Homeಕರ್ನಾಟಕಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ ನೀಡಬೇಕು: ರೇಣುಕಾಚಾರ್ಯ ಆಗ್ರಹ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ ನೀಡಬೇಕು: ರೇಣುಕಾಚಾರ್ಯ ಆಗ್ರಹ

- Advertisement -
- Advertisement -

ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ನಾಯಕರಲ್ಲಿ ಇದೀಗ ಆಂತರಿಕ ಕಲಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ರೇಣುಕಾಚಾರ್ಯ ಅವರು, ”ಬಿಜೆಪಿ ರಾಜ್ಯದ ಅಧ್ಯಕ್ಷರಿಗೆ ವಿನಂತಿ ಮಾಡುತ್ತೇನೆ ನಿಮ್ಮ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ತಾವು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಮೋದಿಜಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲ ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

”ಬಿಜೆಪಿ ಪಕ್ಷವನ್ನು ಹಗಲು ರಾತ್ರಿ ಕಟ್ಟಿದ ಹಿರಿಯರಾದ ಯೆಡಿಯೂರಪ್ಪ, ದಿವಂಗತ ಅನಂತ ಕುಮಾರ್, ಜಗದೀಶ್ ಶೆಟ್ಟರ್, ಈಶ್ವರಪ್ಪ ನವರದ್ದು ಬಹುದೊಡ್ಡ ಪಾತ್ರವಿದೆ. ಅಂಥವರನ್ನು ಚುನಾವಣಾ ಸಮಯದಲ್ಲಿ ಕಡೆಗಣಿಸಿದ್ದು. ಬಿಜೆಪಿಗೆ ನಷ್ಟವಾಯಿತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

”ಭಾರತೀಯ ಜನತಾ ಪಕ್ಷ ನನಗೆ ತಾಯಿ ಸಮಾನ. ನನಗೆ ಎಲ್ಲಾ ಸ್ಥಾನ ಮಾನ ನೀಡಿರುವುದು ಬಿಜೆಪಿ. ಪಕ್ಷಕ್ಕೆ ಹೀನಾಯ ಸೋಲಾದಾಗ ನಾವೆಲ್ಲರೂ ಸತ್ಯಸಂಗತಿಗಳ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳಲೇಬೇಕು ಜನತಾ ನ್ಯಾಯಾಲಯದಲ್ಲಿ ಜನರು ತೀರ್ಪು ನೀಡಿದ್ದಾರೆ ಅದಕ್ಕೆ ನಾವು ತೆಲೆಬಾಗಲೇಬೇಕು. ಅದೇ ಜನಸಾಮಾನ್ಯರು ತಿಳಿಸಿದ ಅಭಿಪ್ರಾಯವನ್ನು ನಾನು ತಿಳಿಸುತ್ತಿದ್ದೇನೆ” ಎಂದು ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.

ಈ ಆರೋಪ ಕೇಳಿಯೂ ಕಟೀಲ್ ಸುಮ್ಮನಿರುವುದೇಕೆ?: ಕಾಂಗ್ರೆಸ್ ಪ್ರಶ್ನೆ

”ರಾಜ್ಯಧ್ಯಕ್ಷರಿಂದಲೇ ಬಿಜೆಪಿಗೆ ಸೋಲಾಗಿದ್ದು ಎಂದು ರೇಣುಕಾಚಾರ್ಯ ಹೇಳಿದ್ದಾರೆ. ನಳೀನ್ ಕುಮಾರ್ ಕಟೀಲ್ ಅವರು ಈ ಆರೋಪ ಕೇಳಿಯೂ ಸುಮ್ಮನಿರುವುದೇಕೆ? ನನ್ನದೇನೂ ತಪ್ಪಿಲ್ಲ, ಶಾಡೋ ಅಧ್ಯಕ್ಷರಾದ ಜೋಶಿ, ಸಂತೋಷ್ ಅವರೇ ಸೋಲಿಗೆ ಹೊಣೆ ಎಂದು ಘೋಷಿಸಿಬಿಡಲಿ! ಸೋಲಿಗೆ ಸರದಾರರಾದ ಜೋಶಿ, ಸಂತೋಷ್ ಅವರುಗಳ ಹೆಸರೆತ್ತಲು ಬಿಜೆಪಿಗರು ಭಯಪಾಡುತ್ತಿರುವುದೇಕೆ?” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...