Homeಮುಖಪುಟಕಥಕ್ ದಂತಕಥೆ ಪಂಡಿತ್ ಬಿರ್ಜು ಮಹಾರಾಜ್ (83) ನಿಧನ

ಕಥಕ್ ದಂತಕಥೆ ಪಂಡಿತ್ ಬಿರ್ಜು ಮಹಾರಾಜ್ (83) ನಿಧನ

- Advertisement -
- Advertisement -

ಕಥಕ್ ದಂತಕಥೆ 83 ವರ್ಷದ ಪಂಡಿತ್ ಬಿರ್ಜು ಮಹಾರಾಜ್ ಅವರು ಹೃದಯಾಘಾತದಿಂದ ಭಾನುವಾರ ತಡರಾತ್ರಿ ದೆಹಲಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

ಭಾರತದ ಅತ್ಯುತ್ತಮ ಕಲಾವಿದರಲ್ಲಿ ಒಬ್ಬರಾಗಿದ್ದ ಮತ್ತು  ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಪಡೆದವರು ಪಂಡಿತ್ ಬಿರ್ಜು ಮಹಾರಾಜ್. ಅವರ ಶಿಷ್ಯರು ಮತ್ತು ಅನುಯಾಯಿಗಳು ಅವರನ್ನು ಪ್ರೀತಿಯಿಂದ ಪಂಡಿತ್-ಜಿ ಅಥವಾ ಮಹಾರಾಜ್-ಜಿ ಎಂದು ಕರೆಯುತ್ತಿದ್ದರು.

ವರದಿಗಳ ಪ್ರಕಾರ, ಭಾನುವಾರ ತಡರಾತ್ರಿ ಬಿರ್ಜು ಮಹಾರಾಜ್ ತನ್ನ ಮೊಮ್ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅವರ ಆರೋಗ್ಯ ಹದಗೆಟ್ಟು ಅವರು ಪ್ರಜ್ಞಾಹೀನರಾದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ  ಸಂಭವಿಸಿದಾಗ ಅವರು ನಮ್ಮೊಂದಿಗಿದ್ದರು. ಅವರು ಸಂಗೀತ ಪ್ರಿಯರಾಗಿದ್ದರಿಂದ ಭೋಜನ ಮಾಡಿದ ನಂತರ ಅವರು  ಮತ್ತು ನಾವು ‘ಅಂತಕ್ಷರಿ’ ನಡೆಸುತ್ತಿದ್ದೆವು. ಅವರು ಮಲಗಿದ್ದರು ತದನಂತರ ಇದ್ದಕ್ಕಿದ್ದಂತೆ ಅವರ ಉಸಿರಾಟವು ಏರಿಳಿತವಾಯಿತು. ಅವರು ಹೃದ್ರೋಗಿಯೂ ಆಗಿದ್ದರಿಂದ ಇದು ಹೃದಯ ಸ್ತಂಭನ ಎಂದು ನಾವು ಭಾವಿಸುತ್ತೇವೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

“ಇದು ಮಧ್ಯರಾತ್ರಿ 12.15 ರಿಂದ 12.30 ರ ನಡುವೆ ಸಂಭವಿಸಿದೆ. ನಾವು ಆಸ್ಪತ್ರೆಗೆ ದಾಖಲಿಸಿದೆವು ಆದರೆ ದುರದೃಷ್ಟವಶಾತ್, ನಮಗೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯನ್ನು ತಲುಪುವ ಮೊದಲೇ ಅವರು ಸಾವನ್ನಪ್ಪಿದರು. ಈ ಘಟನೆ ಸಂಭವಿಸಿದಾಗ ಅವರ ಇಬ್ಬರು ಶಿಷ್ಯರು ಮತ್ತು ಅವರ ಇಬ್ಬರು ಮೊಮ್ಮಕ್ಕಳು, ನನ್ನ ತಂಗಿ ಯಶಸ್ವಿನಿ ಮತ್ತು ನಾನು ಅವರೊಂದಿಗೆ ಇದ್ದೆವು, ಅವರು ತಮ್ಮ ಕೊನೆಯ ಕ್ಷಣಗಳಲ್ಲಿ ನಗುತ್ತಿದ್ದರು” ಎಂದು ಸ್ವತಃ ಕಥಕ್ ನೃತ್ಯಗಾರ್ತಿ ಬಿರ್ಜು ಮಹಾರಾಜ್ ಅವರ ಮೊಮ್ಮಗಳು ರಾಗಿಣಿ ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಅಂದಹಾಗೆ ಬಿರ್ಜು ಮಹಾರಾಜ ಅವರ ದೇಹ ಪಾಶ್ಚಾತ್ಯ ನೃತ್ಯಪಟುಗಳಂತೆ ತೆಳ್ಳಗೆ ಸಪೂರವಾಗಿರಲಿಲ್ಲ. ತಮ್ಮನ್ನು ತಾವು ಖಾತೆಪೀತೆ ಘರ್ ಕಾ ಎಂದು ಕರೆದುಕೊಳ್ಳುತ್ತಿದ್ದ ಅವರು ಚೆನ್ನಾಗಿ ತಿಂದು ದುಂಡದುಂಡಗೆ ಇದ್ದರು. ಒಂದು ಸಲ ವಿದೇಶದಲ್ಲಿ ಕಾರ್ಯಕ್ರಮ ನೀಡಬೇಕಾಗಿತ್ತು. ಆಗ ಅಲ್ಲಿಯ ಭದ್ರತಾ ಸಿಬ್ಬಂದಿ, ಬಿರ್ಜು ಮಹಾರಾಜ ಅವರ ತಂಡದವರಿಗೆ ಒಳಗೇ ಬಿಡಲಿಲ್ಲ. ಇಲ್ಲ, ನಾವೇ ನೃತ್ಯಪಟುಗಳು, ಈಗ ಕಾರ್ಯಕ್ರಮ ನೀಡಬೇಕಾಗಿದ್ದು ನಾವೇ ಎಂದು ಪದೇಪದೇ ವಿನಂತಿಸಿಕೊಂಡರೂ ಬಿಡಲಿಲ್ಲ. ಕೊನೆಗೆ ಇವರ ಮನವಿಗೆ ಸೋತು, ಆ ಭದ್ರತಾ ಸಿಬ್ಬಂದಿ ಕೊನೆಗೂ ತಂಡದವರನ್ನು ಒಳಗೆ ಬಿಡಲು ಒಪ್ಪಿದ. ಆದರೆ ಯಾವ ಆಂಗಲ್ ನಲ್ಲೂ ನೃತ್ಯ ಮಾಡುವವನಂತೆ ಕಾಣದ ಈ ಒಬ್ಬ ವ್ಯಕ್ತಿಯನ್ನು, ಮಾತ್ರ ಒಳಗೆ ಬಿಡಲು ಒಪ್ಪಲಿಲ್ಲ. ಆ ವ್ಯಕ್ತಿಯೇ ಬಿರ್ಜು ಮಹಾರಾಜ. ಇದನ್ನು ತಾವೇ ಒಂದು ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು ಬಿರ್ಜು ಮಹಾರಾಜ ಅವರು.

ಅವರ ನಿಧನದ ಸುದ್ದಿ ಬರುತ್ತಿದ್ದಂತೆ ಸಾಗರೋಪಾದಿಯಲ್ಲಿ ಸಂತಾಪಗಳು ಹರಿದು ಬಂದಿವೆ.

“ಲೆಜೆಂಟರಿ ಪಂಡಿತ್ ಬಿರ್ಜು ಮಹಾರಾಜ್ ಅವರ ನಿಧನವು ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ. ಇದು ಭಾರತೀಯ ಸಂಗೀತ ಮತ್ತು ಸಾಂಸ್ಕೃತಿಕ ಜಾಗದಲ್ಲಿ ಆಳವಾದ ಶೂನ್ಯವನ್ನು ಉಂಟುಮಾಡುತ್ತದೆ. ಅವರು ಕಥಕ್ ಅನ್ನು ಜಾಗತಿಕವಾಗಿ ಜನಪ್ರಿಯಗೊಳಿಸಲು ಅಪ್ರತಿಮ ಕೊಡುಗೆಯನ್ನು ನೀಡುವ ಮೂಲಕ ಐಕಾನ್ ಆದವರು ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಟ್ವೀಟ್ ಮೂಲಕ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಾಂತ್ವನ ಹೇಳಿದ್ದಾರೆ.

“ಭಾರತೀಯ ನೃತ್ಯಕ್ಕೆ ವಿಶ್ವದಾದ್ಯಂತ ವಿಶೇಷ ಮನ್ನಣೆ ನೀಡಿದ ಪಂಡಿತ್ ಬಿರ್ಜು ಮಹಾರಾಜ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅಗಲಿಕೆ ಇಡೀ ಕಲಾ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪ” ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: ಸಂಸ್ಕೃತ ಬೇಡ, ಕನ್ನಡ ಬೇಕು: ಗೋಕಾಕ್ ಚಳವಳಿ ಕುರಿತು ಚಂಪಾರವರ ಸಂದರ್ಶನದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...