆ.

ಅದಾಗ್ಯೂ, ಬರುಯಿಪುರದ ಪೊಲೀಸರು ಈ ಹೇಳಿಕೆಯನ್ನು ನಿರಾಕರಿಸಿದ್ದು, ಆರೋಪಿತ ಇಬ್ಬರು ವ್ಯಕ್ತಿಗಳು ಮಧ್ಯಪ್ರದೇಶದ ಎಂಜಿನಿಯರ್‌ಗಳಾಗಿದ್ದು, ಅವರ ಛಾವಣಿಯ ಮೇಲೆ ಇರುವ ಸಾಧನವು ಇಂಟರ್ನೆಟ್ ಸಂಪರ್ಕಕ್ಕಾಗಿ ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಸುವೆಂಧು ಅಧಿಕಾರಿ, “ಇಬ್ಬರು ಕಾಶ್ಮೀರಿ ವ್ಯಕ್ತಿಗಳು… ಮೇಲ್ಛಾವಣಿಯಲ್ಲಿ ನ್ಯಾನೋಬೀಮ್ 2AC ಕಾಂಪ್ಯಾಕ್ಟ್ ಮತ್ತು ಹೈ-ಪರ್ಫಾರ್ಮೆನ್ಸ್ ವೈರ್‌ಲೆಸ್ ನೆಟ್‌ವರ್ಕ್ ಬ್ರಿಡ್ಜ್ ಅನ್ನು ಸ್ಥಾಪಿಸಿದ್ದಾರೆ ಎಂಬ ಮಾಹಿತಿಯನ್ನು ಸ್ಥಳೀಯರು ನನ್ನೊಂದಿಗೆ ಹಂಚಿಕೊಂಡಿದ್ದಾರೆ. ಅದನ್ನು ಹೆಚ್ಚಿನ ವೇಗದ, ದೂರದ ವೈರ್‌ಲೆಸ್ ಸಂಪರ್ಕಕ್ಕಾಗಿ ವಿನ್ಯಾಸಗೊಳಿಸಲಾಗಿದೆ.” ಎಂದು ಅವರು ಹೇಳಿದ್ದಾರೆ.

ಇಂತಹ ಅನುಮಾನಾಸ್ಪದ ಚಟುವಟಿಕೆಯ ಬಗ್ಗೆ ಪರಿಶೀಲಿಸುವಂತೆ ಅವರು ರಾಜ್ಯದ ಪೊಲೀಸ್ ಉಪ ಜನರಲ್ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು ಒತ್ತಾಯಿಸಿದ್ದಾರೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದಾರೆ.

ಸುವೆಂಧು ಅಧಿಕಾರಿಯ ಹೇಳಿಕೆಯನ್ನು ರಾಜ್ಯದ ಸ್ಪೀಕರ್ ಬಿಮನ್ ಬ್ಯಾನರ್ಜಿ ಟೀಕಿಸಿದ್ದು, ಅವರು “ಹಿಂಸಾಚಾರವನ್ನು ಪ್ರಚೋದಿಸಲು” ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. “ಕಾಶ್ಮೀರದಲ್ಲಿ ನಡೆದ ಘಟನೆಯ ನಂತರ ನಾವು ತುಂಬಾ ದುಃಖಿತರಾಗಿದ್ದೇವೆ. ಈ ಸಮಯದಲ್ಲಿ, ನಾವು ನಮ್ಮ ಶಾಂತತೆ ಮತ್ತು ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು.” ಎಂದು ಅವರು ಹೇಳಿದ್ದಾರೆ.

“ಸುವೆಂಧು ಅಧಿಕಾರಿ ಪಾಕಿಸ್ತಾನ ಧ್ವಜವನ್ನು ಸುಟ್ಟು ಹಿಂದೂ ಧರ್ಮದ ಬಗ್ಗೆ ಘೋಷಣೆಗಳನ್ನು ಕೂಗಿದ್ದಾರೆ. ಬಾಂಗ್ಲಾದೇಶ ಅಥವಾ ಪಾಕಿಸ್ತಾನದಲ್ಲಿ ಕೂಡಾ ಹಿಂದೂಗಳು ವಾಸಿಸುತ್ತಿದ್ದಾರೆಂದು ಅವರಿಗೆ ತಿಳಿದಿಲ್ಲ. ಅವರ ಮೇಲೆ ದಾಳಿ ಮಾಡಬಹುದೆ, ಇದು ತುಂಬಾ ದುರದೃಷ್ಟಕರ.” ಎಂದು ಬ್ಯಾನರ್ಜಿ ಹೇಳಿದ್ದಾರೆ.

ಮಧ್ಯಪ್ರದೇಶದ ಇಂಜಿನಿಯರ್‌ಗಳು ಸ್ಥಾಪಿಸಿದ ಸಾಧನವನ್ನು ಪರಿಶೀಲಿಸಲಾಗಿದೆ ಎಂದು ಬರುಯಿಪುರ ಪೊಲೀಸರು ತಿಳಿಸಿದ್ದಾರೆ. ಇಬ್ಬರು ಎಂಜಿನಿಯರ್‌ಗಳು ಪಶ್ಚಿಮ ಬಂಗಾಳದಲ್ಲಿ ಮೀನು ಕೃಷಿಯ ವ್ಯಾಪಾರದಲ್ಲಿ ಅವಕಾಶಗಳನ್ನು ಅನ್ವೇಷಿಸುತ್ತಿದ್ದಾರೆ ಎಂದು ಕಂಡುಬಂದಿದೆ. ಅವರ ಫ್ಲಾಟ್‌ನಲ್ಲಿ ಹಲವಾರು ನಾಗರಿಕರು ಬಳಸುತ್ತಿರುವ ಸರಳ ಜಿಯೋಫೈಬರ್ ನೆಟ್‌ವರ್ಕ್ ಇದೆ, ಅದರ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

“ಕೆಲವು ಜನರು ರಾಜ್ಯ ಅಥವಾ ಕೇಂದ್ರದ ತನಿಖಾ ಸಂಸ್ಥೆಗೆ ತಿಳಿಸುವ ಬದಲು ಸಾಮಾಜಿಕ ಮಾಧ್ಯಮದ ಮೂಲಕ ಇಂತಹ ತಪ್ಪಾದ ಮತ್ತು ಸಂಭಾವ್ಯವಾಗಿ ಪ್ರಚೋದನಕಾರಿ ಮಾಹಿತಿಯನ್ನು ಪ್ರಸಾರ ಮಾಡುತ್ತಿರುವುದು ದುರದೃಷ್ಟಕರ.” ಎಂದು ಪೊಲೀಸರು ಹೇಳಿದ್ದಾರೆ. ಬಂಗಾಳದಲ್ಲಿ ಕಾಶ್ಮೀರಿಗಳು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯದಂತೆ ‘ಹೆಚ್ಚುವರಿ ಕಾಳಜಿ’ ವಹಿಸಿ: ಇತರ ಮುಖ್ಯಮಂತ್ರಿಗಳಿಗೆ ಒಮರ್ ಅಬ್ದುಲ್ಲಾ ಮನವಿ

ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯದಂತೆ ‘ಹೆಚ್ಚುವರಿ ಕಾಳಜಿ’ ವಹಿಸಿ: ಇತರ ಮುಖ್ಯಮಂತ್ರಿಗಳಿಗೆ ಒಮರ್ ಅಬ್ದುಲ್ಲಾ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...