Homeಮುಖಪುಟಭಾರೀ ಹಿಮಪಾತದಲ್ಲಿ ಸಿಲುಕಿದ ಪ್ರವಾಸಿಗರಿಗೆ ಮನೆ, ಮಸೀದಿಗಳಲ್ಲಿ ಆಶ್ರಯ ನೀಡಿದ ಕಾಶ್ಮೀರಿಗಳು

ಭಾರೀ ಹಿಮಪಾತದಲ್ಲಿ ಸಿಲುಕಿದ ಪ್ರವಾಸಿಗರಿಗೆ ಮನೆ, ಮಸೀದಿಗಳಲ್ಲಿ ಆಶ್ರಯ ನೀಡಿದ ಕಾಶ್ಮೀರಿಗಳು

- Advertisement -
- Advertisement -

ಶ್ರೀನಗರ: ನಯನ ಮನೋಹರ ಕಣಿವೆ ಪ್ರದೇಶ ಕಾಶ್ಮೀರದಲ್ಲಿ ಭಾರೀ ಹಿಮಪಾತದ ಹಿನ್ನೆಲೆಯಲ್ಲಿ ನೂರಾರು ಪ್ರವಾಸಿಗರನ್ನು ಬಾಧಿಸುತ್ತಿರುವ ಪ್ರತಿಕೂಲ ಪರಿಸ್ಥಿತಿಯಲ್ಲಿ ಅವರಿಗೆ ಮನೆ, ಮಸೀದಿಗಳಲ್ಲಿ ಕಾಶ್ಮೀರಿಗಳು ಆಶ್ರಯ ನೀಡಿ ತಮ್ಮ ಉದಾತ್ತ ಸ್ವಭಾವವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ.

ಕಣಿವೆ ಪ್ರದೇಶವು ಶುಕ್ರವಾರ ವ್ಯಾಪಕ ಹಿಮಪಾತವನ್ನು ಕಂಡಿದೆ. ಇದು ವಿಮಾನ ಮತ್ತು ರೈಲ್ವೆ ಕಾರ್ಯಾಚರಣೆಗೆ ಸಾಕಷ್ಟು ಅಡ್ಡಿಪಡಿಸಿದೆ. ಅಷ್ಟು ಮಾತ್ರವಲ್ಲ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲು ಕಾರಣವಾಗಿದೆ.

ಕಣಿವೆಯ ಇತರ ಬಯಲು ಪ್ರದೇಶಗಳಲ್ಲಿ ಋತುವಿನ ಮೊದಲ ಹಿಮಪಾತ ಸೇರಿದಂತೆ, ಮಧ್ಯಮದಿಂದ ಭಾರೀ ಹಿಮಪಾತವು ಕಾಶ್ಮೀರವನ್ನು ಆವರಿಸಿದೆ ಎಂದು ಹಲವಾರು ಪ್ರವಾಸಿಗರು ಹೇಳಿಕೊಂಡಿದ್ದಾರೆ. ಕಾಶ್ಮೀರದ ದಕ್ಷಿಣ ಭಾಗಗಳು ವಿಶೇಷವಾಗಿ ಭಾರೀ ಹಿಮಪಾತವನ್ನು ಅನುಭವಿಸುತ್ತಿವೆ. ಕಾಶ್ಮೀರಿಗಳು ತಮ್ಮ ಮನೆಗಳಲ್ಲಿ ಪ್ರವಾಸಿಗರಿಗೆ ಆಹಾರವನ್ನು ಬಡಿಸುವಲ್ಲಿ ಹೃತ್ಪೂರ್ವಕವಾಗಿ ತೊಡಗಿಸಿಕೊಂಡಿದ್ದಾರೆ. ತಮ್ಮ ಆತಿಥ್ಯಕ್ಕೆ ಹೆಸರುವಾಸಿಯಾದ ಕಾಶ್ಮೀರಿಗಳು ಈ ಪ್ರದೇಶದ ನಿರಂತರ ಸವಾಲುಗಳ ನಡುವೆಯೂ ಮತ್ತೊಮ್ಮೆ ತಮ್ಮ ಸ್ವಾಗತಾರ್ಹ ಸ್ವಭಾವವನ್ನು ಪ್ರದರ್ಶಿಸಿದ್ದಾರೆ.

ಸರ್ವ ಪಕ್ಷಗಳ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್ ಅವರು, ಕಾಶ್ಮೀರದ ಜನರ ಮಾನವೀಯ ಸ್ಪಂದನೆಗಾಗಿ ಶ್ಲಾಘಿಸಿದ್ದಾರೆ. ಎಕ್ಸ್ ನಲ್ಲಿ ತಮ್ಮ ಮೆಚ್ಚುಗೆಯನ್ನು ಹಂಚಿಕೊಂಡ ಅವರು ಸಮುದಾಯದ  ದಯಾಳುತನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಿಮಪಾತದಲ್ಲಿ ಸಿಲುಕಿರುವ ಪ್ರವಾಸಿಗರು ಸ್ಥಳೀಯರಿಂದ ಸಹಾಯಾಸ್ತ ಸ್ವೀಕರಿಸಿರುವ ವೀಡಿಯೊಗಳನ್ನು ಸ್ಥಳೀಯ ರಾಜಕಾರಣಿಗಳು ಮತ್ತು ಕಾರ್ಯಕರ್ತರು ಹಂಚಿಕೊಂಡಿದ್ದಾರೆ. ಕೆಲವು ದೃಶ್ಯಗಳು ಖಾಜಿಗುಂಡ್-ಬನಿಹಾಲ್ ನವಯುಗ್ ಸುರಂಗದೊಳಗೆ ಪ್ರವಾಸಿಗರು ಸ್ಥಳೀಯರೊಂದಿಗೆ ಕ್ರಿಕೆಟ್ ಆಡುತ್ತಿರುವಂತಹ ಲಘು ಕ್ಷಣಗಳನ್ನು ಸೆರೆಹಿಡಿದಿವೆ.

ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಪರಿಸ್ಥಿತಿಯ ಬಗ್ಗೆ ಅವಲೋಕಿಸಿದ್ದು, ಖಾಜಿಗುಂಡ್ ಮತ್ತು ಸುರಂಗದ ನಡುವೆ ಸುಮಾರು 2,000 ವಾಹನಗಳು ಸಿಲುಕಿಕೊಂಡಿವೆ. ಹಿಮ ತೆರವು ಪೂರ್ಣಗೊಂಡಿದ್ದರೂ, ಹಿಮಾವೃತ ರಸ್ತೆಗಳು ಸವಾಲಾಗಿ ಉಳಿದಿವೆ. ಭಾರಿ ವಾಹನಗಳಿಗೆ ಅನುಮತಿ ನೀಡಲಾಗುತ್ತಿದ್ದು, ಉಳಿದ ವಾಹನಗಳನ್ನು ತೆರವುಗೊಳಿಸುವ ಪ್ರಯತ್ನ ಮುಂದುವರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...