Homeಕರ್ನಾಟಕಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ನಳೀನ್ ಕುಮಾರ್ ಕಟೀಲ್ ಅವರ ನಾಯಕತ್ವದಲ್ಲಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದು ಬಿ.ಎಸ್.ಯಡಿಯೂರಪ್ಪ ಅವರ ಗದ್ದುಗೆ ಬಲಪಡಿಸಿದ್ದೇವೆ. ಈ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ.

- Advertisement -
- Advertisement -

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ ಕಟೀಲ್ ವಿರುದ್ಧ ಟೀಕಾಸ್ತ್ರವನ್ನು ಪ್ರಯೋಗಿಸಿದ ಬೆನ್ನಲ್ಲೇ ಬಿಜೆಪಿ ಕೂಡ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸುತ್ತಿದ್ದು, ಅವರನ್ನು ಕಾಂಗ್ರೆಸ್ ’ವಿದೂಷಕ’ ಎಂದು ಕರೆದಿದೆ.

ಸಿದ್ದರಾಮಯ್ಯ ಅವರು ಮಾಡಿದ ಪ್ರತಿ ಪೋಸ್ಟ್‌ಗಳಿಗೂ ಉತ್ತರ ನೀಡುತ್ತಾ ಸರಣಿ ಟ್ವೀಟ್‌ಗಳನ್ನು BJP Karnataka ಅಧಿಕೃತ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರು ಒಂದೊಂದು ಹಾದಿ ಹಿಡಿದಿದ್ದಾರೆ. ಶಿರಾದಲ್ಲಿ ತನ್ನ ಅಭ್ಯರ್ಥಿ ಗೆಲ್ಲಬೇಕು ಎಂದು ಒಬ್ಬರು ಸಾಹಸ ಪಡುತ್ತಿದ್ದರೆ, ರಾಜರಾಜೇಶ್ವರಿ ನಗರದಲ್ಲಿ ತನ್ನ ಅಭ್ಯರ್ಥಿ ಗೆಲ್ಲಬೇಕು ಎಂದು ಮತ್ತೊಬ್ಬರು ಹರಸಾಹಸ ಪಡುತ್ತಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿದ್ದರು.

ಉಪ ಚುನಾವಣೆ ಮುಗಿದ ಮೇಲೆ ಇಬ್ಬರು ತೆರೆಮರೆಗೆ ಸರಿಯಲಿದ್ದಾರೆ ಎಂಬ ಭವಿಷ್ಯ ನುಡಿದು, ಹುಲಿಯಾ, ಬಂಡೆ ಎಂಬ ಪದಗಳ ಬಗ್ಗೆ ವ್ಯಂಗ್ಯ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಕಟೀಲ್ ಅವರನ್ನು ಸಿದ್ದರಾಮಯ್ಯ, ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದ ನಾಲಿಗೆ ಮನುಷ್ಯ ಎಂದು ತಮ್ಮ ಟ್ವೀಟ್‌ಗಳಲ್ಲಿ ತಿವಿದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, “ಮಾನ್ಯ ಸಿದ್ದರಾಮಯ್ಯ, ನೀವು ಬಳಸುತ್ತಿರುವ ಪದಗಳೇ ಯಾರು ʼಕಾಡು ಮನುಷ್ಯʼ ಎಂಬುದನ್ನು ಸಾಬೀತು ಪಡಿಸುತ್ತಿದೆ. ಕಾಡುಮನುಷ್ಯ, ನಾಲಾಯಕ್‌, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದವ ಎಂಬ ನಿಮ್ಮ ಮಾತುಗಳೇ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ನೀವು ಕರ್ನಾಟಕ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ ಆಗಿದೆ!” ಎಂದು ಕಿಡಿಕಾರಿದೆ.

 

ಇನ್ನೊಂದು ಟ್ವೀಟ್‌ನಲ್ಲಿ, “ಸಿದ್ದರಾಮಯ್ಯನವರೇ, ಕಾಂಗ್ರೆಸ್ ಸೇರುವುದುಕ್ಕೂ ಮುನ್ನ ಮೊದಲು ಜೆಡಿಎಸ್‌ನಲ್ಲಿ ಸಕಲ ಅಧಿಕಾರ ಭಾಗ್ಯಗಳನ್ನು ಅನುಭವಿಸಿ, ಅವರಿಗೇ ನಾಮ ಹಾಕಿದ ಮಹಾನುಭಾವರು ನೀವೇ ಅಲ್ಲವೇ? ಬಿಜೆಪಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಿದರೆ ಉನ್ನತ ಸ್ಥಾನ ಸಿಗುವುದೆಂದು ನೀವೇ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು” ಎಂದಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಪಕ್ಷದ ನಾಯಕರೇ ಸಂಚು ರೂಪಿಸುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, “ಚುನಾವಣೆಯಲ್ಲಿ ಸ್ವಾರ್ಥಕ್ಕಾಗಿ ಪರಮೇಶ್ವರರನ್ನೇ ಸೋಲಿಸಿದ ಕುತಂತ್ರಿ ನೀವಲ್ಲವೇ? ಈ ಹಿಂದಿನ ಉಪಚುನಾವಣೆಯಲ್ಲಿ ನಳೀನ್ ಕುಮಾರ್ ಕಟೀಲ್ ಅವರ ನಾಯಕತ್ವದಲ್ಲಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದು ಬಿ.ಎಸ್.ಯಡಿಯೂರಪ್ಪ ಅವರ ಗದ್ದುಗೆ ಬಲಪಡಿಸಿದ್ದೇವೆ. ಈ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ” ಎಂದು ತಿರುಗೇಟು ನೀಡಿದೆ.

ಇದನ್ನೂ ಓದಿ: ಬಿಹಾರ: ನಿಯಮಗಳ ಉಲ್ಲಂಘನೆ, ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ಬಿಜೆಪಿ ರಾಜ್ಯಾಧ್ಯಕ್ಷ  ನಳೀನ್ ಕುಮಾರ್ ಕಟೀಲ್ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಕರ್ನಾಟಕ ಬಿಜೆಪಿ, ನಳೀನ್ ಕುಮಾರ್‌ ಕಟೀಲ್ ಅವರು 2019 ರಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದರು. ಜನತೆ ನಿಮ್ಮ ಬೆನ್ನುಮೂಳೆ ಮುರಿದ ಇತಿಹಾಸ ನೆನಪಿಸಿಕೊಳ್ಳಿ, ಗೆದ್ದದ್ದು ಕೇವಲ 1,696 ಮತಗಳಿಂದ! ಸ್ವಲ್ಪ ವ್ಯತ್ಯಾಸ ಆಗಿದ್ದರೂ ನೀವು ಕಾಡುಮನುಷ್ಯರಂತೆ ಜೀವನ ಮಾಡಬೇಕಿತ್ತು!” ಎಂದು ಟಾಂಗ್ ನೀಡಿದೆ.

ಕಾಂಗ್ರೆಸ್, ಬಿಜೆಪಿ ಜಗಳ ತಾರಕಕ್ಕೆ ಏರುತ್ತಿದ್ದು, ಇವುಗಳ ನಡುವೆ ಜೆಡಿಎಸ್ ಲಾಭ ಪಡೆಯುವ ನಿರೀಕ್ಷೆಯಿದೆ. ಇಷ್ಟು ದಿನ ಕಾಂಗ್ರೆಸ್-ಬಿಜೆಪಿ ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದವು. ಪಕ್ಷಗಳ ನಡುವಿನ ಜಗಳ ಏನೇ ಇದ್ದರೂ ಸಹ ಉಪ ಚುನಾವಣೆಯಲ್ಲಿ ಮತದಾರನ ತೀರ್ಪು ಅಂತಿಮವಾಗಿರುತ್ತದೆ.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...