Homeಕರ್ನಾಟಕಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ನಳೀನ್ ಕುಮಾರ್ ಕಟೀಲ್ ಅವರ ನಾಯಕತ್ವದಲ್ಲಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದು ಬಿ.ಎಸ್.ಯಡಿಯೂರಪ್ಪ ಅವರ ಗದ್ದುಗೆ ಬಲಪಡಿಸಿದ್ದೇವೆ. ಈ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ.

- Advertisement -
- Advertisement -

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ ಕಟೀಲ್ ವಿರುದ್ಧ ಟೀಕಾಸ್ತ್ರವನ್ನು ಪ್ರಯೋಗಿಸಿದ ಬೆನ್ನಲ್ಲೇ ಬಿಜೆಪಿ ಕೂಡ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸುತ್ತಿದ್ದು, ಅವರನ್ನು ಕಾಂಗ್ರೆಸ್ ’ವಿದೂಷಕ’ ಎಂದು ಕರೆದಿದೆ.

ಸಿದ್ದರಾಮಯ್ಯ ಅವರು ಮಾಡಿದ ಪ್ರತಿ ಪೋಸ್ಟ್‌ಗಳಿಗೂ ಉತ್ತರ ನೀಡುತ್ತಾ ಸರಣಿ ಟ್ವೀಟ್‌ಗಳನ್ನು BJP Karnataka ಅಧಿಕೃತ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರು ಒಂದೊಂದು ಹಾದಿ ಹಿಡಿದಿದ್ದಾರೆ. ಶಿರಾದಲ್ಲಿ ತನ್ನ ಅಭ್ಯರ್ಥಿ ಗೆಲ್ಲಬೇಕು ಎಂದು ಒಬ್ಬರು ಸಾಹಸ ಪಡುತ್ತಿದ್ದರೆ, ರಾಜರಾಜೇಶ್ವರಿ ನಗರದಲ್ಲಿ ತನ್ನ ಅಭ್ಯರ್ಥಿ ಗೆಲ್ಲಬೇಕು ಎಂದು ಮತ್ತೊಬ್ಬರು ಹರಸಾಹಸ ಪಡುತ್ತಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿದ್ದರು.

ಉಪ ಚುನಾವಣೆ ಮುಗಿದ ಮೇಲೆ ಇಬ್ಬರು ತೆರೆಮರೆಗೆ ಸರಿಯಲಿದ್ದಾರೆ ಎಂಬ ಭವಿಷ್ಯ ನುಡಿದು, ಹುಲಿಯಾ, ಬಂಡೆ ಎಂಬ ಪದಗಳ ಬಗ್ಗೆ ವ್ಯಂಗ್ಯ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಕಟೀಲ್ ಅವರನ್ನು ಸಿದ್ದರಾಮಯ್ಯ, ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದ ನಾಲಿಗೆ ಮನುಷ್ಯ ಎಂದು ತಮ್ಮ ಟ್ವೀಟ್‌ಗಳಲ್ಲಿ ತಿವಿದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, “ಮಾನ್ಯ ಸಿದ್ದರಾಮಯ್ಯ, ನೀವು ಬಳಸುತ್ತಿರುವ ಪದಗಳೇ ಯಾರು ʼಕಾಡು ಮನುಷ್ಯʼ ಎಂಬುದನ್ನು ಸಾಬೀತು ಪಡಿಸುತ್ತಿದೆ. ಕಾಡುಮನುಷ್ಯ, ನಾಲಾಯಕ್‌, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದವ ಎಂಬ ನಿಮ್ಮ ಮಾತುಗಳೇ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ನೀವು ಕರ್ನಾಟಕ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ ಆಗಿದೆ!” ಎಂದು ಕಿಡಿಕಾರಿದೆ.

 

ಇನ್ನೊಂದು ಟ್ವೀಟ್‌ನಲ್ಲಿ, “ಸಿದ್ದರಾಮಯ್ಯನವರೇ, ಕಾಂಗ್ರೆಸ್ ಸೇರುವುದುಕ್ಕೂ ಮುನ್ನ ಮೊದಲು ಜೆಡಿಎಸ್‌ನಲ್ಲಿ ಸಕಲ ಅಧಿಕಾರ ಭಾಗ್ಯಗಳನ್ನು ಅನುಭವಿಸಿ, ಅವರಿಗೇ ನಾಮ ಹಾಕಿದ ಮಹಾನುಭಾವರು ನೀವೇ ಅಲ್ಲವೇ? ಬಿಜೆಪಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಿದರೆ ಉನ್ನತ ಸ್ಥಾನ ಸಿಗುವುದೆಂದು ನೀವೇ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು” ಎಂದಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಪಕ್ಷದ ನಾಯಕರೇ ಸಂಚು ರೂಪಿಸುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, “ಚುನಾವಣೆಯಲ್ಲಿ ಸ್ವಾರ್ಥಕ್ಕಾಗಿ ಪರಮೇಶ್ವರರನ್ನೇ ಸೋಲಿಸಿದ ಕುತಂತ್ರಿ ನೀವಲ್ಲವೇ? ಈ ಹಿಂದಿನ ಉಪಚುನಾವಣೆಯಲ್ಲಿ ನಳೀನ್ ಕುಮಾರ್ ಕಟೀಲ್ ಅವರ ನಾಯಕತ್ವದಲ್ಲಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದು ಬಿ.ಎಸ್.ಯಡಿಯೂರಪ್ಪ ಅವರ ಗದ್ದುಗೆ ಬಲಪಡಿಸಿದ್ದೇವೆ. ಈ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ” ಎಂದು ತಿರುಗೇಟು ನೀಡಿದೆ.

ಇದನ್ನೂ ಓದಿ: ಬಿಹಾರ: ನಿಯಮಗಳ ಉಲ್ಲಂಘನೆ, ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ಬಿಜೆಪಿ ರಾಜ್ಯಾಧ್ಯಕ್ಷ  ನಳೀನ್ ಕುಮಾರ್ ಕಟೀಲ್ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಕರ್ನಾಟಕ ಬಿಜೆಪಿ, ನಳೀನ್ ಕುಮಾರ್‌ ಕಟೀಲ್ ಅವರು 2019 ರಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದರು. ಜನತೆ ನಿಮ್ಮ ಬೆನ್ನುಮೂಳೆ ಮುರಿದ ಇತಿಹಾಸ ನೆನಪಿಸಿಕೊಳ್ಳಿ, ಗೆದ್ದದ್ದು ಕೇವಲ 1,696 ಮತಗಳಿಂದ! ಸ್ವಲ್ಪ ವ್ಯತ್ಯಾಸ ಆಗಿದ್ದರೂ ನೀವು ಕಾಡುಮನುಷ್ಯರಂತೆ ಜೀವನ ಮಾಡಬೇಕಿತ್ತು!” ಎಂದು ಟಾಂಗ್ ನೀಡಿದೆ.

ಕಾಂಗ್ರೆಸ್, ಬಿಜೆಪಿ ಜಗಳ ತಾರಕಕ್ಕೆ ಏರುತ್ತಿದ್ದು, ಇವುಗಳ ನಡುವೆ ಜೆಡಿಎಸ್ ಲಾಭ ಪಡೆಯುವ ನಿರೀಕ್ಷೆಯಿದೆ. ಇಷ್ಟು ದಿನ ಕಾಂಗ್ರೆಸ್-ಬಿಜೆಪಿ ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದವು. ಪಕ್ಷಗಳ ನಡುವಿನ ಜಗಳ ಏನೇ ಇದ್ದರೂ ಸಹ ಉಪ ಚುನಾವಣೆಯಲ್ಲಿ ಮತದಾರನ ತೀರ್ಪು ಅಂತಿಮವಾಗಿರುತ್ತದೆ.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...