Homeಕರ್ನಾಟಕಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ನಳೀನ್ ಕುಮಾರ್ ಕಟೀಲ್ ಅವರ ನಾಯಕತ್ವದಲ್ಲಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದು ಬಿ.ಎಸ್.ಯಡಿಯೂರಪ್ಪ ಅವರ ಗದ್ದುಗೆ ಬಲಪಡಿಸಿದ್ದೇವೆ. ಈ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ.

- Advertisement -
- Advertisement -

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ ಕಟೀಲ್ ವಿರುದ್ಧ ಟೀಕಾಸ್ತ್ರವನ್ನು ಪ್ರಯೋಗಿಸಿದ ಬೆನ್ನಲ್ಲೇ ಬಿಜೆಪಿ ಕೂಡ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸುತ್ತಿದ್ದು, ಅವರನ್ನು ಕಾಂಗ್ರೆಸ್ ’ವಿದೂಷಕ’ ಎಂದು ಕರೆದಿದೆ.

ಸಿದ್ದರಾಮಯ್ಯ ಅವರು ಮಾಡಿದ ಪ್ರತಿ ಪೋಸ್ಟ್‌ಗಳಿಗೂ ಉತ್ತರ ನೀಡುತ್ತಾ ಸರಣಿ ಟ್ವೀಟ್‌ಗಳನ್ನು BJP Karnataka ಅಧಿಕೃತ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರು ಒಂದೊಂದು ಹಾದಿ ಹಿಡಿದಿದ್ದಾರೆ. ಶಿರಾದಲ್ಲಿ ತನ್ನ ಅಭ್ಯರ್ಥಿ ಗೆಲ್ಲಬೇಕು ಎಂದು ಒಬ್ಬರು ಸಾಹಸ ಪಡುತ್ತಿದ್ದರೆ, ರಾಜರಾಜೇಶ್ವರಿ ನಗರದಲ್ಲಿ ತನ್ನ ಅಭ್ಯರ್ಥಿ ಗೆಲ್ಲಬೇಕು ಎಂದು ಮತ್ತೊಬ್ಬರು ಹರಸಾಹಸ ಪಡುತ್ತಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿದ್ದರು.

ಉಪ ಚುನಾವಣೆ ಮುಗಿದ ಮೇಲೆ ಇಬ್ಬರು ತೆರೆಮರೆಗೆ ಸರಿಯಲಿದ್ದಾರೆ ಎಂಬ ಭವಿಷ್ಯ ನುಡಿದು, ಹುಲಿಯಾ, ಬಂಡೆ ಎಂಬ ಪದಗಳ ಬಗ್ಗೆ ವ್ಯಂಗ್ಯ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಕಟೀಲ್ ಅವರನ್ನು ಸಿದ್ದರಾಮಯ್ಯ, ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದ ನಾಲಿಗೆ ಮನುಷ್ಯ ಎಂದು ತಮ್ಮ ಟ್ವೀಟ್‌ಗಳಲ್ಲಿ ತಿವಿದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, “ಮಾನ್ಯ ಸಿದ್ದರಾಮಯ್ಯ, ನೀವು ಬಳಸುತ್ತಿರುವ ಪದಗಳೇ ಯಾರು ʼಕಾಡು ಮನುಷ್ಯʼ ಎಂಬುದನ್ನು ಸಾಬೀತು ಪಡಿಸುತ್ತಿದೆ. ಕಾಡುಮನುಷ್ಯ, ನಾಲಾಯಕ್‌, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದವ ಎಂಬ ನಿಮ್ಮ ಮಾತುಗಳೇ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ನೀವು ಕರ್ನಾಟಕ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ ಆಗಿದೆ!” ಎಂದು ಕಿಡಿಕಾರಿದೆ.

 

ಇನ್ನೊಂದು ಟ್ವೀಟ್‌ನಲ್ಲಿ, “ಸಿದ್ದರಾಮಯ್ಯನವರೇ, ಕಾಂಗ್ರೆಸ್ ಸೇರುವುದುಕ್ಕೂ ಮುನ್ನ ಮೊದಲು ಜೆಡಿಎಸ್‌ನಲ್ಲಿ ಸಕಲ ಅಧಿಕಾರ ಭಾಗ್ಯಗಳನ್ನು ಅನುಭವಿಸಿ, ಅವರಿಗೇ ನಾಮ ಹಾಕಿದ ಮಹಾನುಭಾವರು ನೀವೇ ಅಲ್ಲವೇ? ಬಿಜೆಪಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಿದರೆ ಉನ್ನತ ಸ್ಥಾನ ಸಿಗುವುದೆಂದು ನೀವೇ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು” ಎಂದಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಪಕ್ಷದ ನಾಯಕರೇ ಸಂಚು ರೂಪಿಸುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, “ಚುನಾವಣೆಯಲ್ಲಿ ಸ್ವಾರ್ಥಕ್ಕಾಗಿ ಪರಮೇಶ್ವರರನ್ನೇ ಸೋಲಿಸಿದ ಕುತಂತ್ರಿ ನೀವಲ್ಲವೇ? ಈ ಹಿಂದಿನ ಉಪಚುನಾವಣೆಯಲ್ಲಿ ನಳೀನ್ ಕುಮಾರ್ ಕಟೀಲ್ ಅವರ ನಾಯಕತ್ವದಲ್ಲಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದು ಬಿ.ಎಸ್.ಯಡಿಯೂರಪ್ಪ ಅವರ ಗದ್ದುಗೆ ಬಲಪಡಿಸಿದ್ದೇವೆ. ಈ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ” ಎಂದು ತಿರುಗೇಟು ನೀಡಿದೆ.

ಇದನ್ನೂ ಓದಿ: ಬಿಹಾರ: ನಿಯಮಗಳ ಉಲ್ಲಂಘನೆ, ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ಬಿಜೆಪಿ ರಾಜ್ಯಾಧ್ಯಕ್ಷ  ನಳೀನ್ ಕುಮಾರ್ ಕಟೀಲ್ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಕರ್ನಾಟಕ ಬಿಜೆಪಿ, ನಳೀನ್ ಕುಮಾರ್‌ ಕಟೀಲ್ ಅವರು 2019 ರಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದರು. ಜನತೆ ನಿಮ್ಮ ಬೆನ್ನುಮೂಳೆ ಮುರಿದ ಇತಿಹಾಸ ನೆನಪಿಸಿಕೊಳ್ಳಿ, ಗೆದ್ದದ್ದು ಕೇವಲ 1,696 ಮತಗಳಿಂದ! ಸ್ವಲ್ಪ ವ್ಯತ್ಯಾಸ ಆಗಿದ್ದರೂ ನೀವು ಕಾಡುಮನುಷ್ಯರಂತೆ ಜೀವನ ಮಾಡಬೇಕಿತ್ತು!” ಎಂದು ಟಾಂಗ್ ನೀಡಿದೆ.

ಕಾಂಗ್ರೆಸ್, ಬಿಜೆಪಿ ಜಗಳ ತಾರಕಕ್ಕೆ ಏರುತ್ತಿದ್ದು, ಇವುಗಳ ನಡುವೆ ಜೆಡಿಎಸ್ ಲಾಭ ಪಡೆಯುವ ನಿರೀಕ್ಷೆಯಿದೆ. ಇಷ್ಟು ದಿನ ಕಾಂಗ್ರೆಸ್-ಬಿಜೆಪಿ ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದವು. ಪಕ್ಷಗಳ ನಡುವಿನ ಜಗಳ ಏನೇ ಇದ್ದರೂ ಸಹ ಉಪ ಚುನಾವಣೆಯಲ್ಲಿ ಮತದಾರನ ತೀರ್ಪು ಅಂತಿಮವಾಗಿರುತ್ತದೆ.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...