Homeಕರ್ನಾಟಕಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

- Advertisement -
- Advertisement -

-ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು ಅಧಿಸೂಚನೆ

-ವಯನಾಡ್ ದುರಂತದ ಬಳಿಕ ಆರನೇ ಅಧಿಸೂಚನೆ

ಸುಬ್ರಹ್ಮಣ್ಯ:  ಪಶ್ಚಿಮ ಘಟ್ಟದ ಕುರಿತು ಹಿರಿಯ ವಿಜ್ಞಾನಿ ಡಾ.ಕಸ್ತೂರಿ ರಂಗನ್ ವರದಿ ಬಗೆಗಿನ ಆತಂಕ, ಗೊಂದಲಗಳನ್ನು ನಮ್ಮ ಸರ್ಕಾರ ನಿವಾರಣೆ ಮಾಡಿದ್ದು, ವರದಿಯನ್ನು ನಾವು ತಿರಸ್ಕಾರ ಮಾಡಿದ್ದೇವೆ. ಪಶ್ಚಿಮ ಘಟ್ಟ ಸಂರಕ್ಷಣೆಗೂ ಜನ ಆದ್ಯತೆ ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶತಮಾನಗಳಿಂದ ಜನ ಇಲ್ಲಿ ವಾಸಿಸುತ್ತಿದ್ದು, ಅರಣ್ಯದಂಚಿನ ಜನರೇ ಅರಣ್ಯ ರಕ್ಷಿಸುತ್ತಿದ್ದಾರೆ. ಅರಣ್ಯ ರಕ್ಷಣೆಗೆ ಈಗಾಗಲೇ ನಮ್ಮಲ್ಲಿ ಯೋಜನೆಗಳಿವೆ. ಜನರ, ಜನಪ್ರತಿನಿಧಗಳ ಬೇಡಿಕೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡಿದ್ದೇವೆ ಎಂದು ಕೇಂದ್ರಕ್ಕೆ ತಿಳಿಸಿದ್ದೇವೆ ಎಂದರು.

ಜಂಟಿ ಸರ್ವೆಗೆ ಸಂಬಂಧಿಸಿ ಕಂದಾಯ, ಅರಣ್ಯ ಸಚಿವರು, ಅಧಿಕಾರಿಗಳು ಜಂಟಿಯಾಗಿ ಸಭೆ ನಡೆಸಿ ಜಂಟಿ ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯದ 31 ಜಿಲ್ಲೆಗಳಲ್ಲಿ ಜಂಟಿ ಸರ್ವೆಗೆ ಸಮಿತಿ ರಚಿಸಲಾಗಿದೆ. ಅದರಂತೆ ಮುಂದಿನ ಆರು ತಿಂಗಳಲ್ಲಿ ಸರ್ವೆ ನಡೆಸಿ ವಾಸ್ತವದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ. ಈ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಯಲಿದೆ ಎಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಹಸಿರೀಕರಣ, ಅರಣ್ಯ ಉಳಿಸಲು ಹೆಚ್ಚಿನ ಯೋಜನೆ ರೂಪಿಸಿದ್ದಾರೆ. 2023ರಿಂದ 2025ರ ಮಧ್ಯೆ ರಾಜ್ಯದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗುವ ವಿಶ್ವಾಸ ಇದೆ ಎಂದರು.

ಕರ್ನಾಟಕದಲ್ಲಿ ಅರಣ್ಯ ನಾಶವಾಗಿದೆ ಎಂಬ ವರದಿ 2021-23ರ ಮಾರ್ಚ್ ವರೆಗಿನ ವರದಿ. ಆ ಸಮಯದಲ್ಲಿ ಈ ಹಿಂದಿನ ಸರ್ಕಾರ ಅಧಿಕಾರದಲ್ಲಿತ್ತು. ಈಗ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅರಣ್ಯ ಹಸುರೀಕರಣ, ಅರಣ್ಯ ಉಳಿಸಲು ಹೆಚ್ಚಿನ ಯೋಜನೆ ರೂಪಿಸಲಾಗಿದೆ. 2023ರಿಂದ 2025 ರಲ್ಲಿ ಕರ್ನಾಟಕ ರಾಜ್ಯದಲ್ಲಿಅರಣ್ಯ ಪ್ರದೇಶ ಜಾಸ್ತಿಯಾಗುವ ವಿಶ್ವಾಸ ಇದೆ ಎಂದರು.

ಸಂಸದ ಸಾಗರ್ ಖಂಡ್ರೆ, ಡಿಸಿಎಫ್ ಅಂತೋಣಿ ಮರಿಯಪ್ಪ, ಎಸಿಎಫ್ ಪ್ರವೀಣ್ ಕುಮಾರ್, ವಿಮಲ್ ಬಾಬು, ಮಂಜುನಾಥ್, ಸಂಧ್ಯಾ, ದೇವಳದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ ಭಾಗವಹಿಸಿದ್ದರು.

ಸುವರ್ಣ ಸೌಧದಲ್ಲಿ….

ಸುವರ್ಣಸೌಧ (ವಿಧಾನಪರಿಷತ್ತು): ಪಶ್ಚಿಮ ಘಟ್ಟದ ಕುರಿತಾಗಿ ಕಸ್ತೂರಿ ರಂಗನ್‌ ಸಮಿತಿ ವರದಿಯನ್ನು ಸಚಿವ ಸಂಪುಟದ ಉಪಸಮಿತಿಯಲ್ಲಿ ತಿರಸ್ಕರಿಸಲಾಗಿದ್ದು, ಸಚಿವ ಸಂಪುಟದ ಮುಂದೆಯೂ ವಿಷಯ ತಂದು ಅಲ್ಲಿಯೂ ವರದಿ ತಿರಸ್ಕಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆರ್‌.ಶಂಕರ್‌ ಹೇಳಿದ್ದರು.

ಪ್ರಶ್ನೋತ್ತರ ವೇಳೆಯಲ್ಲಿ  ಕಾಂಗ್ರೆಸ್‌ ಸದಸ್ಯ ಐವನ್‌ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಸ್ತೂರಿ ರಂಗನ್‌ ವರದಿ ಅನುಷ್ಠಾನ ಕುರಿತಾಗಿ ಕೇಂದ್ರದಿಂದ  ಪದೇ ಪದೇ ಒತ್ತಡ ಬರುತ್ತಿದೆ. ಆದರೆ ಅದನ್ನು ಒಪ್ಪುವ ಪ್ರಮೇಯವೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು.

ಕಾಂಗ್ರೆಸ್‌ ಸದಸ್ಯ ಸಿ.ಎಂ.ಇಬ್ರಾಹಿಂ ಮಾತನಾಡಿ, ಕಸ್ತೂರಿ ರಂಗನ್‌ ವರದಿಯನ್ನು ಕೇರಳ ಸರಕಾರ ಈಗಾಗಲೇ ತಿರಸ್ಕರಿಸಿದ್ದು, ಇಲ್ಲಿಯೂ ತಿರಸ್ಕಾರ ಮಾಡಬೇಕೆಂದರು. ಇದಕ್ಕೂ ಮೊದಲು ಮಾತನಾಡಿದ ಐವನ್‌ ಡಿಸೋಜಾ,  ರಾಜ್ಯದ 10 ಜಿಲ್ಲೆ, 40 ತಾಲೂಕು, 1,576 ಗ್ರಾಮಗಳ ವ್ಯಾಪ್ತಿಯಲ್ಲಿನ ಪ್ರದೇಶವನ್ನು ಕಸ್ತೂರಿ ರಂಗನ್‌ ವರದಿಯಲ್ಲಿ ಪ್ರಸ್ತಾಪಿಸಲಾಗಿದ್ದು, ಶೇ.20ಕ್ಕಿಂತ ಹೆಚ್ಚು  ಅರಣ್ಯ ಪ್ರದೇಶ ಹೊಂದಿದ ಪ್ರದೇಶವನ್ನು ಸೂಕ್ಷ್ಮ ಎಂದು ಪರಿಗಣಿಸಿ, ಅಲ್ಲಿ ಯಾವುದೇ ಕೈಗಾರಿಕೆ, ಅಭಿವೃದ್ಧಿ ಕಾರ್ಯಕೈಗೊಳ್ಳುವಂತಿಲ್ಲ. ದಕ್ಷಿಣ ಕನ್ನಡದ 45 ಗ್ರಾಮಗಳು ತೀವ್ರ ಸಮಸ್ಯೆ ಎದುರಿಸುವಂತಾಗಿದೆ ಎಂದಿದ್ದರು.

ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು ಅಧಿಸೂಚನೆ

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಗುರುವಾರ (ಸೆ.26) ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಅವರು “ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ” ಎಂದಿದ್ದರು.

 

 

 

 

 

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ ಸರ್ಕಾರ ಜುಲೈ 31, 2024ರಂದು ಆರನೇ ಕರಡು ಅಧಿಸೂಚನೆ ಹೊರಡಿಸಿತ್ತು. 60 ದಿನಗಳಲ್ಲಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು ರಾಜ್ಯಗಳಿಗೆ ಸೂಚಿಸಿತ್ತು.

ಕಸ್ತೂರಿ ರಂಗನ್ ವರದಿಯು ಕರ್ನಾಟಕದ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಎಂದು ಗುರುತಿಸಿತ್ತು. ಇದರಲ್ಲಿ ಆಗಿದ್ದ ಕೆಲ ಲೋಪಗಳನ್ನು ತಿದ್ದುಪಡಿ ಮಾಡಿ, 19, 252.70 ಚದರ ಕಿ.ಮೀ ಪ್ರದೇಶವನ್ನು ಸೂಕ್ಷ್ಮ ಎಂದು ಪರಿಗಣಿಸಲಾಗಿತ್ತು. ರಾಜ್ಯದ ವಿವಿಧ ಅರಣ್ಯ ಕಾನೂನುಗಳ ಅಡಿಯಲ್ಲಿ ಈಗಾಗಲೇ 16,164 ಚದರ ಕಿ.ಮೀ ಅರಣ್ಯ ಪ್ರದೇಶವನ್ನು ಸಂರಕ್ಷಿಸಲಾಗುತ್ತಿದೆ. ಆದ್ದರಿಂದ ಕರಡು ಅಧಿಸೂಚನೆ ತಿರಸ್ಕರಿಸಲಾಗಿದೆ ಎಂದು ಹೆಚ್.ಕೆ ಪಾಟೀಲ್ ವಿವರಿಸಿದ್ದರು.

ವಯನಾಡ್ ದುರಂತದ ಬಳಿಕ ಆರನೇ ಅಧಿಸೂಚನೆ

ಜುಲೈ 31, 2024ರ ಆರನೇ ಕರಡು ಅಧಿಸೂಚನೆಯಲ್ಲಿ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟಗಳ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಗುರುತಿಸಿತ್ತು.

ಈ ಹಿಂದೆ ಐದು ಬಾರಿ ಕರಡು ಅಧಿಸೂಚನೆ ಹೊರಡಿಸಿದ್ದ ಕೇಂದ್ರ, ವಯನಾಡ್‌ ಭೂಕುಸಿತ ದುರಂತ ಸಂಭವಿಸಿದ ಬಳಿಕ 6ನೇ ಅಧಿಸೂಚನೆ ಪ್ರಕಟಿಸಿತ್ತು.

ಕಸ್ತೂರಿ ರಂಗನ್ ವರದಿ ತಿರಸ್ಕಾರ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...