Homeಮುಖಪುಟಭಾರೀ ಹಿಮಪಾತದಲ್ಲಿ ಸಿಲುಕಿದ ಪ್ರವಾಸಿಗರಿಗೆ ಮನೆ, ಮಸೀದಿಗಳಲ್ಲಿ ಆಶ್ರಯ ನೀಡಿದ ಕಾಶ್ಮೀರಿಗಳು

ಭಾರೀ ಹಿಮಪಾತದಲ್ಲಿ ಸಿಲುಕಿದ ಪ್ರವಾಸಿಗರಿಗೆ ಮನೆ, ಮಸೀದಿಗಳಲ್ಲಿ ಆಶ್ರಯ ನೀಡಿದ ಕಾಶ್ಮೀರಿಗಳು

- Advertisement -
- Advertisement -

ಶ್ರೀನಗರ: ನಯನ ಮನೋಹರ ಕಣಿವೆ ಪ್ರದೇಶ ಕಾಶ್ಮೀರದಲ್ಲಿ ಭಾರೀ ಹಿಮಪಾತದ ಹಿನ್ನೆಲೆಯಲ್ಲಿ ನೂರಾರು ಪ್ರವಾಸಿಗರನ್ನು ಬಾಧಿಸುತ್ತಿರುವ ಪ್ರತಿಕೂಲ ಪರಿಸ್ಥಿತಿಯಲ್ಲಿ ಅವರಿಗೆ ಮನೆ, ಮಸೀದಿಗಳಲ್ಲಿ ಕಾಶ್ಮೀರಿಗಳು ಆಶ್ರಯ ನೀಡಿ ತಮ್ಮ ಉದಾತ್ತ ಸ್ವಭಾವವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ.

ಕಣಿವೆ ಪ್ರದೇಶವು ಶುಕ್ರವಾರ ವ್ಯಾಪಕ ಹಿಮಪಾತವನ್ನು ಕಂಡಿದೆ. ಇದು ವಿಮಾನ ಮತ್ತು ರೈಲ್ವೆ ಕಾರ್ಯಾಚರಣೆಗೆ ಸಾಕಷ್ಟು ಅಡ್ಡಿಪಡಿಸಿದೆ. ಅಷ್ಟು ಮಾತ್ರವಲ್ಲ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲು ಕಾರಣವಾಗಿದೆ.

ಕಣಿವೆಯ ಇತರ ಬಯಲು ಪ್ರದೇಶಗಳಲ್ಲಿ ಋತುವಿನ ಮೊದಲ ಹಿಮಪಾತ ಸೇರಿದಂತೆ, ಮಧ್ಯಮದಿಂದ ಭಾರೀ ಹಿಮಪಾತವು ಕಾಶ್ಮೀರವನ್ನು ಆವರಿಸಿದೆ ಎಂದು ಹಲವಾರು ಪ್ರವಾಸಿಗರು ಹೇಳಿಕೊಂಡಿದ್ದಾರೆ. ಕಾಶ್ಮೀರದ ದಕ್ಷಿಣ ಭಾಗಗಳು ವಿಶೇಷವಾಗಿ ಭಾರೀ ಹಿಮಪಾತವನ್ನು ಅನುಭವಿಸುತ್ತಿವೆ. ಕಾಶ್ಮೀರಿಗಳು ತಮ್ಮ ಮನೆಗಳಲ್ಲಿ ಪ್ರವಾಸಿಗರಿಗೆ ಆಹಾರವನ್ನು ಬಡಿಸುವಲ್ಲಿ ಹೃತ್ಪೂರ್ವಕವಾಗಿ ತೊಡಗಿಸಿಕೊಂಡಿದ್ದಾರೆ. ತಮ್ಮ ಆತಿಥ್ಯಕ್ಕೆ ಹೆಸರುವಾಸಿಯಾದ ಕಾಶ್ಮೀರಿಗಳು ಈ ಪ್ರದೇಶದ ನಿರಂತರ ಸವಾಲುಗಳ ನಡುವೆಯೂ ಮತ್ತೊಮ್ಮೆ ತಮ್ಮ ಸ್ವಾಗತಾರ್ಹ ಸ್ವಭಾವವನ್ನು ಪ್ರದರ್ಶಿಸಿದ್ದಾರೆ.

ಸರ್ವ ಪಕ್ಷಗಳ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್ ಅವರು, ಕಾಶ್ಮೀರದ ಜನರ ಮಾನವೀಯ ಸ್ಪಂದನೆಗಾಗಿ ಶ್ಲಾಘಿಸಿದ್ದಾರೆ. ಎಕ್ಸ್ ನಲ್ಲಿ ತಮ್ಮ ಮೆಚ್ಚುಗೆಯನ್ನು ಹಂಚಿಕೊಂಡ ಅವರು ಸಮುದಾಯದ  ದಯಾಳುತನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಿಮಪಾತದಲ್ಲಿ ಸಿಲುಕಿರುವ ಪ್ರವಾಸಿಗರು ಸ್ಥಳೀಯರಿಂದ ಸಹಾಯಾಸ್ತ ಸ್ವೀಕರಿಸಿರುವ ವೀಡಿಯೊಗಳನ್ನು ಸ್ಥಳೀಯ ರಾಜಕಾರಣಿಗಳು ಮತ್ತು ಕಾರ್ಯಕರ್ತರು ಹಂಚಿಕೊಂಡಿದ್ದಾರೆ. ಕೆಲವು ದೃಶ್ಯಗಳು ಖಾಜಿಗುಂಡ್-ಬನಿಹಾಲ್ ನವಯುಗ್ ಸುರಂಗದೊಳಗೆ ಪ್ರವಾಸಿಗರು ಸ್ಥಳೀಯರೊಂದಿಗೆ ಕ್ರಿಕೆಟ್ ಆಡುತ್ತಿರುವಂತಹ ಲಘು ಕ್ಷಣಗಳನ್ನು ಸೆರೆಹಿಡಿದಿವೆ.

ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಪರಿಸ್ಥಿತಿಯ ಬಗ್ಗೆ ಅವಲೋಕಿಸಿದ್ದು, ಖಾಜಿಗುಂಡ್ ಮತ್ತು ಸುರಂಗದ ನಡುವೆ ಸುಮಾರು 2,000 ವಾಹನಗಳು ಸಿಲುಕಿಕೊಂಡಿವೆ. ಹಿಮ ತೆರವು ಪೂರ್ಣಗೊಂಡಿದ್ದರೂ, ಹಿಮಾವೃತ ರಸ್ತೆಗಳು ಸವಾಲಾಗಿ ಉಳಿದಿವೆ. ಭಾರಿ ವಾಹನಗಳಿಗೆ ಅನುಮತಿ ನೀಡಲಾಗುತ್ತಿದ್ದು, ಉಳಿದ ವಾಹನಗಳನ್ನು ತೆರವುಗೊಳಿಸುವ ಪ್ರಯತ್ನ ಮುಂದುವರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...