Homeಮುಖಪುಟಭಾರೀ ಹಿಮಪಾತದಲ್ಲಿ ಸಿಲುಕಿದ ಪ್ರವಾಸಿಗರಿಗೆ ಮನೆ, ಮಸೀದಿಗಳಲ್ಲಿ ಆಶ್ರಯ ನೀಡಿದ ಕಾಶ್ಮೀರಿಗಳು

ಭಾರೀ ಹಿಮಪಾತದಲ್ಲಿ ಸಿಲುಕಿದ ಪ್ರವಾಸಿಗರಿಗೆ ಮನೆ, ಮಸೀದಿಗಳಲ್ಲಿ ಆಶ್ರಯ ನೀಡಿದ ಕಾಶ್ಮೀರಿಗಳು

- Advertisement -
- Advertisement -

ಶ್ರೀನಗರ: ನಯನ ಮನೋಹರ ಕಣಿವೆ ಪ್ರದೇಶ ಕಾಶ್ಮೀರದಲ್ಲಿ ಭಾರೀ ಹಿಮಪಾತದ ಹಿನ್ನೆಲೆಯಲ್ಲಿ ನೂರಾರು ಪ್ರವಾಸಿಗರನ್ನು ಬಾಧಿಸುತ್ತಿರುವ ಪ್ರತಿಕೂಲ ಪರಿಸ್ಥಿತಿಯಲ್ಲಿ ಅವರಿಗೆ ಮನೆ, ಮಸೀದಿಗಳಲ್ಲಿ ಕಾಶ್ಮೀರಿಗಳು ಆಶ್ರಯ ನೀಡಿ ತಮ್ಮ ಉದಾತ್ತ ಸ್ವಭಾವವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ.

ಕಣಿವೆ ಪ್ರದೇಶವು ಶುಕ್ರವಾರ ವ್ಯಾಪಕ ಹಿಮಪಾತವನ್ನು ಕಂಡಿದೆ. ಇದು ವಿಮಾನ ಮತ್ತು ರೈಲ್ವೆ ಕಾರ್ಯಾಚರಣೆಗೆ ಸಾಕಷ್ಟು ಅಡ್ಡಿಪಡಿಸಿದೆ. ಅಷ್ಟು ಮಾತ್ರವಲ್ಲ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲು ಕಾರಣವಾಗಿದೆ.

ಕಣಿವೆಯ ಇತರ ಬಯಲು ಪ್ರದೇಶಗಳಲ್ಲಿ ಋತುವಿನ ಮೊದಲ ಹಿಮಪಾತ ಸೇರಿದಂತೆ, ಮಧ್ಯಮದಿಂದ ಭಾರೀ ಹಿಮಪಾತವು ಕಾಶ್ಮೀರವನ್ನು ಆವರಿಸಿದೆ ಎಂದು ಹಲವಾರು ಪ್ರವಾಸಿಗರು ಹೇಳಿಕೊಂಡಿದ್ದಾರೆ. ಕಾಶ್ಮೀರದ ದಕ್ಷಿಣ ಭಾಗಗಳು ವಿಶೇಷವಾಗಿ ಭಾರೀ ಹಿಮಪಾತವನ್ನು ಅನುಭವಿಸುತ್ತಿವೆ. ಕಾಶ್ಮೀರಿಗಳು ತಮ್ಮ ಮನೆಗಳಲ್ಲಿ ಪ್ರವಾಸಿಗರಿಗೆ ಆಹಾರವನ್ನು ಬಡಿಸುವಲ್ಲಿ ಹೃತ್ಪೂರ್ವಕವಾಗಿ ತೊಡಗಿಸಿಕೊಂಡಿದ್ದಾರೆ. ತಮ್ಮ ಆತಿಥ್ಯಕ್ಕೆ ಹೆಸರುವಾಸಿಯಾದ ಕಾಶ್ಮೀರಿಗಳು ಈ ಪ್ರದೇಶದ ನಿರಂತರ ಸವಾಲುಗಳ ನಡುವೆಯೂ ಮತ್ತೊಮ್ಮೆ ತಮ್ಮ ಸ್ವಾಗತಾರ್ಹ ಸ್ವಭಾವವನ್ನು ಪ್ರದರ್ಶಿಸಿದ್ದಾರೆ.

ಸರ್ವ ಪಕ್ಷಗಳ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್ ಅವರು, ಕಾಶ್ಮೀರದ ಜನರ ಮಾನವೀಯ ಸ್ಪಂದನೆಗಾಗಿ ಶ್ಲಾಘಿಸಿದ್ದಾರೆ. ಎಕ್ಸ್ ನಲ್ಲಿ ತಮ್ಮ ಮೆಚ್ಚುಗೆಯನ್ನು ಹಂಚಿಕೊಂಡ ಅವರು ಸಮುದಾಯದ  ದಯಾಳುತನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಿಮಪಾತದಲ್ಲಿ ಸಿಲುಕಿರುವ ಪ್ರವಾಸಿಗರು ಸ್ಥಳೀಯರಿಂದ ಸಹಾಯಾಸ್ತ ಸ್ವೀಕರಿಸಿರುವ ವೀಡಿಯೊಗಳನ್ನು ಸ್ಥಳೀಯ ರಾಜಕಾರಣಿಗಳು ಮತ್ತು ಕಾರ್ಯಕರ್ತರು ಹಂಚಿಕೊಂಡಿದ್ದಾರೆ. ಕೆಲವು ದೃಶ್ಯಗಳು ಖಾಜಿಗುಂಡ್-ಬನಿಹಾಲ್ ನವಯುಗ್ ಸುರಂಗದೊಳಗೆ ಪ್ರವಾಸಿಗರು ಸ್ಥಳೀಯರೊಂದಿಗೆ ಕ್ರಿಕೆಟ್ ಆಡುತ್ತಿರುವಂತಹ ಲಘು ಕ್ಷಣಗಳನ್ನು ಸೆರೆಹಿಡಿದಿವೆ.

ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಪರಿಸ್ಥಿತಿಯ ಬಗ್ಗೆ ಅವಲೋಕಿಸಿದ್ದು, ಖಾಜಿಗುಂಡ್ ಮತ್ತು ಸುರಂಗದ ನಡುವೆ ಸುಮಾರು 2,000 ವಾಹನಗಳು ಸಿಲುಕಿಕೊಂಡಿವೆ. ಹಿಮ ತೆರವು ಪೂರ್ಣಗೊಂಡಿದ್ದರೂ, ಹಿಮಾವೃತ ರಸ್ತೆಗಳು ಸವಾಲಾಗಿ ಉಳಿದಿವೆ. ಭಾರಿ ವಾಹನಗಳಿಗೆ ಅನುಮತಿ ನೀಡಲಾಗುತ್ತಿದ್ದು, ಉಳಿದ ವಾಹನಗಳನ್ನು ತೆರವುಗೊಳಿಸುವ ಪ್ರಯತ್ನ ಮುಂದುವರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...