Homeಕರ್ನಾಟಕಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ನಳೀನ್ ಕುಮಾರ್ ಕಟೀಲ್ ಅವರ ನಾಯಕತ್ವದಲ್ಲಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದು ಬಿ.ಎಸ್.ಯಡಿಯೂರಪ್ಪ ಅವರ ಗದ್ದುಗೆ ಬಲಪಡಿಸಿದ್ದೇವೆ. ಈ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ.

- Advertisement -
- Advertisement -

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ ಕಟೀಲ್ ವಿರುದ್ಧ ಟೀಕಾಸ್ತ್ರವನ್ನು ಪ್ರಯೋಗಿಸಿದ ಬೆನ್ನಲ್ಲೇ ಬಿಜೆಪಿ ಕೂಡ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸುತ್ತಿದ್ದು, ಅವರನ್ನು ಕಾಂಗ್ರೆಸ್ ’ವಿದೂಷಕ’ ಎಂದು ಕರೆದಿದೆ.

ಸಿದ್ದರಾಮಯ್ಯ ಅವರು ಮಾಡಿದ ಪ್ರತಿ ಪೋಸ್ಟ್‌ಗಳಿಗೂ ಉತ್ತರ ನೀಡುತ್ತಾ ಸರಣಿ ಟ್ವೀಟ್‌ಗಳನ್ನು BJP Karnataka ಅಧಿಕೃತ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರು ಒಂದೊಂದು ಹಾದಿ ಹಿಡಿದಿದ್ದಾರೆ. ಶಿರಾದಲ್ಲಿ ತನ್ನ ಅಭ್ಯರ್ಥಿ ಗೆಲ್ಲಬೇಕು ಎಂದು ಒಬ್ಬರು ಸಾಹಸ ಪಡುತ್ತಿದ್ದರೆ, ರಾಜರಾಜೇಶ್ವರಿ ನಗರದಲ್ಲಿ ತನ್ನ ಅಭ್ಯರ್ಥಿ ಗೆಲ್ಲಬೇಕು ಎಂದು ಮತ್ತೊಬ್ಬರು ಹರಸಾಹಸ ಪಡುತ್ತಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿದ್ದರು.

ಉಪ ಚುನಾವಣೆ ಮುಗಿದ ಮೇಲೆ ಇಬ್ಬರು ತೆರೆಮರೆಗೆ ಸರಿಯಲಿದ್ದಾರೆ ಎಂಬ ಭವಿಷ್ಯ ನುಡಿದು, ಹುಲಿಯಾ, ಬಂಡೆ ಎಂಬ ಪದಗಳ ಬಗ್ಗೆ ವ್ಯಂಗ್ಯ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಕಟೀಲ್ ಅವರನ್ನು ಸಿದ್ದರಾಮಯ್ಯ, ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದ ನಾಲಿಗೆ ಮನುಷ್ಯ ಎಂದು ತಮ್ಮ ಟ್ವೀಟ್‌ಗಳಲ್ಲಿ ತಿವಿದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, “ಮಾನ್ಯ ಸಿದ್ದರಾಮಯ್ಯ, ನೀವು ಬಳಸುತ್ತಿರುವ ಪದಗಳೇ ಯಾರು ʼಕಾಡು ಮನುಷ್ಯʼ ಎಂಬುದನ್ನು ಸಾಬೀತು ಪಡಿಸುತ್ತಿದೆ. ಕಾಡುಮನುಷ್ಯ, ನಾಲಾಯಕ್‌, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದವ ಎಂಬ ನಿಮ್ಮ ಮಾತುಗಳೇ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ನೀವು ಕರ್ನಾಟಕ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ ಆಗಿದೆ!” ಎಂದು ಕಿಡಿಕಾರಿದೆ.

 

ಇನ್ನೊಂದು ಟ್ವೀಟ್‌ನಲ್ಲಿ, “ಸಿದ್ದರಾಮಯ್ಯನವರೇ, ಕಾಂಗ್ರೆಸ್ ಸೇರುವುದುಕ್ಕೂ ಮುನ್ನ ಮೊದಲು ಜೆಡಿಎಸ್‌ನಲ್ಲಿ ಸಕಲ ಅಧಿಕಾರ ಭಾಗ್ಯಗಳನ್ನು ಅನುಭವಿಸಿ, ಅವರಿಗೇ ನಾಮ ಹಾಕಿದ ಮಹಾನುಭಾವರು ನೀವೇ ಅಲ್ಲವೇ? ಬಿಜೆಪಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಿದರೆ ಉನ್ನತ ಸ್ಥಾನ ಸಿಗುವುದೆಂದು ನೀವೇ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು” ಎಂದಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಪಕ್ಷದ ನಾಯಕರೇ ಸಂಚು ರೂಪಿಸುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, “ಚುನಾವಣೆಯಲ್ಲಿ ಸ್ವಾರ್ಥಕ್ಕಾಗಿ ಪರಮೇಶ್ವರರನ್ನೇ ಸೋಲಿಸಿದ ಕುತಂತ್ರಿ ನೀವಲ್ಲವೇ? ಈ ಹಿಂದಿನ ಉಪಚುನಾವಣೆಯಲ್ಲಿ ನಳೀನ್ ಕುಮಾರ್ ಕಟೀಲ್ ಅವರ ನಾಯಕತ್ವದಲ್ಲಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದು ಬಿ.ಎಸ್.ಯಡಿಯೂರಪ್ಪ ಅವರ ಗದ್ದುಗೆ ಬಲಪಡಿಸಿದ್ದೇವೆ. ಈ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ” ಎಂದು ತಿರುಗೇಟು ನೀಡಿದೆ.

ಇದನ್ನೂ ಓದಿ: ಬಿಹಾರ: ನಿಯಮಗಳ ಉಲ್ಲಂಘನೆ, ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ಬಿಜೆಪಿ ರಾಜ್ಯಾಧ್ಯಕ್ಷ  ನಳೀನ್ ಕುಮಾರ್ ಕಟೀಲ್ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಕರ್ನಾಟಕ ಬಿಜೆಪಿ, ನಳೀನ್ ಕುಮಾರ್‌ ಕಟೀಲ್ ಅವರು 2019 ರಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದರು. ಜನತೆ ನಿಮ್ಮ ಬೆನ್ನುಮೂಳೆ ಮುರಿದ ಇತಿಹಾಸ ನೆನಪಿಸಿಕೊಳ್ಳಿ, ಗೆದ್ದದ್ದು ಕೇವಲ 1,696 ಮತಗಳಿಂದ! ಸ್ವಲ್ಪ ವ್ಯತ್ಯಾಸ ಆಗಿದ್ದರೂ ನೀವು ಕಾಡುಮನುಷ್ಯರಂತೆ ಜೀವನ ಮಾಡಬೇಕಿತ್ತು!” ಎಂದು ಟಾಂಗ್ ನೀಡಿದೆ.

ಕಾಂಗ್ರೆಸ್, ಬಿಜೆಪಿ ಜಗಳ ತಾರಕಕ್ಕೆ ಏರುತ್ತಿದ್ದು, ಇವುಗಳ ನಡುವೆ ಜೆಡಿಎಸ್ ಲಾಭ ಪಡೆಯುವ ನಿರೀಕ್ಷೆಯಿದೆ. ಇಷ್ಟು ದಿನ ಕಾಂಗ್ರೆಸ್-ಬಿಜೆಪಿ ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದವು. ಪಕ್ಷಗಳ ನಡುವಿನ ಜಗಳ ಏನೇ ಇದ್ದರೂ ಸಹ ಉಪ ಚುನಾವಣೆಯಲ್ಲಿ ಮತದಾರನ ತೀರ್ಪು ಅಂತಿಮವಾಗಿರುತ್ತದೆ.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...