Homeಕರ್ನಾಟಕಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

- Advertisement -
- Advertisement -

-ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು ಅಧಿಸೂಚನೆ

-ವಯನಾಡ್ ದುರಂತದ ಬಳಿಕ ಆರನೇ ಅಧಿಸೂಚನೆ

ಸುಬ್ರಹ್ಮಣ್ಯ:  ಪಶ್ಚಿಮ ಘಟ್ಟದ ಕುರಿತು ಹಿರಿಯ ವಿಜ್ಞಾನಿ ಡಾ.ಕಸ್ತೂರಿ ರಂಗನ್ ವರದಿ ಬಗೆಗಿನ ಆತಂಕ, ಗೊಂದಲಗಳನ್ನು ನಮ್ಮ ಸರ್ಕಾರ ನಿವಾರಣೆ ಮಾಡಿದ್ದು, ವರದಿಯನ್ನು ನಾವು ತಿರಸ್ಕಾರ ಮಾಡಿದ್ದೇವೆ. ಪಶ್ಚಿಮ ಘಟ್ಟ ಸಂರಕ್ಷಣೆಗೂ ಜನ ಆದ್ಯತೆ ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶತಮಾನಗಳಿಂದ ಜನ ಇಲ್ಲಿ ವಾಸಿಸುತ್ತಿದ್ದು, ಅರಣ್ಯದಂಚಿನ ಜನರೇ ಅರಣ್ಯ ರಕ್ಷಿಸುತ್ತಿದ್ದಾರೆ. ಅರಣ್ಯ ರಕ್ಷಣೆಗೆ ಈಗಾಗಲೇ ನಮ್ಮಲ್ಲಿ ಯೋಜನೆಗಳಿವೆ. ಜನರ, ಜನಪ್ರತಿನಿಧಗಳ ಬೇಡಿಕೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡಿದ್ದೇವೆ ಎಂದು ಕೇಂದ್ರಕ್ಕೆ ತಿಳಿಸಿದ್ದೇವೆ ಎಂದರು.

ಜಂಟಿ ಸರ್ವೆಗೆ ಸಂಬಂಧಿಸಿ ಕಂದಾಯ, ಅರಣ್ಯ ಸಚಿವರು, ಅಧಿಕಾರಿಗಳು ಜಂಟಿಯಾಗಿ ಸಭೆ ನಡೆಸಿ ಜಂಟಿ ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯದ 31 ಜಿಲ್ಲೆಗಳಲ್ಲಿ ಜಂಟಿ ಸರ್ವೆಗೆ ಸಮಿತಿ ರಚಿಸಲಾಗಿದೆ. ಅದರಂತೆ ಮುಂದಿನ ಆರು ತಿಂಗಳಲ್ಲಿ ಸರ್ವೆ ನಡೆಸಿ ವಾಸ್ತವದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ. ಈ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಯಲಿದೆ ಎಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಹಸಿರೀಕರಣ, ಅರಣ್ಯ ಉಳಿಸಲು ಹೆಚ್ಚಿನ ಯೋಜನೆ ರೂಪಿಸಿದ್ದಾರೆ. 2023ರಿಂದ 2025ರ ಮಧ್ಯೆ ರಾಜ್ಯದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗುವ ವಿಶ್ವಾಸ ಇದೆ ಎಂದರು.

ಕರ್ನಾಟಕದಲ್ಲಿ ಅರಣ್ಯ ನಾಶವಾಗಿದೆ ಎಂಬ ವರದಿ 2021-23ರ ಮಾರ್ಚ್ ವರೆಗಿನ ವರದಿ. ಆ ಸಮಯದಲ್ಲಿ ಈ ಹಿಂದಿನ ಸರ್ಕಾರ ಅಧಿಕಾರದಲ್ಲಿತ್ತು. ಈಗ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅರಣ್ಯ ಹಸುರೀಕರಣ, ಅರಣ್ಯ ಉಳಿಸಲು ಹೆಚ್ಚಿನ ಯೋಜನೆ ರೂಪಿಸಲಾಗಿದೆ. 2023ರಿಂದ 2025 ರಲ್ಲಿ ಕರ್ನಾಟಕ ರಾಜ್ಯದಲ್ಲಿಅರಣ್ಯ ಪ್ರದೇಶ ಜಾಸ್ತಿಯಾಗುವ ವಿಶ್ವಾಸ ಇದೆ ಎಂದರು.

ಸಂಸದ ಸಾಗರ್ ಖಂಡ್ರೆ, ಡಿಸಿಎಫ್ ಅಂತೋಣಿ ಮರಿಯಪ್ಪ, ಎಸಿಎಫ್ ಪ್ರವೀಣ್ ಕುಮಾರ್, ವಿಮಲ್ ಬಾಬು, ಮಂಜುನಾಥ್, ಸಂಧ್ಯಾ, ದೇವಳದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ ಭಾಗವಹಿಸಿದ್ದರು.

ಸುವರ್ಣ ಸೌಧದಲ್ಲಿ….

ಸುವರ್ಣಸೌಧ (ವಿಧಾನಪರಿಷತ್ತು): ಪಶ್ಚಿಮ ಘಟ್ಟದ ಕುರಿತಾಗಿ ಕಸ್ತೂರಿ ರಂಗನ್‌ ಸಮಿತಿ ವರದಿಯನ್ನು ಸಚಿವ ಸಂಪುಟದ ಉಪಸಮಿತಿಯಲ್ಲಿ ತಿರಸ್ಕರಿಸಲಾಗಿದ್ದು, ಸಚಿವ ಸಂಪುಟದ ಮುಂದೆಯೂ ವಿಷಯ ತಂದು ಅಲ್ಲಿಯೂ ವರದಿ ತಿರಸ್ಕಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆರ್‌.ಶಂಕರ್‌ ಹೇಳಿದ್ದರು.

ಪ್ರಶ್ನೋತ್ತರ ವೇಳೆಯಲ್ಲಿ  ಕಾಂಗ್ರೆಸ್‌ ಸದಸ್ಯ ಐವನ್‌ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಸ್ತೂರಿ ರಂಗನ್‌ ವರದಿ ಅನುಷ್ಠಾನ ಕುರಿತಾಗಿ ಕೇಂದ್ರದಿಂದ  ಪದೇ ಪದೇ ಒತ್ತಡ ಬರುತ್ತಿದೆ. ಆದರೆ ಅದನ್ನು ಒಪ್ಪುವ ಪ್ರಮೇಯವೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು.

ಕಾಂಗ್ರೆಸ್‌ ಸದಸ್ಯ ಸಿ.ಎಂ.ಇಬ್ರಾಹಿಂ ಮಾತನಾಡಿ, ಕಸ್ತೂರಿ ರಂಗನ್‌ ವರದಿಯನ್ನು ಕೇರಳ ಸರಕಾರ ಈಗಾಗಲೇ ತಿರಸ್ಕರಿಸಿದ್ದು, ಇಲ್ಲಿಯೂ ತಿರಸ್ಕಾರ ಮಾಡಬೇಕೆಂದರು. ಇದಕ್ಕೂ ಮೊದಲು ಮಾತನಾಡಿದ ಐವನ್‌ ಡಿಸೋಜಾ,  ರಾಜ್ಯದ 10 ಜಿಲ್ಲೆ, 40 ತಾಲೂಕು, 1,576 ಗ್ರಾಮಗಳ ವ್ಯಾಪ್ತಿಯಲ್ಲಿನ ಪ್ರದೇಶವನ್ನು ಕಸ್ತೂರಿ ರಂಗನ್‌ ವರದಿಯಲ್ಲಿ ಪ್ರಸ್ತಾಪಿಸಲಾಗಿದ್ದು, ಶೇ.20ಕ್ಕಿಂತ ಹೆಚ್ಚು  ಅರಣ್ಯ ಪ್ರದೇಶ ಹೊಂದಿದ ಪ್ರದೇಶವನ್ನು ಸೂಕ್ಷ್ಮ ಎಂದು ಪರಿಗಣಿಸಿ, ಅಲ್ಲಿ ಯಾವುದೇ ಕೈಗಾರಿಕೆ, ಅಭಿವೃದ್ಧಿ ಕಾರ್ಯಕೈಗೊಳ್ಳುವಂತಿಲ್ಲ. ದಕ್ಷಿಣ ಕನ್ನಡದ 45 ಗ್ರಾಮಗಳು ತೀವ್ರ ಸಮಸ್ಯೆ ಎದುರಿಸುವಂತಾಗಿದೆ ಎಂದಿದ್ದರು.

ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು ಅಧಿಸೂಚನೆ

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಗುರುವಾರ (ಸೆ.26) ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಅವರು “ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ” ಎಂದಿದ್ದರು.

 

 

 

 

 

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ ಸರ್ಕಾರ ಜುಲೈ 31, 2024ರಂದು ಆರನೇ ಕರಡು ಅಧಿಸೂಚನೆ ಹೊರಡಿಸಿತ್ತು. 60 ದಿನಗಳಲ್ಲಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು ರಾಜ್ಯಗಳಿಗೆ ಸೂಚಿಸಿತ್ತು.

ಕಸ್ತೂರಿ ರಂಗನ್ ವರದಿಯು ಕರ್ನಾಟಕದ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಎಂದು ಗುರುತಿಸಿತ್ತು. ಇದರಲ್ಲಿ ಆಗಿದ್ದ ಕೆಲ ಲೋಪಗಳನ್ನು ತಿದ್ದುಪಡಿ ಮಾಡಿ, 19, 252.70 ಚದರ ಕಿ.ಮೀ ಪ್ರದೇಶವನ್ನು ಸೂಕ್ಷ್ಮ ಎಂದು ಪರಿಗಣಿಸಲಾಗಿತ್ತು. ರಾಜ್ಯದ ವಿವಿಧ ಅರಣ್ಯ ಕಾನೂನುಗಳ ಅಡಿಯಲ್ಲಿ ಈಗಾಗಲೇ 16,164 ಚದರ ಕಿ.ಮೀ ಅರಣ್ಯ ಪ್ರದೇಶವನ್ನು ಸಂರಕ್ಷಿಸಲಾಗುತ್ತಿದೆ. ಆದ್ದರಿಂದ ಕರಡು ಅಧಿಸೂಚನೆ ತಿರಸ್ಕರಿಸಲಾಗಿದೆ ಎಂದು ಹೆಚ್.ಕೆ ಪಾಟೀಲ್ ವಿವರಿಸಿದ್ದರು.

ವಯನಾಡ್ ದುರಂತದ ಬಳಿಕ ಆರನೇ ಅಧಿಸೂಚನೆ

ಜುಲೈ 31, 2024ರ ಆರನೇ ಕರಡು ಅಧಿಸೂಚನೆಯಲ್ಲಿ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟಗಳ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಗುರುತಿಸಿತ್ತು.

ಈ ಹಿಂದೆ ಐದು ಬಾರಿ ಕರಡು ಅಧಿಸೂಚನೆ ಹೊರಡಿಸಿದ್ದ ಕೇಂದ್ರ, ವಯನಾಡ್‌ ಭೂಕುಸಿತ ದುರಂತ ಸಂಭವಿಸಿದ ಬಳಿಕ 6ನೇ ಅಧಿಸೂಚನೆ ಪ್ರಕಟಿಸಿತ್ತು.

ಕಸ್ತೂರಿ ರಂಗನ್ ವರದಿ ತಿರಸ್ಕಾರ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...