Homeಮುಖಪುಟಕಥಕ್ ದಂತಕಥೆ ಪಂಡಿತ್ ಬಿರ್ಜು ಮಹಾರಾಜ್ (83) ನಿಧನ

ಕಥಕ್ ದಂತಕಥೆ ಪಂಡಿತ್ ಬಿರ್ಜು ಮಹಾರಾಜ್ (83) ನಿಧನ

- Advertisement -
- Advertisement -

ಕಥಕ್ ದಂತಕಥೆ 83 ವರ್ಷದ ಪಂಡಿತ್ ಬಿರ್ಜು ಮಹಾರಾಜ್ ಅವರು ಹೃದಯಾಘಾತದಿಂದ ಭಾನುವಾರ ತಡರಾತ್ರಿ ದೆಹಲಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

ಭಾರತದ ಅತ್ಯುತ್ತಮ ಕಲಾವಿದರಲ್ಲಿ ಒಬ್ಬರಾಗಿದ್ದ ಮತ್ತು  ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಪಡೆದವರು ಪಂಡಿತ್ ಬಿರ್ಜು ಮಹಾರಾಜ್. ಅವರ ಶಿಷ್ಯರು ಮತ್ತು ಅನುಯಾಯಿಗಳು ಅವರನ್ನು ಪ್ರೀತಿಯಿಂದ ಪಂಡಿತ್-ಜಿ ಅಥವಾ ಮಹಾರಾಜ್-ಜಿ ಎಂದು ಕರೆಯುತ್ತಿದ್ದರು.

ವರದಿಗಳ ಪ್ರಕಾರ, ಭಾನುವಾರ ತಡರಾತ್ರಿ ಬಿರ್ಜು ಮಹಾರಾಜ್ ತನ್ನ ಮೊಮ್ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅವರ ಆರೋಗ್ಯ ಹದಗೆಟ್ಟು ಅವರು ಪ್ರಜ್ಞಾಹೀನರಾದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ  ಸಂಭವಿಸಿದಾಗ ಅವರು ನಮ್ಮೊಂದಿಗಿದ್ದರು. ಅವರು ಸಂಗೀತ ಪ್ರಿಯರಾಗಿದ್ದರಿಂದ ಭೋಜನ ಮಾಡಿದ ನಂತರ ಅವರು  ಮತ್ತು ನಾವು ‘ಅಂತಕ್ಷರಿ’ ನಡೆಸುತ್ತಿದ್ದೆವು. ಅವರು ಮಲಗಿದ್ದರು ತದನಂತರ ಇದ್ದಕ್ಕಿದ್ದಂತೆ ಅವರ ಉಸಿರಾಟವು ಏರಿಳಿತವಾಯಿತು. ಅವರು ಹೃದ್ರೋಗಿಯೂ ಆಗಿದ್ದರಿಂದ ಇದು ಹೃದಯ ಸ್ತಂಭನ ಎಂದು ನಾವು ಭಾವಿಸುತ್ತೇವೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

“ಇದು ಮಧ್ಯರಾತ್ರಿ 12.15 ರಿಂದ 12.30 ರ ನಡುವೆ ಸಂಭವಿಸಿದೆ. ನಾವು ಆಸ್ಪತ್ರೆಗೆ ದಾಖಲಿಸಿದೆವು ಆದರೆ ದುರದೃಷ್ಟವಶಾತ್, ನಮಗೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯನ್ನು ತಲುಪುವ ಮೊದಲೇ ಅವರು ಸಾವನ್ನಪ್ಪಿದರು. ಈ ಘಟನೆ ಸಂಭವಿಸಿದಾಗ ಅವರ ಇಬ್ಬರು ಶಿಷ್ಯರು ಮತ್ತು ಅವರ ಇಬ್ಬರು ಮೊಮ್ಮಕ್ಕಳು, ನನ್ನ ತಂಗಿ ಯಶಸ್ವಿನಿ ಮತ್ತು ನಾನು ಅವರೊಂದಿಗೆ ಇದ್ದೆವು, ಅವರು ತಮ್ಮ ಕೊನೆಯ ಕ್ಷಣಗಳಲ್ಲಿ ನಗುತ್ತಿದ್ದರು” ಎಂದು ಸ್ವತಃ ಕಥಕ್ ನೃತ್ಯಗಾರ್ತಿ ಬಿರ್ಜು ಮಹಾರಾಜ್ ಅವರ ಮೊಮ್ಮಗಳು ರಾಗಿಣಿ ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಅಂದಹಾಗೆ ಬಿರ್ಜು ಮಹಾರಾಜ ಅವರ ದೇಹ ಪಾಶ್ಚಾತ್ಯ ನೃತ್ಯಪಟುಗಳಂತೆ ತೆಳ್ಳಗೆ ಸಪೂರವಾಗಿರಲಿಲ್ಲ. ತಮ್ಮನ್ನು ತಾವು ಖಾತೆಪೀತೆ ಘರ್ ಕಾ ಎಂದು ಕರೆದುಕೊಳ್ಳುತ್ತಿದ್ದ ಅವರು ಚೆನ್ನಾಗಿ ತಿಂದು ದುಂಡದುಂಡಗೆ ಇದ್ದರು. ಒಂದು ಸಲ ವಿದೇಶದಲ್ಲಿ ಕಾರ್ಯಕ್ರಮ ನೀಡಬೇಕಾಗಿತ್ತು. ಆಗ ಅಲ್ಲಿಯ ಭದ್ರತಾ ಸಿಬ್ಬಂದಿ, ಬಿರ್ಜು ಮಹಾರಾಜ ಅವರ ತಂಡದವರಿಗೆ ಒಳಗೇ ಬಿಡಲಿಲ್ಲ. ಇಲ್ಲ, ನಾವೇ ನೃತ್ಯಪಟುಗಳು, ಈಗ ಕಾರ್ಯಕ್ರಮ ನೀಡಬೇಕಾಗಿದ್ದು ನಾವೇ ಎಂದು ಪದೇಪದೇ ವಿನಂತಿಸಿಕೊಂಡರೂ ಬಿಡಲಿಲ್ಲ. ಕೊನೆಗೆ ಇವರ ಮನವಿಗೆ ಸೋತು, ಆ ಭದ್ರತಾ ಸಿಬ್ಬಂದಿ ಕೊನೆಗೂ ತಂಡದವರನ್ನು ಒಳಗೆ ಬಿಡಲು ಒಪ್ಪಿದ. ಆದರೆ ಯಾವ ಆಂಗಲ್ ನಲ್ಲೂ ನೃತ್ಯ ಮಾಡುವವನಂತೆ ಕಾಣದ ಈ ಒಬ್ಬ ವ್ಯಕ್ತಿಯನ್ನು, ಮಾತ್ರ ಒಳಗೆ ಬಿಡಲು ಒಪ್ಪಲಿಲ್ಲ. ಆ ವ್ಯಕ್ತಿಯೇ ಬಿರ್ಜು ಮಹಾರಾಜ. ಇದನ್ನು ತಾವೇ ಒಂದು ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು ಬಿರ್ಜು ಮಹಾರಾಜ ಅವರು.

ಅವರ ನಿಧನದ ಸುದ್ದಿ ಬರುತ್ತಿದ್ದಂತೆ ಸಾಗರೋಪಾದಿಯಲ್ಲಿ ಸಂತಾಪಗಳು ಹರಿದು ಬಂದಿವೆ.

“ಲೆಜೆಂಟರಿ ಪಂಡಿತ್ ಬಿರ್ಜು ಮಹಾರಾಜ್ ಅವರ ನಿಧನವು ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ. ಇದು ಭಾರತೀಯ ಸಂಗೀತ ಮತ್ತು ಸಾಂಸ್ಕೃತಿಕ ಜಾಗದಲ್ಲಿ ಆಳವಾದ ಶೂನ್ಯವನ್ನು ಉಂಟುಮಾಡುತ್ತದೆ. ಅವರು ಕಥಕ್ ಅನ್ನು ಜಾಗತಿಕವಾಗಿ ಜನಪ್ರಿಯಗೊಳಿಸಲು ಅಪ್ರತಿಮ ಕೊಡುಗೆಯನ್ನು ನೀಡುವ ಮೂಲಕ ಐಕಾನ್ ಆದವರು ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಟ್ವೀಟ್ ಮೂಲಕ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಾಂತ್ವನ ಹೇಳಿದ್ದಾರೆ.

“ಭಾರತೀಯ ನೃತ್ಯಕ್ಕೆ ವಿಶ್ವದಾದ್ಯಂತ ವಿಶೇಷ ಮನ್ನಣೆ ನೀಡಿದ ಪಂಡಿತ್ ಬಿರ್ಜು ಮಹಾರಾಜ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅಗಲಿಕೆ ಇಡೀ ಕಲಾ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪ” ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: ಸಂಸ್ಕೃತ ಬೇಡ, ಕನ್ನಡ ಬೇಕು: ಗೋಕಾಕ್ ಚಳವಳಿ ಕುರಿತು ಚಂಪಾರವರ ಸಂದರ್ಶನದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...